AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಲಿದೆ

ಜನವರಿ 9ರಂದು ಜನ್ಮಸಂಖ್ಯೆ 4, 5, 6ರ ದೈನಂದಿನ ಭವಿಷ್ಯ ಇಲ್ಲಿದೆ. ಜನ್ಮಸಂಖ್ಯೆ 4ರವರು ಹಠಾತ್ ಬದಲಾವಣೆಗಳನ್ನು ಎದುರಿಸಬಹುದು, 5ರವರು ವ್ಯಾಪಾರದಲ್ಲಿ ಲಾಭ ಗಳಿಸಿದರೂ ಬಾಯಿಮಾತಿನ ವ್ಯವಹಾರದಿಂದ ಎಚ್ಚರವಿರಲಿ. ಆಹಾರ ಪದ್ಧತಿ ಬಗ್ಗೆ ಗಮನವಿರಲಿ. 6ರವರಿಗೆ ಶುಕ್ರವಾರ ಶುಭ ದಿನ. ವ್ಯಾಪಾರಿಗಳಿಗೆ ಬಂಪರ್ ಲಾಭ, ಆದರೆ ಐಷಾರಾಮಿ ಖರ್ಚು ನಿಯಂತ್ರಿಸಿ. ಈ ಸಂಖ್ಯಾಶಾಸ್ತ್ರ ಭವಿಷ್ಯ ನಿಮ್ಮ ದಿನವನ್ನು ಉತ್ತಮವಾಗಿ ಯೋಜಿಸಲು ಸಹಕಾರಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಲಿದೆ
ದಿನ ಭವಿಷ್ಯ
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Jan 09, 2026 | 12:39 AM

Share

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಹಠಾತ್ ಬದಲಾವಣೆಗಳಿಗೆ ಸಾಕ್ಷಿಯಾಗಲಿದ್ದೀರಿ. ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಬಹುದು, ಅದಕ್ಕೆ ಧೃತಿಗೆಡಬೇಡಿ. ಬದಲಿಗೆ ಸಿಕ್ಕ ಬಿಡುವಿನ ವೇಳೆಯನ್ನು ಬಾಕಿ ಉಳಿದ ಕೆಲಸ ಮುಗಿಸಲು ಬಳಸಿ. ತಾಂತ್ರಿಕ ದೋಷಗಳಿಂದಾಗಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ರಿಪೇರಿಗೆ ಬರಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಪೋಸ್ಟ್ ಹಾಕಿ ವಿವಾದ ಮೈಮೇಲೆ ಎಳೆದುಕೊಳ್ಳಬೇಡಿ. ಸರ್ಕಾರಿ ಕೆಲಸಗಳು ಸ್ವಲ್ಪ ನಿಧಾನಗತಿಯಲ್ಲಿ ಸಾಗಲಿವೆ, ತಾಳ್ಮೆಯೇ ಮುಖ್ಯ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ವ್ಯವಹಾರ ಹಾಗೂ ವ್ಯಾಪಾರದಲ್ಲಿ ‘ಬಾಯಿ ಮಾತಿನ ವ್ಯವಹಾರ’ ಇಂದು ಕೈಕೊಡಬಹುದು, ಎಲ್ಲವನ್ನೂ ಲಿಖಿತ ರೂಪದಲ್ಲಿ ಇಟ್ಟುಕೊಳ್ಳಿ. ದಲ್ಲಾಳಿ ಕೆಲಸ ಅಥವಾ ಕಮಿಷನ್ ಆಧಾರಿತ ಕೆಲಸ ಮಾಡುವವರಿಗೆ ದೊಡ್ಡ ಮೊತ್ತದ ಹಣ ಕೈ ಸೇರಲಿದೆ. ಪ್ರೀತಿ-ಪ್ರೇಮದ ವಿಚಾರದಲ್ಲಿ ಹೊಸ ಪ್ರಸ್ತಾವನೆ ಸಲ್ಲಿಸಲು ಇದು ಸಕಾಲವಲ್ಲ. ನಿಮ್ಮ ಆಹಾರ ಪದ್ಧತಿಯಲ್ಲಿ ಶಿಸ್ತು ತನ್ನಿ, ವಿಶೇಷವಾಗಿ ಹೊರಗಿನ ಆಹಾರ ಸೇವನೆಯಿಂದ ಹೊಟ್ಟೆಯ ಸಮಸ್ಯೆ ಕಾಡಬಹುದು. ಹಳೆಯ ಸಾಲ ವಸೂಲಿಗೆ ಪ್ರಯತ್ನಿಸಿ, ಯಶಸ್ಸು ಸಿಗಲಿದೆ. ನರ್ಸರಿ ನಡೆಸುತ್ತಿರುವವರಿಗೆ ಲಾಭವಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಇಂದಿನ ವಾರದವಾದ ಶುಕ್ರವಾರ ನಿಮ್ಮ ಜನ್ಮ ಸಂಖ್ಯೆಗೆ ಹೆಚ್ಚು ಪೂರಕವಾಗಿದೆ. ಸೌಂದರ್ಯವರ್ಧಕ, ಬಟ್ಟೆ ಅಥವಾ ಅಲಂಕಾರಿಕ ವಸ್ತುಗಳ ವ್ಯಾಪಾರಿಗಳಿಗೆ ‘ಬಂಪರ್’ ದಿನ. ಮನೆಯನ್ನು ನವೀಕರಿಸುವ ಬಗ್ಗೆ ಸಂಗಾತಿಯೊಂದಿಗೆ ಚರ್ಚಿಸುವಿರಿ. ಐಷಾರಾಮಿ ವಸ್ತುಗಳ ಮೇಲೆ ಅತಿಯಾದ ಖರ್ಚು ಮಾಡುವುದನ್ನು ನಿಯಂತ್ರಿಸಿ, ಇಲ್ಲದಿದ್ದರೆ ತಿಂಗಳ ಅಂತ್ಯಕ್ಕೆ ಆರ್ಥಿಕ ಮುಗ್ಗಟ್ಟು ಎದುರಾಗಬಹುದು. ಕಚೇರಿಯಲ್ಲಿ ಸ್ತ್ರೀ ಸಹೋದ್ಯೋಗಿಗಳಿಂದ ಸಹಾಯ ಲಭಿಸಲಿದೆ. ಶುಭ್ರವಾದ ಬಿಳಿ ಬಟ್ಟೆ ಧರಿಸುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಿಸಲಿದೆ.

ಲೇಖನ- ಎನ್‌.ಕೆ.ಸ್ವಾತಿ

Follow Us
Swathi NK
Swathi NK

ಸ್ವಾತಿ ಎನ್.ಕೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನೆಂಪೆ ಎಂಬ ಗ್ರಾಮದವರು. ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಮಲೆನಾಡಿನ ಅಡುಗೆ ಮಾಡುವ ಪದ್ಧತಿ ಇವೆಲ್ಲ ಆಸಕ್ತಿ, ಅಚ್ಚುಮೆಚ್ಚು. ಸಮುದ್ರದ ಪರಿಸರಕ್ಕೆ ಪ್ರವಾಸ ಹೋಗುವುದು, ಹೊಸ ಗ್ಯಾಜೆಟ್ ಗಳ ಬಗ್ಗೆ ತಿಳಿಯುವುದು ತುಂಬ ಇಷ್ವವಾದ ಸಂಗತಿ. ಪಡೆದಿರುವುದು ಕಾಮರ್ಸ್ ಡಿಗ್ರಿ. ಅಲ್ಪ ಕಾಲ ಅಲ್ಲಿಲ್ಲಿ ಕೆಲಸ ಮಾಡಿದ ಅನುಭವ ಜತೆಗಿದೆ. ಉಳಿದಂತೆ ಬೆಂಗಳೂರಲ್ಲಿ ಸದ್ಯದ ವಾಸ.

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?