
ಈ ದಿನ ನಲವತ್ತೆಂಟು ಬಾರಿ ಓಂ ನಮಃ ಶಿವಾಯ ಎಂದು ಹೇಳಿಕೊಳ್ಳಿ. ನಿಮಗೆ ಕಾಡುವಂಥ ಹಿಂಜರಿಕೆ, ಅಭದ್ರತೆಯಿಂದ ಹೊರಬರುವುದಕ್ಕೆ ಇದರಿಂದ ಸಹಾಯ ಆಗುತ್ತದೆ. ಸಾಧ್ಯವಾದಲ್ಲಿ ಈಶ್ವರನ ದೇವಸ್ಥಾನಕ್ಕೆ ತೆರಳಿ ದರ್ಶನ ಕೂಡ ಪಡೆದುಕೊಳ್ಳಿ.
ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟ ಆಗಬಹುದು ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಇಷ್ಟು ಸಮಯ ನಿಮ್ಮನ್ನು ಬೇಕಂತಲೆ ರೇಗಿಸುತ್ತಿದ್ದವರು, ತಮಾಷೆ ಮಾಡುತ್ತಿದ್ದವರು ಗಾಬರಿ ಆಗುವ ಮಟ್ಟಕ್ಕೆ ನೀವು ಈ ದಿನ ಅವರಿಗೆ ಕಾಡಲಿದ್ದೀರಿ. ತಂದೆ- ತಾಯಿಯ ಪ್ರವಾಸಕ್ಕಾಗಿ ಹಣ ಖರ್ಚು ಮಾಡಲಿದ್ದೀರಿ.
ಯಾರ ಜತೆಗೆ ಹೆಚ್ಚಿನ ಸಮಯ ಕಳೆಯಬೇಕು ಎಂದು ಇಷ್ಟು ಸಮಯ ಬಯಸುತ್ತಾ ಇರುತ್ತೀರಿ ಅಂಥವರೊಂದಿಗೆ ದೀರ್ಘವಾದ ಒಡನಾಟ ಸಾಧ್ಯವಾಗಲಿದೆ. ಕಟ್ಟಡ ನಿರ್ಮಾಣ ಸಂಸ್ಥೆಗಳಲ್ಲಿ ಉದ್ಯೋಗಿಗಳಾಗಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಮೆಚ್ಚುಗೆ ಮಾತುಗಳು ಕೇಳಿಬರಲಿವೆ. ಇದರ ಜತೆಗೆ ಪ್ರಮುಖವಾದ ಪ್ರಾಜೆಕ್ಟ್ ಒಂದನ್ನು ನಿಮಗೆ ವಹಿಸುವ ಸಾಧ್ಯತೆಯೂ ಇದೆ.
ಹೊಸ ವ್ಯಾಪಾರವನ್ನು ಆರಂಭ ಮಾಡಲು ಬಂಡವಾಳ ಹೊಂದಿಸುವುದಕ್ಕೆ ಶ್ರಮ ಪಡುತ್ತಿದ್ದೀರಿ ಅಂತಾದಲ್ಲಿ ಶುಭ ಸುದ್ದಿ ಕೇಳಿಬರಲಿದೆ. ನಿಮಗೆ ಅನುಕೂಲ ಆಗಲಿ ಎಂಬ ಕಾರಣಕ್ಕೆ ಪ್ರಭಾವಿಯೊಬ್ಬರು ಶಿಫಾರಸು ಮಾಡುವುದಕ್ಕೆ ಮುಂದೆ ಬರಲಿದ್ದು, ಅವರಿಂದ ಹೇಗೆ ಪ್ರಯೋಜನ ಪಡೆದುಕೊಳ್ಳಬೇಕು ಎಂಬ ಆಲೋಚನೆಯೇ ಹೊಳೆಯದಂತೆ ಆಗಲಿದೆ. ಏಕಾಂಗಿತನ ಈ ದಿನ ನಿಮ್ಮನ್ನು ಕಾಡಲಿದೆ.
ಲೇಖನ- ಸ್ವಾತಿ ಎನ್.ಕೆ.