AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ: ಈ ರಾಶಿಯವರ ಸಂಬಂಧಿಗಳು ಕೆಲವು ಒತ್ತಡ ಸೃಷ್ಟಿಸಬಹುದು-ಎಚ್ಚರ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮಾರ್ಚ್ 17ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಈ ರಾಶಿಯವರ ಸಂಬಂಧಿಗಳು ಕೆಲವು ಒತ್ತಡ ಸೃಷ್ಟಿಸಬಹುದು-ಎಚ್ಚರ
ರಾಶಿ ಭವಿಷ್ಯ
TV9 Web
| Edited By: |

Updated on: Mar 17, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಮಾರ್ಚ್​​​​​ 17) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಪ್ರೀತಿ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಸಾಯಂಕಾಲ 05:12 ರಿಂದ ಮಧ್ಯಾಹ್ನ 06:42ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:41 ರಿಂದ ಸಂಜೆ 02:11ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:42 ರಿಂದ 05:12 ರ ವರೆಗೆ.

ಸಿಂಹ ರಾಶಿ : ಇಂದು ನೀವು ಯಾವ ಸಂದರ್ಭದಲ್ಲಿಯೂ ಖಿನ್ನತೆಗೆ ಸಿಲುಕದಂತೆ ನಿಮ್ಮನ್ನು ನೀವು ರಕ್ಷಿಸಿಕೊಳ್ಳಬೇಕಿದೆ. ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆ ಗೌಪ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಸಂಗಾತಿಯು ಇಂದು ಮನೆಯಲ್ಲಿ ಸಂತೋಷ-ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತಾರೆ. ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಏನಾದರೂ ಹೇಳಲು ಬರಬಹುದು. ಕಾರ್ಯದಲ್ಲಿ ಎಲ್ಲವೂ ನಿಮ್ಮ ಪರವಾಗಿದ್ದಂತೆ ತೋರುತ್ತದೆ. ಇತರರ ಜೊತೆ ನೀವು ಸಮಯವನ್ನು ಹಾಳು ಮಾಡಿಕೊಳ್ಳುವಿರಿ. ಶತ್ರುಗಳು ನಿಮ್ಮನ್ನು ಗೆಲ್ಲಲು ಪ್ರಯತ್ನಿಸಬಹುದು.‌ ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ. ನಿಮಗೆ ಸಿಕ್ಕ ಅನಾದರದಿಂದ ಬೇಸರಗೊಳ್ಳುವಿರಿ. ಮಕ್ಕಳ ಉದ್ಯಮಕ್ಕೆ ನೀವು ಸಹಾಯ ಮಾಡುವಿರಿ. ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವು ಆಗಬಹುದು. ಧನಾತ್ಮಕ ಚಿಂತನೆಯಿಂದ ಕಳೆದುಕೊಂಡ ಉತ್ಸಾಹವು ಮತ್ತೆ ಬರುವುದು.

ಕನ್ಯಾ ರಾಶಿ : ನೀವು ಇಂದು ಮಾನಸಿಕವಾಗಿ ಅತ್ಯಂತ ದುರ್ಬಲರಾದಂತೆ ಕಾಣಿಸುವುದು. ಆದ್ದರಿಂದ ನೀವು ನೋವಿನಲ್ಲಿ ಒದ್ದಾಡುವ ಸಂದರ್ಭಗಳಿಂದ ಹೆಚ್ಚು ಇರುವುದು. ದೊಡ್ಡ ಯೋಜನೆಗಳಿಂದ ನಿಮ್ಮ ಗಮನ ಸೆಳೆಯುವರು. ಯಾವುದೆಅದರೂ ಹೂಡಿಕೆ ಮಾಡುವ ಮೊದಲು ವ್ಯಕ್ತಿಯ ಪ್ರಾಮಾಣಿಕತೆಯನ್ನು ಪರೀಕ್ಷಿಸಿ. ಸಂಬಂಧಿಗಳು ಕೆಲವು ಒತ್ತಡ ಸೃಷ್ಟಿಸಬಹುದು. ಪರಿಸ್ಥಿತಿಯನ್ನು ನಿಯಂತ್ರಿಸಲು ನಿಮ್ಮ ಶಾಂತತೆ ಕಾಯ್ದುಕೊಳ್ಳಿ. ಯಾವುದೇ ಆತುರದ ನಿರ್ಧಾರ ನಿಮಗೆ ದುಬಾರಿಯಾಗುತ್ತದೆ. ಇಂದು ನಿಮ್ಮ ಪ್ರಿಯತಮೆ ಉಡುಗೊರೆಗಳ ಜೊತೆ ನಿಮ್ಮ ಸ್ವಲ್ಪ ಸಮಯವನ್ನೂ ಅಪೇಕ್ಷಿಸಬಹುದು. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು ಅವುಗಳನ್ನು ಹಾಳುಮಾಡಬಹುದು. ಒಡಕುಗಳಿಗೆ ಅವಕಾಶವನ್ನು ಕೊಡುವುದು ಬೇಡ. ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ವಾಹನವನ್ನು ಖರೀದಿಸಲು ನೀವು ಸಮಯದ ನಿರೀಕ್ಷೆಯಲ್ಲಿ ಇರುವಿರಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು.

ತುಲಾ ರಾಶಿ : ಮಕ್ಕಳು ನಿಮ್ನ ಇಚ್ಛೆಯಂತೆ ನಡೆದುಕೊಳ್ಳುವುದಿಲ್ಲ ಎಂಬ ಕೋಪವು ಇರುತ್ತದೆ. ಕೋಪವು ಇಂದು ನಿಯಂತ್ರಣ ತಪ್ಪಿ ಬರಬಹುದು. ಇಂದು ಆದ ಆಯಾಸದಿಂದ ಶಕ್ತಿಯು ಕುಂಠಿತವಾಗುವುದು. ತುರ್ತು ನಿರ್ಧಾರ ತೆಗೆದುಕೊಳ್ಳುವ ಶಕ್ತಿಯು ಕಡಿಮೆ ಇರುವುದು. ಯಾವುದನ್ನೂ ಬೇಗನೆ ಅರ್ಥ ಮಾಡಿಕೊಳ್ಳಲು ಸಾಧ್ಯವಾಗದು. ಇಂದು ಹಣದ ನಷ್ಟವು ಸಂಭವಿಸಬಹುದು. ವಹಿವಾಟುಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಜಾಗರೂಕರಾಗಿದ್ದಷ್ಟು ಉತ್ತಮ. ಇಂದು ನಿಮ್ಮ ಅತ್ಯುತ್ತಮ ನಡವಳಿಕೆಯಿಂದ ಖ್ಯಾತಿಯನ್ನು ಪಡೆಯುವಿರಿ. ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಃಸ್ಥಿತಿಯನ್ನು ಹೊಂದಿರುತ್ತಾರೆ. ದಾಯಾದಿ ಕಲಹವು ತಾರಕಕ್ಕೆ ಹೋಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರಬಹುದು. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂದರ್ಭವು ಇದೆ. ಹಠವನ್ನು ಬಿಟ್ಟರೆ ಸಂತೋಷದ ಸಂಗತಿಗಳು ನಿಮ್ಮ ಹುಡುಕಿಕೊಂಡು ಬರಬಹುದು.

ವೃಶ್ಚಿಕ ರಾಶಿ : ನೀವು ಇಂದು ಕೆಲವರಿಗೆ ಸ್ವಾರ್ಥಕ್ಕಾಗಿ ಕೆಲವನ್ನು ಮಾಡಿಕೊಡಬೇಕಾಗಬಹುದು. ನಿಮ್ಮ ಊಹಾ ಶಕ್ತಿಯು ನಿಮ್ಮ ದಾರಿಯನ್ನು ತಪ್ಪಿಸಬಹುದು. ಎಲ್ಲ ಹೂಡಿಕೆಗಳನ್ನು ಅತ್ಯಂತ ಎಚ್ಚರಿಕೆಯಿಂದ ಮಾಡಬೇಕಾಗುವುದು. ನಿಮ್ಮ ಸಾಮಾಜಿಕ ಜೀವನವನ್ನು ಬಹಳ ಮುತುವರ್ಜಿಯಿಂದ ನಿಭಾಯಿಸಬೇಕು. ನಿಮ್ಮ ಬಿಡುವಿರದ ಕೆಲಸದಿಂದ ಸ್ವಲ್ಪ ಸಮಯ ತೆಗೆದುಕೊಳ್ಳಿ. ಕುಟುಂಬದ ಜೊತೆಗೆ ಯಾವುದಾದರೂ ಸಮಾರಂಭಕ್ಕೆ ಹೋಗುವಿರಿ. ಸಂಗಾತಿಯ ಪ್ರೀತಿ ನಿಜವಾಗಿಯೂ ಭಾವುಕವಾದುದು ಎಂದು ಗೊತ್ತಾಗುವುದು. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಿ ಒಪ್ಪಿಕೊಳ್ಳಿ. ಮಕ್ಕಳಿಗೆ ವಿದೇಶದಲ್ಲಿ ವಿದ್ಯಾಭ್ಯಾಸವನ್ನು ಕೊಡುವ ಮನಸ್ಸಿರುವುದು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಮಂಗಲ ಕಾರ್ಯಕ್ಕೆ ಸಾಲವನ್ನು ಮಾಡಬೇಕಾಗುವುದು. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು. ವ್ಯಾಪಾರಸ್ಥರಿಗೆ ಸಾಮಾನ್ಯವಾಗಿ ಇರುವುದು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ