AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಶನಿವಾರದ ರಾಶಿ ಭವಿಷ್ಯ

ನೀವು ಧನು, ಮಕರ, ಕುಂಭ, ಮೀನಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 01) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಶನಿವಾರದ ರಾಶಿ ಭವಿಷ್ಯ
ಪ್ರಾತಿನಿಧಿಕ ಚಿತ್ರ
ವಿವೇಕ ಬಿರಾದಾರ
|

Updated on: Apr 01, 2023 | 6:00 AM

Share

ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಏಪ್ರಿಲ್​ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತಿ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಏಕಾದಶೀ, ನಿತ್ಯನಕ್ಷತ್ರ : ಆಶ್ಲೇಷ, ಯೋಗ : ಧೃತಿ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ 09:33 ರಿಂದ 11:05ರ ವರೆಗೆ, ಯಮಘಂಡ ಕಾಲ 02:08 ರಿಂದ 03:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:29ರಿಂದ 08 :01ರ ವರೆಗೆ.

ಸಿಂಹ: ಇಂದು ಸಂಬಂಧಗಳ ಬೆಲೆಯಯ ಅರ್ಥವಾಗಲಿದೆ. ಎಲ್ಲವುದನ್ನೂ ವಿರೋಧಿಸುವುದು ನಿಮ್ಮ ಸ್ವಭಾವವಾಗಿರಲಿದೆ. ಮನೆಯಲ್ಲಿಯೇ ಇದ್ದು ಬೇಸರವಾಗಲಿದೆ. ಹೊರಗೆ ಸುತ್ತಾಡಲು ಹೋಗಲಿದ್ದೀರಿ. ಕಛೇರಿಯಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ನಿಮ್ಮ ಸೇವೆಗೆ ಮೆಚ್ವುಗೆ ಸಿಗಬಹುದು. ಸ್ನೇಹಿತರು ನಿಮ್ಮ ಮಾತಿಗೆ ಬೆಲೆ ಕೊಡುವರು. ಸಕಾರಾತ್ಮಕೆ ಚಿಂತನೆಯನ್ನು ಬೆಳೆಸಿಕೊಳ್ಳುವುದು ಉತ್ತಮ. ಅಪರಿಚಿತ ಕರೆಗಳಿಗೆ ಕಿವಿಗೊಡದೇ ನಿಮ್ಮ ಕೆಲಸವನ್ನು ಮಾಡಿ. ಇಂದಿನ ಕೆಲಸಗಳು ನಿಧಾನಗತಿಯಲ್ಲಿ ಸಾಗಲಿದೆ.

ಕನ್ಯಾ: ಹೊಸದಾಗಿ ಉದ್ಯೋಗವನ್ನು ಅರಸುತ್ತಿದ್ದರೆ ಕೆಲಸಕ್ಕೆ ಹೆಚ್ಚು ಓಡಾಟಗಳು ಆಗಬಹುದು.‌ ನಿಮ್ಮ ಆಸೆಗಳನ್ನು ಪೂರೈಸಿಕೊಳ್ಳಲು ನಿರಂತರ ಯತ್ನವನ್ನು ಮಾಡುವಿರಿ. ಉತ್ತಮವಾದ ಆಹಾರವನ್ನು ತಿನ್ನಬೇಕು ಎಂದು ಬಯಸಿ ಮನೆಯಿಂದ ದೂರ ಹೋಗುವಿರಿ. ಮನೆಯನ್ನು ಕಟ್ಟುವ ವಿಚಾರವು ಪತ್ನಿಯಿಂದ ಬರಲಿದ್ದು ಬಹಳ ಸಂತೋಷವಾಗಲಿದೆ. ತಾಯಿಯ ಆರೋಗ್ಯವು ಕೆಡಲಿದ್ದು ಚಿಕಿತ್ಸೆಯನ್ನು ಕೊಡಿಸುವಿರಿ. ಅಲ್ಪ ಭೋಜನದಿಂದ ತೃಪ್ತಿ ಇರಲಿದೆ. ವಾಹನದಿಂದ ಅಪಘಾತವಾಗಬಹುದು.

ತುಲಾ: ಇಂದು ನೀವು ಹೆಚ್ಚು ಧಾರ್ಮಿಕ ಮನಃಸ್ಥಿತಿ ಉಳ್ಳವರಾಗಿದ್ದೀರಿ. ತೀರ್ಥಕ್ಷೇತ್ರಗಳ ಅಥವಾ ಪ್ರಾಚೀನ ದೇವಾಲಯಗಳ ದರ್ಶನಕ್ಕೆ ಹೋಗುವ ಮನಸ್ಸಾಗಲಿದೆ. ಯಥಾಯೋಗ್ಯ ದಾನವನ್ನೂ ನೀವು ಕೊಡಲಿದ್ದೀರಿ. ಮಾತಗಾರರಾಗಿದ್ದರೆ ನಿಮಗೆ ಪ್ರಶಂಸೆಗಳು ಸಿಗಬಹುದು. ವಂಚನೆ ಮಾಡಿದ್ದೀರಿ ಎಂಬ ಅಪವಾದ ಬರಬಹುದು. ಹೊಸ ವಸ್ತ್ರಗಳನ್ನು ಧರಿಸುವಿರಿ. ಶ್ರಮವಹಿಸದೇ ಫಲವನ್ನು ಅಪೇಕ್ಷಿಸುವುದು ನಿಮ್ಮ ಅಸಾಮರ್ಥ್ಯವನ್ನು ತೋರಿಸುವುದು. ನಿಮ್ಮ ಮಾತುಗಾರಿಕೆಯನ್ನು ಮೆಚ್ಚಿಕೊಳ್ಳಲಿದ್ದಾರೆ.

ವೃಶ್ಚಿಕ: ಇಂದು ನಿಮ್ಮವರುಬಯಾರು ಮತ್ತು ನಿಮ್ಮವರಂತೆ ಕಾಣುವವರು ಯಾರು ಎಂಬುದರ ಸ್ಪಷ್ಟ ನಿಲುವು ಇರಲಿದೆ. ವ್ಯಾಪರ ಅಥವಾ ಉದ್ಯಮವು ನಿಧಾನವಾಗಿ ಒಂದೊಂದೇ ಹೆಜ್ಜೆಯನ್ನು ಇಟ್ಟು ಮೇಲೇರಲು ಆರಂಭಿಸಿದೆ. ಕೃಷಿಯ ಕಾರ್ಯದಲ್ಲಿ ಮನಸ್ಸಾಗಿ ಕೆಲವು ಅಪರೂಪದ ಸಸ್ಯಗಳನ್ನು ನೆಡಲಿದ್ದೀರಿ. ವಿದ್ಯಾರ್ಥಿಗಳಿಗೆ ಸ್ವಲ್ಪ ಹಿಂಜರಿಕೆ ಇರಲಿದೆ. ಸಂಗಾತಿಯನ್ನು ಹುಡುಕುವ ಕೆಲಸವು ನಿಮಗೆ ಬೇಸರವನ್ನು ತರಿಸುವುದು. ಮರ್ಯಾದೆಗೆ ಹೆದರಿ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ಮಾತುಗಳನ್ನು ಕಡೆ ಆಡುವುವಿರಿ.

-ಲೋಹಿತಶರ್ಮಾ ಇಡುವಾಣಿ

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?