AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 14) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರImage Credit source: hindirush.com
ಗಂಗಾಧರ​ ಬ. ಸಾಬೋಜಿ
|

Updated on: May 14, 2023 | 6:10 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಕೃತ್ತಿಕಾ, ಮಾಸ : ವೈಶಾಖ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ದಶಮೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಐಂದ್ರ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಸಂಜೆ 05:16 ರಿಂದ 06:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:29 ರಿಂದ 02:04ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:16ರ ವರೆಗೆ,

ಸಿಂಹ: ಸ್ವಂತ ಕಾರ್ಯ ನಿಮಿತ್ತ ದೂರ ಪ್ರಯಾಣ ಮಾಡುವಿರಿ.‌ ಅಂದುಕೊಂಡ ಕೆಲಸವು ಪೂರ್ಣವಾಗುವುದು. ಅಪರಿಚಿತ ಕೆಲಸದಲ್ಲಿ ಮುನ್ನುಗ್ಗಲು ಭಯಪಡುವಿರಿ. ನಿಮ್ಮ ವರ್ತನೆಯು ಅಹಂಕಾರದಂತೆ ತೋರೀತು. ನಕಾರಾತ್ಮಕ ಹೇಳಿಕೆಗಳಿಗೆ ಸ್ಪಂದಿಸುವ ಅವಶ್ಯಕತೆ ಇರುವುದಿಲ್ಲ. ಎಲ್ಲವನ್ನೂ ಕಳೆದುಕೊಳ್ಳುತ್ತೇನೆ‌ ಎಂಬ ಭೀತಿಯು ನಿಮ್ಮಲ್ಲಿ ಉಂಟಾಗಬಹುದು. ಮಾನಸಿಕ ನೋವನ್ನು ತಡೆದುಕೊಂಡು ಇಂದಿನ ದಿನವನ್ನು ಕಳೆಯುವಿರಿ. ಸಂಗಾತಿಯ ಮಾತುಗಳನ್ನು ಕೇಳುವ ತಾಳ್ಮೆ ಇರದು. ನಿಮಗೆ ಅಗೌರವ ತೋರಿಸಿಯಾರು. ಇಂತಹುದನ್ನು ನಿರ್ಲಕ್ಷಿಸುವುದು ಉತ್ತಮ.

ಕನ್ಯಾ: ಮನೆಯ ಕೆಲಸ ಕಾರ್ಯಗಳು ಪರ್ವತಾಕಾರದಲ್ಲಿ ತೋರುವುದು. ಆರಂಭದ ಗೊಂದಲೂ ಆದೀತು. ವಾಹನ ಖರೀದಿಗೆ ಪರ ಊರಿಗೆ ಹೋಗುವಿರಿ. ಹೊಸ ಉದ್ಯಮವನ್ನು ಆರಂಭಿಸುವ ಯೋಚನೆ ಇರಲಿದೆ. ನಿಮ್ಮ ಕುಟುಂಬದರ ಬೆಂಬಲ ನಿಮಗೆ ಕಡಿಮೆ ಇರಲಿದೆ. ಮನವೊಲಿಸುವ ಪ್ರಯತ್ನ ಮಾಡುವಿರಿ. ಸಾಲ ಮರುಪಾವತಿಯ ವಿಚಾರದಲ್ಲಿ ಆತಂಕವಿರಲಿದೆ. ಇಂದಿನ ನಿಮ್ಮ ಸ್ಥಿತಿಯನ್ನು ನೋಡಿ ಆಡಿಕೊಳ್ಳುವರು. ಆಪ್ತರ ಭೇಟಿಯು ನಿಮ್ಮ ಉತ್ಸಾಹವನ್ನು ಹೆಚ್ಚಿಸುವುದು. ಇಂದು ಹೆಚ್ಚು ನಗಲಿದ್ದೀರಿ. ಯಾವುದೇ ಗೌಪ್ಯವನ್ನು ನೀವು ಬಿಟ್ಟುಕೊಡಲಾರಿರಿ.

ತುಲಾ: ಕಷ್ಟವೇ ನಿಮಗೆ ಎತ್ತರಕ್ಕೇರುವ ಸಾಧನವಾಗಲಿದೆ. ಧೈರ್ಯಗೆಡುವ ಅಗತ್ಯವಿಲ್ಲ. ಸಾಮಾಜಿಕ ಜೀವನ ನಿಮಗೆ ಸಾಕೆನಿಸುವುದು. ಪ್ರೇಮವ್ಯವಹಾರದಲ್ಲಿ ಸಿಕ್ಕಿಕೊಂಡು ಒದ್ದಾಡುವಿರಿ. ನಿಮ್ಮ ತೀರ್ಮಾನಗಳು ಸಮಂಜಸವಾಗಿದ್ದರೂ ಅದನ್ನು ಒಪ್ಪುವ ಸ್ಥಿತಿ ಇರುವುದಿಲ್ಲ. ಮಕ್ಕಳ ವಿಚಾರದಲ್ಲಿ ನಿಮಗೆ ತಲೆನೋವಾದೀತು. ಬಂಧುಗಳ ಸಹಾಯವನ್ನು ಪಡೆದು ನೆಮ್ಮದಿಯಿಂದ ಇರಿ. ಸುಳ್ಳಾಡಿ ಸಿಕ್ಕಿಕೊಳ್ಳುವಿರಿ. ನಿಮ್ಮ‌ ಮೇಲಿನ ವಿಶ್ವಾಸವು ಕಡಿಮೆ ಆದೀತು. ಏಕಾಂತವನ್ನು ನೀವು ಇಂದು ಹೆಚ್ಚು ಬಯಸುವಿರಿ.

ವೃಶ್ಚಿಕ: ನೀವು ಇಂದು ಪ್ರಾಮಾಣಿಕತೆಯ ಫಲವನ್ನು ಕಾಣಲಿದ್ದೀರಿ. ಸಂಗಾತಿಯಿಂದ ಶುಭಸಮಾಚಾರವು ಬರಲಿದೆ. ಪ್ರಯಾಣವೂ ನಿಮಗೆ ಹಿತವಾದ ಅನುಭವವನ್ನು ಕೊಡುವುದು. ನಿಮ್ಮ ಅಭಿಪ್ರಾಯಗಳನ್ನು ಜನರು ಬೆಂಬಲಿಸುವರು. ಆರ್ಥಿಕ ನಷ್ಟವನ್ನು ಸರಿದೂಗಿಸಿಕೊಳ್ಳಲು ಹೆಚ್ಚಿನ ಆದಾಯದ ಕೆಲಸವನ್ನು ಅನ್ವೇಷಣೆ ಮಾಡುವಿರಿ. ಇದಕ್ಕೆ ಸಂಬಂಧಿಸಿದಂತೆ ನಿಮ್ಮವರ ಸಲಹೆಯನ್ನು ಪಡೆಯಿರಿ. ಮನೋರಂಜನೆಯನ್ನು ಇಷ್ಟಪಡುವಿರಿ. ಹಿತಶತ್ರುಗಳಿಂದ ಆದಷ್ಟು ದೂರವಿರುವುದು ಒಳ್ಳೆಯದು. ಮಾನಸಿಕ ಸ್ವಾಸ್ಥ್ಯವು ಸ್ವಲ್ಪ ಕೆಡಬಹುದು. ನಿರೀಕ್ಷೆಗಳು ಹುಸಿಯಾಗಿ ಹತಾಶ ಭಾವವು ಬರಬಹುದು.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ