AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಧನು, ಮಕರ, ಕುಂಭ, ಮೀನಾ ರಾಶಿಯವರ ಮಾ.31ರ ರಾಶಿ ಭವಿಷ್ಯ ಹೀಗಿದೆ

ನೀವು ಧನು, ಮಕರ, ಕುಂಭ, ಮೀನಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮಾರ್ಚ್ 31) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನಾ ರಾಶಿಯವರ ಮಾ.31ರ ರಾಶಿ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯImage Credit source: Shutterstock
Rakesh Nayak Manchi
|

Updated on: Mar 31, 2023 | 6:15 AM

Share

ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗಾದರೆ ಇಂದಿನ (2023 ಮಾರ್ಚ್ 31) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭ ಎಂದು  ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ದಶಮೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ಸುಕರ್ಮ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಬೆಳಗ್ಗೆ 06 ಗಂಟೆ 43 ನಿಮಿಷಕ್ಕೆ. ರಾಹು ಕಾಲ ಬೆಳಗ್ಗೆ 11:05 ರಿಂದ ಮಧ್ಯಾಹ್ನ 12:37ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:40 ರಿಂದ 05:12ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:02 ರಿಂದ 09:33ರ ವರೆಗೆ.

ಧನು: ದಾಂಪತ್ಯದಲ್ಲಿ ಉಂಟಾದ ವೈಮನಸ್ಯವನ್ನು ಪ್ರಕಟಗೊಳಿಸಿದೇ ಅಲದಲಿಯೇ ಸರಿಮಾಡಿಕೊಳ್ಳುವುದು ಒಳ್ಳೆಯದು. ವಿದೇಶಕ್ಕೆ ಹೋಗಬೇಕಾಗಿಬರುವ ಸಾಧ್ಯತೆ ಇದೆ. ಯಂತ್ರಗಳ ಉದ್ಯಮವನ್ನು ಮಾಡುತ್ತಿದ್ದರೆ ಅಧಿಕಲಾಭವು ಆಗಬಹುದು‌ ಒತ್ತಡವು ನಿಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡುವುದು. ಸಾಲಬಾಧೆಯಿಂದ ಮುಕ್ತರಾಗುವ ತವಕದಲ್ಲಿರುವಿರಿ. ಯಾರಿಂದಲೂ ಅತಿಯಾದ ನಿರೀಕ್ಷೆ ಮಾಡದೇ ಕರ್ತವ್ಯ ಎಂದು ತಿಳಿದು ಕೆಲಸ ಮಾಡಿ. ಪ್ರಯಾಣವು ಆಯಾಸ ತರಿಸಬಹುದು.

ಮಕರ: ಎಲ್ಲ ಕೆಲಸವನ್ನೂ ಬೇರೆಯವರೇ ಮಾಡಲಿ ಎಂಬ ಭಾವವನ್ನು ಬಿಡಿ. ನಿಮಗೆ ಸಾಧ್ಯವಾದ ಕೆಲಸಗಳನ್ನು ಮಾಡಿ. ಸ್ವಂತ ಭೂಮಿಯನ್ನು ಮಾರುವ ಸ್ಥಿತಿಯು ಎದುರಾದೀತು. ಅತ್ಯಮೂಲ್ಯವಾದ ಸಂಪತ್ತುಗಳನ್ನು ರಕ್ಷಿಸಿಕೊಳ್ಳವುದು ಉತ್ತಮ. ಹಗುರವಾದ ಮಾತುಗಳು ನಿಮ್ಮನ್ನು ಹಗುರ ಮಾಡುವುದು. ಅತಿಯಾದ ಹಸಿವು ನಿಮ್ಮನ್ನು ಬಾಧಿಸಬಹುದು. ಜವಾಬ್ದಾರಿಯುತ ಸ್ಥಾನದಲ್ಲಿದ್ದರೆ ನಿಮ್ಮ ಕೆಲಸಗಳು ಅಚ್ಚುಕಟ್ಟಾಗಿ ಇರಬೇಕಿದೆ. ಗೋಪೂಜೆ ಮಾಡಿ ಗ್ರಾಸವನ್ನು ನೀಡಿ.‌ ನಿಮಗೆ ಬರುವ ಆಪತ್ತುಗಳು ನಿವಾರಣೆಯಾಗಲಿದೆ.

ಕುಂಭ: ಇಂದು ನೀವು ವಾಹನವನ್ನು ಬದಲಿಸುವ ವಿಚಾರವನ್ನು ಮನೆಯಲ್ಲಿ ಪ್ರಸ್ತಾಪಿಸುವಿರಿ. ದೂರಪ್ರಯಾಣ ಸುಖಕರವಾಗಿರಲಿದೆ.‌ ಧಾರ್ಮಿಕವಾದ ನಂಬಿಕೆ ಉಳ್ಳ ನೀವು ತೀರ್ಥಕ್ಷೇತ್ರಗಳೂ ದೇವಾಲಯಕ್ಕೋ ಭೇಟಿ ಕೊಡುವಿರಿ. ಕೆಲಸವಾಗಲಿಲ್ಲವೆಂದು ಹತಾಶವಾಗಬೇಡಿ. ಆಗುವ ಕಾಲಕ್ಕೆ ಆಗಿಯೇ ಆಗುವುದು ಎನ್ನುವ ದೃಢವಾದ ನಂಬಿಕೆಯನ್ನು ಇಟ್ಟಿರಿ. ಯಾರನ್ನೂ ಪರೋಕ್ಷವಾಗಿಯೂ ಟೀಕಿಸಬೇಡಿ. ಆರೋಗ್ಯವು ಹದ ತಪ್ಪಬಹುದು. ಸಂಪತ್ತಿನ‌ ವಿಚಾರದಲ್ಲಿ ವಿವೇಚನೆ ಇರಲಿ. ಮಿತವ್ಯಯವಿರಲಿ. ಯಾರ ಮೇಲೂ ಅಸೂಯೆ ಬೇಡ.

ಮೀನ: ಇಂದು ನೀವು ಆಲಸ್ಯದಿಂದ ನಿಮ್ಮ ಕಾರ್ಯಗಳನ್ನು ಮುಂದೂಡುವಿರಿ. ಆಪತ್ತಿನಲ್ಲಿ ಸಹಾಯ ಮಾಡಲಿಲ್ಲ ಎನ್ನುವ ಕಾರಣಕ್ಕೆ ಸರ್ಕಾರದ ನೌಕರರು ಮನೆಯಿಂದ ದೂರವಿದ್ದು ಮಾನಸಿಕವಾಗಿ ಕುಗ್ಗಿರುವಿರಿ. ವಿದ್ಯಾಭ್ಯಾಸದಿಂದ ಲಾಭವಿದೆ ಎಂದು ಅನ್ನಿಸಿ ಶ್ರಮವಹಿಸುವಿರಿ. ಏಕಾಗ್ರತೆಗೆ ನಾನಾ ಪ್ರಕಾರದಲ್ಲಿ ಪರೀಕ್ಷೆಗಳು ಆಗಬಹುದು. ಆರ್ಥಿಕವಾಗಿ ಇಂದು ಸ್ವಲ್ಪ ದುರ್ಬಲರಾಗುವಿರಿ. ಆಗಿದ್ದನ್ನು ನೆನಪಿಸಿಕೊಳ್ಳುತ್ತ ಕುಳಿತುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ಆಗಬೇಕಿರುವುದರ ಕಡೆ ಗಮನವಿರಲಿ. ಶನೈಶ್ಚರನ ಸ್ತೋತ್ರ ಮಾಡಿ. ನಿಮ್ಮನ್ನು ಸರಿದಾರಿಯಲ್ಲಿ ನಡೆಸುವನು.

-ಲೋಹಿತಶರ್ಮಾ ಇಡುವಾಣಿ

ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ