AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಏಪ್ರಿಲ್​ 7ರ ರಾಶಿ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 07) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಏಪ್ರಿಲ್​ 7ರ ರಾಶಿ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯImage Credit source: istock
Rakesh Nayak Manchi
|

Updated on: Apr 07, 2023 | 5:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 7 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶುಕ್ರ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಚಿತ್ರಾ, ಯೋಗ : ಹರ್ಷಣ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:02 ರಿಂದ ಮಧ್ಯಾಹ್ನ 12:35ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆಮ ಗುಳಿಕ ಕಾಲ ಬೆಳಗ್ಗೆ 07:58 ರಿಂದ 09:30ರ ವರೆಗೆ.

ಧನುಸ್ಸು: ಉದ್ಯೋಗದಲ್ಲಿ ಒತ್ತಡವಿರಲಿದೆ ಎಂದು ಇಂದು ನೀವು ಜವಾಬ್ದಾರಿಗಳನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ವ್ಯವಹಾರದಲ್ಲಿ ಮೋಸಹೋಗುವಿರಿ. ನಿಮ್ಮ ತಮಾಷೆಯಿಂದ ಕೆಲವರು ನೊಂದುಕೊಳ್ಳುವ ಸಾಧ್ಯತೆ‌ಇದೆ. ಸತ್ಯವನ್ನು ನೊಇವಾಗದ ರೀತಿಯಲ್ಲಿ ಮನವರಿಕೆ‌ಮಾಡಿ. ಯಾರದೋ ಮಾತು ನಿಮಗೆ ಬೇಸರವನ್ನು ತರಿಸಬಹುದು. ಒಂದೇ ವಿಷಯವನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಲು ಹೋಗಿ ಮನಸ್ಸನ್ನು ಗಾಯ ಮಾಡಿಕೊಳ್ಳಬೇಡಿ. ಸಂಗಾತಿಯ ನಡುವೆ ಒಂದೇ ವಿಷಯವನ್ನು ಮತ್ತೆ ಹೇಳುವುದರಿಂದ ಕಲಹವಾಗಬಹುದು.

ಮಕರ: ಕೆಲಸದಲ್ಲಿ ಆಸಕ್ತಿಯನ್ನು ಕಳೆದುಕೊಂಡು ಜಾಡ್ಯರಾಗುವಿರಿ. ಅತಿಯಾದ ಪಾನದಿಂದ ಇಂದು ಹೊರಬರುವುದು ಕಷ್ಟವಾದೀತು. ನೀವು ಉತ್ತಮ ಸಮಯವನ್ನು ಹೊಂದುವ ನಿಮ್ಮ ಸಂಗಾತಿಯನ್ನು ನೀವು ಎಷ್ಟು ಗೌರವಿಸುತ್ತೀರಿ ಮತ್ತು ಅವರ ಬಗ್ಗೆ ಚಿಂತಿಸುವುದನ್ನು ತೋರಿಸಲು ನಿಮಗೆ ಸಾಧ್ಯವಾಗುತ್ತದೆ. ಆರಾಮಾಗಿ ಬದುಕಬೇಕೆಂದು ಸಂಪತ್ತನ್ನು ಖಾಲಿ ಮಾಡಿಕೊಳ್ಳುವಿರಿ. ನಿಮ್ಮ ವಿರೋಧಿಗಳು ನಿಮ್ಮನ್ನು ಎದುರಿಸಲು ಸಿದ್ಧರಿರುವುದಿಲ್ಲ. ನಿಮ್ಮ ಸುತ್ತಲಿನವರ ಬಗ್ಗೆ ಗಮನವಿರಿಲಿ. ಒಂದು ಕಣ್ಣಿಟ್ಟಿರಿ.

ಕುಂಭ: ಇಂದು ಇನ್ನೊಬ್ಬರ ವಾಹನದಲ್ಲಿ ಓಡಾಡಬೇಕಾದ ಸ್ಥಿತಿ ಬರಲಿದೆ. ಅಲ್ಲಿ ಅನಾರೋಗ್ಯವು ಕಾಡಲಿದೆ. ಹಾಗಾಗಿ ಹೊಸವಾಹನವನ್ನು ಖರೀದಿಸುವ ಆಲೋಚಯನ್ನು ಮಾಡುವಿರಿ. ನೀವು ಇಚ್ಛೆ ಬಂದಂತೆ ಹಣವನ್ನು ಖರ್ಚು ಮಾಡಲು ಸಾಧ್ಯವಾಗುತ್ತದೆ. ನಿಮ್ಮ ಪ್ರಯತ್ನದಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದ ನಂತರ ನೀವು ಯಶಸ್ಸನ್ನು ಸಾಧಿಸುವಿರಿ. ನಿಮಗೆ ಸ್ಥಿರಾಸ್ತಿಗಳ ಮೇಲೆ ಅರಿತಾದ ವ್ಯಾಮೋಹ ಇರಲಿದೆ. ಗೌರವವು ಸಿಗುತ್ತಿಲ್ಲ ಎಂಬ ಆತಂಕವೂ ಇದೆ. ಹೊಸ ದಾರಿಗಳು ನಿಮಗೆ ಜೀವನಕ್ಕೆ ಕಾಣಿಸಿಕೊಳ್ಳಲಿವೆ. ಶಿವಾರಾಧನೆಯು ನಿಮಗೆ ಬಲವನ್ನು ಕೊಡುವುದು.

ಮೀನ: ಸ್ವಂತ ಉದ್ಯೋಗವನ್ನು ಇಟ್ಟುಕೊಂಡವರಿಗೆ ಲಾಭವಾಗಲಿದೆ. ಅದ್ಭುತ ಸಮಯಗಳು ಸಮೀಪಿಸುತ್ತಿದ್ದಂತೆ ನಿಮ್ಮ ಕೆಲಸದ ಹೊರೆ ಏರಲು ಪ್ರಾರಂಭವಾಗುತ್ತದೆ. ಮೋಜಿನ ಚಟುವಟಿಕೆಗಳಿಗೆ ಗಣನೀಯವಾಗಿ ಕಡಿಮೆ ಉಚಿತ ಸಮಯವನ್ನು ನೀಡುತ್ತದೆ. ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವು ಅನುಚಿತ ಮಾತುಗಳು ಕೇಳಿಬರಬಹುದು. ತಾಳ್ಮೆಯಿಂದ ಉತ್ತರಿಸಿ. ಅರ್ಜಿದಾರರು ಮುಂದಿನ ಸುತ್ತಿನ ಸಂದರ್ಶನಕ್ಕೂ ಹೋಗಬಹುದು. ನಿಮ್ಮ ಸಂಪಾದನೆಯು ನ್ಯಾಯಮಾರ್ಗದಲ್ಲಿ ಇರಲಿ.

-ಲೋಹಿತಶರ್ಮಾ ಇಡುವಾಣಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ