AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜನವರಿ 2ರ ದಿನಭವಿಷ್ಯ

ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜನವರಿ 2ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜನವರಿ 2ರ ದಿನಭವಿಷ್ಯ
TV9 Web
| Updated By: Rakesh Nayak Manchi|

Updated on: Jan 02, 2023 | 6:15 AM

Share

ನಿಮ್ಮ ಜನ್ಮಸಂಖ್ಯೆ (Birth number)ಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯ (Daily Horoscope)ವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 2ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1: ಇನ್ನೊಬ್ಬರ ಸಹಾಯವನ್ನು ನಿರೀಕ್ಷಿಸಿ ಯಾವುದೇ ಕೆಲಸಕ್ಕೆ ಕೈ ಹಾಕಬೇಡಿ. ಅರ್ಧ ಕೆಲಸ ಈಗಾಗಲೇ ಮುಗಿದಿರುವಂಥದು ಮೊದಲಿಂದ ಆರಂಭಿಸಬೇಕಾಗುತ್ತದೆ. ಮನರಂಜನೆಗಾಗಿ ಹಣವನ್ನು ಖರ್ಚು ಮಾಡಲಿದ್ದೀರಿ. ಬಾಡಿಗೆ ಮನೆಯಲ್ಲಿ ಇರುವವರು ಬದಲಾವಣೆ ಮಾಡಲು ಆಲೋಚನೆ ಮಾಡಲಿದ್ದೀರಿ. ನಿಮಗಿಂತ ಹಿರಿಯರ ಜತೆಗೆ ಮಾತಾಡುವಾಗ ಮಾತಿನ ಮೇಲೆ ಹಿಡಿತ ಇರಲಿ.

ಜನ್ಮಸಂಖ್ಯೆ 2: ಹಣಕಾಸಿನ ಹರಿವು ಹೆಚ್ಚು ಮಾಡಿಕೊಳ್ಳುವುದಕ್ಕೆ ದಾರಿ ಗೋಚರ ಆಗಲಿದೆ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರ ಮೇಲೆ ನಂಬಿಕೆ ಇಡುವುದು ಮುಖ್ಯ. ಮಸಾಲೆಯುಕ್ತ ಪದಾರ್ಥಗಳನ್ನು ಸೇವನೆ ಮಾಡದಿರುವುದು ಉತ್ತಮ. ದಾಕ್ಷಿಣ್ಯಕ್ಕೆ ಸಿಲುಕಿಕೊಂಡು ಒಪ್ಪಿಕೊಂಡ ಕೆಲಸವನ್ನು ಮುಗಿಸುವುದು ಕಷ್ಟವಾಗುತ್ತದೆ. ಮಾಧ್ಯಮ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಸವಾಲಿನ ದಿನವಾಗಿರುತ್ತದೆ.

ಜನ್ಮಸಂಖ್ಯೆ 3: ನಿಮಗೆ ಅವಮಾನ ಆಗುವುದಕ್ಕೆ ಏನು ಬೇಕೋ ಅವೆಲ್ಲವನ್ನೂ ಶತ್ರುಗಳು ಮಾಡಲಿದ್ದಾರೆ. ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಪ್ರಗತಿ ಇದೆ. ಮೇಲಧಿಕಾರಿಗಳು ನಿಮಗೆ ವಹಿಸಿದ ಕೆಲಸವನ್ನು ಬೇರೆಯವರಿಗೆ ವರ್ಗಾಯಿಸಬೇಡಿ. ಬಡ್ತಿ, ವರ್ಗಾವಣೆ ನಿರೀಕ್ಷೆಯಲ್ಲಿ ಇರುವವರಿಗೆ ಆ ಬಗೆಗಿನ ಮಾಹಿತಿ ದೊರೆಯಲಿದೆ. ಕ್ರಿಯೇಟಿವ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಪ್ರಭಾವಿಗಳ ಪರಿಚಯ ಆಗಲಿದೆ.

ಜನ್ಮಸಂಖ್ಯೆ 4: ಎಲ್ಲ ಬದಲಾವಣೆಗಳು ಒಟ್ಟಿಗೆ ಮಾಡಿಕೊಳ್ಳಬೇಕಾದ ಅನಿವಾರ್ಯ ಎದುರಾಗಲಿದೆ. ಅದರ ಸಕಾರಾತ್ಮಕ ಫಲವನ್ನು ಕಾಣಲಿದ್ದೀರಿ. ಒಲ್ಲದ ಮನಸ್ಸಿನಿಂದ ವ್ಯಕ್ತಿಯೊಬ್ಬರಿಗೆ ಸಹಾಯ ಮಾಡಬೇಕಾಗಬಹುದು. ಯಾರ ಮೇಲೂ ದ್ವೇಷ ಸಾಧನೆ ಮಾಡದಿರಿ. ಸರ್ಕಾರದ ಕೆಲಸಗಳ ಗುತ್ತಿಗೆ ವಹಿಸಿಕೊಳ್ಳುವವರಿಗೆ ಹಣಕಾಸಿನ ಬಿಡುಗಡೆ ಆಗುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 5: ನಿಮ್ಮ ಆತ್ಮಾಭಿಮಾನಕ್ಕೆ ಪೆಟ್ಟು ಬೀಳುವಂಥ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ಯಾವುದೇ ವಿಷಯವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು, ತಕ್ಷಣದ ನಿರ್ಧಾರ ಅಥವಾ ಆತುರದ ನಿರ್ಧಾರಗಳನ್ನು ಮಾಡಬೇಡಿ. ಬೆಲೆಬಾಳುವ ವಸ್ತುವೊಂದನ್ನು ಎಲ್ಲೆಂದರಲ್ಲಿ ಇಟ್ಟು, ಮರೆತು ಹೋಗುವಂತಾಗುತ್ತದೆ. ಕುಟುಂಬದವರಿಗಾಗಿ ಹೆಚ್ಚಿನ ಸಮಯವನ್ನು ಮೀಸಲಿಡುವುದಕ್ಕೆ ಯತ್ನಿಸಿ.

ಜನ್ಮಸಂಖ್ಯೆ 6: ನಿಮ್ಮ ಸಲಹೆಗೆ ಇತರರು ಗೌರವ, ಬೆಲೆ ನೀಡಲಿದ್ದಾರೆ. ಸಂಗೀತಗಾರರು, ಸಿನಿಮಾ ಕ್ಷೇತ್ರದಲ್ಲಿ ಇರುವವರಿಗೆ ಸನ್ಮಾನಗಳಾಗುವ ಯೋಗ ಇದೆ. ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಒತ್ತಡದ ದಿನವಾಗಿರುತ್ತದೆ. ಗ್ಯಾಸ್ಟ್ರಿಕ್ ಸಮಸ್ಯೆ ಈಗಾಗಲೇ ಇದ್ದಲ್ಲಿ ಅದು ಉಲ್ಬಣಿಸಲಿದೆ. ಪ್ರೀತಿಪಾತ್ರರಿಗೆ ಉಡುಗೊರೆ ನೀಡುವುದಕ್ಕೆ ಹಣದ ಖರ್ಚಾಗಲಿದೆ. ಕಿರುಪ್ರವಾಸ ಯೋಗ ನಿಮಗಿದೆ. ‌ ಜನ್ಮಸಂಖ್ಯೆ 7: ನೀವು ಈ ಹಿಂದೆ ಹೇಳಿದ್ದ ಸುಳ್ಳಿನ ಫಲವನ್ನು ಈಗ ಅನುಭವಿಸಲಿದ್ದೀರಿ. ಮನೆಯವರ ಆರೋಗ್ಯಕ್ಕಾಗಿ ಹಣ ಖರ್ಚಾಗಲಿದೆ. ದೇವತಾರಾಧನೆಯಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಎಲ್ಲರೂ ಮೆಚ್ಚುವಂತೆ ನಡೆದುಕೊಳ್ಳುತ್ತೀನಿ ಅಂದುಕೊಳ್ಳದಿರಿ, ಇದರಿಂದ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ. ಶುಭ ಕಾರ್ಯಗಳಿಗಾಗಿ ಹಣವನ್ನು ಸಾಲ ಮಾಡಬೇಕಾಗುತ್ತದೆ. ಅಗತ್ಯಕ್ಕಿಂತ ಹೆಚ್ಚಿನ ಸಾಲ ಬೇಡ.

ಜನ್ಮಸಂಖ್ಯೆ 8: ಎಲ್ಲರೂ ನಿಮ್ಮನ್ನು ಗಮನಿಸುತ್ತಿರುವಂತೆ ಭಾಸ ಆಗುತ್ತದೆ. ಮದುವೆಗಾಗಿ ಪ್ರಯತ್ನಿಸುತ್ತಿರುವವರಿಗೆ ಸಂಬಂಧಿಕರ ಕಡೆಯಿಂದ ಸಹಾಯ ಅಥವಾ ನೆರವು ದೊರೆಯುತ್ತದೆ. ಯೋಗ/ಧ್ಯಾನಗಳಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯಲಿದೆ. ಕಣ್ಣಿನ ಸಮಸ್ಯೆಗಳು ಎದುರಾಗಬಹುದು. ಇತಿಹಾಸತಜ್ಞರು, ಪ್ರಾಚ್ಯವಸ್ತುಗಳ ಸಂಶೋಧಕರಿಗೆ ಮಹತ್ತರವಾದ ಸಾಧನೆಗೆ ಬೆಂಬಲ ಅಥವಾ ನೆರವು ದೊರೆಯಲಿದೆ.

ಜನ್ಮಸಂಖ್ಯೆ 9: ಇತರರ ವೈಯಕ್ತಿಕ ವಿಚಾರಗಳಿಗೆ ಮೂಗು ತೂರಿಸಬೇಡಿ. ಸ್ವ ಉದ್ಯೋಗಿಗಳಿಗೆ ಅಗತ್ಯವಾದ ಬಂಡವಾಳ ದೊರೆಯುವ ಸಾಧ್ಯತೆಗಳಿವೆ. ಎಚ್್ಆರ್ ಏಜೆನ್ಸಿಗಳಲ್ಲಿ ಕಾರ್ಯ ನಿರ್ವಹಿಸುವವರು, ಸೈನ್ಯದಲ್ಲಿ ಇರುವವರಿಗೆ ಬಡ್ತಿ ದೊರೆಯುವ ಅವಕಾಶ ಇದೆ. ಇಷ್ಟು ಸಮಯ ನಿಮಗೆ ಹವ್ಯಾಸ ಆಗಿದ್ದದ್ದು ಇನ್ನು ಮುಂದೆ ಸಮಪಾದನೆಗೆ ದಾರಿ ಆಗುವ ಮಾರ್ಗ ಕಂಡುಕೊಳ್ಳಲಿದ್ದೀರಿ.

ಲೇಖನ- ಎನ್‌.ಕೆ.ಸ್ವಾತಿ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು