AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

2023 ಮಾರ್ಚ್ 11 ಶನಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Nitya Bhavishya: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: lokmat.com
ಗಂಗಾಧರ​ ಬ. ಸಾಬೋಜಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 11, 2023 | 6:47 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 11 ಶನಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ಧನು: ವಿದ್ಯಾರ್ಥಿಗಳ ಒಟ್ಟಾರೆ ಕಾರ್ಯಕ್ಷಮತೆ ಗಮನಾರ್ಹವಾಗಿ ಸುಧಾರಿಸಿರಬಹುದು. ನಿಮ್ಮ ಅಂದಿನ ಸ್ಥಿತಿಯನ್ನು ನೆನೆಸಿಕೊಂಡು ಹೆಮ್ಮೆಪಡಲಿದ್ದೀರಿ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ಹವಣಿಸುವಿರಿ. ನೀವು ಆಪ್ತರಿಗೋಸ್ಕರ ಸಮಯವನ್ನು ಇಡಲಿದ್ದೀರಿ. ಹಳೆಯ ಪ್ರೇಮಪ್ರಕರಣವು ಇಂದು ಬೆಳಕಿಗೆ ಬರಬಹುದು. ನಿಮಗೆ ಬೆಲೆ ಕೊಡದೇ ಇರುವದನ್ನು ಕಂಡು ಬೇಸರಿಸುವಿರಿ. ಅಗಾಧವಾದ ನಿರೀಕ್ಷೆಗಳನ್ನು ಎದುರಿಸುತ್ತಿದ್ದರೂ, ಪರಿಸರವು ಸಾಮಾನ್ಯವಾಗಿ ಅನುಕೂಲಕರವಾಗಿರುತ್ತದೆ ಖುಷಿಪಡುವ ಸಂಗತಿಗಳಿದ್ದರೂ ದುಃಖಿಗಳಾಗುವ ಸಾದ್ಯತೆ ಇದೆ. ಶತ್ರುಗಳು ನಿಮ್ಮನ್ನು ಮಿತ್ರರನ್ನಾಗಿ ಮಾಡಿಕೊಳ್ಳಲು ಬರಬಹುದು. ಬ್ಯಾಂಕ್ ಉದ್ಯೋಗಿಗಳಿಗೆ ಉನ್ನತಸ್ಥಾನವನ್ನು ನೀಡುವ ಪ್ರಸ್ತಾಪ ಬರಬಹುದು.

ಮಕರ: ಗೆಳೆತನವು ಪ್ರೀತಿಯಾಗಿ ಬದಲಾಗಿ ವಿವಾಹಕ್ಕೆ ತಯಾರಾಗಿದೆ. ಕ್ಷಣಕಾಲದಲ್ಲಿ ಆದ ಅನಾಹುತಕ್ಕೆ ಬಹಳ ಕಷ್ಟವನ್ನು ಅನುಭವಿಸುವಿರಿ. ತಂದೆ ಮತ್ತು ಮಕ್ಕಳಲ್ಲಿ ಸ್ವಲ್ಪಮಟ್ಟಿಗೆ ಕಲಹವಿರುವುದು. ಇಂದಿನ ನಿಮ್ಮ ಕೆಲಸಗಳು ಆಯಾಸವನ್ನು ತರಿಸುವುದು. ಕಲಾವಿದರು ಅವಕಾಶಗಳನ್ನು ಸೃಷ್ಟಿಕೊಳ್ಳಲಿದ್ದಾರೆ. ಗೃಹನಿರ್ಮಾಣದ ಪ್ರಸ್ತಾಪವು ಇರಲಿದೆ. ವಾಹನವನ್ನು ನಿಧಾನವಾಗಿ ಚಲಾಯಿಸಿ. ಬೇರೆಯವರ ತಪ್ಪಿನಿಂದ ನಿಮಗೆ ತೊಂದರೆಗಳು ಆಗಬಹುದು. ಆಪ್ತರ ಭೇಟಿಯು ನಿಮಗೆ ಸಂತೋಷವನ್ನು ಕೊಡಲಿದೆ. ಹಿಂದಿನ ಹೂಡಿಕೆಗಳು ಬಹಳ ಆದಾಯವು ಸಿಗಲಿದೆ.

ಕುಂಭ: ಇಂದು ನೀವು ಬಹಳ ಕಷ್ಟಪಟ್ಟು ಕೆಲಸ ಮಾಡಲಿದ್ದೀರಿ. ತಾತ್ಸಾರಮಾಡದೇ ಕ್ರಮಬದ್ಧವಾಗಿ ಶತ್ರುಗಳನ್ನು ಗೆಲ್ಲಿರಿ. ಕ್ರೀಡಪಟುಗಳು ತಮ್ಮ ಅವಿರತಶ್ರಮವನ್ನು ನಡೆಸಲಿದ್ದಾರೆ. ತಾಯಿಯಿಂದ ನಿಮಗೆ ಧನವು ಲಾಭವಾಗಬಹುದು. ಪಿತ್ತಕ್ಕೆ ಸಂಬಂಧಿಸಿದ ಖಾಯಿಲೆಗಳು ಬರಬಹುದು. ತಂತ್ರಜ್ಞಾನ ಕ್ಷೇತ್ರಗಳಲ್ಲಿ ನೀವು ಸಾಧ್ಯವಾದಷ್ಟು ಜ್ಞಾನವನ್ನು ಪಡೆಯಲು ಪ್ರಯತ್ನಿಸುತ್ತಿರುವಿರಿ. ವ್ಯಾಪರದಲ್ಲಿ ಸ್ವಲ್ಪ ನಷ್ಟವನ್ನು ಕಾಣುವಿರಿ. ಕೃಷಿಕರು ತಮ್ಮ ಮುಂದಿನ ಯೋಚನೆಗಳನ್ನು ಮಾಡುವರು. ಸಂದರ್ಭಕ್ಕೆ ಯೋಗ್ಯವಾಗಿ ವರ್ತಿಸಿ.

ಮೀನ: ಹೊಸ ಯೋಜನೆಯನ್ನು ಪ್ರಾರಂಭಿಸುವ ಸಮಯ ಬಂದಿದೆ. ತಡಮಾಡದೇ ಆರಂಭಿಸಿ. ಆಪ್ತರ ಸಹಕಾರವು ಸಿಗಲಿದೆ. ದಾಯಾದಿ ಕಲಹವು ನ್ಯಾಯಾಲಯದ ವರಗೂ ಹೋಗಬಹುದು. ಪುಣ್ಯಕ್ಷೇತ್ರಗಳ ದರ್ಶನವನ್ನು ಪಡೆಯುವಿರಿ. ನಿಮ್ಮ ಯೋಜನೆಗಳು ಎಣಿಸಿದಂತೆ ಆಗದೇ ಇರಬಹುದು. ಒತ್ತಡದಿಂದ ಹೊರಬರುವ ಪ್ರಯತ್ನಮಾಡುವಿರಿ. ಅಪರಿಚಿತಸ್ಥಳವು ಆಪ್ತವೂ ಆಗಲಿದೆ. ಮನೆಯಿಂದ ದೂರದಲ್ಲಿ ಇರುವವರಿಗೆ ಮನೆಯ ಹಂಬಲವಾಗುವುದು. ಒಂಟಿಯಾಗಿ ಇರಲು ಇಷ್ಟಪಡುವಿರಿ. ಅಧ್ಯಯನದಿಂದ ನಿಮ್ಮನ್ನು ಚಂಚಲವಾಗಿಸುವ ಅನಗತ್ಯ ವಾದಗಳನ್ನು ಬಿಡಿ.

-ಲೋಹಿತಶರ್ಮಾ, ಇಡುವಾಣಿ

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!