AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಇಂದು ಈ ರಾಶಿಯ ಮಹಿಳೆ ಮತ್ತು ಪತಿಯ ನಡುವೆ ಮುಸುಕಿನ ಗುದ್ದಾಟ ನಡೆಯಲಿದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 14) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇಂದು ಈ ರಾಶಿಯ ಮಹಿಳೆ ಮತ್ತು ಪತಿಯ ನಡುವೆ ಮುಸುಕಿನ ಗುದ್ದಾಟ ನಡೆಯಲಿದೆ
ಇಂದಿನ ರಾಶಿ ಭವಿಷ್ಯImage Credit source: istock
Rakesh Nayak Manchi
|

Updated on: Apr 14, 2023 | 6:00 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 14 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶುಕ್ರ, ತಿಥಿ : ನವಮೀ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ಸಿದ್ಧಿ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:59 ರಿಂದ 12:33ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ ಸಂಜೆ 05:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ.

ಸಿಂಹ: ಆಲಸ್ಯದ ಕಾರಣ ನೀವು ಎಲ್ಲಿಗೂ ಹೋಗಲು ಇಷ್ಟಪಡುವುದಿಲ್ಲ. ಇಂದು ಪ್ರಯಾಣ ಮಾಡದ ಲೆಕ್ಕಕ್ಕೆ ಒಳ್ಳೆಯದೇ ಆಗಿದೆ. ನೀವು ಅದನ್ನು ಬದಲಾಯಿಸಲು ಹೋಗಿ ಇನ್ನೊಂದು ಸಂಕಷ್ಟವನ್ನು ತಂದುಕೊಳ್ಳುವಿರಿ. ಅನೇಕ ದಿನಗಳಿಂದ ಒಂದೇ ಖಾಯಿಲೆಯಿಂದ ಬಳಲುತ್ತಿದ್ದು ನಿಮಗೆ ಕಿರಿಕಿರಿಯು ಅತಿಯಾಗಬಹುದು. ಅನಾರೋಗ್ಯವು ನೀವು ವಿಶ್ರಾಂತಿ ಪಡೆಯುವಿರಿ. ನಿಮ್ಮ ಕಠೋರತೆ, ಒರಟುತನವು ನಿಮ್ಮವರಿಗೆ ಹಿಂಸೆಯನ್ನು ಕೊಡಬಹುದು. ಮಕ್ಕಳು ನಿಮ್ಮನ್ನು ಪ್ರಶ್ನಿಸುವರು. ನಿಮಗೆ ಸಂತೋಷವೂ ಬೇಸರೂ ಆಗಬಹುದು.

ಕನ್ಯಾ: ನಿಮ್ಮವರು ನಿಮಗೆ ಅಪಮಾನವನ್ನು ಮಾಡಬಹುದು. ಅದರಿಂದ ಬೇಸರವೂ ಆಗಬಹುದು. ಏಕಾಗ್ರತೆಯ ಕೊರತೆ ಕಾಣಬಹುದು. ಮನೆಯಲ್ಲಿ ಜಗಳವಾಡಿ ದೂರ ಹೋಗುವಿರಿ. ನಿಮ್ಮವರೇ ನಿಮಗೆ ಶತ್ರುಗಳಂತೆ ಕಾಣುವರು. ಆಟದಲ್ಲಿ ಗೆಲ್ಲಲು ಮಾಡಲು ಹೋಗಬೇಡಿ. ಭೂಮಿಯ ಖರೀದಿಗೆ ಕುಟುಂಬದವರ ಸಲಹೆಯನ್ನು ಪಡೆಯುವಿರಿ. ಸಮಾಜಕ್ಕೆ ಏನನ್ನಾದರೂ ಮಾಡಬೇಕು ಎಂಬ ಹಂಬಲವಿರಲಿದೆ. ನಿಮ್ಮ ಪ್ರಾಮಾಣಿಕತೆಯು ನಿಮಗೆ ಯಶಸ್ಸನ್ನು ತರುವುದು. ಏಕಾಂತವು ನಿಮಗಿಂದು ಇಷ್ಟವಾಗುವುದು.

ತುಲಾ: ವಾಹನವನ್ನು ಖರೀದಿಸಿ ಹೊಸ ಉದ್ಯೋಗವನ್ನು ಆರಂಭಿಸಬಹುದು. ಪತ್ನಿಯು ನಿಮ್ಮ ಉದ್ಯೋಗಕ್ಕೆ ಸಹಕಾರ ಕೊಡುವಳು. ಆಲಂಕಾರಿಕ ವಸ್ತುವಿನ‌ಮೇಲೆ ಹೆಚ್ಚು ಆಸಕ್ತಿ ಇರುವುದು. ಬೆಂಕಿಯಿಂದ ಸ್ವಲ್ಪ ದೂರವಿರಿ ಅಥವಾ ಜಾಗರೂಕರಾಗಿರಿ. ನಿಮ್ಮವರ ಬಗ್ಗೆ ನಿಮಗೆ ತಿಳಿವಳಿಕೆ ಬಹಳ ಕಡಿಮೆ ಇದ್ದು ಏನನ್ನೂ ಹೇಳಬೇಡಿ. ವಿದ್ಯುದುಪಕರಣದಿಂದ ಹಣವು ವ್ಯಯವಾಗಲಿದೆ. ದುಃಸ್ವಪ್ನವು ನಿಮಗೆ ಚಿಂತನೆಯನ್ನು ಕೊಡುವುದು‌ ಸಂಬಂಧಗಳ ಬೆಲೆಯನ್ನು ಅರಿಯಲಿದ್ದೀರಿ. ಕುತೂಹಲಕ್ಕೆ ಏನನ್ನಾದರೂ ಮಾಡಲು ಹೋಗಿ ತೊಂದರೆಗೆ ಸಿಕ್ಕಿಕೊಳ್ಳುವಿರಿ.

ವೃಶ್ಚಿಕ: ಇತ್ತಸಂಬಂಧವಾದ ತುರಿಕೆ ಬರಬಹುದು. ಮಕ್ಕಳಿಂದ ನಿಮಗೆ ಶುಭವಾರ್ತಯು ಇರಬಹುದು. ಮುಸುಕಿನ ಗುದ್ದಾಟ ನಿಮ್ಮ ಮತ್ತು ಪತಿಯ ನಡುವೆ ನಡೆಯತ್ತದೆ. ಹಿತಶತ್ರುಗಳು ಅರಿತುಕೊಳ್ಳಿ‌ ನಿಮಗೆ ಹೆಚ್ಚು ಸಮಯಬೇಕಾಗದು. ಇಂದಿನ‌ ಪ್ರಯಾಣವು ನಿಮಗೆ ಆಯಾಸವನ್ನು ಕೊಡುತ್ತದೆ. ನಿಮಗೆ ಕೆಲವರು ಆಮಿಷವನ್ನು ತೋರಿಸುವರು. ಅದಕ್ಕೆ ಬಲಿಯಾಗಿ ಸಂಪತ್ತನ್ನು ಕಳೆದುಕೊಳ್ಳಬೇಡಿ. ದೇವರ ಉತ್ಸವಗಳಲ್ಲಿ ಭಾಗಿಯಾಗುವಿರಿ. ನಿಮ್ಮ ಮಾತು ಸ್ಪಷ್ಟವಾಗಿದ್ದರೂ ಅಪಾರ್ಥಕ್ಕೆ ಕಾರಣವಾಗಲಿದೆ. ಕೃಷಿಯನ್ನು ನೀವು ಇಷ್ಟಪಡುವುದಿಲ್ಲ.

-ಲೋಹಿತಶರ್ಮಾ ಇಡುವಾಣಿ

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್