AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಮಂಗಳವಾರದ ರಾಶಿ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಮಂಗಳವಾರದ ರಾಶಿ ಭವಿಷ್ಯ
ನಿತ್ಯಭವಿಷ್ಯ
ವಿವೇಕ ಬಿರಾದಾರ
|

Updated on: Mar 28, 2023 | 6:00 AM

Share

ಮಂಗಳವಾರ ದೇವಿ ವಾರವಾಗಿದೆ. ಇಂದು ದೇವಿಯ ಆರಾಧನೆಗೆ ಬಹಳ ಶ್ರೇಷ್ಠವಾದ ದಿನ. ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಮಾರ್ಚ್ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ಸಿಂಹ: ಅಪರಿಚಿತ ಕರೆಗಳು ನಿಮ್ಮನ್ನು ಕೆಲಸಕ್ಕೆಂದು ಕರೆಯಲಿವೆ. ಸಂಪೂರ್ಣ ಮಾಹಿತಿಯ ಜೊತೆ ಕೆಲಸಕ್ಕೆ ಮುಂದುವರಿಯಿರಿ. ವ್ಯಕ್ತಿಗಳ ನಿಂದನೆಯನ್ನು ಮಾಡುವ ಕೆಲಸಕ್ಕೆ ವಿರಾಮವನ್ನು ಹೇಳಿ. ಇಲ್ಲವಾದರೆ ನಿಮಗೇ ಕಂಟಕವಾದೀತು. ನಿರಂತರವಾದ ಶ್ರಮದಿಂದ ಬಳಲಲಿದ್ದೀರಿ. ಪಿತ್ರಾರ್ಜಿತ ಆಸ್ತಿಯ ಅನುಭವಿಸುವ ಬಯಕೆಯನ್ನು ಇಟ್ಟಿಕೊಂಡಿದ್ದೀರಿ. ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ಕಲೆಯನ್ನು ಕರಗತ ಮಾಡಿಕೊಳ್ಳಿ. ನಿಮ್ಮ ಬಂಧುಗಳಿಗೆ ನಿಮ್ಮ ಬಗ್ಗೆ ಕೆಲವು ವಿಚಾರಗಳು ತಿಳಿಯಲಿವೆ. ಅವಕಾಶಗಳು ನಿಮಗೆ ಸಿಗದೇ ಕೊರಗುವ ಸಾಧ್ಯತೆ ಇದೆ.

ಕನ್ಯಾ: ಗೃಹನಿರ್ಮಾಣಕ್ಕೆ ಮನೆಯವರ ಜೊತೆ ಚರ್ಚೆಗಳನ್ನು ಮಾಡಲಿದ್ದೀರಿ‌. ನಿಮ್ಮನ್ನು ಇಷ್ಟಪಡುವವರ ಜೊತೆ ನೀವು ಕೆಲವು ಸಮಯವಿರಬೇಕಾಗುತ್ತದೆ. ರಾಜಕೀಯ ವ್ಯಕ್ತಿಗಳಿಂದ ಪ್ರೇರಿತರಾಗಿ ಕಾರ್ಯವನ್ನು ಮಾಡುವಿರಿ. ನಿಮಗೆ ಇಂದು ಆದರ್ಶವ್ಯಕ್ತಿತ್ವವು ಸಿಗಲಿದ್ದು ಅವರನ್ನು ಅನುಸರಿಸುವ ಸಾಧ್ಯತೆ ಇದೆ. ಸರಳ ಸಮಾರಂಭದಲ್ಲಿ ಭಾಗಿಯಾಗಬಹುದು. ಆಹಾರದ ವ್ಯತ್ಯಾಸದಿಂದ ರೋಗಗಳು ಬರಬಹುದು. ಸಮಯವನ್ನು ಕಳೆಯಲು ಬಹಳ ಪ್ರಯಾಸಪಡಲಿದ್ದೀರಿ. ಧಾರ್ಮಿಕವಾದ ಕೆಲಸಗಳನ್ನು ಮಾಡುವ ಹಂಬಲವಿರಲಿದೆ. ಶ್ರೀರಾಮನ ಮಂದಿರಕ್ಕೆ ಹೋಗುವ ಅವಕಾಶವು ತಾನಾಗಿಯೇ ಸಿಗಲಿದೆ. ಹೋಗಿಬನ್ನಿ.

ತುಲಾ: ಸ್ನೇಹಿತರ ಜೊತೆಗಿನ ಅತಿಯಾದ ಸಲುಗೆ ದ್ವೇಷಕ್ಕೆ ಕಾರಣವಾಗಬಹುದಿ. ನಿಮ್ಮ ದಾಂಪತ್ಯದ‌ ಪ್ರಕರಣವು ನ್ಯಾಯಾಲಯದ ಮೆಟ್ಟಿಲೇರಿದ್ದು ಅದಕ್ಕಾಗಿ ನಿಮ್ಮ ಹಣವನ್ನು ಖರ್ಚು ಮಾಡಬೇಕಾಗಿ ಬರಬಹುದು. ಭೂಮಿಯ ವ್ಯವಹಾರದಲ್ಲಿ ನೀವು ಹಣವನ್ನು ಸಂಪಾದಿಸಲಿದ್ದೀರಿ. ನೀವಿಂದು ಒಬ್ಬೊಂಟಿಯಾಗಿ ರಮಣೀಯ ಸ್ಥಳಕ್ಕೆ ಹೋಗಲಿದ್ದೀರಿ. ನೆಮ್ಮದಿಯು ನಿಮಗೆ ಆಗಲಿದೆ. ನಿಮ್ಮ ವ್ಯಾಪಾರವನ್ನು ಬಹಳ ಜಾಣ್ಮೆಯಿಂದ ಮಾಡಬೇಕಿದೆ. ಮೋಸ ಹೋಗುವ ಸಾಧ್ಯತೆಯು ಇರಲಿದೆ. ಕೈಯ್ಯಲ್ಲಿರುವ ಹಣವನ್ನು ಪೂರ್ತಿಯಾಗಿ ಖಾಲಿ ಮಾಡಿಕೊಳ್ಳುವಿರಿ. ಗಣಪತಿಗೆ ಪ್ರಿಯವಾದ ಮೋದಕವನ್ನು ನೈವೇದ್ಯ ಮಾಡಿ.

ವೃಶ್ಚಿಕ: ಯಾವುದಾರೂ ಪ್ರಾಣಿಯಿಂದಲೋ ಕೀಟದಿಂದಲೋ ಕಚ್ಚಿಕೊಳ್ಳಲಿದ್ದೀರಿ. ಅದು ಊತವಾಗಿ ಅಂಗವನ್ನು ವಿಕಾರಗೊಳಿಸಲಿದೆ. ಇನ್ನೊಬ್ಬರಿಂದ ಅಪಘಾತವಾಗಬಹುದು. ಭಯದ ವಾತಾವರಣದಲ್ಲಿ ಇಂದು ಇರಲಿದ್ದೀರಿ. ವೈದ್ಯಕೀಯ ಕ್ಷೇತ್ರಕ್ಕೆ ಹೋಗಲು ಬಯಸುವವರು ತಮ್ಮ ನಿರ್ಧಾರವನ್ನು ಗಟ್ಟಿ ಮಾಡಳ್ಳಬೇಕಿದೆ. ಅಪರಿಚಿತರ ವಾಹನವನ್ನು ಹತ್ತಬೇಡಿ. ವಿನಾಕಾರಣ ಸಂತೋಷವಾಗಿ ಇರುವಿರಿ. ಕಛೇರಿಯ ಕೆಲಸವು ನಿಧಾನವಾಗಿ ಮೇಲಧಿಕಾರಿಗಳಿಂದ ಬೈಯಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಕೆಲಸದಲ್ಲಿ ನಿರಾಸಕ್ತಿಯೂ ಆಗಲಿದೆ.

-ಲೋಹಿತಶರ್ಮಾ ಇಡುವಾಣಿ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು