ರಾಶಿ ಭವಿಷ್ಯ: ಹಣಕಾಸಿನ‌ ವಿಚಾರಕ್ಕಾಗಿ ಇಂದು ಅಪಮಾನವಾಗುವ ಸಾಧ್ಯತೆ ಇದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜುಲೈ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ರಾಶಿ ಭವಿಷ್ಯ: ಹಣಕಾಸಿನ‌ ವಿಚಾರಕ್ಕಾಗಿ ಇಂದು ಅಪಮಾನವಾಗುವ ಸಾಧ್ಯತೆ ಇದೆ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 05, 2024 | 12:30 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜುಲೈ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:00 ರಿಂದ 12:37ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 15:51 ರಿಂದ ಬೆಳಿಗ್ಗೆ17:28ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:47 ರಿಂದ 09:24ರ ವರೆಗೆ.

ಸಿಂಹ ರಾಶಿ : ಇಂದು ನೀವು ವಾಹನವನ್ನು ಚಲಾಯಿಸುವುದು ಬೇಡ. ಹೊಸ ಆದಾಯದ ಮೂಲವನ್ನು ಹುಡುಕುವುದು ಉತ್ತಮ. ಇದಕ್ಕೆ ಸಹೋದರನ ಬೆಂಬಲವೂ ಸಹಕಾರವೂ ಸಿಗಲಿದೆ. ಅನಗತ್ಯ ಓಡಾಟದಿಂದ ಶರೀರಕ್ಕೆ ಆಯಾಸವಾಗಬಹುದು. ನಿಮ್ಮ ವಾಹನವನ್ನು ಅಪರಿಚಿತರ ಕೈಗೆ ನೀಡಬೇಡಿ. ಇಂದು ನೀವು ಸೋಲನ್ನು ಒಪ್ಪಿಕೊಳ್ಳುವ ಮನಃಸ್ಥಿತಿಯಲ್ಲಿ ಇರುವುದಿಲ್ಲ. ಕೈಗೆ ಬಂದ ಹಣವು ಹೇಗೆ ಖರ್ಚಾಯಿತು ಎಂಬುದೇ ಊಹಾತೀತವಾಗುವುದು. ಅನೇಕ ಕ್ಷೇತ್ರಗಳಲ್ಲಿ ಬೆಳೆಯಬೇಕು ಎಂಬ ತುಡಿತ ಉಂಟಾಗಬಹುದು. ಯಾರ ಜೊತೆ ಸ್ಪರ್ಧೆಗೆ ಇಳಿಯೇ ನಿಮ್ಮ ಕೆಲಸವನ್ನು ಮುಂದುರಿಸುವುದು ಉತ್ತಮ. ರಾಜಕೀಯದಲ್ಲಿ ಸಂಪರ್ಕ ಪ್ರದೇಶವು ವಿಶಾಲವಾಗಿರುತ್ತದೆ. ನಿಮ್ಮ ರಕ್ಷಣೆಯಲ್ಲಿ ನೀವಿರಿ. ಯಾರಮೇಲೂ ಅವಲಂಬಿತವಾಗುವುದು ನಿಮಗೆ ಇಷ್ಟವಾಗದು. ಕೆಲವು ಹೊಸ ಅವಕಾಶಗಳನ್ನು ಪಡೆಯುವ ಪ್ರಯತ್ನವಿರುವುದು.

ಕನ್ಯಾ ರಾಶಿ : ಇಂದು ನಿಮ್ಮ ದುರಭ್ಯಾಸಗಳು ಇತರರಿಗೆ ಗೊತ್ತಾಗುವುದು. ಕುಟುಂಬದಲ್ಲಿ ಸಣ್ಣ ಮಟ್ಟಿನ ಕಲಹವೂ ಆದೀತು. ಉದ್ಯೋಗವನ್ನು ಬದಲಿಸುವುದು ನಿಮಗೆ ನಿತ್ಯದ ಕೆಲಸದಂತೆ ಸಲೀಸಾಗಬಹುದು. ಒಂದೇ ಉದ್ಯೋಗವನ್ನು ಹೆಚ್ವು ಕಾಲ ಮಾಡಲು ಇಷ್ಟ ಪಡದೇ ಬದಲಿಸುವಿರಿ. ರಾಜಕೀಯ ಪ್ರೇರಣೆಯಿಂದ ಕೆಲಸ‌ಮಾಡುವಿರಿ. ವಾತಾವರಣಕ್ಕೆ ಹೊಂದಿಕೊಳ್ಳುವ ಸ್ವಭಾವವನ್ನು ಬೆಳಿಸಿಕೊಳ್ಳಬೇಕಾಗಬಹುದು. ಏನೇ ಹೊಸದನ್ನು ಮಾಡಿದರೂ ಅದಕ್ಕೆ ನಿಮ್ಮರಿಂದಲೇ ತಡೆ ಬರಬಹುದು. ಸಾಂಸಾರಿಕ‌ ಜೀವನವನ್ನು ಬಹಳ ಗಂಭೀರವಾಗಿ ಸ್ವೀಕರಿಸಿದ್ದೀರಿ. ಸಂಧಿಗಳಲ್ಲಿ ನೋವುಗಳು ಹೆಚ್ಚಾಗಬಹುದು. ನಿಷ್ಕಾಳಜಿ ಮಾಡಬೇಡಿ. ನೀವು ಹೊಸ ಯೋಜನೆಯ ಬಗ್ಗೆ ಅಧಿಕ ಆಲೋಚನೆ ಇರಲಿದೆ. ಆಚಾತುರ್ಯದಿಂದ ಅನಂತರ ಪಶ್ಚಾತ್ತಾಪ ಪಡುವಿರಿ. ಯಾರ ಪ್ರೀತಿಯನ್ನೂ ಕಡೆಗಾಣಿಸುವುದು ಬೇಡ. ಸಂತಾನದ ಅಪೇಕ್ಷೆಯು ಫಲಿಸುವುದು.

ತುಲಾ ರಾಶಿ : ಇಂದು ನಿಮ್ಮ ಹಣವು ಬಲವಂತದಿಂದ ಬರಲಿದೆ. ವೈದ್ಯಕೀಯ ವೃತ್ತಿಯಲ್ಲಿ ಚುರುಕುತನ ಬೇಕಾಗಬಹುದು. ಕುಟುಂಬದಲ್ಲಿ ಮಂಗಲ ಕಾರ್ಯಗಳು ನಡೆಯಬಹುದು. ಸಂಗಾತಿಯ ಮಾತನ್ನು ಆಲಿಸಿ, ಇಲ್ಲವಾದರೆ ಸಿಟ್ಟಾದಾರು. ಮಕ್ಕಳ ವಿದ್ಯಾಭ್ಯಾಸ ಚಿಂತೆ ಕಾಡಬಹುದು. ಕಛೇರಿಯಲ್ಲಿ ನಿಮ್ಮ ಕೆಲಸವು ವೇಗವಾಗಿ ಮುಗಿದು ಆರಾಮಾಗಿ ಇರುವಿರಿ. ಆಪ್ತರಿಂದ ನಿಮಗೆ ಉಡುಗೊರೆ ಸಿಗಬಹುದು. ತಾಯಿಯ ಜೊತೆ ಹರಟೆ ಹೊಡೆದು ಅವರ ಮನಸ್ಸನ್ನು ಹಗುರ ಮಾಡುವಿರಿ. ಸಂಗಾತಿಗೆ ನಿಮ್ಮಿಂದ ಪ್ರಿಯವಾದುದು ಸಿಗಬಹುದು. ಮನಸ್ಸಿನ ದ್ವಂದ್ವಗಳನ್ನು ಸರಿದೂಗಿಸುವ ಸಾಮರ್ಥ್ಯವನ್ನು ಹೊಂದುವಿರಿ. ಆರ್ಥಿಕವಾದ ಕೆಲವು ವಿಚಾರಗಳಲ್ಲಿ ಗೌಪ್ಯತೆಯನ್ನು ಇಟ್ಟುಕೊಳ್ಳುವಿರಿ‌. ಬಂಧುಗಳ ಸಲಹೆಯು ಸಮಸ್ಯೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡಲು ನಿಮಗೆ ಸಹಾಯ ಮಾಡುತ್ತದೆ. ಅನಿರೀಕ್ಷಿತವಾಗಿ ದೂರದ ಊರಿಗೆ ಪ್ರಯಾಣ ಮಾಡಬೇಕಾಗಬಹುದು.

ವೃಶ್ಚಿಕ ರಾಶಿ : ಇಂದು ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ವ್ಯಯಿಸುವಿರಿ. ಬಹಳ ದಿನಗಳಿಂದ ಹೋಗಬೇಕು ಎಂದುಕೊಂಡ ಸ್ಥಳಗಳಿಗೆ ಹೋಗಿ ಬರುತ್ತೀರಿ. ಸಹೋದ್ಯೋಗಿಗಳಿಂದ‌ ಕಛೇರಿಯಲ್ಲಿ ನಿಮಗೆ ಒತ್ತಡ ಪರಿಸ್ಥಿತಿ ಬರಬಹುದು. ಇದನ್ನು ನೀವು ಸವಾಲಾಗಿ ಸ್ವೀಕರಿಸಿ ಸೈ ಎನಿಸಿಕೊಳ್ಳಲಿದ್ದೀರಿ. ಭೂಮಿಯ ವ್ಯವಹಾರವನ್ನು ಹೊಸದಾಗಿ ಆರಂಭಿಸುವಿರಿ. ನಿಮ್ಮ ಆಪ್ತವಲಯವು ಇನ್ನೂ ದೊಡ್ಡದಾಗಬಹುದು. ಭೂಮಿಯನ್ನು ಖರೀದಿಸಲು ಸ್ಥಳ ಪರಿಶೀಲನೆಗೆ ಹೋಗುವ ಸಾಧ್ಯತೆ ಇದೆ. ಯಾರಾದರೂ ಹಣಕಾಸಿನ‌ ವಿಚಾರಕ್ಕೆ ಬಂದರೆ ಅಪಮಾನ ಮಾಡುವ ಸಾಧ್ಯತೆ ಇದೆ. ನಿಮ್ಮ ಇಂದಿನ ಕಾರ್ಯವನ್ನು ಉತ್ಸಾಹದಿಂದ ಮಾಡುವಿರಿ. ಯಾರನ್ನೂ ಅವಲಂಬಿಸುವ ಯೋಜನೆಯನ್ನು ನೀವು ಬಿಡುವಿರಿ. ಸಣ್ಣ ವಿವಾದಗಳು ಆಗಬಹುದು.‌ ಅಲ್ಲಿಯೇ ಬಗೆಹರಿಸಿಕೊಳ್ಳಿ. ದೊಡ್ಡ ಮಾಡಿಕೊಳ್ಳುವುದು ಬೇಡ. ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ತರಲು ನೀವು ಕೋಪವನ್ನು ನಿಯಂತ್ರಣ ಮಾಡಿಕೊಳ್ಳಬೇಕಾಗಬಹುದು.

ತಾಜಾ ಸುದ್ದಿ