
ಚಂದ್ರಮೌಳೀಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಮಾಡಿ. ತೆಂಗಿನಕಾಯಿ, ಬಾಳೇಹಣ್ಣು, ಊದಿನಕಡ್ಡಿ, ಕರ್ಪೂರ ಇತ್ಯಾದಿಗಳನ್ನು ತೆಗೆದುಕೊಂಡು ಹೋಗಿ ಅರ್ಪಣೆ ಮಾಡಿ. ಅಥವಾ ಮನೆಯಲ್ಲಿಯೇ ಚಂದ್ರಮೌಳೀಶ್ವರ ಸ್ವರೂಪದಲ್ಲಿ ನೆನಪಿಸಿಕೊಂಡು ಇವೆಲ್ಲವನ್ನೂ ಅರ್ಪಿಸಿ.
ಪರ್ಸನಾಲಿಟಿ ಡೆವಲಪ್ ಮೆಂಟ್ ಸೆಷನ್ ಗಳಲ್ಲಿ ಭಾಗವಹಿಸುವ ನಿರ್ಧಾರ ಮಾಡುತ್ತೀರಿ. ನಿಮ್ಮ ಉದ್ಯೋಗ- ವೃತ್ತಿ ಜೀವನದಲ್ಲಿನ ಬದಲಾವಣೆಗಳು ನಿಧಾನವಾದರೂ ಸ್ಥಿರವಾಗಿ ಆಗಲಿದೆ. ಮನಸ್ಸಿನಲ್ಲಿ ನಡೆಯುತ್ತಿರುವ ಗೊಂದಲಕ್ಕೆ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ಸಂಬಂಧಗಳಲ್ಲಿನ ತಾಕಲಾಟಗಳಿಂದ ಹೊರಗೆ ಬರುವುದಕ್ಕೆ ಸಾಧ್ಯವಾಗಲಿದೆ. ಹಳೆಯ ವಿಚಾರಗಳು ಮತ್ತೆ ನೆನಪಾಗಲಿವೆ, ಆದರೆ ಅವುಗಳಿಂದ ಪಾಠ ಕಲಿಯುವ ಸಮಯ ಇದು.
ಕೆಲಸದ ವಿಷಯದಲ್ಲಿ ಅತಿಯಾದ ಆತುರ ಬೇಡ; ತಾಳ್ಮೆ ಮತ್ತು ಕ್ರಮಬದ್ಧ ಪ್ರಯತ್ನದಿಂದ ಯಶಸ್ಸಿನ ದಾರಿ ತೆರೆದುಕೊಳ್ಳುತ್ತದೆ. ಕುಟುಂಬದ ಒಳಗೆ ಖರ್ಚಿನ ವಿಚಾರದಲ್ಲಿ ಸಣ್ಣ- ಪುಟ್ಟ ಮಾತುಕತೆಗಳು ಆದರೂ ಸಂಯಮದಿಂದ ವರ್ತಿಸಿದರೆ ಸಮಸ್ಯೆಗಳು ಪರಿಹಾರ ಆಗುತ್ತವೆ. ಆರ್ಥಿಕವಾಗಿ ಎಚ್ಚರಿಕೆಯ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ. ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯೇ ಈ ದಿನ ನಿಮ್ಮ ಶಕ್ತಿಯಾಗಲಿದೆ.
ಕುಟುಂಬದೊಂದಿಗೆ ಉತ್ತಮವಾದ ಸಮಯವನ್ನು ಕಳೆಯುವ ಯೋಗ ಇದೆ. ನಿಮ್ಮ ಆಲೋಚನೆಗಳು ಹೆಚ್ಚು ಗಹನವಾಗಿ ಇರುತ್ತವೆ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಎರಡು ಬಾರಿ ಯೋಚಿಸುವ ನಿಮ್ಮ ಗುಣ ನಿಮಗೆ ಲಾಭ ತರುತ್ತದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯವನ್ನು ಗಮನಿಸಿ, ಪ್ರಮುಖ ಜವಾಬ್ದಾರಿ ವಹಿಸುವಂಥ ಸೂಚನೆ ಸಿಗಲಿದೆ.
ಲೇಖನ- ಸ್ವಾತಿ ಎನ್.ಕೆ.