Horoscope: ಈ ರಾಶಿಯವರು ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 01, 2024 | 12:30 AM

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜುಲೈ.01 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಿ
ರಾಶಿ ಭವಿಷ್ಯ
Follow us on

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸೋಮವಾರ (ಜುಲೈ.01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ನವಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಅತಿಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 07:46 ರಿಂದ ರಾತ್ರಿ 09:23ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:59 ರಿಂದ 12:37ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:14 ರಿಂದ 03:51ರ ವರೆಗೆ.

ಸಿಂಹ ರಾಶಿ: ಇಂದು ಮನೆಯ ನಿರ್ಮಾಣದ ಕಾರ್ಯಕ್ಕೆ ನಿಮ್ಮವರಿಂದ ತೊಂದರೆ ಬರಬಹುದು. ಯಾರಾದರೂ ನಿಮ್ಮ ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಸದೇ ತೊಂದರೆಗಳನ್ನು ಕೊಡಬಹುದು. ತಾಯಿಯ ಸೇವೆಯನ್ನು ಮಾಡುವಿರಿ. ಸರ್ಕಾರಿ ಉದ್ಯೋಗದವರಿಗೆ ಕಛೇರಿಯಲ್ಲಿ ಕಿರಿಕಿರಿಯಾಗಬಹುದು. ಬಂಧುಗಳ ಮಾತಿನಿಂದ ಬೇಸರವಾದರೂ ಅದನ್ನು ತೋರಿಸಿಕೊಳ್ಳುವುದಿಲ್ಲ. ನಿಮ್ಮ ಮಕ್ಕಳು ನಿಮಗೇ ತಿರುಗಿ ಉತ್ತರ ನೀಡುವರು. ಒಳಿತು ಎರಡೂ ಕಡೆಯಲ್ಲಿದ್ದರೆ ಚೆಂದ. ಊಹೆಗೂ ಮೀರಿದ ಧನಲಾಭವು ಆಗಬಹುದು. ಇನ್ನೊಬ್ಬರ ಬಗ್ಗೆ ಚಿಂತಿಸುವ ಬದಲು ನಿಮ್ಮ ಬಗ್ಗಯೇ ಆಲೋಚಿಸಿ. ಒಂದಿಷ್ಟು ಬದಲಾವಣೆಗಳು ಆಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ. ವಿವಾಹದ ಬಗ್ಗೆ ಎಲ್ಲರೂ ನಿಮ್ಮನ್ನು ಪ್ರಶ್ನಿಸುವರು. ಮುಜುಗರಕ್ಕೆ ಸಿಕ್ಕಿಕೊಳ್ಳಬೇಕಾದೀತು.

ಕನ್ಯಾ ರಾಶಿ: ಇಂದು ನಿಮಗೆ ಗೊಂದಲಗಳಿಂದ ವೃತ್ತಿಯನ್ನು ನಿರ್ಧರಿಸಲು ಕಷ್ಟವಾದೀತು. ಹೊಸ ಕೆಲಸಗಳನ್ನು ಹುಡುಕಲು ಪ್ರಯತ್ನಿಸಿ‌. ಸಂಗಾತಿಯಿಂದ ಅಪಮಾನವೂ ಆಗಬಹುದು. ಆಸ್ತಿಯನ್ನು ಕಳೆದುಕೊಳ್ಳುವ ಸ್ಥಿತಿ ಬರಬಹುದು. ಆಗದ ಕೆಲಸಕ್ಕೆ ಸುಮ್ಮನೇ ಕೈ ಹಾಕಬೇಡಿ. ಅಧಿಕಾರಿಗಳಿಂದ ಏನಾದರೂ ತೊಂದರೆಯಾದೀತು. ಲೆಕ್ಕಪತ್ರದ ವಿಚಾರದಲ್ಲಿ ಸರಿಯಾಗಿರಿ. ನಿಮ್ಮನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಪಡಬೇಕಾದೀತು. ಬಂಧುಗಳಿಂದ ದೂರವಿರುವ ಮನಸ್ಸು ಮಾಡುವಿರಿ. ಹಣಕಾಸಿನ ತೊಂದರೆಯಿಂದ ಕೆಲವು ಕೆಲಸಗಳನ್ನು ಮುಂದೂಡುವಿರಿ. ಖರೀದಿಯ ವಿಚಾರದಲ್ಲಿಯೂ ಹಿಂಜರಿಯುವಿರಿ. ನೇರವಾದ ಮಾತುಗಳು ನಿಮಗೆ ಒಪ್ಪಿಗೆ ಆಗದೇಹೋಗಬಹುದು. ಅಧಿಕ ಲಾಭಕ್ಕೆ ಯೋಜನೆಯನ್ನು ರೂಪಿಸುವುದು ಒಳ್ಳೆಯದು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು. ಕೋಪದಿಂದ ಎಲ್ಲವನ್ನೂ ಸಾಧಿಸಲಾಗದು.

ತುಲಾ ರಾಶಿ: ಇಂದು ಮಕ್ಕಳ ವಿಚಾರದಲ್ಲಿ ವಾಗ್ವಾದವು ದಾಂಪತ್ಯದಲ್ಲಿ ನಡೆದು ಇಬ್ಬರೂ ವೈಮನಸ್ಸಿನಿಂದ ಇರಬೇಕಾದೀತು. ಎಲ್ಲರ ಜೊತೆ ಸಲುಗೆಯಿಂದ ಇರುವ ನಿಮ್ಮ ಬಗ್ಗೆ ಕೆಲವು ಅಪವಾದದ ಮಾತುಗಳು ಕೇಳಿಬರಬಹುದು. ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ ಸಿಗುವ ಸಾಧ್ಯತೆ ಇದೆ. ಸಿಟ್ಟೇ ನಿಮ್ಮ ಶತ್ರುವಾಗಿ ಕಾಡಬಹುದು. ಮಾಡುವ ಕೆಲಸದಲ್ಲಿ ನಿಧಾನವಾಗಿ ಜಯ ಸಿಗಲಿದೆ. ಆದರೆ ತಾಳ್ಮೆಯ ಅಗತ್ಯವಿದೆ. ಖರ್ಚು ಮಾಡುವಾಗ ಲೆಕ್ಕಾಚಾರ ಇರಲಿ. ಕಛೇರಿಯಲ್ಲಿ ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳು ಕೇಳಿಸಬಹುದು. ಬೇಸರಗೊಳ್ಳುವಿರಿ. ಆಲಸ್ಯದಿಂದ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಏಕಾಂಗಿಯಾಗಿ ಸುತ್ತುವುದು ಇಷ್ಟವಾಗುವುದು. ‌ನಂಬಿಕೆಯನ್ನು ಉಳಿಸಿಕೊಳ್ಳುವುದು ಕಷ್ಟವಾಗಬಹುದು.

ವೃಶ್ಚಿಕ ರಾಶಿ: ಇಂದು ನೀವು ಯಾರಿಗೂ ನೋವಾಗದಂತೆ ವರ್ತಿಸುವ ಯೋಚನೆ‌ ಮಾಡುವಿರಿ. ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಲು ಯಾರಾದರೂ ಸಹಾಯ ಮಾಡುವರು. ನಿಮ್ಮೊಳಗೆ ಇಂದು ವಿಚಿತ್ರವಾದ ಕೆಲವು ಆಲೋಚನೆಗಳು ಬರಲಿದ್ದು, ನಿಮಗೇ ಆಶ್ಚರ್ಯವೆನಿಸುವಂತೆ ಮಾಡುವುದು. ಹತ್ತಿರವರನ್ನು ನಿಮ್ಮ ಮಾತುಗಳಿಂದ ದೂರಮಾಡಿಕೊಳ್ಳುವಿರಿ. ಎಷ್ಟೋ ವರ್ಷದ ಸ್ನೇಹವು ಬೇರೆಯಾದೀತು. ಕಲ್ಪನೆಗಳಿಗೆ ರೂಪವನ್ನು ಕೊಡಲು ಹೋದರೆ ಅದು ಅಸಾಧ್ಯವಾದೀತು. ನಿಮ್ಮನ್ನು ನಡತೆಯ ಮೂಲಕ ಅಳೆಯುವರು. ಆರೋಗ್ಯವು ಕೆಡದಂತೆ ನೋಡಿಕೊಳ್ಳಿ. ಬಂಧುಗಳ ಮನೆಗೆ ಹೋಗಲಿದ್ದೀರಿ. ಕೆಲವನ್ನು ನೀವು ಬಿಡಲು ಸಾಧ್ಯವಾಗದು. ದಿನದ ಬಹಳ ಹೊತ್ತನ್ನು ಏಕಾಂತಸಲ್ಲಿ ಇರಬೇಕೆಂದು ನೀವಿಂದು ಬಯಸಬಹುದು. ಹೊಸ ವಸ್ತುಗಳನ್ನು ನೀವು ಯಾರದೋ ಮೂಲಕ ಪಡೆದುಕೊಳ್ಳುವಿರಿ. ಅಶ್ರದ್ಧೆಯನ್ನು ತೋರಿಸುವುದು ಬೇಡ.