AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರು ವಿದೇಶದಲ್ಲಿರುವ ತಮ್ಮ ಮಕ್ಕಳಿಂದ ಬೇಸರದ ಸಂಗತಿಯನ್ನು ಕೇಳಲಿದ್ದಾರೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 24) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಈ ರಾಶಿಯವರು ವಿದೇಶದಲ್ಲಿರುವ ತಮ್ಮ ಮಕ್ಕಳಿಂದ ಬೇಸರದ ಸಂಗತಿಯನ್ನು ಕೇಳಲಿದ್ದಾರೆ
ಇಂದಿನ ರಾಶಿಭವಿಷ್ಯ
Rakesh Nayak Manchi
|

Updated on: Apr 24, 2023 | 6:00 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 24 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ: ಸೋಮ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಶೋಭನ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ರಿಂದ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ 07:49 ರಿಂದ 09:23ರ ವರೆಗೆ, ಯಮಘಂಡ ಕಾಲ  10:57 ರಿಂದ 12:31ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:05 ರಿಂದ 03:38ರ ವರೆಗೆ.

ಸಿಂಹ: ಇಂದು ರಾಜಕೀಯ ವ್ಯಕ್ತಿಗಳು ಹೆಚ್ಚು ಉತ್ಸಾಹದಿಂದ ತಮ್ಮ ಕಾರ್ಯದಲ್ಲಿ ತೊಡಗಿರುವರು. ವಿದೇಶದಲ್ಲಿರುವ ಮಕ್ಕಳಿಂದ ಬೇಸರದ ಸಂಗತಿಯನ್ನು ಕೇಳುವಿರಿ. ವಿದೇಶಕ್ಕೆ ಕೆಲಸಕ್ಕೆ ಹೋಗಿದ್ದರೆ ಇಂದು ಮನೆಗೆ ಬರಬಹುದು. ನಿಮ್ಮ ಕೆಲಸದ ವಿಧಾನವನ್ನು ನೀವು ಬದಲಿಸಿಕೊಳ್ಳದೇ ಇದ್ದರೆ ಇನ್ನಷ್ಟು ಸಂಕಷ್ಟವಾದೀತು. ವ್ಯವಹಾರದಲ್ಲಿ ನಿಮ್ಮ ಉನ್ನತಗುಣಮಟ್ಟ ಸೇವೆಯನ್ನು ಮಾಡುವಿರಿ. ಕುಟುಂಬದಲ್ಲಿ ಸಮೃದ್ಧಿ ಬೇಕಾದರೆ ಒಬ್ಬರೇ ತೀರ್ಮಾನಕ್ಕೆ ಬರಬೇಕು. ಎಲ್ಲರನ್ನೂ ಅನುಸರಿಸಿದರೆ ಕೆಲಸ ಕೆಡುವುದು. ಆಸ್ತಿಯ ಖರೀದಿಯ ವಿಚಾರಗಳನ್ನು ಆದಷ್ಟು ವೇಗವಾಗಿ ತೀರ್ಮಾನ ಮಾಡಿ ಮುಗಿಸಿಕೊಳ್ಳಿ.

ಕನ್ಯಾ: ಇಷ್ಟು ದಿನ ಹಿಡಿದಿಟ್ಟುಕೊಂಡ ಕೋಪವು ಸ್ಫೋಟವಾಗಿ ಮನೆಯು ರಣಾಂಗದಂತೆ ಕಾಣಬಹುದು. ನೀವು ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಚಿಂತಿಸಿ. ನಿಮ್ಮ ಪ್ರೀತಿಪಾತ್ರರು ನಿಮ್ಮಿಂದ ದೂರವಾಗುವರು. ಕಾರಣ ಕೇಳಿದರೂ ಪ್ರಯೋಜನವಾಗದು. ನಿಮ್ಮ ಪ್ರೀತಿಯ ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆಯಬೇಕಾದ ಸ್ಥಿತಿ ಬರಲಿದೆ‌. ಹೂಡಿಕೆಯನ್ನು ಮಾಡಲು ಸಮಯವನ್ನು ನಿರೀಕ್ಷಿಅಉವಿರಿ. ನಿಮ್ಮ ಖ್ಯಾತಿ ಮತ್ತು ಸ್ಥಾನಮಾನಗಳು ಹೆಚ್ಚಾಗಬಹುದು. ನೀವು ಬದಲಾಗಬೇಕು ಎಂದುಕೊಂಡರೂ ಸ್ನೇಹಿತರ ಬಳಗ ನಿಮ್ಮನ್ನು ಸುಮ್ಮನೆ ಬಿಡದು.‌ ತಂದೆ-ತಾಯಿಗಳು ಮಕ್ಕಳ‌ ಮೇಲೆ ಕಣ್ಣಿಡುವುದು ಒಳ್ಳೆಯದು.

ತುಲಾ: ವಿದೇಶದಿಂದ ಹಣದ ವ್ಯವಹಾರವನ್ನು ಇಟ್ಟುಕೊಂಡರೆ ಕಷ್ಟವಾದೀತು. ನಿಮ್ಮ ಸ್ನೇಹಿತರ ನಡುವೆ ಬಾಂಧವದಲ್ಯವು ಬಲವಾಗಲಿದೆ. ಪರೀಕ್ಷೆಯನ್ನು ಎದುರಿಸಲು ಸಕಲರೀತಿಯಲ್ಲಿಯೂ ಸಜ್ಜಾಗಲಿದ್ದೀರಿ. ನೀವು ಮಾಡುವ ಕಾರ್ಯದಲ್ಲಿ ಪ್ರಯತ್ನವು ಪೂರ್ಣವಿರಲಿ. ಫಲದ ಅಪೇಕ್ಷೆಯನ್ನು ಬಿಡುವುದು ಉತ್ತಮ. ಮಹಿಳಾ ಸ್ನೇಹಿತರು ನಿಮಗೆ ಕೆಲಸವನ್ನು ಮಾಡಿಕೊಡುವರು. ಸರ್ಕಾರಿ ನೌಕರರು ಕೆಲಸಕ್ಕೆ ಸಂಬಂಧಿಸಿದ ಒತ್ತಡದಿಂದ ಬಿಡುಗಡೆಯಾಗುವರು. ವ್ಯಾಪಾರದಲ್ಲಿ ಉತ್ತಮ ಪ್ರಗತಿ ಇರಲಿದೆ. ಕುಟುಂಬದಿಂದ‌ ನಿಮಗೆ ಬೇಕಾದ ಸಹಕಾರ ಸಿಗಲಿದೆ. ಮಕ್ಕಳು ನಿಮ್ಮನ್ನು ಪ್ರೀತಿಸುವರು.

ವೃಶ್ಚಿಕ: ನೀವು ದೊಡ್ಡ ವ್ಯಕ್ತಿಗಳ ಸಹವಾಸವನ್ನು ಮಾಡಿ ಬ್ಯುಸಿನೆಸ್ ಮಾಡಲು ಅವರ ಜೊತೆ ಚರ್ಚಿಸುವಿರಿ. ನಿಮ್ಮ ನಡೆ ಅನುಮಾನವನ್ನು ತರಿಸಬಹುದು. ಕಛೇರಿಯ ವ್ಯವಹಾರವು ಸಾಕೆನಿಸುವಷ್ಟು ಒತ್ತಡ ಬರಬಹುದು. ಮಂಗಲ ಕಾರ್ಯಕ್ಕೆ ಮನೆಯಲ್ಲಿ ಸಿದ್ಧತೆ ನಡೆಯಲಿದೆ. ಇಷ್ಟು ದಿನ ಸಂಗಾತಿಯ ಬಗ್ಗೆ ಇದ್ದ ಭಾವವು ಸಂಪೂರ್ಣ ಬದಲಾಗಬಹುದು. ಸಾಲ ಮಾಡುವ ಸಂದರ್ಭವು ಬಂದರೆ ನಿಮಗೆ ಬೇಕಾದಷ್ಟು ಮಾತ್ರ ಪಡೆಸುಕೊಂಡು ತೀರಿಸಲು ಯತ್ನಿಸಿ. ಸಿಗುವಷ್ಟನ್ನೂ ಆಸೆಯಿಂದ ತೆಗೆದುಕೊಳ್ಳಬೇಡಿ. ಭವಿಷ್ಯತ್ತಿನಲ್ಲಿ ತೊಂದರೆಯಾದೀತು. ಆಹಾರದ ಬಗ್ಗೆ ಎಚ್ಚರಿಕೆ ಇರಲಿ.

-ಲೋಹಿತಶರ್ಮಾ ಇಡುವಾಣಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ