AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 18ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಸವಿಸ್ತಾರ ಮಾಹಿತಿ ಇಲ್ಲಿದೆ. ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಜನ್ಮಸಂಖ್ಯೆಯವರಿಗೆ ಎದುರಾಗುವ ಸವಾಲುಗಳು ಮತ್ತು ಅವಕಾಶಗಳ ಬಗ್ಗೆ ಮಾಹಿತಿ ನೀಡಲಾಗಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ
ಸಂಖ್ಯಾಶಾಸ್ತ್ರ
ಸ್ವಾತಿ ಎನ್​ಕೆ
ಸ್ವಾತಿ ಎನ್​ಕೆ| Edited By: |

Updated on: Jan 18, 2026 | 12:15 AM

Share

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನೀವು ಮನೆಯಲ್ಲಿ ಹಳೆಯ ವಸ್ತುಗಳನ್ನು ವಿಂಗಡಿಸುವಾಗ ಅಥವಾ ಶುಚಿಗೊಳಿಸುವಾಗ ಪ್ರಮುಖವಾದ ದಾಖಲೆ ಅಥವಾ ಕಳೆದುಹೋಗಿದ್ದ ವಸ್ತುಗಳನ್ನು ಮರಳಿ ಪಡೆಯುವಿರಿ. ಸಂಜೆ ವೇಳೆ ಬಾಲ್ಯದ ಸ್ನೇಹಿತರ ಭೇಟಿಯಿಂದ ಮನಸ್ಸು ಹಗುರವಾಗಲಿದೆ. ನೀವು ತೆಗೆದುಕೊಳ್ಳುವ ನಿರ್ಧಾರವೊಂದು ಕುಟುಂಬದ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ದಾರಿಯಾಗಲಿದೆ. ವಿನಾಕಾರಣ ಬೇರೆಯವರ ಜಗಳದಲ್ಲಿ ಮಧ್ಯಸ್ಥಿಕೆ ವಹಿಸಲು ಹೋಗಬೇಡಿ. ನೀವು ಭವಿಷ್ಯದ ಯೋಜನೆಗಳ ಬಗ್ಗೆ ಚಿಂತನೆ ನಡೆಸಲು ಸೂಕ್ತ ಸಮಯ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಸಣ್ಣ ವಿಷಯಕ್ಕೂ ನೀವು ಅತಿಯಾಗಿ ಆಲೋಚಿಸಿ ದಿನದ ನೆಮ್ಮದಿ ಹಾಳುಮಾಡಿಕೊಳ್ಳುವ ಸಾಧ್ಯತೆ ಇದೆ. ಯಾರದೋ ಮಾತಿಗೆ ಮರುಳಾಗಿ ಇಂದು ಯಾವುದೇ ಹೊಸ ವಸ್ತುಗಳನ್ನು ಅಥವಾ ಎಲೆಕ್ಟ್ರಾನಿಕ್ ಉಪಕರಣಗಳನ್ನು ಖರೀದಿಸಬೇಡಿ. ನಿಮ್ಮ ಸೃಜನಶೀಲ ಹವ್ಯಾಸಗಳಿಗೆ ಮನೆಯವರಿಂದ ಪ್ರೋತ್ಸಾಹ ಸಿಗಲಿದೆ. ನೀರಿಗೆ ಸಂಬಂಧಿಸಿದ ಸ್ಥಳಗಳಿಗೆ ಭೇಟಿ ನೀಡುವಾಗ ಸ್ವಲ್ಪ ಜಾಗರೂಕರಾಗಿರುವುದು ಒಳಿತು. ನಿಮ್ಮ ಮನಸ್ಸು ಅಧ್ಯಾತ್ಮದ ಕಡೆಗೆ ಹೆಚ್ಚು ಒಲಿಯಲಿದೆ. ಕುಟುಂಬದವರೊಂದಿಗೆ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುವ ಸಂಭವವಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಹತ್ತಿರದ ಸಂಬಂಧಿಗಳ ಶುಭ ಸಮಾರಂಭದಲ್ಲಿ ಭಾಗವಹಿಸುವ ಯೋಗವಿದೆ. ದೀರ್ಘಕಾಲದ ನಂತರ ಹಿರಿಯರ ಆಶೀರ್ವಾದ ಪಡೆಯುವುದರಿಂದ ಮನಸ್ಸಿನ ಗೊಂದಲಗಳು ತಿಳಿಯಾಗಲಿವೆ. ನಿಮ್ಮ ಬುದ್ಧಿವಂತಿಕೆಯನ್ನು ಮೆಚ್ಚಿ ಯಾರಾದರೂ ಸಲಹೆ ಕೇಳಿ ಬರಬಹುದು. ಉದ್ಯೋಗದಲ್ಲಿರುವವರಿಗೆ ನಾಳೆಯ ಕೆಲಸದ ಸಿದ್ಧತೆಗಾಗಿ ಸ್ವಲ್ಪ ಸಮಯ ವ್ಯಯಿಸಬೇಕಾದ ಅನಿವಾರ್ಯ ಎದುರಾಗಬಹುದು. ಮನೆಯ ಶುಭ ಕಾರ್ಯಗಳ ಕುರಿತು ಚರ್ಚೆಗಳು ನಡೆಯಲಿವೆ. ಆರ್ಥಿಕವಾಗಿ ಇದು ಲಾಭದಾಯಕ ದಿನವಾಗಿದ್ದು, ಮಕ್ಕಳ ಅಗತ್ಯತೆಗಳಿಗಾಗಿ ಹಣ ವ್ಯಯಿಸುವಿರಿ.

ಲೇಖನ- ಸ್ವಾತಿ ಎನ್.ಕೆ.

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು