AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿತ್ಯ ಭವಿಷ್ಯ; ಈ ರಾಶಿಯವರಿಗೆ ನಿಮ್ಮ ಗುರಿಯ ಬಗ್ಗೆ ಸ್ಪಷ್ಟವಾದ ನಿರ್ಧಾರವಿರಲಿ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 15 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ನಿತ್ಯ ಭವಿಷ್ಯ; ಈ ರಾಶಿಯವರಿಗೆ ನಿಮ್ಮ ಗುರಿಯ ಬಗ್ಗೆ ಸ್ಪಷ್ಟವಾದ ನಿರ್ಧಾರವಿರಲಿ
ರಾಶಿ ಭವಿಷ್ಯ
TV9 Web
| Edited By: |

Updated on: May 15, 2024 | 12:15 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಆಶ್ಲೇಷ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ 12:29 ರಿಂದ 14:05ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:42 ರಿಂದ 09:18ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:29ರ ವರೆಗೆ.

ಮೇಷ ರಾಶಿ :ಇಂದು ಸ್ವಲ್ಪ ಮಟ್ಟಿಗೆ ಆರ್ಥಿಕ ಬೆಳವಣಿಗೆ ಕಾಣಿಸಿ ಸಮಾಧಾನವಾಗುವುದು. ಮನೆಯಲ್ಲಿರುವ ಮಕ್ಕಳಿಂದ ನಿಮಗೆ ಅನುಕೂಲವಾಗಲಿದೆ. ಪ್ರೇಮದಲ್ಲಿ ವಿಜಯಿಯಾಗುವಿರಿ. ವಿದ್ಯಾಭ್ಯಾಸದಲ್ಲಿ ನಿಮಗೆ ಸಮಾಧಾನ ಸಿಗಲಿದೆ. ಆಪ್ತರ ಮೇಲಿನ ನಂಬಿಕೆ ಹುಸಿಯಾಗುವುದು. ನಿಮ್ಮ ಬೆಳವಣಿಗೆಯು ಸಕಾರತ್ಮಕವಾಗಿದೆಯೇ ಎಂಬುದನ್ನು ಪರೀಕ್ಷಿಸಿ. ನಿರೀಕ್ಷೆಯ ಮಟ್ಟಕ್ಕೆ ಹೋಗುವುದು ಕಷ್ಟವಾದರೂ ಸ್ವಲ್ಪ ನೆಮ್ಮದಿಯು ಇರಲಿದೆ. ಸ್ತ್ರೀಯರಿಗೆ ಅಭದ್ರತೆಯು ಕಾಡಬಹುದು. ಮಕ್ಕಳ ವಿಚಾರದಲ್ಲಿ ನೀವು ಮೃದುವಾಗುವಿರಿ. ಹತ್ತರ ಜೊತೆ ಹನ್ನೊಂದು ಆಗದಂತೆ ನೀವೇ ನೋಡಿಕೊಳ್ಳಬೇಕು. ಹೆಚ್ಚು ಶ್ರಮ ವಹಿಸಬೇಕಾಗುವುದು. ಸಾಲವಾಗಿ ಯಾರಾದರೂ ಹಣ ಕೇಳಬಹುದು.

ವೃಷಭ ರಾಶಿ :ಇಂದು ನಿಮಗೆ ಬರಬೇಕಾದ ಹಣವು ಬಾರದೇ ಸಾಲ ಮಾಡುವ ಪರಿಸ್ಥಿತಿ ಬರಬಹುದು. ಆಹಾರ ವ್ಯತ್ಯಾಸದಿಂದ ಉದರ ಬಾಧೆ ಹೆಚ್ಚಾಗುವುದು. ಸರ್ಕಾರದ ಉದ್ಯೋಗದಲ್ಲಿ ಹೊಸ ಜವಾಬ್ದಾರಿಯನ್ನು ಪಡೆಯಬೇಕಾಗುವುದು. ನಿಮಗೆ ಸಂಬಂಧವಿಲ್ಲದ ವಸ್ತುಗಳನ್ನು ನೀವು ಇಟ್ಟುಕೊಳ್ಳುವುದು ಬೇಡ. ನಿಮ್ಮ ನಕಾರಾತ್ಮಕ ಜನಪ್ರಿಯತೆಯು ನಿಮಗೆ ಬೇಸರ ಕೊಡುವುದು. ಮಿತ್ರರ ಸಹಕಾರವನ್ನು ಬಹಳ ದಿನಗಳ ಅನಂತರ ಕೇಳುವಿರಿ. ಗೊಂದಲವು ನಿಮ್ಮ ಮನಸ್ಸನ್ನು ಹಾಳು ಮಾಡೀತು. ಯಾರನ್ನೂ ಅಪಮಾನ ಮಾಡುವುದು ಬೇಡ. ಅಪ್ರಯೋಜಕ ಮಾತುಗಳಿಗೆ ಕಿವಿಯಾಗುವಿರಿ. ನಿಮ್ಮ ಗುರಿಯ ಬಗ್ಗೆ ಸ್ಪಷ್ಟವಾದ ನಿರ್ಧಾರವಿರಲಿ. ಸ್ನೇಹಿತರಿಂದ ಉಡುಗೊರೆ ಸಿಗಬಹುದು. ನಿಮ್ಮನ್ನು ವಿರೋಧಿಸುವವರ ನಡುವೆ ಬೆಳೆಯಲು ಹಂಬಲಿಸುವಿರಿ. ಇಂದು ಒಂಟಿಯಾದಂತೆ ನಿಮಗೆ ಅನ್ನಿಸಬಹುದು. ಕೋಪವನ್ನು ಕಡಿಮೆ ಮಾಡಿಕೊಳ್ಳುವುದು ಕಷ್ಟವಾದೀತು.

ಮಿಥುನ ರಾಶಿ :ನೀವು ಪಾಲುದಾರಿಕೆಯಲ್ಲಿ ಹೂಡಿಕೆ ಮಾಡುವ ಯೋಜನೆ ಇರಲಿದೆ. ಪ್ರೀತಿಯಲ್ಲಿ ಅಂದುಕೊಂಡಷ್ಟು ಅನುಕೂಲವಾಗದಿದ್ದರೂ ಭರವಸೆ ಇರುವುದು. ಉದ್ಯೋಗ ಸ್ಥಳದಲ್ಲಿ ಕಿರಿಕಿರಿಯ ಕಾರಣ ಕಾರ್ಯವು ಸೂಚಿಸದೇ ಬಹಳ ಜಡರಾಗುವಿರಿ‌. ಸಂತೋಷದ ವಾತಾವರಣವು ಮನೆಯಲ್ಲಿ ಇರಲಿದೆ. ರಾಜಕಾರಣದಲ್ಲಿ ಬದಲಾವಣೆ ಆಗಬಹುದು. ಜನರ ಜೊತೆ ಬೆರೆಯಲು ಹಿಂದೇಟು ಹಾಕುವಿರಿ. ಅನಿರೀಕ್ಷಿತ ನಿಧಿಯ ನಿರೀಕ್ಷೆಯಲ್ಲಿ ಇರುವಿರಿ. ಅಂದುಕೊಂಡಿದ್ದರ ವಿರುದ್ಧ ನಡೆಯುವುದು ನಿಮಗೆ ಬೇಸರ ತರಿಸಬಹುದು. ಹಣವನ್ನು ಹೊಂದಿಸಲು ಕಷ್ಟವಾಗುವುದು. ನಿಮ್ಮ ವ್ಯಕ್ತಿತ್ವದ ಬಗ್ಗೆ ಇತರರು ಹೆಮ್ಮೆಪಡುವರು. ಉದ್ಯಮವನ್ನು ಬೇರೆ ರೀತಿಯಲ್ಲಿ ಮುಂದುವರಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುವಿರಿ. ಸಂಗಾತಿಯ ಜೊತೆ ಹಾರ್ದವಾದ‌ ಮಾತುಕತೆಗಳು ನಿಮಗೆ ಖುಷಿ ಕೊಡುವುದು. ಅನಾರೋಗ್ಯವು ನಿಮ್ಮ ಉತ್ಸಾಹವನ್ನು ಕಡಿಮೆ ಮಾಡುವುದು.

ಕಟಕ ರಾಶಿ :ನಿಮ್ಮ ಸಾಮರ್ಥ್ಯಕ್ಕೆ ಶತ್ರುಗಳು ತಾನಾಗಿಯೇ ಕಡಿಮೆಯಾಗುವರು. ತುರ್ತು ಆಗಬೇಕಾದ ಕೆಲಸವು ಆಗದೇ ಒತ್ತಡದಲ್ಲಿ ಇರುವಿರಿ. ಮಕ್ಕಳಿಗಾಗಿ ವಿಶೇಷ ಅಡುಗೆಯನ್ನು ಮಾಡುವ ಬಗ್ಗೆ ಆಲೋಚನೆ ಮಾಡುತ್ತೀರಿ. ಅನಾರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿ ಕೊನೆಗೆ ಪರಿಸ್ಥಿತಿ ಗಂಭೀರವಾಗುವುದು. ದೇವತೋಪಾಸನೆಯಿಂದ ಸಕಾರಾತ್ಮಕ ಮಾರ್ಗದಲ್ಲಿ ನೀವು ಇರುವಿರಿ. ಹಿತಶತ್ರುಗಳ ಕಾರಣದಿಂದ ಅವಕಾಶ ವಂಚಿತರಾಗುವಿರಿ. ದೀರ್ಘಕಾಲದ ಸಾಲ ಬಾಧೆಯಿಂದ ಮುಕ್ತರಾಗಿ ನಿಶ್ಚಿಂತರಾಗುವಿರಿ. ಅಧಿಕ ಚಿತ್ತಚಾಂಚ್ಯಲ್ಯವು ನಿಮ್ಮ ಜೊತೆಗಾರರಿಗೆ ಕಷ್ಟವಾದೀತು. ವಿರುದ್ಧಾಹರ ಸೇವಯು ನಿಮ್ಮ ಆರೋಗ್ಯವನ್ನು ಕೆಡಿಸಬಹುಸು. ವಿವಾಹಕ್ಕೆ ಸಂಬಂಧಿಸಿದಂತೆ ಓಡಾಟವನ್ನು ಮಾಡಬೇಕಾಗುವುದು. ದ್ವೇಷಭಾವವು ನಿಮ್ಮಲ್ಲಿ ಮೂಡಬಹುದು. ಆಂತರೀವಾಗಿ ನೀವು ಗಟ್ಟಿಯಾಗಬೇಕು.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?