AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ: ವಾಹನ ಚಲಾಯಿಸುವಾಗ ಎಚ್ಚರ ಇರಲಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮಾರ್ಚ್​​​​​ 16ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ವಾಹನ ಚಲಾಯಿಸುವಾಗ ಎಚ್ಚರ ಇರಲಿ
ರಾಶಿ ಭವಿಷ್ಯ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Mar 16, 2024 | 12:45 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ (ಮಾರ್ಚ್​​​​​ 16) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶನಿ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ರೋಹಿಣೀ, ಯೋಗ : ವಿಷ್ಕಂಭ, ಕರಣ : ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 41 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:41 ರಿಂದ ಮಧ್ಯಾಹ್ನ 11:11ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:11 ರಿಂದ ಸಂಜೆ 03:42ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:41 ರಿಂದ 08:11 ರ ವರೆಗೆ.

ಧನು ರಾಶಿ : ಇಂದು ನಿಮ್ಮ ಬಿಡುವಿಲ್ಲದ ಒತ್ತಡದಲ್ಲಿಯೂ ನಿಮ್ಮ ವೈಯಕ್ತಿಕ ಕಾರ್ಯವನ್ನು ಮಾಡಿಕೊಳ್ಳುವಿರಿ. ಭೂಮಿಗೆ ಸಂಬಂಧಿಸಿದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ಅಗತ್ಯಕ್ಕಿಂತ ಹೆಚ್ಚು ಸಮಯವನ್ನು ಸ್ನೇಹಿತರ ಜೊತೆ ಕಳೆಯುವುದರಿಂದ ಭವಿಷ್ಯದಲ್ಲಿ ಕೆಲವು ಅನಿರೀಕ್ಷಿತ ಸವಾಲುಗಳ ಬಗ್ಗೆ ತಿಳಿಯುವಿರಿ. ಆದರೆ ಒಂದು ಮಿತಿಯಲ್ಲಿ ಇರಲಿ. ಬಹಳ ದಿನಗಳ ಅನಂತರ ಸಹೋದರರ ಭೇಟಿಯಾಗಲಿದ್ದು, ಸಂತೋಷವು ಇಮ್ಮಡಿಸುವುದು. ಸಕಾರಾತ್ಮಕವಾಗಿ ಚಿಂತಿಸಿ ಕಾರ್ಯದಲ್ಲಿ ತೊಡಗಿಕೊಳ್ಳಿ. ಗೃಹ ನಿರ್ಮಾಣದಂತಹ ಕಾರ್ಯಕ್ಕೆ ಕೈ ಹಾಕುವುದು ಬೇಡ. ತೀರ್ಥ ಕ್ಷೇತ್ರದಲ್ಲಿ ವಾಸಮಾಡುವ ಸಂದರ್ಭವು ಬರಬಹುದು. ಪುಣ್ಯವೆಂದು ಭಾವಿಸಿ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಇಂದು ಸೇವಿಸುವ ಆಹಾರದ ಬಗ್ಗೆ ನಿಮಗೆ ಸರಿಯಾದ ನಿಗಾ ಇರಲಿ.

ಮಕರ ರಾಶಿ : ನಿಮ್ಮ ಅನಗತ್ಯ ಆಲೋಚನೆಗಳು ನಿಮ್ಮನ್ನು ಒಂದೆಡೆ ಕುಳಿತುಕೊಳ್ಳಲು ಬಿಡದು. ನೀವೇ ಮಾಡಿಕೊಂಡ ಎಡವಟ್ಟಿನಿಂದ ತೊಂದರೆಯನ್ನು ಅನುಭವಿಸಬೇಕಾಗುವುದು. ಹಣವನ್ನು ಕೊಟ್ಟು ಅನಂತರ ಅವರ ಮೇಲೆ‌ ಸಂಶಯಪಡುವ ಅಗತ್ಯವಿಲ್ಲ. ಮನೆಯಲ್ಲಿಯೇ ಕುಳಿತು ಉದ್ಯೋಗವನ್ನು ಮಾಡಿ ಆರ್ಥಿಕತೆಯನ್ನು ಸುಧಾರಿಸಿಕೊಳ್ಳುವಿರಿ. ಅಧಿಕ ಖರ್ಚನ್ನು ನಿಯಂತ್ರಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಸಲಹೆಯನ್ನು ಏಕಚಿತ್ತದಿಂದ ಸ್ವೀಕರಿಸಿ, ನಿಮ್ಮ ವಿವೇಕದಿಂದ ಬಳಸಿಕೊಳ್ಳಿ. ಅನ್ಯರಿಂದ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸನ್ನಿವೇಶವು ಬರಬಹುದು. ಯಾರಾದರೂ ನಿಮ್ಮನ್ನು ಯಾವುದಾದರೂ ಕಾರ್ಯಕ್ಕೆ ಪ್ರೋತ್ಸಾಹಿಸಬಹುದು. ನಿಮ್ಮ ಬಗ್ಗೆ ನಿಮಗೆ ಗೊತ್ತಿರಲಿ. ಎಲ್ಲವೂ ನಿಮ್ಮಿಂದ ಆದರೂ ಹೇಳಿಕೊಳ್ಳುವಾಗ ಗೌಣವಾಗಿರಲಿ. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಿ ಅನಂತರ ಗಂಭೀರವಾಗುವುದು.

ಕುಂಭ ರಾಶಿ : ಇಂದು ನಿಮ್ಮ ಆರೋಗ್ಯವನ್ನು ಅಷ್ಟು ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಹೂಡಿಕೆಯ ಸಮಯದಲ್ಲಿ ವ್ಯತ್ಯಾಸ ಆದ ಕಾರಣ ನಷ್ಟ ಮಾಡಿಕೊಳ್ಳುವಿರಿ. ನಿಮ್ಮ ಅನುಭವವೇ ಎಲ್ಲದಕ್ಕೂ ಮೂಲವಾದ ಕಾರಣ ಅದನ್ನು ಆಧಾರ ಸಹಿತವಾದ ಪ್ರಸ್ತುತಪಡಿಸಿ. ವ್ಯಾವಹಾರಿಕ ದಾಖಲೆಗಳನ್ನು ನೀವು ಭದ್ರವಾಗಿ ಇರಿಸಿಕೊಳ್ಳಿ. ಕಲಿಕೆಯಲ್ಲಿ ಚುರುಕುತನವನ್ನು ರೂಢಿಸಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮಾನಸಿಕವಾಗಿ ಸದೃಢರಾಗುವಿರಿ. ನೀವು ಅಂದಿಕೊಂಡಂತೆ ಸಹೋದರಿಯರಿಂದ ಸಹಕಾರ ದೊರೆಯುವುದಿಲ್ಲ. ಮೈಯ್ಯಲ್ಲ ಕಣ್ಣಿದ್ದರೂ ನಿಮಗೆ ವಂಚಿಸುವವರು ಇರುವರು. ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕಳೆದುಕೊಂಡು ವಸ್ತುವಿನ ಮೌಲ್ಯವು ಇಂದು ಗೊತ್ತಾಗುವುದು.

ಮೀನ ರಾಶಿ : ಇಂದು ನಿಮ್ಮ ಆಪತ್ಕಾಲದ ಸ್ಥಿತಿಯು ಸಾಲವನ್ನು ಯಾರಿಂದಲಾದರೂ ಪಡೆಯುವಂತೆ ಮಾಡುವುದು. ನಿಮ್ಮ ಆಪ್ತರಿಗೆ ನಿಮ್ಮಿಂದ ಉಡುಗೊರೆ ಸಿಗಲಿದೆ. ಆತ್ಮವಿಶ್ವಾಸದಿಂದ ಇಡುವ ಹೆಜ್ಜೆಗಳು ನಿಮ್ಮ ಗೆಲುವಿನ‌ ಮೈಲುಗಲ್ಲಾಗಲಿವೆ. ಹೆಚ್ಚಾಗಲಿದ್ದು ಉದ್ಯೋಗ ವ್ಯವಹಾರದಲ್ಲಿ ಪ್ರಗತಿಯ ಹಾದಿಗಳು ತೆರೆಯಲಿವೆ. ಕಲಿತ ವಿದ್ಯೆಯ ಪ್ರದರ್ಶನಕ್ಕೆ ಅವಕಾಶವು ಸಿಗಲಿದೆ. ಆಧ್ಯಾತ್ಮಿಕ ಚಿಂತನೆಗಳಿಂದ ಮನಸ್ಸಿಗೆ ಶಾಂತತೆಯನ್ನು ಪಡೆಯುವಿರಿ. ವ್ಯಾಪಾರದ ಆದಾಯಕ್ಕೆ ನಿಮ್ಮದೇ ತಂತ್ರವನ್ನು ಬಳಸುವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ನಿಮ್ಮ ಪರಿಶ್ರಮಕ್ಕೆ ತಕ್ಕಷ್ಟು ಹಣ ಬರದೆ ತೊಂದರೆ ಅನುಭವಿಸುವಿರಿ. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ನಿಮಗೆ ಆತ್ಮತೃಪ್ತಿಯು ಇರುವುದು. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ಕಾನೂನಾತ್ಮಕ ಹೋರಾಟಕ್ಕೆ ನಿಮಗೆ ಯಾರಿಂದಲಾದರೂ ಬೆಂಬಲವು ಇರುವುದು.

-ಲೋಹಿತ ಹೆಬ್ಬಾರ್ – 8762924271 (what’s app only)