AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಏಪ್ರಿಲ್​ 13ರ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 13) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಏಪ್ರಿಲ್​ 13ರ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯ
ಗಂಗಾಧರ​ ಬ. ಸಾಬೋಜಿ
|

Updated on: Apr 13, 2023 | 6:15 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ಶಿವ, ಕರಣ : ಬಾಲ, ಸೂರ್ಯೋದಯ ಬೆಳಗ್ಗೆ 06:21ಕ್ಕೆ, ಸೂರ್ಯಾಸ್ತ ಸಂಜೆ 06:44ಕ್ಕೆ, ರಾಹು ಕಾಲ ಮಧ್ಯಾಹ್ನ 02:06 – 03:39ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:21 – 07:54ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:27 – 11:00ರ ವರೆಗೆ.

ಧನುಸ್ಸು: ನಿಮಗೆ ಇಂದು ಪ್ರೇಮವಿವಾಹದಿಂದ ಆಗುವ ತೊಂದರೆಗಳ ಅರಿವಾಗಬಹುದು. ಅನಗತ್ಯ ತಿರುಗಾಟ, ಖರ್ಚುಗಳು ಜೀವನಕ್ಕೆ ದಿಕ್ಕು ಸಿಗಬಹುದು. ನಿಮ್ಮ ಉತ್ಸಾಹಕ್ಕೆ ಮನೆಯಲ್ಲಿ ಹಿನ್ನಡೆಯಾಗಬಹುದು. ಬಹಳ ದಿನಗಳ ಅನಂತರ ಸ್ನೇಹಿತರ ಜೊತೆ ಹರಟೆ ಹೊಡೆಯುವುದು ನಿಮ್ಮ ಮನಸ್ಸಿಗೆ ಖುಷಿಯನ್ನು ಕೊಡಬಹುದು. ಕಲಾವಿದರಿಗೆ ಪ್ರಶಂಸೆಗಳು ಸಿಕ್ಕಿ ಇನ್ನಷ್ಟು ಪ್ರಸಿದ್ಧಿಗೆ ಬರುವರು. ಭೂಮಿಯ ವ್ಯವಹಾರವು ಬಹಳ ಕಷ್ಟವೆನಿಸಿ ಬಿಡುವ ಸಾಧ್ಯತೆ ಇದೆ.

ಮಕರ: ಪ್ರಶಂಸೆಯನ್ನು ಇಷ್ಟಪಡುವ ನೀವು ಯಾರೂ ಪ್ರಶಂಸಿಸದಿದ್ದರೆ ಬೇಸರಿಸುವಿರಿ. ಊರಿನಲ್ಲಿ ನಿಮ್ಮ ಬಗ್ಗೆ ಅತ್ಯಂತ ಗೌರವವಿರಲಿದೆ. ಭವಿಷ್ಯದ ಬಗ್ಗೆ ಅತಿಯಾದ ಚಿಂತೆ ನಿಮಗಿರಲಿದೆ. ನೀವಿಂದು ನೂತನ ಸಂಬಂಧವನ್ನು ಬೆಳೆಸುವ ಮನಸ್ಸಿರಲಿದೆ. ನಿಮ್ಮ ಆಲೋಚನೆಗೆ ವಿರುದ್ಧವಾದ ಅಭಿಪ್ರಾಯಗಳು ಬರಬಹುದು. ಉತ್ತಮವಾದ ಸಂಜೆಯನ್ನು ನೀವು ಸ್ನೇಹಿತರ ಜೊತೆ ಕಳೆಯುವಿರಿ. ವಾಹನಭೀತಿಯಿಂದ ನೀವು ಮನೆಯಲ್ಲಿ ಇರುವಿರಿ. ಅಮೂಲ್ಯವಸ್ತುವಿನ ಕಳ್ಳತನವಾಗಬಹುದು.

ಕುಂಭ: ಪಾಲುದಾರಿಕೆಯಲ್ಲಿ ಇಂದು ಸಣ್ಣ ಕ್ಲೇಶವು ಬರಬಹುದು. ದುಶ್ಚಟಗಳು ನಿಮ್ಮ ವ್ಯಕ್ತಿತ್ವವನ್ನು ಹಾಳು ಮಾಡಿ ಅಗೌರವವನ್ನು ತರಬಹುದು. ಹಣದ ಆಮಿಷಕ್ಕೆ ಬಲುಲಿಯಾಗದೇ ನಿಮ್ಮ ಕರ್ತವ್ಯವನ್ನು ಮಾಡುವುದು ಮುಖ್ಯವಾಗಿರಲಿ. ಪತ್ನಿಯ ಮನಃಸ್ಥಿತಿಯನ್ನು ಅರಿತು ಇಂದು ಅವರೊಡನೆ ವ್ಯವಹರಿಸುವುದು ಒಳ್ಳೆಯದು. ನಿಮ್ಮ ಮಾತುಗಳು ದುರುದ್ದೇಶದಿಂದ ಕೂಡಿದೆ ಎಂದು ನಿಮ್ಮನ್ನು ದ್ವೇಷಿಸುವವರು ಗುಲ್ಲೆಬ್ಬಿಸಬಹುದು. ಉದ್ಯೋಗಿಗಳು ಪರಿಶ್ರಮವನ್ನು ಬಿಟ್ಟು ಲಾಭ ಗಳಿಸಲು ಬೇರೆ ದಾರಿ ಇರದು. ಯಾರನ್ನೂ ಅನವಶ್ಯಕವಾಗಿ ಬದೂರಬೇಡಿ.

ಮೀನ: ನಿಮ್ಮ ಉದ್ಯೋಗವು ಅನ್ಯರ ಪಿತೂರಿಯಿಂದ ನಷ್ಟವಾಗಬಹುದು. ಧಾರ್ಮಿಕಶ್ರದ್ಧೆಯಿಂದ ನಿಮಗೆ ಅನುಕೂಲವಿದ್ದರೂ ಅದನ್ನು ಮಾಡಲು ನಿಮಗೆ ಶ್ರದ್ಧೆ, ಭಕ್ತಿಯ ಕೊರತೆ ಹೆಚ್ಚಿರಲಿದೆ‌. ಮೇಲಧಿಕಾರಿಗಳನ್ನು ಮೆಚ್ಚಿಸಲು ಹೋಗಿ ನಿಮ್ಮ ಸಮಯವನ್ನು ವ್ಯರ್ಥಮಡಿಕೊಳ್ಳುವಿರಿ. ಹಳೆಯದರ ನೆನಪಿನ ಜೊತೆ ದಿನವನ್ನು ಕಳೆಯಬೇಡಿ. ನಿಮ್ಮ ಮುಂದೆ ಬೇಕಾದಷ್ಟು ಕೆಲಸಗಳು ಇವೆ. ಅದರತ್ತ ಗಮನವಿರಲಿ. ನಿಮ್ಮ ಕೆಲಸಗಳನ್ನು ನೀವೇ ಹೊಗಳುತ್ತ ಅನ್ಯರ ಮೂದಲಿಕೆಗೆ ಸಿಕ್ಕುವಿರಿ.

-ಲೋಹಿತಶರ್ಮಾ ಇಡುವಾಣಿ

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು