AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರು ಅನಗತ್ಯ ಕೆಲಸಗಳಿಗೆ ಕೈ ಹಾಕಿ ಹಣವನ್ನು ಕಳೆದುಕೊಳ್ಳಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರು ಅನಗತ್ಯ ಕೆಲಸಗಳಿಗೆ ಕೈ ಹಾಕಿ ಹಣವನ್ನು ಕಳೆದುಕೊಳ್ಳಬಹುದು
ರಾಶಿಭವಿಷ್ಯ
ಕಿರಣ್ ಹನುಮಂತ್​ ಮಾದಾರ್
|

Updated on: May 20, 2023 | 6:00 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 20  ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಶೋಭನ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:17 ರಿಂದ 10:53ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:05 ರಿಂದ 05:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:05 ರಿಂದ 07:41ರ ವರೆಗೆ.

ಸಿಂಹ: ಅಸೂಯೆಯಿಂದ‌ ನಿಮ್ಮ ಕೆಲಸವು ಹಿಂದುಳಿಯುವುದು. ಅನಗತ್ಯ ಕೆಲಸಗಳಿಗೆ ಕೈ ಹಾಕಿ ಹಣವನ್ನು ಕಳೆದುಕೊಳ್ಳಬಹುದು. ಸಂಗಾತಿಯ ಮಾತನ್ನು ಅನಾದರ ಮಾಡುವುದು ಬೇಡ. ದುರಭ್ಯಾಸಕ್ಕೆ ಶರಣಾಗಿ ಹಣವನ್ನು ಕಳೆದುಕೊಳ್ಳಬಹುದು. ಸರ್ಕಾರದ ಕೆಲಸವು ವಿಳಂಬವಾಗಿ ನಿಮಗೆ ಬೇಸರವನ್ನು ಕೊಟ್ಟೀತು. ಕಲಹದ ಸ್ಥಳಕ್ಕೆ ನಿಮ್ಮ ಮಾತನ್ನೂ ಹೇಳುವಿರಿ. ನಿಮ್ಮ ಉದ್ಯಮಕ್ಕೆ ಸ್ಪರ್ಧೆ ಉಂಟಾಗಬಹುದು. ದ್ವೇಷ ಸಾಧಿಸಲು ಹೋಗಿ ಸಮಯವನ್ನೂ ಹಣವನ್ನೂ ಜನರನ್ನೂ ಕಳೆದುಕೊಳ್ಳಬೇಕಾಗಬಹುದು. ಅತಿಯಾದ ನಂಬಿಕೆಯು ಮುಳುವಾದೀತು ನಿಮಗೆ.

ಕನ್ಯಾ: ನಿಮ್ಮ‌ ಆಸಕ್ತಿಯನ್ನು ನೀವು ಬದಲಾಯಿಸಿಕೊಳ್ಳುವುದು ಬೇಡ. ರಮಣೀಯ ಪ್ರದೇಶಗಳು ನಿಮಗೆ ರೋಮಾಂಚನವನ್ನು ಉಂಟುಮಾಡಿಯಾವು. ನೀವು ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನವಿಡುವುದು ಒಳ್ಳೆಯದು.‌ ನಿಮ್ಮ ದಾರಿ ತಪ್ಪಿಸಲು ಕೆಲವು ಮಾತುಗಳು ಬರಬಹುದು. ವಿದ್ಯುತ್ ಉಪಕರಣಗಳಿಗೆ ಹಣವನ್ನು ಖರ್ಚು ಮಾಡುವಿರಿ. ಮಕ್ಕಳು ನಿಮಗೆ ಸಂತೋಷವನ್ನು ಕೊಟ್ಟಾರು. ತೀವ್ರತರವಾದ ಒತ್ತಡಗಳು ನಿಮಗೆ ಕಿರಿಕಿರಿ ಮಾಡೀತು. ನಿಮ್ಮ ಒಳ್ಳೆಯ ಸ್ವಭಾವವನ್ನು ದುರುಪಯೋಗ ಮಾಡಿಕೊಂಡಾರು. ಅಪಮಾನವಾಗುವ ಸ್ಥಳದಲ್ಲಿ ಇರಬೇಡಿ.

ತುಲಾ: ಅಸಾಮಾನ್ಯ ಕೆಲಸವನ್ನು ಮಾಡುವ ಗುರಿ ನಿಮ್ಮದಾಗಲಿದೆ. ಅಪರಿಚಿತ ವ್ಯಕ್ತಿಗಳೂ ನಿಮಗೆ ಸಹಾಯ ಮಾಡಬಹುದು. ಇಂದು ಹೂಡಕೆ‌ ಮಾಡಿ ಬಹುದಿನದ ಬಯಕೆಯನ್ನು ತೀರಿಸಿಕೊಳ್ಳುವಿರಿ. ಬೇರೆಯವರ ಬಗ್ಗೆ ಅಭಿಪ್ರಾಯಗಳನ್ನು ಹೇಳುವ ಚಟ ಒಳ್ಳೆಯದಲ್ಲ. ತಾಳ್ಮೆಯಿಂದ ಆಗುವ ಕೆಲಸವನ್ನು ತಣ್ಣಗೇ ಮಾಡಿ ಮುಗಿಸಿ. ನಿಮ್ಮವರಿಗೆ ನಿಮ್ಮ ಬಗ್ಗೆ ತಿಳಿದುಕೊಳ್ಳುವ ತುಡಿತ ಅತಿಯಾದೀತು‌. ಮುಂಬರುವ ದಿನಗಳನ್ನು ಇಂದೇ ಚಿಂತಿಸುವಿರಿ. ಕಳೆದ ದಿನಗಳನ್ನು ಪತ್ನಿಯ ಜೊತೆ ಮೆಲುಕು ಹಾಕುವಿರಿ. ಸ್ನೇಹಿತರ ಮನೆಯಲ್ಲಿ ಉತ್ತಮ‌ ಭೋಜನ ಮಾಡುವಿರಿ.

ವೃಶ್ಚಿಕ: ನಿಮಗೆ ಹಣವನ್ನು ಉಳಿಸುಕೊಳ್ಳಬೇಕು ಎಂಬ ಇಚ್ಛೆ ಇದ್ದರೂ ಬಂದ ಹಣವು ನಿಲ್ಲದೆ ಖಾಲಿಯಾಬಹುದು. ಕಛೇರಿಯಲ್ಲಿ ನಿಮ್ಮನ್ನು ಸೂಕ್ತ ವ್ಯಕ್ತಿ ಎಂದು ಆಯ್ಕೆ ಮಾಡಿದ್ದರೂ ನಿಮಗೆ ಹಿಂಜರಿಕೆ ಉಂಟಾಗಲಿದೆ. ವೃತ್ತಿಯ ಸಾಧನೆಯನ್ನು ಮನೆಯಲ್ಲಿ ಹೇಳಿಕೊಳ್ಳುವಿರಿ. ಇಂದು ನಿಮ್ಮ ತಾಯಿ ನಿಮಗೆ ಮಾನಸಿಕ ಬಲವನ್ನು ತುಂಬುವಳು. ಶತ್ರುಗಳ ಬಗ್ಗೆ ಮಾತನಾಡಿ ಸುಮ್ಮನೇ ಕಾಲಹರಣ ಮಾಡಬೇಡಿ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಹೊಸತನ್ನು ಹುಡುಕುವ ಬಯಕೆ ಬಹಳ ಇರಲಿದೆ‌. ಮನೆಯೇ ನಿಮಗೆ ಸಮಾಧಾನದ ಸ್ಥಳವಾಗಬಹುದು.

-ಲೋಹಿತಶರ್ಮಾ ಇಡುವಾಣಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್