AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 30) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ ಭವಿಷ್ಯ
ಇಂದಿನ ರಾಶಿ ಭವಿಷ್ಯ
Rakesh Nayak Manchi
|

Updated on: Apr 30, 2023 | 6:00 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 30 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ದಶಮೀ, ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಸುಕರ್ಮ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಸಂಜೆ 05:13 ರಿಂದ 06:48ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:30 ರಿಂದ 02:04 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:39 ರಿಂದ 05:13ರ ವರೆಗೆ.

ಸಿಂಹ: ನಿಮ್ಮ ಉದ್ದೇಶಗಳನ್ನು ಬಿಟ್ಟುಕೊಡಬೇಡಿ. ಅದಕ್ಕೆ ಅಡ್ಡಗಾಲು ಹಾಕಿಯಾರು. ನೀವು ಏನನ್ನಾದರೂ ಪಡೆಯಲು ಪ್ರಯತ್ನಿಸಲೇ ಬೇಕು. ನಿಂತ ನೀರಾದರೆ ಕ್ರಿಮಿಗಳು ಏಳಬಹುದು. ನಿಮ್ಮ ಮೇಲಧಿಕಾರಿಗಳು ನಿಮಗೆ ಏನನ್ನೋ ಹೇಳಲಿದ್ದಾರೆ ಎಂದು ಅನ್ನಿಸಬಹುದು. ಮಕ್ಕಳ ಜೊತೆ ಕಾಲವನ್ನು ಕಳೆದು ಸಂತೋಷಪಡುವಿರಿ. ಅನಾರೋಗ್ಯವು ನಿಮ್ಮ ಅಲಕ್ಷ್ಯದಿಂದ ಹೆಚ್ಚಾಗಲಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಶಿಸ್ತಿನ ಹಾಗೂ ವೇಗದ ಕೆಲಸವನ್ನು ಕಂಡು ಪ್ರಶಂಸಿಸುವರು. ಅಗ್ಗದ ಬೆಲೆಗೆ ವಸ್ತುವನ್ನು ಕೊಂಡು ಹಾಳು ಮಾಡಿಕೊಳ್ಳುವಿರಿ.

ಕನ್ಯಾ: ಹೊಸ ಕೆಲಸದಲ್ಲಿ ಗೊಂದಲಗಳು ಇರಬಹುದು. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಕಾರ್ಯಗಳನ್ನು ಹಿಂಜರಿಕೆ ಇಲ್ಲದೇ ಮಾಡುವಿರಿ. ಪ್ರದರ್ಶನ. ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಪಡೆಯಿರಿ. ದೂರದ ಮಿತ್ರರು ನಿಮಗೆ ಅಗತ್ಯವಿರುವ ಸಹಕಾರವನ್ನು ನೀಡುವರು. ಶ್ರಮದ ಕೆಲಸವು ಆಯಾಸವನ್ನು ತರಲಿದೆ‌. ಅತಿಯಾದ ಆಲಸ್ಯದಿಂದ ನಿದ್ರಿಸುವ ಮನಸ್ಸಿನಲ್ಲಿ ಇರುವಿರಿ. ನಿಮಗೆ ಇಷ್ಟವಿಲ್ಲದ ಕೆಲಸವನ್ನು ಮಾಡಏಕಾಗಿ ಬರಬಹುದು. ತಪ್ಪಿಸಿಕೊಳ್ಳಲೂ ಕಷ್ಟವಾದೀತು. ಯಾರೂ ಸಹಾಯಕ್ಕೆ ಬರಲಾರರು ಎಂಬ ಅನಾಥ ಪ್ರಜ್ಞೆ ಕಾಡಬಹುದು. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ಸಮಾಧನಾದಿಂದ ಎದುರಿಸಬೇಕಾಗಬಹುದು. ಹೆಚ್ಚಿನ ಆದಾಯವು ಅನಿವಾರ್ಯವಾಗಿದ್ದು, ಆದಾಯದ ಮೂಲವನ್ನು ಹುಡುಕುವಿರಿ.

ತುಲಾ: ಸಣ್ಣ ಪುಟ್ಟ ಅಪಘಾತಗಳು ಆಗಬಹುದು. ಯಾವುದಕ್ಕೂ ಪ್ರಯಾಣದಲ್ಲಿ ಜಾಗರೂಕರಾಗಿ. ನಡೆದಾಡುವಾಗಲೂ ಸುತ್ತ ನೋಡಿಕೊಂಡು ಹೆಜ್ಜೆ ಇಡಿ. ನಿರಪರಾಧಿಯಾಗಲು ಸಮಯವನ್ನೂ ತೆಗದೆಕೊಳ್ಳಬೇಕಾದೀತು. ನಿಮ್ಮ ಮೇಲಧಿಕಾರಿಗಳನ್ನು ಚೆನ್ನಾಗಿ ಇರಿಸಿಕೊಳ್ಳಿ.‌ ಅವರ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮಾಡಿಕೊಡಿ. ಉನ್ನತ ಹುದ್ದೆಗೆ ಹೋಗುವ ಅವಕಾಶವಿರಬಹುದು. ತಾಳ್ಮೆಯಿಂದ ಕಾರ್ಯದಲ್ಲಿ ತೊಡಗಿದರೆ ಕೆಲಸವು ಮುಕ್ತಾಯವಾದಂತೆ. ಇಂದು ನಿಮಗೆ ಜನರಿಂದ ಪ್ರಶಂಸೆ ಸಿಗಬಹುದು. ವಸ್ತ್ರಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿಯನ್ನು ತೋರಿಸುವರು. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಿ.

ವೃಶ್ಚಿಕ: ಇಂದು ಏಕಾಗ್ರತೆಯ ಕೊರತೆ ಕಾಳಿಸಲಿದೆ. ವಿವಾಹಕ್ಕೆ ಸಂಬಂಧಿಸಿದಂತೆ ಬೇಸರವಾಗಿ ಮನೆಯಲ್ಲಿ ಕಲಹವು ಆಗಬಹುದು. ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಬಹುದು. ನಿಮಗೆ ಸಂಬಂಧಿಸಿದ ವಿಚಾರಗಳಿಗೆ ಮಾತ್ರ ನಿಮ್ಮ ವ್ಯವಹಾರಗಳಿರಲಿ. ಇಲ್ಲವಾದರೆ ಅಪಮಾನಕ್ಕೆ ಒಳಗಾಗಬೇಕಾದೀತು. ಬೇಸರದ ಮನಸ್ಸನ್ನು ಮನೆಯವರಿಗೆ ತೋರಿಸಬೇಡಿ. ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಯೋಗ್ಯವಾದ ಮಾತುಗಳಿಂದ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ಮನೆಯನ್ನು ಇಂದು ಬದಲಾಯಿಸುವಿರಿ. ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಮಿತ್ರರಿಂದ ಆಪತ್ಕಾಲದಲ್ಲಿ ಸಹಕಾರ ಸಿಗಲಿದೆ.

-ಲೋಹಿತಶರ್ಮಾ ಇಡುವಾಣಿ

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ