AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

2023 ಮಾರ್ಚ್ 9 ಗುರುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Nitya Bhavishya: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: pipanews.com
ಗಂಗಾಧರ​ ಬ. ಸಾಬೋಜಿ
|

Updated on: Mar 09, 2023 | 6:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 9 ಗುರುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ:ಗುರು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಹಸ್ತಾ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 45 ನಿಮಿಷಕ್ಕೆ, ಸೂರ್ಯಾಸ್ತ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02: 13 ರಿಂದ ಮಧ್ಯಾಹ್ನ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:46 ರಿಂದ ಬೆಳಗ್ಗೆ 08:15ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:45 ರಿಂದ 11:14ರ ವರೆಗೆ.

ಧನು: ಅನವಶ್ಯಕ ವೆಚ್ಚವು ಇಂದಾಗಲಿದೆ. ಗಮನಿಸಿಕೊಂಡು ನಿಯಂತ್ರಿಸಿ. ಹೆಚ್ಚು ಕೋಪವನ್ನು ತೋರಿಸಲಿದ್ದೀರಿ‌. ಯಾರ ಒತ್ತಾಯಕ್ಕೋ ಮಣಿದು ನಿಮ್ಮ ನಿರ್ಧಾರಗಳನ್ನು ಬದಲಿಸಿಕೊಳ್ಳಬೇಡಿ. ದೀಪದ ಬುಡ ಎಂದಿಗೂ ಕತ್ತಲಾಗಿರುತ್ತದೆ. ಇನ್ನೊಂದು ದೀಪವನ್ನು ಹಚ್ಚಿ. ಕತ್ತಲೆ ದೂರವಾಗುತ್ತದೆ. ಹಿಡಿದ ಕೆಲಸವನ್ನು ಬಿಡದೆ ಮುನ್ನಡೆಸುವ ಜಾಯಮಾನವು ನಿಮ್ಮ ಇಂದಿನ ಯಶಸ್ಸಿನ ಗುಟ್ಟುಗಳಲ್ಲೊಂದು. ಎಂತಹ ಸಂದರ್ಭದಲ್ಲಿಯೂ ಉದ್ವೇಗಕ್ಕೆ ಒಳಗಾಗಬೇಡಿ. ಎದೆ ನೋವು ಕಾಣಿಸಿಕೊಂಡೀತು. ಶಸ್ತ್ರಚಿಕಿತ್ಸೆಯವರೆಗೂ ಹೋಗಬಹುದಿ. ನಾಗನಿಗೆ ಹಾಲೆರೆದು ಪ್ರದಕ್ಷಿಣೆ ಬನ್ನಿ. ಇಂದು ಹುಟ್ಟಿದ ಪ್ರೇಮವು ಕೆಲವೇ ದಿನದಲ್ಲಿ ಸಾಯುತ್ತದೆ.

ಮಕರ: ಅಪರೂಪಕ್ಕೆ ಸಿಕ್ಕ ಸ್ನೇಹಿತರು ನಿಮ್ಮ ಬಳಿ ಹಣವನ್ನು ಖಾಲಿ‌ಮಾಡಿಸುವರು. ದಾಂಪತ್ಯಜೀವನವು ಜೀವನ್ಮರಣದ ಮಧ್ಯದಲ್ಲಿ ಒದ್ದಾಗುತ್ತಿದ್ದು ಬದುಕಿಸಿಕೊಳ್ಳಿ. ಇನ್ನೊಂದು ಜೀವವನ್ನು ಗರ್ಭದಲ್ಲಿ ಹೊತ್ತಿರುವವರು ನಡಿಗೆಯಲ್ಲೂ ಮನಸ್ಸಿನಲ್ಲೂ ಮಾತಿನಲ್ಲೂ ಎಚ್ಚರ, ಸಮಾಧಾನದಿಂದ ಇರಿ. ನಿಮ್ಮ ನ್ಯೂನತೆಗಳನ್ನು ಇನ್ನೊಬ್ಬರಿಗೆ ಹೇಳಬೇಡಿ. ಅವರು ಬಾಯಿಗೆ ಸಿಕ್ಕ ರಸಗವಳದಂತೆ ಚಪ್ಪರಿಸಿ ಸೇವಿಸುತ್ತಿರುತ್ತಾರೆ. ನಿರುದ್ಯೋಗದ ಸಮಸ್ಯೆ ಕಾಡುತ್ತಿದ್ದರೆ ವಿಘ್ನಗಳನ್ನು ಸಂಹರಿಸುವ ಗಣಪತಿಯನ್ನು ಪೂಜಿಸಿ ಉದ್ಯೋಗದ ಹುಡುಕಾಟಕ್ಕೆ ತೆರಳಿ.

ಕುಂಭ: ನಿಮ್ಮ ಗಟ್ಟಿಯಾದ ಸಂಕಲ್ಪವು ಯಶಸ್ಸಿನ ಗುಟ್ಟೂ ಆಗಿರಲಿದೆ. ಹಣವನ್ನು ಗಳಿಸುವ ಆಸೆಯು ತೀರ್ವವಾಗಿದ್ದರೂ ಸಫಲವಾಗುವುದಿಲ್ಲ‌. ಸಾಲದ ವಿಚಾರ ಬಂದರೆ ಮೌನವಹಿಸಿ, ಎದ್ದು ಹೋಗಿ ಅಥವಾ ವಿಷಯಾಂತರಿಸಿ. ಕಲಹಕ್ಕೆ ದಾರಿ ಮಾಡಿ ಕೊಡಬೇಡಿ. ಪಿತ್ರಾರ್ಜಿತ ಸಂಪತ್ತು ನಿಮಗೆ ಇಂದು ಉಪಯೋಗಕ್ಕೆ ಬರಲಿದೆ. ಸಂಗಾತಿಯು ನಿಮ್ಮ ಮೇಲೆ ಬೇಸರಗೊಂಡಾನು. ಇಂದು ನಿಮಗೆ ಸಿಗುವ ಸಂಪತ್ತು ನಿಮ್ಮ ಶ್ರಮಕ್ಕೆ ಅನುಸಾರವಾಗಿ ಸಿಗಲಿದೆ. ಬರೆವಣಿಗೆ ಅಥವಾ ಮಾತಿನಿಂದ‌ ನಿಮಗೆ ಕೀರ್ತಿಯು ಲಭಿಸುವುದು. ಆರೋಗ್ಯವು ಚೆನ್ನಾಗಿರಲಿದೆ. ಶನೈಶ್ಚರನ ಜಪ ಮಾಡಿ.

ಮೀನ: ಬದುಕು ಸುಂದರವಾದ ಮನೆಯ ಕಿಟಕಿ ಇದ್ದಂತೆ. ತೆರೆದರೆ ಬೆಳಕು, ತೆರೆಯದಿದ್ದರೆ ಕತ್ತಲು ಇರುತ್ತದೆ ಎನ್ನುವುದನ್ನು ಅರಿತುಕೊಳ್ಳಿ. ಆಯ್ಕೆಯನ್ನು ನೀವೇ ಮಾಡಿ. ಹಾಗೆಯೇ ಶ್ರಮಪಟ್ಟರೆ ಸುಖ, ಶ್ರಮಪಡದಿದ್ದರೆ ಕಷ್ಟ. ವಿವೇಚನೆಯನ್ನು ಮೀರಿ ಕೆಲಸವನ್ನು ಮಾಡಬೇಡಿ. ಜೀವನದಲ್ಲಿ ಮನುಷ್ಯ ಎಷ್ಟು ನೋವು ಅವಮಾನ ಪಡುತ್ತಾನೋ, ಅಷ್ಟೇ ಚೆನ್ನಾಗಿ ಬದುಕುತ್ತಾನೆ ಎಂಬುದು ಸತ್ಯವಿಚಾರವಾಗಿದೆ. ಛಲವನ್ನು ಇಟ್ಟುಕೊಳ್ಳಿ. ಬದಲಾವಣೆಯೇ ಶಾಶ್ವತ ಎನ್ನುವ ವಾಕ್ಯವನ್ನು ಸ್ಮರಿಸುತ್ತ ಮುಂದಡಿಯಿಡಿ. ನೆಮ್ಮದಿ ನಿಮ್ಮೆದುರು ಇರಲಿದೆ. ಸಹಜತೆಗೆ ಹೆಚ್ಚು ಒತ್ತು ಕೊಡುವಿರಿ. ಶಿವಪಂಚಾಕ್ಷರಸ್ತೋತ್ರವನ್ನು ಪಠಿಸಿ.

ಲೋಹಿತಶರ್ಮಾ ಇಡುವಾಣಿ

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!