AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಇಂದಿನ ರಾಶಿ ಭವಿಷ್ಯ, ಈ ರಾಶಿಯವರ ಹಳೆಯ ಪ್ರಣಯವು ಮತ್ತೆ ಚಿಗುರೊಡೆಯಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 5) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇಂದಿನ ರಾಶಿ ಭವಿಷ್ಯ, ಈ ರಾಶಿಯವರ ಹಳೆಯ ಪ್ರಣಯವು ಮತ್ತೆ ಚಿಗುರೊಡೆಯಬಹುದು
ಇಂದಿನ ರಾಶಿ ಭವಿಷ್ಯ
Rakesh Nayak Manchi
|

Updated on: May 05, 2023 | 6:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 5) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಪೂರ್ಣಿಮಾ, ನಿತ್ಯನಕ್ಷತ್ರ: ಸ್ವಾತಿ, ಯೋಗ: ಸಿದ್ಧಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:54 ರಿಂದ ಮಧ್ಯಾಹ್ನ 12:29ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ ಸಂಜೆ 05:14ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:44 ರಿಂದ 09:19ರ ವರೆಗೆ.

ಧನು: ಮಾತಿನ ಮೇಲೆ ಹಿಡಿತವಿರಲಿ. ನೀವಾಡುವ ಅನವಶ್ಯಕ ಹಾಗೂ ನಿಷ್ಪ್ರಯೋಜಕ‌ ಮಾತಿನಿಂದ ನಿಮ್ಮನ್ನು ಅಳೆಯಬಹುದು. ಯಾರದೋ ಮಾತಿಗೆ ಮಣಿದು ನಿಮ್ಮ ಗುರಿಯನ್ನು ಬದಲಿಸಿಕೊಳ್ಳುವುದು ಸರಿಯಲ್ಲ. ನೀವು ಬಹಳ ವೇಗವಾಗಿ ನಡೆಯುವಿರಿ ಹಾಗೂ ವೇಗವಾಗಿ ಮಾತನಾಡುವಿರಿ. ಸ್ತ್ರೀಯರಿಂದ ಸಹಕಾರವು ಸಿಗಬಹುದು. ಕಛೇರಿಯಲ್ಲಿ ಸ್ತ್ರೀಸಂಬಂಧವಾದ ಅಪವಾದವೂ ಹುಟ್ಟಿಕೊಂಡೀತು. ನಿಮ್ಮವರನ್ನು ನೀವು ಬಿಟ್ಟುಕೊಡಲಾರಿರಿ. ನಿಮ್ಮ ಕೆಲಸವು ನಿಮಗೆ ತೃಪ್ತಿಕರವಾಗಿ ಇರಲಿದೆ. ಆತ್ಮೀಯರ ಜೊತೆ ಇಂದಿನ ವಿಶೇಷವನ್ನು ಹಂಚಿಕೊಳ್ಳುವಿರಿ.

ಮಕರ: ಹಳೆಯ ಪ್ರಣಯವು ಮತ್ತೆ ಚಿಗುರೊಡೆಯಬಹುದು. ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ನೀವು ಸೋಲಬಹುದು. ನಿಮ್ಮ ಆಲೋಚನೆಗಳನ್ನು ಬೇರೆಯವರ ಮೇಲೆ ಹೇರಬೇಡಿ. ಅನ್ಯರ ತಪ್ಪುಗಳನ್ನು ಮನ್ನಿಸುವ ಗುಣವನ್ನು ಇಟ್ಟುಕೊಳ್ಳುವುದು ಒಳ್ಳೆಯದು. ಪುಣ್ಯಕ್ಷೇತ್ರಗಳಿಗೆ ಬಂಧುಗಳ ಜೊತೆ ಹೋಗಲಿದ್ದೀರಿ. ಆಕಸ್ಮಿಕವಾದ‌ ಕೆಲವು ಘಟನೆಗಳು ನಿಮ್ಮನ್ನು ಚಿಂತೆಯಲ್ಲಿ ಇರುವಂತೆ ಮಾಡುವುದು. ಯುಕ್ತಿಯಿಂದ ನಿಮ್ಮ‌ ಕಾರ್ಯವನ್ನು ಸಾಧಿಸಿಕೊಳ್ಳಿ. ಎಲ್ಲಿಯೂ ಕಲಹವಾಗದೇ ಕೆಲಸವು ಮುಕ್ತಾಯವಾಗುವುದು. ವಿಶೇಷ ಸಂದರ್ಭದಲ್ಲಿ ಭಾಗವಹಿಸಲಿದ್ದೀರಿ.

ಕುಂಭ: ದಿನಸಿ ವ್ಯಾಪಾರವನ್ನು ಮಾಡುತ್ತಿದ್ದರೆ ನಿಮಗೆ ಅನುಕೂಲವಿದೆ. ಶತ್ರುಗಳ ಕಾಟವಿರಬಹುದು. ಮಾನಸಿಕವಾಗಿ ಅವರು ನಿಮಗೆ ಇಂದು ತೊಂದರೆಯನ್ನು ಕೊಡಬಹುದು. ಕುಟುಂಬದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಕಲಹಗಳು ಆಗಬಹುದು. ಅದು ಆಗದಂತೆ ನೋಡಿಕೊಳ್ಳುವುದು ಉತ್ತಮ. ಬರಬೇಕಾದ ಸಂಪತ್ತು ಕೈಗೆ ಸಿಗದೇ ಸಾಲವನ್ನು ಮಾಡಬೇಕಾದೀತು. ಕುಟುಂಬದಲ್ಲಿ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ ಎಂದು ದಾಂಪತ್ಯದಲ್ಲಿ ಕಲಹವು ಉಂಟಾಗಬಹುದು. ವಾತಕ್ಕೆ ಸಂಬಂಧಿಸಿದ ರೋಗಗಳು ಹೆಚ್ಚಾಗಬಹುದು. ಔಷಧೋಪಚಾರವನ್ನು ಸರಿಯಾಗಿ ಮಾಡಿಕೊಳ್ಳುವುದು ಉತ್ತಮ.

ಮೀನ: ನಿಮ್ಮ ನಿರೀಕ್ಷೆಯಂತೆ ಬರಬೇಕಾದ ಹಣವು ಬರಬಹುದು. ಆಯ್ಕೆ ವಿಚಾರದಲ್ಲಿ ನೀವು ಸೋಲಬಹುದು. ಸಿಹಿ ನೆನಪು ಕಾಡಲಿದೆ. ಸಂಗಾತಿಯ ಜೊತೆ ವಾಸ್ತವದ ಬಗ್ಗೆ ಆಲೋಚಿಸಿ. ನಿಮ್ಮವರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಪತ್ನಿಯ ಜೊತೆ ದೂರದ ಊರಿಗೆ ಪ್ರಯಾಣವನ್ನು ಮಾಡುವಿರಿ. ಭೂಮಿಯ ವ್ಯವಹಾರಕ್ಕೆ ಸದ್ಯ ಕೈ ಹಾಕುವುದು ಬೇಡ. ಮಕ್ಕಳು ನಿಮ್ಮಿಂದ ಹಣವು ಖಾಲಿಯಾಗುವಂತೆ ಮಾಡಿಯಾರು. ಅವರು ಬೇಸರಗೊಳ್ಳದಂತೆ ನೋಡಿಕೊಳ್ಳಿ. ಸಮೀಪದ ಶಿವಾಲಯಕ್ಕೆ ಹೋಗಿ ರುದ್ರಾಭಿಷೇಕವನ್ನು ಮಾಡಿಸಿ.

-ಲೋಹಿತಶರ್ಮಾ ಇಡುವಾಣಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ