AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಇಂದಿನ ರಾಶಿ ಭವಿಷ್ಯ; ನೀವು ಈ ರಾಶಿಯವರೇ? ಪ್ರೀತಿಯಲ್ಲಿ ಬಿದ್ದಿದ್ದರೆ ಲವರ್ ಬಗ್ಗೆ ಇರಲಿ ಎಚ್ಚರ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 9) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nitya Bhavishya: ಇಂದಿನ ರಾಶಿ ಭವಿಷ್ಯ; ನೀವು ಈ ರಾಶಿಯವರೇ? ಪ್ರೀತಿಯಲ್ಲಿ ಬಿದ್ದಿದ್ದರೆ ಲವರ್ ಬಗ್ಗೆ ಇರಲಿ ಎಚ್ಚರ
ಇಂದಿನ ರಾಶಿ ಭವಿಷ್ಯImage Credit source: Shutterstock
Rakesh Nayak Manchi
| Edited By: |

Updated on:May 09, 2023 | 6:41 AM

Share

ಶುಭೋದಯ ಓದುಗರೇ, ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮೇ​ 9) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಮೂಲಾ, ಯೋಗ: ಸಿದ್ಧಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:39 ಗಂಟೆ 05:15ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:18 ರಿಂದ 10:54ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:04ರ ವರೆಗೆ.

ಧನು: ಕೊಟ್ಟಿದ್ದನ್ನು ಪುನಃ ಕೇಳಲು ಹೋಗಬೇಡಿ. ನಿಮ್ಮದಲ್ಲ ಎಂಬ ನಿರ್ಧಾರವನ್ನು ಮಾಡಿಬಿಡಿ. ಸಂಗಾತಿಯು ಕಾಲು ಕೆರೆದು ಕಲಹಕ್ಕೆ ಬರಬಹುದು. ನಿಮ್ಮ ಕಡೆ ತಾಳ್ಮೆಯ ಗುರಾಣಿ ಇರಲಿ. ನೀವೂ ಕತ್ತಿವರಸೆ ಮಾಡಿಬಿಟ್ಟೀರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಸಂತೋಷವಾಗಲಿದೆ. ವಿದೇಶಕ್ಕೆ ಸುತ್ತಾಟ ಮಾಡಲು ಹೋಗಬಹುದು. ಕೆಲಸವು ನಿಧಾ‌ವಾಗಿ ಸಾಗುವುದು. ಮನಸ್ಸಿಗೆ ಸ್ವಲ್ಪ ನೆಮ್ಮದಿ ಸಿಗಬಹುದು.‌ ಆಪ್ತರ ಕೂಟದಲ್ಲಿ ಭಾಗಿಯಾಗಿ ನಕ್ಕು ನಲಿಯುವಿರಿ. ಅವರ ಬಳಿ ಆರ್ಥಿಕತೆಯ ಬಗ್ಗೆ ವಿಚಾರಿಸುವಿರಿ. ಪರಮೇಶ್ವರಿಯನ್ನು ಸ್ತೋತ್ರ ಮಾಡಿ. ಕೆಲಸಗಳು ಸಲೀಸಾದೀತು.

ಮಕರ: ಸಿಕ್ಕಿದ ವಸ್ತುಗಳನ್ನು ದುರುಪಯೋಗ ಮಾಡಿಕೊಳ್ಳುವ ಮನಸ್ಸು ಉಂಟಾಗಬಹುದು. ಮುಂದೆ ಉಪಯೋಗಕ್ಕೆಂದು ಇಟ್ಟಿದ್ದ ಹಣವು ಖಾಲಿಯಾಗಲಿದೆ. ವಿರುದ್ಧ ಆಹಾರವನ್ನು ಸ್ವೀಕರಿಸಿ ಅನಾರೋಗ್ಯವನ್ನು ತಂದುಕೊಳ್ಳಬಹುದು. ಆಯ್ಕೆಯ ಗೊಂದಲದಿಂದ ಚಿಂತೆಗೊಳ್ಳಬಹುದು. ಖರೀದಿಯನ್ನು ಆದಷ್ಟು ಕಡಮೆ ಮಾಡುವುದು ಉತ್ತಮ. ಸಹಾಯಕ್ಕಾಗಿ ಬರುವವರ ಮೇಲೆ ಒಂದು ಕಣ್ಣಿರಲಿ. ಅಧ್ಯಾತ್ಮವನ್ನು ನಿಮ್ಮ ರಕ್ಷಣೆಗೆ ಬಳಸಿಕೊಳ್ಳಬಹುದು. ಆಪ್ತರಿಗೆ ನಿಮ್ಮ ಒಡಲಾಳವನ್ನು ಹೇಳಿಕೊಳ್ಳುವಿರಿ. ಧಾರ್ಮಿಕ ಆಚರಣೆಗಳಲ್ಲಿ ಹಿನ್ನಡೆ ಇರಲಿದೆ.

ಕುಂಭ: ಪ್ರೇಮಿಯ ಜಾಣತನದ ಮಾತಿಗೆ ಮಾರು ಹೋಗಿ ಮಾತು ಕೊಟ್ಟುಬಿಡಬಹುದು. ನಿಮ್ಮ‌ ಮೇಲೆ‌ ನಿಮಗೆ ನಿಗಾ ಇರಲಿ. ಕಛೇರಿಯ ವ್ಯವಹಾರಗಳು ಸಂಪೂರ್ಣವಾಗಿ ಅರ್ಥವಾಗದೇ ಏನನ್ನೂ ಮಾಡಲು ಹೋಗಬೇಡಿ. ಅಂತಿಮವಾಗಿ ನಿಮ್ಮ ತಲೆಗೇ ಬಂದೀತು. ಅತಿಯಾದ ಕೆಲಸದಿಂದ ಸುಸ್ತಾಗಿ ಜ್ವರ ಬರುವ ಸಾಧ್ಯತೆ ಇದೆ. ಅದಕ್ಕೂ ಮೊದಲೇ, ಬಾರದಂತೆ ಜಾಗರೂಕರಾಗಿರಿ, ಬೇಕಿದ್ದಲ್ಲಿ ವಿಶ್ರಾಂತಿ ಪಡೆಯಿರಿ. ಹೂಡಿಕೆಯ ಬಗ್ಗೆ ಮನಸ್ಸಿದ್ದರೂ ಅದು ಅರ್ಥವಾಗದೇ ಸುಮ್ಮನೇ ಇರುವಿರಿ. ಅಕಾರಣವಾಗಿ ಸುತ್ತಾಟ ಮಾಡಬಹುದು. ನಾರಾಯಣನ ಸ್ತೋತ್ರವನ್ನು ಮಾಡಿ.

ಮೀನ: ಸಂತೋಷದ ಅನಂತರ ದುಃಖ ಎಂಬ ಮೂಢನಂಬಿಕೆಯನ್ನು ಬಿಡಿ.‌ ಸಂತೋಷವಾಗಿ ದಿನವನ್ನು ಕಳೆಯಿರಿ. ಖರ್ಚಿಗೆ ಬರುವ ಎಲ್ಲ ಮಾರ್ಗವನ್ನೂ ನೀವು ನಿಲ್ಲಿಸುವಿರಿ. ಕೆಲಸಕ್ಕಾಗಿ ದೂರದ ಊರಿಗೆ ಹೋಗಬೇಕಾಗಬಹುದು. ಕೆಲಸಕ್ಕಾಗಿ ನೀವು ಕಾಯಬೇಕಾದೀತು. ಬಂಧುಗಳ‌ ಮನೆಯಲ್ಲಿ ಇಂದು ವಾಸ ಮಾಡಲಿದ್ದೀರಿ. ಪತ್ನಿಯ ಜೊತೆ ಕಲಹವಾಗಬಹುದು. ದ್ವೇಷವನ್ನು ಸಾಧಿಸಲು ಹೋಗುವುದಿಲ್ಲ. ಮರೆತು ಸಹಜಸ್ಥಿತಿಗೆ ಬರುವುದು ಒಳ್ಳೆಯದು. ಹನುಮಾನ್ ಚಾಲೀಸ್ ಪಠನವು ನಿನಗೆ ಶ್ರೇಯಃಪ್ರದವಾಗಲಿದೆ.

-ಲೋಹಿತಶರ್ಮಾ ಇಡುವಾಣಿ

Published On - 6:26 am, Tue, 9 May 23

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್