Daily Horoscope: ಈ ರಾಶಿಯ ರಾಜಕೀಯ ವ್ಯಕ್ತಿಗಳು ಹೆಚ್ಚಿನ ಲಾಭ ಪಡೆಯಬಹುದು

|

Updated on: Apr 27, 2023 | 5:00 AM

ಇಂದಿನ (2023 ಏಪ್ರಿಲ್​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

Daily Horoscope: ಈ ರಾಶಿಯ ರಾಜಕೀಯ ವ್ಯಕ್ತಿಗಳು ಹೆಚ್ಚಿನ ಲಾಭ ಪಡೆಯಬಹುದು
ಪ್ರಾತಿನಿಧಿಕ ಚಿತ್ರ
Image Credit source: deathbattle.fandom.com
Follow us on

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಗುರು, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಪುಷ್ಯ, ಯೋಗ: ಧೃತಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:04 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:13 ರಿಂದ 07:47 ವರೆಗೆ, ಗುಳಿಕ ಕಾಲ 09:22 ರಿಂದ 10:56ರ ವರೆಗೆ.

ಮೇಷ: ಇಂದು ನಿಮ್ಮ ಕೆಲಸವು ಬಹಳ ಶ್ರಮದಿಂದ ಕೂಡಿದ್ದು, ಅದಕ್ಕೆ ತಕ್ಕ ಫಲವು ಸಿಗದೇ ಇರಬಹುದು. ಉದ್ಯೋಗದಲ್ಲಿ ನಿಮಗೆ ಕೊಟ್ಟ ಜವಾಬ್ದಾರಿ ಸ್ಥಾನವವನ್ನು ನೀವಾಗಿಯೇ ಬಿಟ್ಟುಕೊಡಲಿದ್ದೀರಿ. ಖರ್ಚಿಗೆ ಇಂದು ಸ್ವಲ್ಪ ಕಡಿವಾಣ ಹಾಕುವುದು ಉತ್ತಮ. ಕೆಲಸಕಾರ್ಯಗಳು ಆಲಸ್ಯದಿಂದಾಗಿ ನಿಧಾನವಾಗಲಿದೆ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಅಕಸ್ಮಾತ್ ಆಗಿ ದೊರೆತ ಅಮೂಲ್ಯವಾದ ವಸ್ತುವನ್ನು ಜೋಪಾನವಾಗಿ ಇಟ್ಟುಕೊಳ್ಳಿ. ವಾತಾವರಣವು ಬದಲಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗು ಸಾಧ್ಯತೆ ಇದೆ. ನಿಮ್ಮ‌ ಸಾಲವು ತೀರಲು ಬಂಧುಗಳು ಸಹಾಯ ಮಾಡುವರು. ಉದ್ವೇಗಕ್ಕೆ ಒಳಗಾಗಿ ಏನನ್ನಾದರೂ ಹೇಳಿಬಿಡಬೇಡಿ.

ವೃಷಭ: ಸ್ತ್ರೀಯರು ಇಂದು ನಿಮ್ಮ ಸಹಾಯಕ್ಕೆ ಬರುವರು‌. ಆರೋಗ್ಯದ ಮೇಲೆ ಗಮನವಿಟ್ಟು ಇಂದಿನ ಪ್ರಯಾಣವನ್ನು ಮಾಡಲು ಹೋಗಿ. ಇಷ್ಟು ದಿನದ ರಹಸ್ಯವು ಮನೆಯಲ್ಲಿ ಬಹಿರಂಗವಾದೀತು. ಇದರಿಂದ ಮನೆಯಲ್ಲಿ ಆತಂಕವಾಗಬಹುದು. ಕೇಳಿದರಷ್ಟೇ ಹೇಳಿ, ಯಾರಿಗೂ ಸುಮ್ಮನೇ ಉಪದೇಶವನ್ನು ಮಾಡಬೇಡಿ.‌ ಬಂಧುಗಳು ನಿಮ್ಮನ್ನು ಅಪಹಾಸ್ಯ ಮಾಡಿಯಾರು. ವಿದ್ಯಾರ್ಥಿಗಳು ಇಷ್ಟು ದಿನವಿದ್ದಂತೆ ಇರುವುದು ಬೇಡ. ನಿಧಾನವಾಗಿ ಮುಂದಿನ ಜೀವನದ ಜೀವನದ ಬಗ್ಗೆ ಗಮನಹರಿಸಬೇಕು. ತಾಯಿಯ ಮೇಲೆ ಇಂದು ನೀವು ಸಿಟ್ಟಾಗಬಹುದು. ಖುಷಿಯನ್ನು ನೀವು ಹಂಚಿಕೊಳ್ಳುವ ಮನಸ್ಸು ಮಾಡುವಿರಿ.

ಮಿಥುನ: ರಾಜಕೀಯ ವ್ಯಕ್ತಿಗಳು ಹೆಚ್ಚಿನ ಲಾಭವನ್ನು ಪಡೆಯಬಹುದು. ನಿಮ್ಮ ಮಾತು ಪ್ರಜೆಗಳ ಮನಸ್ಸಿಗೆ ಮುಟ್ಟಲಿದೆ. ಸಾಲವಾಗಿ ಯಾರಾದರೂ ಹಣವನ್ನು ಕೇಳಿದರೆ ಕೊಡಬೇಡಿ. ಅದು ದುರುಪಯೋಗವಾಗಿ ನಿಮಗೂ ಸಿಗದು. ಬಾಡಿಗೆ ಮನೆಯಲ್ಲಿ ಇದ್ದರೆ ಸ್ಥಾನವನ್ನು ಬದಲಾಯಿಶುವಿರಿ. ಸಂಗಾತಿಯಿಂದ ಸಂಪತ್ತು ಸಿಗಲಿದೆ. ಶ್ರದ್ಧಾ-ಭಕ್ತಿಯ ಕೊರತೆ ಇಂದು ಕಾಣಲಿದೆ. ನಿಮ್ಮ ಆಪ್ತರು ನಿಮ್ಮಿಂದ ದೂರಾಗಬಹುದು ಅಥವಾ ಅವರ ನೆನಪು ಇಂದು ಕಾಡಬಹುದು. ನೂತನ ವಸ್ತ್ರಗಳನ್ನು ಖರೀದಿಸುವ ಮನಸ್ಸು ಮಾಡುವಿರಿ. ಹೊರಗಡೆ ಸುತ್ತಾಡಲು ಇಚ್ಛಿಸುವಿರಿ. ವಿದ್ಯಾರ್ಥಿಗಳು ಆಟದಲ್ಲಿ ಹೆಚ್ಚಿನ‌ ಸಮಯ ಕಳೆಯುವಿರಿ.

ಕಟಕ: ಇಂದು ನಿಮ್ಮ ಕೆಲಸದಿಂದ ನಿಮಗೆ ಆಪಮಾನವಾಗಲಿದೆ. ಇದು ನಿಮಗೆ ಬಹಳ ಮುಜುಗರವನ್ನು ತಂದಿದ್ದು, ಸಹಿಸಿಕೊಳ್ಳುವುದು ಕಷ್ಟವಾಗುವುದು. ತಂದೆಯ ವಿಚಾರದಲ್ಲಿ ನಿಮಗೆ ಸಿಟ್ಟಬರಬಹುದು. ಸರಳವಾಗಿ ಸಿಕ್ಕ ಉದ್ಯೋಗವನ್ನು ಬಿಟ್ಟು ನಿಮ್ಮದೇ ಕಲ್ಪನೆಯ ಉದ್ಯೋಗಕ್ಕೆ ಹುಡುಕಾಟ ನಡೆಸುವಿರಿ. ಇಂದು ಮಾಡುವ ಕೆಲಸವನ್ನು ಮುಂದೂಡಬೇಡಿ. ಅದು ಎಂದೂ ಆಗದೇ ಹೊಇಗಬಹುದು. ಸತ್ಯವನ್ನು ಮುಚ್ಚಿಡುವ ಪ್ರಯತ್ನ ಮಾಡುವಿರಿ‌. ದೇವರನ್ನು ಮರೆತು ಮುಂದುವರಿಯುವ ಕಾಲವಲ್ಲ ನಿಮಗೆ. ಬೇಕಾದಷ್ಟಕ್ಕೆ ಮಾತ್ರ ಹಣವನ್ನು ಖರ್ಚುಮಾಡಿ.

ಸಿಂಹ: ನೀವಿಂದು ಕೋಪವನ್ನು ನಿಯಂತ್ರಣಕ್ಕೆ ತರುವುದು ಬಹಳ ಮುಖ್ಯ.‌ಅಜಾಗರೂಕರಾಗಿರಬೇಡಿ. ನಿಮ್ಮನ್ನು ಹತ್ತಾರು ಕಣ್ಣುಗಳು ಗಮನಿಸುತ್ತಿರುತ್ತವೆ. ಮಾತಿನ ವೇಗವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಮಕ್ಕಳು ಸ್ವತಂತ್ರರು ಎಂದು ಅವರನ್ನು ಸ್ವಚ್ಛೆಯಿಂದ ಇರಲು ಬಿಡಬೇಡಿ. ಅವರ ಮೇಲೆ ಗಮನವಿರಲಿ. ಹೆಚ್ಚಿನ ಜವಾಬ್ದಾರಿಗಳು ಬರುವ ಸಾಧ್ಯತೆ ಇದ್ದರೂ ಹಿತಶತ್ರುಗಳು ಅದನ್ನು ತಪ್ಪಿಸಿಬಿಟ್ಟಾರು.
ಸಂಪಾದನೆಗೆ ದಾರಿಗಳು ಅನೇಕವಿದ್ದರೂ ನೀವು ಉತ್ತಮವಾದ ಒಂದನ್ನು ಆರಿಸಿಕೊಂಡು ಮುಂದುವರಿಯಿರಿ. ಯಶಸ್ಸು ಸಿಗಲಿದೆ. ಒಳ್ಳೆಯದರಲ್ಲಿಯೂ ಕೆಟ್ಟದ್ದನ್ನು ಹುಡುಕುತ್ತ ಇರಬೇಡಿ.

ಕನ್ಯಾ: ಕಷ್ಟದಿಂದ ಸಂಪಾದಿಸಿದ ಹಣದ ಸ್ವಲ್ಪ ಭಾಗವು ಖರ್ಚಾಗಲಿದೆ. ಹಣವೊಂದೇ ಮುಖ್ಯ ಎನ್ನುವ ನಿರ್ಧಾರಕ್ಕೆ ಬರುವುದು ಸರಿಯಲ್ಲ. ನಿಮಗೆ ಪ್ರವಾಸ ಮಾಡಬೇಕೆಂಬ ಆಸೆ ಇದ್ದು ಕಾಲವು ಸರಿದುಹೋಗಿರುತ್ತದೆ. ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವವರಿದ್ದೀರಿ. ಮಾತಿನ ಬಗ್ಗೆ ಆದಷ್ಟು ಗಮನವಿರಲಿ. ಏನನ್ನಾದರೂ ಹೇಳಿ ಅಪಮಾನಕ್ಕೆ ಸಿಲುಕಬಹುದು. ಕಾಲಕ್ಕೆಂದು ಕುಳಿತುಕೊಳ್ಳಬೇಡಿ. ಮಾಡಬೇಕಾದುದನ್ನು ಮಾಡಿ ಮುಗಿಸಿ. ಮನೆಯಲ್ಲಿಯೇ ಕುಳಿತು ಬೇಸರವಾದೀತು. ಪ್ರತಿಕಾರ ಬುದ್ಧಿಯನ್ನು ಬಿಡುವುದು ಉತ್ತಮ.‌ ನಿಮ್ಮ ಕೆಲಸದ ಕಡೆ ಗಮನ ಹೆಚ್ಚಿರಲಿ.

ತುಲಾ: ಆಪ್ತರ ಜೊತೆ ಹಣದ ವಿಚಾರವಾಗಿ ಕಲಹವಾಗಲಿದೆ. ಬಂಗಾರವನ್ನು ಪತ್ನಿಗೋಸ್ಕರ ಖರೀದಿಸುವಿರಿ. ಮೋಸಗಾರರು ನಿಮ್ಮ ಜೊತೆಗೇ ಇರುವರು, ಗುರುತಿಸಿಕೊಳ್ಳಿ. ಅನಿವಾರ್ಯವಾಗಿ ಸಾಲಮಾಡಬೇಕಾದ ಸ್ಥಿತಿ ಬರಲಿದೆ. ಉದ್ಯೋಗದ ಸ್ಥಳದಲ್ಲಿ ಸಹೋದ್ಯೋಗಿಗಳು ಸಹಾಯ ಮಾಡುವರು. ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಗೊಂದಲ ಉಂಟಾಗಬಹುದು. ನಿಮ್ಮ ತಪ್ಪಿಗೆ ಮತ್ಯಾರನ್ನೋ ತೋರಿಸುವಿರಿ. ಆರೋಗ್ಯವು ಹದ ತಪ್ಪಬಹುದು. ಮನೆಯಲ್ಲಿ ಸೂಕ್ತವಾದ ಚಿಕಿತ್ಸೆ ಮಾಡಿ. ಧನ್ವಂತರಿಯ ಸ್ರೋತ್ರ ಮಾಡಿ ಔಷಧವನ್ನು ಸ್ವೀಕರಿಸಿ.

ವೃಶ್ಚಿಕ: ನಿಮ್ಮ ಭೂಮಿಯು ಸರ್ಕಾರದ ಪಾಲಾಗಬಹುದು. ಅಧಿಕಾರಿಗಳು ನಿಮ್ಮ ಆದಾಯವನ್ನು, ವೃತ್ತಿಯನ್ನು ವಿಚಾರಿಸಯಾರು. ಸರಿಯಾದ ಮಾಹಿತಿ ನೀಡಿ. ಇನ್ನೊಬ್ಬರ ಬಗ್ಗೆ ನಿಮ್ಮ ಭಾವನೆಯನ್ನು ಬದಲಿಸಿಕೊಳ್ಳುವುದು ಉತ್ತಮ. ನಿಮಗೆ ಸಲ್ಲದ ಮಾತುಗಳು ನಿಮ್ಮೆದುರು ಮಕ್ಕಳು ಆಡಬಹುದು. ಉದ್ವೇಗದಿಂದ ಏನನ್ನಾದರೂ ಹೇಳಲು ಹೋಗಬೇಡಿ. ನಿಮ್ಮನ್ನು ಅನ್ಯರಂತೆ ಕಂಡಾರು. ಬೆಳಗಿನಿಂದ ಕೆಲಸ ಮಾಡುತ್ತಿದ್ದರೂ ಇನ್ನೂ ಮುಗಿದಿಲ್ಲ ಆತಂಕ ಇರಲಿದೆ. ಏಕಾಂತವನ್ನು ಇಂದು ಬಹಳ‌ ಇಷ್ಟಪಡುವಿರಿ.‌ ಉದ್ಯೋಗದಿಂದ ಬಂದವರೇ ಉದ್ಯಾನವನಕ್ಕೆ ಹೋಗಿ ಧ್ಯಾನಸ್ಥರಾಗುವಿರಿ.

ಧನು: ನಿಮ್ಮ ನಡವಳಿಕೆಯಿಂದ ಮೇಲಧಿಕಾರಿಗಳಿಗೆ ಅಸಮಾಧಾನವಾಗಲಿದೆ. ನಿಮ್ಮ ಸ್ಪಷ್ಟ ನಿರ್ಧಾರವನ್ನು ಮನೆಯಲ್ಲಿ ಹೇಳಿ. ಗೊಂದಲವನ್ನು ಮಾಡಿಕೊಂಡು ಇರಬೇಡಿ. ನಿಮ್ಮ ಪ್ರೇಮ ವಿಚಾರವನ್ನು ಕೇಳಿ ಮನೆಯಲ್ಲಿ ಆಶ್ಚರ್ಯವಾಗಬಹುದು. ಅವರು ಇದನ್ನು ಒಪ್ಪದೇ ಇರಬಹುದು. ಅದಕ್ಕಾಗಿ ನಿಮ್ಮದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ವಾತಾವರಣ ತಿಳಿಯಾದಮೇಲೆ ಆ ಬಗ್ಗೆ ಚರ್ಚಿಸಿ. ನಿಮ್ಮ ಬುದ್ಧಿವಂತಿಕೆಯ ಪ್ರದರ್ಶನವನ್ನು ಮಾಡಬೇಡಿ. ಹಾಸ್ಯಕ್ಕೆ ಆಸ್ಪದವಾದೀತು. ನೀವಿಂದು ಅಪರಿಚಿತರಿಗೆ ಸಹಾಯಮಾಡಲಿದ್ದೀರಿ.

ಮಕರ: ಕುಟುಂಬದ ಸಮಸ್ಯೆಯನ್ನು ಬಗೆಹರಿಸಲಾಗದೇ ಇಂದು ಕೈಚೆಲ್ಲಿ ಕುಳಿತುಕೊಳ್ಳುವಿರಿ. ಹಣದ ವಿಚಾರದಲ್ಲಿ ನಿಮ್ಮನ್ನು ವಂಚಿಸುವರು. ನಿಮ್ಮ ತಪ್ಪೇ ನಿಮಗೆ ಮುಳ್ಳದೀತು. ಸ್ತ್ರೀಯರಿಗೆ ವಿನಾಕಾರಣ ಅಪವಾದ ಬಂದೀತು. ಹೊಸ ಕೆಲಸದ ಉತ್ಸಾಹದಲ್ಲಿ ಇರುವಿರಿ. ನೂತನ ವಾಹನವನ್ನು ಖರೀದಿಸಿದ ಖುಷಿ ಇರಲಿದೆ. ಸಂಗಾತಿಯ ಜೊತೆ ಇಂದು ಕಛೇರಿಯ ವಿಚಾರವನ್ನು ಹಂಚಿಕೊಳ್ಳುವಿರಿ. ನಿಮಗಿಷ್ಟವಾದ ಖಾದ್ಯವನ್ನು ತಿನ್ನುವ ಮನಸ್ಸಾದೀತು. ಸಹೋದರರ ನಡುವೆ ಮನೆಯ ಬಗ್ಗೆ ಚರ್ಚಿಸುವಿರಿ. ದಿನದ ಕೊನೆಯಲ್ಲಿ ಸಂತೃಪ್ತಿ ಇರಲಿದೆ. ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಿ.

ಕುಂಭ: ಸ್ನೇಹಿತರ ಜೊತೆ ಸೇರಿ ಖರ್ಚನ್ನು ಮಾಡುವಿರಿ. ಯಾರಾದರೂ ನಿಮ್ಮನ್ನು ಅಳೆಯಬಹುದು. ಅದಕ್ಕೆ ಸರಿಯಾಗಿ ಉತ್ತರಿಸಿ. ಆನಾರೋಗ್ಯವು ನಿಧಾನವಾಗಿ ಗುಣಮುಖವಾಗುವುದು. ಅಗೌರವ ಸಿಗುವ ಕಡೆ ಸುಮ್ಮನೆ ಹೋಗಬೇಡಿ. ಆಸ್ತಿಯ ವಿಚಾರದಲ್ಲಿ ಯಾರೋ ಮಧ್ಯಸ್ತಿಕೆ ವಹಿಸಿಕೊಳ್ಳಲು ಬರಬಹುದು. ಕಛೇರಿಯಲ್ಲಿ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಲು ಕಷ್ಟವಾದೀತು. ಪಿತ್ತಕ್ಕೆ ಸಂಬಧಿಸಿದ ದೋಷವು ಕಾಣಿಸುವುದು. ಇನ್ನೊಬ್ಬರನ್ನು ನೋಡಿ ಕರುಬುವ ಅವಸ್ಥೆ ಒಳ್ಳೆಯದಲ್ಲ. ನಿಮ್ಮ ಸ್ವಂತಿಕೆ ನಿಮ್ಮದಾಗಿರಲಿ. ಹನುಮಾನ್ ಚಾಲೀಸ್ ಪಠಣವು ನಿಮಗೆ ಧೈರ್ಯವನ್ನೂ ಕಾರ್ಯದಲ್ಲಿ ಉತ್ಸಾಹವನ್ನು ತುಂಬುವುದು.

ಮೀನ: ಸಲ್ಪ ಅಂತರದಲ್ಲಿ ನಿಮಗೆ ಸಿಗಬೇಕಾದ ಆಸ್ತಿಯು ಬೇರೆಯವರ ಕೈ ಸೇರುವುದು. ವಾಹನ ರಿಪೇರಿಗೆ ಹಣವು ಖರ್ಚಾಗಬಹುದು. ನಿಮ್ಮದಲ್ಲದ ವಸ್ತುಗಳನ್ನು ಇಟ್ಟುಕೊಳ್ಳುವುದು ಒಳ್ಳೆಯದಲ್ಲ. ಅವರಿಗೆ ಕೊಟ್ಟುಬಿಡಿ. ಮತ್ತೂ ಅತಿಯಾದ ಅನಗತ್ಯ ಬಯಕೆಯೂ ನಿಮ್ಮ ನಿತ್ಯ ಜೀವನಕ್ಕೆ ಒಳ್ಳೆಯದಲ್ಲ. ಅವಶ್ಯಕತೆಗಳನ್ನು ಪೂರೈಸಿಕೊಳ್ಳ ನಿಮ್ಮ ಹಣದ ವಿನಿಯೋಗವಾಗಲಿ. ಲಾಭಾಧಿಪತಿಯು ವ್ಯಯದಲ್ಲಿದ್ದು ಹಣವನ್ನು ನಿಲ್ಲದಂತೆ ಮಾಡುವನು. ನಿಮಗೆ ಯಾರಾದರೂ ಏನಾದರೂ ಮಾಡಿಸಿದ್ದಾರೇನೋ ಎನ್ನುವ ಅನುಮಾನವೂ ಕಾಡಬಹುದು. ಮೃತ್ಯುಂಜಯನನ್ನು ಆರಾಧಿಸಿ. ಸಂಕಷ್ಟಗಳು ಕಡಿಮೆಯಾದಾವು.

ಲೋಹಿತಶರ್ಮಾ 8762924271 (what’s app only)