AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಧನು, ಮಕರ, ಕುಂಭ, ಮೀನಾ ರಾಶಿಯವರ ಮಾ.29ರ ರಾಶಿ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಧನು, ಮಕರ, ಕುಂಭ, ಮೀನಾ ರಾಶಿಯವರ ಮಾ.29ರ ರಾಶಿ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯ
Rakesh Nayak Manchi
|

Updated on: Mar 29, 2023 | 6:00 AM

Share

ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಮಾರ್ಚ್ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಬುದೆ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಶೋಭನ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 31 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ. ರಾಹು ಕಾಲ ಮಧ್ಯಾಹ್ನ 12:37 ರಿಂದ 02:09ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:03 ರಿಂದ 09:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:06 ರಿಂದ ಮಧ್ಯಾಹ್ನ 12:37ರ ವರೆಗೆ.

ಧನು: ವಿವೇಚನೆಯಿಲ್ಲದೇ ಯಾವ ಕೆಲಸವನ್ನೂ ಮಾಡಬೇಡಿ, ಯಾವ ಮಾತನ್ನೂ ಆಡಬೇಡಿ. ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳುವಿರಿ. ನೀವಿಂದು ಪ್ರೀತಿಸಲು ಆರಂಭಿಸುವಿರಿ. ಆಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಅವಸರದಲ್ಲಿ ಅನಾಹುತವಾದೀತು. ಧಾರ್ಮಿಕ‌ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನಿಮ್ಮ ವ್ಯಕ್ತಿತ್ವವನ್ನು ಕಂಡು ಕೆಲವರು ಸಲಹೆಗಳನ್ನು ಕೊಡಲು ಬರಬಹುದು. ಯಾವುದೇ ಪ್ರತ್ಯುತ್ತರಗಳನ್ನು ಕೊಡಲು ಹೋಗಬೇಡಿ. ಸ್ತ್ರೀಯರಿಂದ ನಿಮಗೆ ಲಾಭವಾಗಲಿದೆ. ಸ್ತ್ರೀಯರು ನಿಮಗೆ ಬೆಂಬಲವನ್ನು ನೀಡುವರು. ಆರೋಗ್ಯ ಇಂದು ಚೆನ್ನಾಗಿರಲಿದೆ.

ಮಕರ: ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ನಿಮ್ಮ ಸಮಯೋಚಿತ ಪೂರ್ವಾಲೋಚನೆಯಿಂದ ನೀವಿಂದು ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಇಬ್ಬರು ಸ್ನೇಹಿತರ ಕಲಹವನ್ನು ತಪ್ಪಿಸಲು ಹೋಗಿ ನಿಮಗೆ ಅಪಮಾನವಾಗಬಹುದು. ಎಂದೋ‌ ಮಾಡಿದ ಇಂದು ನಿಮ್ಮ ಆಪತ್ತಿಗೆ ಬರಲಿದೆ. ಎಲ್ಲರ ಜೊತೆ ಬೆರೆತು ಬದುಕುವ ನಿಮ್ಮ ಗುಣವು ಮೆಚ್ಚುಗೆಯಾಗಲಿದೆ. ಆರ್ಥಿಕತೆಯನ್ನು ನಿಭಾಯಿಸುವುದನ್ನು ಕಲಿಯಿರಿ. ಪಿತ್ತಸಂಬಂಧಿಯಾದ ರೋಗವು ಬರಬಹುದು. ಹನುಮಾನ್ ಚಾಲೀಸ್ ಪಠಿಸಿ.

ಕುಂಭ: ಆನಾರೋಗ್ಯದ ಕಾರಣದಿಂದ ನಿಮ್ಮ ಸಂಪತ್ತು ವ್ಯಯವಾಗಲಿದೆ. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಾತಿಗೆ ಬೆಲೆಯು ಕಡಿಮೆಯಾದೀತು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ದಾಂಪತ್ಯದಲ್ಲಿ ಹೊಂದಾಣಿಕೆ ಇರಲಿದೆ. ತಪ್ಪುಗಳಿದ್ದರೆ ಅದನ್ನು ಒಪ್ಪಿಕೊಂಡು ಮುನ್ನಡೆಯಿರಿ. ಬಂಧುಗಳ ಭೇಟಿಯಿಂದ ಸಂತೋಷವಾಗಲಿದೆ. ಕೋಪದಲ್ಲಿ ಏನನ್ನಾದರೂ ಹೇಳಿಬಿಡಬೇಡಿ. ಸರಳತೆಯನ್ನು ರೂಢಿಸಿಕೊಳ್ಳುವಿರಿ. ಶಿವನಿಗೆ ಅಭಿಷೇಕ ಮಾಡಿ. ಚಂದ್ರನಿಂದು ಷಷ್ಠದಲ್ಲಿದ್ದು ಮಾನಸಿಕ ಕಿರಿಕಿರಿಯನ್ನು ತರುವನು.

ಮೀನ: ಸ್ವಂತ ಉದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಅಲ್ಪ ಲಾಭದ ನಿರೀಕ್ಷೆಯನ್ನು ಮಾಡಬಹುದು. ಗೊಂದಲವನ್ನು ಪರಿಹರಿಸಲು ನಿಮಗೆ ನೂರಾರು ಮಾರ್ಗಗಳಿವೆ. ಶಾಂತಚಿತ್ತರಾಗಿ ಯೋಚಿಸಿ. ನಿಮ್ಮ ಆಯ್ಕೆಗಳು ಸರಿಯಾಗಿರಲಿ. ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ. ಶತ್ರುಗಳು ನಿಮಗೆ ತೊಂದರೆ ಕೊಡಲಿದ್ದು ಅದನ್ನು ಪರಿಹರಿಸಿಕೊಳ್ಳಲು ಧನವ್ಯಯವನ್ನು ಮಾಡಬೇಕಾಗಿಬರಬಹುದು. ಯಾರ ಕೊತೆ ದ್ವೇಷವನ್ನು ಬೆಳೆಸಿಕೊಳ್ಳಬೇಡಿ. ಯಾರ ಬಗ್ಗೆಯೂ ಪೂರ್ವಾಗ್ರಹಬುದ್ಧಿಯನ್ನು ಬಿಡುವುದು ಒಳ್ಳೆಯದು. ದ್ವಾದಶದ ಶನಿಯಿಂದ ಅನನುಕೂಲಗಳು ಆಗಲಿವೆ.

-ಲೋಹಿತಶರ್ಮಾ, ಇಡುವಾಣಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ