AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 1) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ
ಇಂದಿನ ರಾಶಿ ಭವಿಷ್ಯImage Credit source: istock
Rakesh Nayak Manchi
|

Updated on: May 01, 2023 | 6:25 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮೇ 1) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಸೋಮ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಧ್ರುವ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 47 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:46 ರಿಂದ 09:20 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:55 ರಿಂದ ಮಧ್ಯಾಹ್ನ 12:30ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:39ರ ವರೆಗೆ.

ಧನು: ನಿಮ್ಮ ಹಳೆಯ ವಾಹನವನ್ನು ಮಾರಾಟಮಾಡುವ ಆಲೋಚನೆ ಮಾಡುವಿರಿ. ಉದ್ಯೋಗದ ನಿಮಿತ್ತ ನೀವು ಹೊರದೇಶಕ್ಕೆ ಹೋಗಬಹುದು. ಅನೇಕ ವರ್ಷಗಳ ಅನಂತರ ಆದ ಸಂತಾನದಿಂದ ಸಂತಸ ಆಗಲಿದೆ. ವಿದ್ಯುತ್ ಉಪಕರಣವನ್ನು ನೀವು ಖರೀದಿಸುವಿರಿ. ವಿವಾಹ ಸಮಾರಂಭಗಳಿಗೆ ಭೇಟಿ ಕೊಡುವಿರಿ. ಹಳೆಯ ಸ್ನೇಹಿತರು ಸಿಕ್ಕಿ ಹಳೆಯ ವಿಚಾರಗಳನ್ನು ಸ್ಮರಿಸಿಕೊಳ್ಳುವಿರಿ. ಸ್ವಂತ ಉದ್ಯೋಗವಿದ್ದರೆ ಹೆಚ್ಚು ಶ್ರಮ ಆದೀತು. ನೀವು ಊಹಿಸದಂತೆ ಘಟನೆಗಳು ನಡೆಯುವುದು. ಕಂಡ ಕನಸನ್ನು ಕನಸಾಗಿಯೇ ಇಟ್ಟುಕೊಳ್ಳಿ.

ಮಕರ: ಅಸಂಬದ್ಧ ಮಾತುಗಳನ್ನು ಕೇಳಿ ನಿಮಗೆ ಬೇಸರವಾದೀತು. ಕೋಪ ಮಾಡಿಕೊಳ್ಳುವಿರಿ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಿಯಿಂದ ಭಾಗವಹಿಸುವಿರಿ. ವಾಹನದಿಂದ ಆಗುವ ಅಪಘಾತವು ಸಣ್ಣ ಅಂತರದಿಂದ ರಕ್ಷಣೆಯಾಗುವಿರಿ. ಪುಣ್ಯದ ಸ್ಮರಣೆ ನಿಮಗಾಗಲಿದೆ. ಗೃಹಪ್ರವೇಶಕ್ಕೆ ಮನೆಯು ಸಿದ್ಧವಾಗಿದ್ದು ಪ್ರವೇಶಕ್ಕೆಂದು ಒಳ್ಳೆಯ ದಿನವನ್ನು ಹುಡುಕುತ್ತಿರುವಿರಿ. ಸ್ನೇಹಿತರ ಅಥವಾ ಕುಟುಂಬದ ಜೊತೆ ಪ್ರವಾಸಕ್ಕೆ ಹೋಗುವ ಮನಸ್ಸಾಗುವುದು. ಆರ್ಥಿಕವಾಗಿ ದುರ್ಬಲವಲ್ಲದಿದ್ದರೂ ಸಮಯಕ್ಕೆ ಸರಿಯಾಗಿ ಹಣವಂತೂ ಸಿಗದು.

ಕುಂಭ: ದಾಂಪತ್ಯವು ಸುಖವಾಗಿರಲು ಇಬ್ಬರೂ ಪ್ರಯತ್ನಿಸಬೇಕು. ಜಟಕಾ ಬಂದಿಯಂತಿದ್ದರೆ ಸರಸಜೀವನ. ಇಲ್ಲವಾದರೆ ವಿರಸವಾಗುವುದು. ನಿಮ್ಮನ್ನು ಅರ್ಥಮಾಡಿಕೊಳ್ಳಲು ಜನರು ಬಹಳ ಪ್ರಯತ್ನಿಸಬಹುದು. ನಿಮ್ಮ ನಡೆಯು ಸುಲಭಕ್ಕೆ ತಿಳಿಯದು. ಐಷಾರಾಮಿಯಾಗಿ ಇರಲು ಈ ದಿನವನ್ನು ಇಷ್ಟಪಡುವಿರಿ. ಅನಿರೀಕ್ಷಿತವಾಗಿ ಧನಾಗಮನದಿಂದ ಸಂತೋಷ ಸಿಗಲಿದೆ. ಸ್ನೇಹಿತರಿಗೆ ಸಹಾಯವನ್ನು ಮಾಡುವಿರಿ. ಕಾರ್ಯವು ನಿಧಾನವಾಗಿದೆ ಎಂದು ಕಂಡರೂ ಚಿಂತೆ ಬೇಡ.‌ ಪೂರ್ಣವಾಗಲಿ ಸರಿಯಾಗಿ.

ಮೀನ: ಮನೆಯಲ್ಲಿಯೇ ಇರುವ ನಿಮಗೆ ಮನೆಯವರ ಮಾತುಗಳು ಕಿರಿಕಿರಿ‌ ಎನಿಸಬಹುದು. ಮನೆಯ ಕೆಲಸಗಳನ್ನು ಮಾಡಲು ನೀವು ಹಿಂಜರಿಯುವಿರಿ. ನೀವು ಇಂದು ನಡೆದಾಡಲೂ ಇಷ್ಟಪಡುವುದಿಲ್ಲ. ಒಂದು ಸಂದರ್ಭದಂತೆ ಮತ್ತೊಂದು ಸಂದರ್ಭವನ್ನು ಊಹಿಸಿಕೊಳ್ಳಬೇಡಿ. ನಿಮ್ಮ ವೇಗವನ್ನು ಹಿಮ್ಮೆಟ್ಟಿಸಲು ನಾನಾ ತಂತ್ರಗಳು ನಡೆಯಬಹುದು. ನಿಮ್ಮ ಕೆಲಸವೇ ಅವರಿಗೆ ಉತ್ತರವಾಗಲಿ. ಮಾತು ಆದಷ್ಟು ಕಡಿಮೆ ಇರುವುದೇ ಒಳ್ಳೆಯದು. ಅಸಹಜವಾದ ಖುಷಿಯಿಂದ ಇರುವಿರಿ. ಕಾಲಕ್ಕೆ ಆಗಬೇಕಾದುದು ಆಗುವುದು.

-ಲೋಹಿತಶರ್ಮಾ ಇಡುವಾಣಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?