AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ರಾಶಿ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 02) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನಾ ರಾಶಿಯವರ ಇಂದಿನ ರಾಶಿ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯImage Credit source: istock
Rakesh Nayak Manchi
|

Updated on: Apr 02, 2023 | 6:15 AM

Share

ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಏಪ್ರಿಲ್​ 02) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಶೂಲ, ಕರಣ : ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 28 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ ಸಂಜೆ 05:12 ರಿಂದ 06:43ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:36 ರಿಂದ 02:08ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:12ರ ವರೆಗೆ.

ಧನುಸ್ಸು: ಕೋಪದ ಕೈಗೆ ಬುದ್ಧಿಕೊಟ್ಟು ತೊಂದರಗೆ ಸಿಕ್ಕಿಹಾಕಿಕೊಳ್ಳಬಹುದು. ಅತಿಯಾದ ಆಸೆಯಿಟ್ಟುಕೊಂಡು ಅದನ್ನು ಪಡೆಯಲಾಗದೇ ಸೋಲುವಿರಿ. ಅನಾರೋಗ್ಯದಿಂದ ನೀವು ಆಸ್ಪತ್ರೆಗೆ ಹೋಗಬೇಕಾಗಿ ಬರಬಹುದು. ಖರ್ಚನ್ನು ಕಡಿಮೆ ಮಾಡುವ ನೆಪದಲ್ಲಿ ಹಣವನ್ನು ಕಳೆದುಕೊಳ್ಳಬೇಕಾಗಬಹುದು. ದುಷ್ಟರ ಸಹವಾಸದಿಂದ ಇಂದು ದೂರವಿಲಾಗಲಿದ್ದೀರಿ. ಭೂಮಿಯ ವ್ಯವಹಾರದಲ್ಲಿ ನಷ್ಟವಾಗಿ ಆ ವೃತ್ತಿಯನ್ನು ಬಿಡಲಿದ್ದೀರಿ.

ಮಕರ: ಭವಿಷ್ಯದ ಬಗ್ಗೆ ಅತಿಯಾದ ಆಲೋಚನೆ ಇರಲಿದೆ. ಅನ್ಯರ ಮಾತನ್ನು ಕೇಳಿ ಸಂಬಂಧದಲ್ಲಿ ಒಡಕು ತಂದುಕೊಳ್ಳುವಿರಿ. ನಿಮ್ಮ ಸಹೋದರಿಗೆ ಧನಸಹಾಯ ಮಾಡಬೇಕಾಗಿಬರಬಹುದು. ನಿಮ್ಮ ಒತ್ತಡವನ್ನು ಕಂಡು ಕಛೇರಿಯಲ್ಲಿ ನಿಮಗೆ ಸಹಾಯಕ್ಕೆ ಬರಲಿದ್ದಾರೆ. ಸ್ನೇಹಿತ ಜೊತೆ ಔತಣಕೂಟವಿರಲಿದೆ. ನಿಮ್ಮ ಯೋಚನೆಗಳನ್ನು ಪತ್ನಿಯು ಗೌರವಿಸುವಳು. ಆಪತ್ತಿನ ಧನವನ್ನು ಇಂದು ಖರ್ಚುಮಾಡಿಕೊಳ್ಳುವ ಸಾಧ್ಯತೆ ಇದೆ. ಕೆಲವು ನಿರ್ಧಾರಗಳನ್ನು ನೀವು ತೆಗೆದುಕೊಳ್ಳುವುದು ಬೇಡ. ಹಾಗೆಯೇ ಇರಲಿ.

ಕುಂಭ: ಆಸ್ತಿಯ ವಿಚಾರವಾಗಿ ತಂದೆ ಹಾಗೂ ಸಹೋದರರ ನಡುವೆ‌ ಮಾತಿನ ತಿಕ್ಕಾಟವಿರಲಿದೆ. ನ್ಯಾಯಾಲಯದ ತೀರ್ಮಾನವನ್ನು ಒಪ್ಪದೇ ಧಿಕ್ಕರಿಸುವ ಹಂತಕ್ಕೆ ಹೋಗುವಿರಿ. ‌ಮನಸ್ಸಿನ‌ ಮೇಲೆ‌ ನಿಯಂತ್ರಣ ಇರಲಿ. ಕೃತಘ್ನತೆಯ ಅನುಭವವು ನಿಮಗಾಗಲಿದೆ. ಮಕ್ಕಳು ನಿಮಗೆ ವಂಚನೆ ಮಾಡಲಿದ್ದಾರೆ. ನಿಮಗಾದ ನೋವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳಿ. ನಿಮ್ಮ ಉದ್ಯೋಗವು ನಿಧಾನವಾಗಿ ವೃದ್ಧಿಯಾಗಲಿದೆ. ಸಮಾರಂಭಗಳಿಗೆ ಹೋಗಲಿದ್ದೀರಿ.

ಮೀನ: ನಿಮಗೆ ಪರೀಕ್ಷೆಯ ಕಾಲವಿದಾಗಲಿದೆ. ಮನೆಯನ್ನು ನಿರ್ಮಿಸುವ ಕಾರ್ಯವನ್ನು ಆರಂಭಿಸುವಿರಿ. ಸತಿಗೆ ಅನಿರೀಕ್ಷಿತ ಕೊಡುಗೆಯನ್ನು ನೀಡುವಿರಿ. ನಿದ್ರೆಯಾಗದೇ ಹಿಂಸೆಪಡುವಿರಿ. ಧಾರ್ಮಿಕ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ. ಸಮಾಜದಿಂದ‌ ಮನ್ನಣೆಯು ಸಿಗಬಹುದು. ನಾಯಕರಿಗೆ ಬೆಂಬಲವು ಸಿಗಲಿದೆ. ದೂರ ಹೋಗುವ ಪ್ರಯಾಣವು ರದ್ದಾಗಲಿದೆ. ಅವಘಟದಿಂದ ಪಾರಾಗುವಿರಿ.

-ಲೋಹಿತಶರ್ಮಾ ಇಡುವಾಣಿ

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ