AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಅನಗತ್ಯ ಖರ್ಚಾಗಬಹುದು, ಹಣಕಾಸಿನ ವ್ಯವಹಾರದ ಬಗ್ಗೆ ಎಚ್ಚರ

ಇಂದಿನ (2023 ಮೇ​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

Nitya Bhavishya: ಅನಗತ್ಯ ಖರ್ಚಾಗಬಹುದು, ಹಣಕಾಸಿನ ವ್ಯವಹಾರದ ಬಗ್ಗೆ ಎಚ್ಚರ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 27, 2023 | 12:02 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಆಶ್ಲೇಷ, ಯೋಗ: ಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ 09:17 ರಿಂದ 10:53ರ ವರೆಗೆ, ಯಮಘಂಡ ಕಾಲ 02:06 ರಿಂದ 03:42ರ ವರೆಗೆ, ಗುಳಿಕ ಕಾಲ 06:04 ರಿಂದ 07:40ರ ವರೆಗೆ.

ಮೇಷ: ಇಂದು ನಿಮ್ಮ ಸಮಯವು ಸದುಪಯೋಗವಾಗಿದೆ ಎಂದು ಅನ್ನಿಸಬಹುದು. ನಿಮ್ಮ ಬುದ್ಧಿಯಿಂದ ನಿಮಗೆ ಸಿಗಬೇಕಾದುದನ್ನು ಪಡೆದುಕೊಳ್ಳಬಹುದು. ಮಾತುಗಳಿಂದ ನಿಮ್ಮನ್ನು ಅಳೆಯಬಹುದು. ಇಂದಿನ ಹೆಚ್ಚಿನ‌ ವಿಚಾರಗಳು ನಿಮಗೆ ಸಂಬಂಧವಿಲ್ಲದಿದ್ದರೂ ಅನಿವಾರ್ಯವಾಗಿ ಮಾತನಾಡಬೇಕಾಗಬಹುದು. ಒಮ್ಮೆ ಭೇಟಿಯಾದ ಮಿತ್ರರು ನಿಮ್ಮನ್ನು ಭೇಟಿ ಮಾಡುವರು. ವ್ಯವಸ್ಥೆ ಕೊರತೆಯನ್ನು ಸರಿ ಮಾಡಲು ಪ್ರಯತ್ನಿಸುವಿರಿ. ಎಲ್ಲರೂ ನಿಮ್ಮ ಮಾತನ್ನು ಕೇಳುವುದಿಲ್ಲ. ಕೇಳುವವರ ಬಳಿ ಹೇಳಬೇಕಾದುದನ್ನು ಹೇಳಿ.

ವೃಷಭ: ಇಂದು ನೀವು ಹಣಕಾಸಿನ ವ್ಯವಹಾರಕ್ಕೆ ವಾದ ಮಾಡುವ ಹಾಗೆ ಆಗಬಹುದು. ನಿಮ್ಮ ಕಾರ್ಯಕ್ರಮಗಳು ಎಲ್ಲವೂ ವ್ಯತ್ಯಾಸವಾಗಲಿದೆ. ಇದು ನಿಮಗೆ ಅಪಮಾನದಂತೆಯೂ ಎನಿಸಬಹುದು. ಪೂರ್ವಾರ್ಜಿತ ಸಂಪತ್ತಿಗೆ ಬೆಲೆ ಕೊಡಿ. ಕೆಲವು ಸಮಸ್ಯೆಗಳನ್ನು ಅನಗತ್ಯವಾಗಿ ತಂದುಕೊಳ್ಳುವಿರಿ. ನಿಮ್ಮ ಪರೀಕ್ಷೆಯಲ್ಲಿ ನೀವು ಉತ್ತೀರ್ಣರಾಗುವ ಕಾಲ ತುಂಬ ದೀರ್ಘವಿದೆ. ಸಹೋದರನ ಮಾತು ನಿಮಗೆ ಇಷ್ಟವಾಗದಿದ್ದರೂ ಇಷ್ಟಪಡಬೇಕಾದೀತು. ಕಾಲವು ಬಹಳ ನಿಧಾನ ಎಂದು ಅನ್ನಿಸಬಹುದು. ಸಂಪನ್ಮೂಲವ್ಯಕ್ತಿಗಳ ಭೇಟಿಯಾಗಲಿದೆ.

ಮಿಥುನ: ಇಂದು ನೀವು ಧೈರ್ಯವನ್ನು ಕಳೆದುಕೊಳ್ಳದೇ ಮುನ್ನಡೆಯಿರಿ. ಹಣಕಾಸಿನ ವಿಚಾರದಲ್ಲಿ ಕಛೇರಿಯಲ್ಲಿ ಕಲಹವಾದೀತು. ದಾಖಲೆಗಳನ್ನು ಸರಿಯಾಗಿ ಇಡಿ. ಸಭೆಯಲ್ಲಿ ನೀವು ಮಾತನಾಡಬೇಕಾದ ಸ್ಥಿತಿ ಬರಬಹುದು. ಚರಾಸ್ತಿಗಳ ಕೆಲವು ನಷ್ಟವಾಗಬಹುದು. ಕುಟುಂಬ ನಿರ್ವಹಣೆಯು ಅನಿವಾರ್ಯವಾಗಿ ಬಂದೀತು. ತಂದೆಯ ಆರೋಗ್ಯವನ್ನು ವಿಚಾರಿಸಿಕೊಳ್ಳಿ. ಸತತ ಕೆಲಸವು ವಿಶ್ರಾಂತಿಯನ್ನು ಬಯಸುವುದು. ಗಾಯ ಮಾಡಿಕೊಳ್ಲುವ ಸಾಧ್ಯತೆ ಇದೆ. ಅಪರಿಚಿತರ ಮೇಲೆ ಭರವಸೆ ಬಂದೀತು.

ಕಟಕ: ಈ ದಿನ ನಿಮಗೆ ವಾಹನ ಮತ್ತು ವಸತಿಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು. ಏಕೆಂದರೆ ನೀವು ಉದ್ಯೋಗದ ನಿಮಿತ್ತ ಅಪರಿಚಿತ ಪ್ರದೇಶಕ್ಕೆ ಹೋಗುವಿರಿ. ನಿಮಗೆ ಉತ್ಸಾಹ ಕೊರತೆಯಾದರೆ ಸ್ನೇಹಿತರು ಅದನ್ನು ಹೆಚ್ಚಿಸಿಯಾರು. ಯಾರಿಗಾದರೂ ಸಹಾಯವನ್ನು ಮಾಡಿ. ಅಷ್ಟಮದ ಶನಿಯ ಕಾಟವು ಕಡಿಮೆಯಾದೀತು. ಸರ್ಕಾರವು ನೀವು ಸಂಪಾದಿಸಿದ ಸಂಪತ್ತಿಗೆ ದಾಖಲೆ ಕೇಳಬಹುದು. ಅಧಿಕಾರಿಗಳ ಜೊತೆ ವರ್ತನೆ ಸರಿಯಾಗಿರಲಿ. ವಿದ್ಯುತ್ ಉಪಕರಣಗಳಿಂದ ನಿಮ್ಮ ದೇಹಕ್ಕೆ ಹಾನಿಯಾಗಬಹುದು. ಹೊಸದಾಗಿ ಆರಂಭಿಸಿದ ಕಾರ್ಯಗಳನ್ನು ನಿಲ್ಲಿಸುವ ಯೋಚನೆಯು ಬರಬಹುದು.

ಸಿಂಹ: ಈ ದಿನ ಸಹಜವಾಗಿ ಮುನ್ನಡೆಯುವುದು. ನಿಮ್ಮ ಎಲ್ಲ ಕೆಲಸಗಳೂ ಸಮಯಕ್ಕೆ ಸರಿಯಾಗಿ ಮುಗಿಸಿಕೊಂಡು ಕುಳಿತುಕೊಳ್ಳುವಿರಿ. ಹಳೆಯ ದಿನಗಳ ನೆನಪುಗಳು ಒಂದೊಂದಾಗಿಯೇ ಬಂದು ಹೋಗುವುದು. ಖರ್ಚನು ನಿಯಂತ್ರಿಸಲು ಅಥವಾ ಹೆಚ್ಚಿನ ಸಂಪಾದನೆಗೆ ಮನೆಯಲ್ಲಿಯೇ ಕೆಲಸ ಮಾಡುವ ಉದ್ಯೋಗವನ್ನು ಹುಡುಕುವಿರಿ. ಸಂಬಂಧಿಕರ ದೂರವಾಣಿ ಕರೆಗಳು ನಿಮಗೆ ತೊಂದರೆಯನ್ನು ಉಂಟುಮಾಡಿದರೂ ವ್ಯಕ್ತಪಡಿಸದೇ ಒಲ್ಲದ ಮನಸ್ಸಿನಿಂದ ಮಾತನಾಡುವಿರಿ. ಹಳೆಯ ಮನೆಯ ರಿಪೇರಿ ಕೆಲಸ ಮಾಡುವಿರಿ.

ಕನ್ಯಾ: ಇಂದು ನಿಮ್ಮ ದಾಂಪತ್ಯದಲ್ಲಿ ಹೆಚ್ಚಿನ ಸುಖವು ಸಿಗುವ ಸೂಚನೆ ಸಿಗಲಿದೆ. ಕೆಲಸಗಳನ್ನು ಬಹಳ ಸಂಕೀರ್ಣ ಮಾಡಿಕೊಳ್ಳುವಿರಿ. ಸರಳವಾದ ಆಲೋಚನೆಯಿಂದ ನಿಮ್ಮ ಕೆಲಸಗಳು ಸಲೀಸಾಗಬಹುದು. ಭೂಮಿಗೆ ಸಂಬಂಧಿಸಿದಂತೆ ನೆರೆಯವರ ಮಧ್ಯದಲ್ಲಿ ಬಿಸಿಬಿಸಿ ಮಾತುಗಳು ಆಗಬಹುದು. ಕಾನೂನಿನ ಮಾರ್ಗದಲ್ಲಿ ನಡೆಯುವುದು ಉತ್ತಮ. ಅಹಿತಕರ ಘಟನೆಗಳಿಗೆ ಆಸ್ಪದವನ್ನು ಕೊಡುವುದು ಬೇಡ. ಮಕ್ಕಳನ್ನು ಪ್ರೀತಿಯಿಂದ ಕಾಣುವಿರಿ. ಬೇಕಾದುದನ್ನು ಅವರಿಗೆ ನೀಡಿ ಖುಷಿಪಡಿಸುವಿರಿ. ಭಕ್ತಿಯಲ್ಲಿ ಚಾಂಚಲ್ಯವು ಅಧಿಕವಾದೀತು.

ತುಲಾ: ನೀವು ಈ ದಿನ ಕೆಲಸದ ಸ್ಥಳದಲ್ಲಿ ಕೊಪವನ್ನು ಮಾಡಿಕೊಳ್ಳದಿರುವುದು ಒಳ್ಳೆಯದು. ಹಣಕಾಸಿನ ವಿಚಾರದಲ್ಲಿ ನೀವು ದಂಡ ತೆರಬೇಕಾದೀತು. ಸರಿಯಾದ ಸಲಹೆಯನ್ನು ಪಡೆಯಿರಿ. ಹೊಟ್ಟೆ ನೋವಿನಿಂದ ನೀವು ಇಂದು ಬಳಲಬಹುದು. ಇದು ಕೆಲಸದ ಪ್ರದೇಶದಲ್ಲಿ ನಿಮ್ಮ ಮನಸ್ಸಿನ ಏಕಾಗ್ರತೆಯನ್ನು ಭಂಗ ಮಾಡೀತು. ಇಂದು ನಿಮ್ಮ ದಿನದ ಕೆಲಸವನ್ನು ಪಟ್ಟಿ ಮಾಡಿಕೊಳ್ಳಿ. ಇಲ್ಲವಾದರೆ ಸಮಯವೂ ವ್ಯರ್ಥ, ಕಾರ್ಯವೂ ಆಗದು. ಹೊಸ ಕೆಲಸಗಳನ್ನೂ ಆರಂಭಿಸಲು ಇದು ಸಹಕಾರಿಯಾಗುವುದು. ಯಾವುದನ್ನೂ ಇಂದು ಅತಿಯಾಗಿ ಮಾಡಲು ಹೋಗಬೇಡಿ. ಮಿತಿಯಲ್ಲಿ ಎಲ್ಲವೂ ಇರಲಿ.

ವೃಶ್ಚಿಕ: ಈ ದಿನ ನೀವು ಶುಭ ಕಾರ್ಯಗಳಲ್ಲಿ ಉತ್ಸಾಹದಿಂದ ಭಾಗವಹಿಸುವಿರಿ. ಆಹಾರದಿಂದ ನಿಮ್ಮ ಆರೋಗ್ಯವನ್ನು ಉತ್ತಮವಾಗಿಸಿಕೊಳ್ಳುವಿರಿ. ನಿರೀಕ್ಷಿತ ಕೆಲಸದಲ್ಲಿ ಹಿನ್ನಡೆಯಾದರೂ ಸ್ವಲ್ಪಮಟ್ಟಿನ ಸಮಾಧಾನ ಇರ್ಲಿದೆ. ಮಕ್ಕಳ ಮನಸ್ಸನ್ನು ನೋಯಿಸಲು ಹೋಗಬೇಡಿ. ನಿಮ್ಮ ಮಾತುಗಳು ವಿಪರೀತ ಪರಿಣಾಮವನ್ನು ಕೊಡುವುದು. ಬುದ್ಧಿವಂತಿಕೆಯಿಂದ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳಿ. ಪ್ರೇಮವ್ಯವಹಾರದಲ್ಲಿ ಜಾಗರೂಕತೆ ಇರಲಿ. ಬಿಟ್ಟು ಹೋಗುವ ಸಾಧ್ಯತೆ ಇದೆ. ಆಕಸ್ಮಿಕ ತಿರುವುಗಳಿಗೆ ನೀವು ಇಂದು ತಯಾರಿರಬೇಕಾದೀತು.

ಧನಸ್ಸು: ಈ ದಿನ ನೀವು ಕಠಿಣ ಪರಿಶ್ರಮದ ಅನಂತರ ಅಂದುಕೊಂಡಿದ್ದನ್ನು ಅಲ್ಪ ಸಾಧಿಸುವಿರಿ. ನೀವು ಇಂದು ಕಛೇರಿಯ ಕೆಲಸಕ್ಕೆ ವಿರಾಮ ಹಾಕಿ ದೂರ ಪ್ರವಾಸ ಹೋಗುವ ಸಾಧ್ಯತೆ ಇದೆ. ಇಂದಿನ ಘಟನೆಗಳು ಮಾನಸಿಕವಾಗಿ ಕಿರಿಕಿರಿಯನ್ನು ಮಾಡುತ್ತವೆ. ಇದರಿಂದ ಮನಸ್ಸು ನಿರಾಸೆಗೊಳ್ಳಬಹುದು. ನಿಮ್ಮ ಅಪೂರ್ಣ ಕಾರ್ಯಗಳು ಇಂದು ಮುಂದಿವರಿಯಲಿವೆ. ಅದಲ್ಲಿ ಕೆಲವು ಪೂರ್ಣವಾಗುವುದು. ಇಂದಿನ ಸಂತೋಷಕ್ಕೆ ಅತಿಯಾಗಿ ಹಿಗ್ಗುವುದು ಬೇಡ, ಸಮತೋಲನವಿರಲಿ.

ಮಕರ: ಈ ದಿನ ನಿಮ್ಮ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಬರುವ ಸಾಧ್ಯತೆ ಇದೆ. ನಿಮ್ಮ ಮೇಲಿನ ಗೌರವ ಹಾಗು ಪ್ರೀತಿಯು ಇರುವುದರಿಂದ ಅಲ್ಲಿಯೇ ಅದು ಮುಕ್ತಾಯವಾಗಬಹುದು. ಆರ್ಥಿಕತೆಯ ವಿಚಾರದಲ್ಲಿ ನಿಮಗೆ ಇಂದು ಸೂಚಿಸದೇ ಹೋದೀತು. ನಿಮ್ಮ ಕೆಲಸವನ್ನು ಟೀಕೆ ಮಾಡುವ ಸಾಧ್ಯತೆ ಇದೆ. ಬಂಧುಗಳ ವಿಚಾರದಲ್ಲಿ ನಿಮಗೆ ಅಸಮಾಧಾನ ಇರಬಹುದು. ವ್ಯಕ್ತಪಡಿಸುವ ವಿಧಾನವು ಬೇರೆ ರೀತಿಯಾಗಿರುತ್ತದೆ. ಮಾತು ನಿರರ್ಥಕ ಎಂದು ತಿಳಿದಮೇಲೆ ಮಾತು ನಿಲ್ಲಿಸುವುದು ಉತ್ತಮ.

ಕುಂಭ: ಇಂದು ನಿಮ್ಮ ಆರ್ಥಿಕ ಮತ್ತು ಕೌಟುಂಬಿಕ ತೊಂದರೆಗಳು ನಿಮ್ಮನ್ನು ಮತ್ತಷ್ಟು ಒತ್ತಡಕ್ಕೆ ಒಯ್ಯಬಹುದು. ಅತಿಯಾದ ಉತ್ಸಾಹ ಹಾಗೂ ಸಿದ್ಧತೆಯಲ್ಲಿರುವ ನಿಮಗೆ ಮನೆಯವರ ಮಾತು ಉತ್ಸಹ ಭಂಗವನ್ನು ಮಾಡುವುದು. ಒಳ್ಳೆಯ ಸುದ್ದಿಯ ನಿರೀಕ್ಷೆಯಲ್ಲಿ ನೀವಿರುವಿರಿ. ಹಳೆಯ ಸ್ನೇಹಿತರನ್ನು ಭೇಟಿ ಮಾಡಿ ಹಳೆಯದನ್ನು ನೆನಪಿಸಿಕೊಂಡು ಸಂತೋಷಿಸಬಹುದು. ಅನುಮಾನವಾಗುವ ಸ್ಥಳಗಳಿಗೆ ಹೋಗದೇ ಹಿಂದೇಟು ಹಾಕುವಿರಿ. ಸಂಪತ್ತನ್ನು ಅನ್ಯ ಮಾರ್ಗದಿಂದ ಸಂಪಾದಿಸಲು ಅವಕಾಶಗಳು ಬರಬಹುದು. ನಿಮ್ಮ ಶ್ರಮವು ನ್ಯಾಯಯುತವಾದ ಹಾದಿಯಲ್ಲಿ ಇರಲಿ. ಯಾರ ಮಾತನ್ನೂ ನಿರ್ಲಕ್ಷ್ಯ ಮಾಡಬೇಡಿ.

ಮೀನ: ಇಂದು ನಿಮ್ಮ ಅನಪೇಕ್ಷಿತ ಹಸ್ತಕ್ಷೇಪದಿಂದಾ ಲಾಭದ ಹಾದಿಯ ಮೇಲೆ ವಿಪರೀತ ಪರಿಣಾಮ ಉಂಟಾಗಬಹುದು. ಇಂದು ನೀವು ಅಪರಿಚಿತ ವ್ಯಕ್ತಿಯಿಂದ ಬೆಂಬಲವನ್ನು ಪಡೆಯಲಿದ್ದೀರಿ. ಕಾರ್ಯದಲ್ಲಿ ಶ್ರದ್ಧೆಯು ಅವಶ್ಯವಾಗಿ ಬೇಕಾಗಿದೆ. ಅಜಾಗರೂಕಯೆಯಿಂದ ತೊಂದರೆಗೆ ಸಿಕ್ಕಿಹಾಕಿಕೊಳ್ಳಬಹುದು. ನಿಮ್ಮ ಯಶಸ್ಸನ್ನು ಕಂಡು ನಿಮ್ಮನ್ನು ಸೋಲಿಸಲೆಂದು ಹಿತಶತ್ರುಗಳು ಹೊಂಚು ಹಾಕಬಹುದು. ಸುಕೃತದಿಂದ ಅದು ನಿಷ್ಫಲವಾಗಬಹುದು. ನಿರ್ಮಾಣ ಕಾರ್ಯದಲ್ಲಿ ತೊಡ್ಡಗಿದವರಿಗೆ ಹೆಚ್ಚಿನ ಕಾಮಗಾರಿಗಳು ಸಿಗಬಹುದು. ಎಷ್ಟೋ ದಿನಗಳಿಂದ ಅನುಭವಿಸಬೇಕಾದುದನ್ನು ನೀವು ಇಂದು ಅನುಭವಿಸುವಿರಿ. ಇಂದು ಬರುವ ಒಳ್ಳೆಯ ಸುದ್ದಿಯು ನಿಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸೀತು.

ಲೋಹಿತಶರ್ಮಾ – 8762924271 (what’s app only)

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!