AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 11ರ ದಿನಭವಿಷ್ಯ

ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 11ರ ಭಾನುವಾರದ ದಿನ ಭವಿಷ್ಯ(daily horoscope) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 11ರ ದಿನಭವಿಷ್ಯ
Numerology Prediction
TV9 Web
| Edited By: |

Updated on: Dec 11, 2022 | 5:50 AM

Share

ನಿಮ್ಮ ಜನ್ಮಸಂಖ್ಯೆಗೆ (Numerology Prediction) ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 11ರ ಭಾನುವಾರದ ದಿನ ಭವಿಷ್ಯ(daily horoscope) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1

ಸೈಟು, ಮನೆ ಅಥವಾ ಅಪಾರ್ಟ್‌ಮೆಂಟ್ ಖರೀದಿಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸೂಕ್ತವಾದದ್ದು ದೊರೆಯುವ ಅವಕಾಶ ಇದೆ. ಆದರೆ ಶೀತ, ಜ್ವರದಂಥ ಸಮಸ್ಯೆ ಕಾಡಬಹುದು, ಎಚ್ಚರಿಕೆಯಿಂದ ಇರಬೇಕು. ಈ ದಿನ ನೀವಿರುವ ಸಮೀಪದಲ್ಲಿ ಇರುವ ಭೂ ವರಾಹ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆಯಿರಿ.

ಜನ್ಮಸಂಖ್ಯೆ 2

ಮನಸ್ಸಿನಲ್ಲಿ ಒಂದು ಬಗೆಯ ಉಲ್ಲಾಸ ಇರುತ್ತದೆ. ಮಕ್ಕಳ ಜತೆಗೆ ಅಥವಾ ನಿಮಗಿಂತ ಚಿಕ್ಕ ವಯಸ್ಸಿನವರೊಂದಿಗೆ ಉತ್ತಮವಾದ ಸಮಯ ಕಳೆಯುವ ಅವಕಾಶ ಇದೆ. ಈ ದಿನದ ದ್ವಿತೀಯಾರ್ಧದಲ್ಲಿ ನಿಮ್ಮ ಮನೆಗೆ ಅತಿಥಿಗಳು ಭೇಟಿ ನೀಡುವ ಅವಕಾಶ ಇದೆ. ಇದರಿಂದ ಸಂಭ್ರಮ ಹೆಚ್ಚಾಗಲಿದೆ.

ಜನ್ಮಸಂಖ್ಯೆ 3

ಕೃಷಿಯನ್ನು ಮಾಡುತ್ತಿರುವವರಿಗೆ ಈ ದಿನ ವಿಶೇಷವಾಗಿರುತ್ತದೆ. ಮನೆಗೆ ಹೊಸದಾಗಿ ವಸ್ತುಗಳನ್ನು ತರುವ ಸಾಧ್ಯತೆ ಇದೆ. ಮತ್ತು ಇದಕ್ಕಾಗಿ ಸ್ವಲ್ಪ ಮೊತ್ತವನ್ನಾದರೂ ಸಾಲ ಮಾಡಬೇಕಾಗಬಹುದು. ಇನ್ನು ಕಾಲು ನೋವಿನಿಂದ ಬಳಲುತ್ತಿರುವವರಿಗೆ ಸೂಕ್ತ ವೈದ್ಯೋಪಚಾರದ ಬಗ್ಗೆ ಮಾಹಿತಿ ದೊರೆಯಲಿದೆ.

ಜನ್ಮಸಂಖ್ಯೆ 4

ಹಳೇ ಸ್ನೇಹಿತರನ್ನು ಭೇಟಿ ಆಗುವ ಯೋಗ ಇದ್ದು, ಪುಷ್ಕಳವಾದ ಭೋಜನವನ್ನು ಸವಿಯುವ ಯೋಗ ಇದೆ. ದೀರ್ಘಕಾಲದಿಂದ ನಿಮ್ಮ ಮನಸ್ಸಿನಲ್ಲಿ ಇರುವ ವಿಚಾರವನ್ನು ಹೇಳಿಕೊಳ್ಳುವುದಕ್ಕೆ ಸನ್ನಿವೇಶ ಸೃಷ್ಟಿ ಆಗಲಿದೆ. ತೀರ್ಥಕ್ಷೇತ್ರ ದರ್ಶನ ಮಾಡಬೇಕು ಅಂದುಕೊಳ್ಳುವವರು ಸಿದ್ಧತೆ ಮಾಡಿಕೊಳ್ಳಲಿದ್ದೀರಿ.

ಜನ್ಮಸಂಖ್ಯೆ 5

ಎಲ್ಲವನ್ನೂ ಮೊದಲಿಂದ ಶುರು ಮಾಡಬೇಕಾಗುತ್ತದೆ. ಅದು ಸ್ನೇಹ, ಸಂಬಂಧ, ಈಗಾಗಲೇ ಅರ್ಧವಾದರೂ ಮಾಡಿ ಮುಗಿಸಿದ ಕೆಲಸ ಹೀಗೆ ಎಲ್ಲವನ್ನೂ ಆರಂಭದಿಂದ ಪ್ರಾರಂಭಿಸಬೇಕಾಗುತ್ತದೆ. ಹೋಟೆಲ್ ಉದ್ಯಮದವರು ಸರ್ಕಾರದಿಂದ ಇರುವ ನಿಯಮಗಳನ್ನು ಪಾಲಿಸುತ್ತಿದ್ದೀರಾ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ.

ಜನ್ಮಸಂಖ್ಯೆ 6

ಸ್ತ್ರೀಯರಾಗಿದ್ದಲ್ಲಿ ಪುರುಷರ ವಿಚಾರವಾಗಿ, ಪುರುಷರಾಗಿದ್ದಲ್ಲಿ ಸ್ತ್ರೀಯರ ವಿಚಾರದಲ್ಲಿ ಜಾಗ್ರತೆಯಿಂದ ಇರಬೇಕು. ನಿಮ್ಮ ಮಾತು, ಬಾಡಿ ಲಾಂಗ್ವೇಜ್ ಅನ್ನು ಇತರರು ತಪ್ಪಾಗಿ ಅರ್ಥೈಸಿಕೊಳ್ಳಬಹುದು. ಅಥವಾ ಬೇಕೆಂತಲೆ ಅಪಪ್ರಚಾರವನ್ನು ಮಾಡಬಹುದು. ಮದ್ಯಪಾನದ ಅಭ್ಯಾಸ ಇರುವವರು ಮಾತಿನ ಮೇಲೆ ನಿಗಾ ಇಟ್ಟುಕೊಳ್ಳಿ.

ಜನ್ಮಸಂಖ್ಯೆ 7

ಈ ದಿನ ನಿಮ್ಮನ್ನು ಒಂಟಿತನ ಬಹಳ ಕಾಡುತ್ತದೆ. ನಿಮಗೆ ಈ ಸಲಹೆ ತಮಾಷೆ ಅನಿಸಬಹುದು; ಒಂದು ಸಿನಿಮಾಗೆ ಹೋಗಬೇಕೆನಿಸಿದರೆ ಹೋಗಿ. ಸ್ನೇಹಿತರ ಮನೆಗೆ ಹೋಗಬೇಕೆನಿಸಿದರೆ ಹೋಗಿ. ಆದರೆ ಹಳೆಯದನ್ನೆಲ್ಲ ನೆನಪಿಸಿಕೊಳ್ಳುತ್ತಾ ಮನಸ್ಸನ್ನು ಕಹಿ ಮಾಡಿಕೊಳ್ಳಬೇಡಿ. ಕೆಲವು ಕಹಿ ವಿಚಾರಗಳಿಗೆ ಮರೆವು ಮದ್ದು.

ಜನ್ಮಸಂಖ್ಯೆ 8

ದಾನ- ಧರ್ಮಗಳಿಂದ, ಮತ್ತೊಬ್ಬರಿಗೆ ಸಹಾಯ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಗಾರ್ಡನಿಂಗ್, ಸಂಗೀತ ಕೇಳುವುದು ಹೀಗೆ ಸಮಯ ಕಳೆಯಲಿದ್ದೀರಿ. ನಿಮ್ಮ ಇನ್‌ಟ್ಯೂಷನ್ ಬಹಳ ಚೆನ್ನಾಗಿ ಕೆಲಸ ಮಾಡಲಿದೆ. ನಿಮಗೆ ದೊರೆಯುವ ಪ್ರೇರಣೆಯಿಂದ ಭವಿಷ್ಯದಲ್ಲಿ ಅನುಕೂಲ ಇದೆ.

ಜನ್ಮಸಂಖ್ಯೆ 9

ಸಂಬಂಧವೇ ಇಲ್ಲದ ವಿಚಾರ, ವ್ಯಕ್ತಿಗಳಿಗಾಗಿ ವೃಥಾ ಅಲೆದಾಟ ಇದೆ. ನಿಮ್ಮ ಜೇಬಿನಿಂದಲೇ ಖರ್ಚು ಕೂಡ ಆಗಬಹುದು. ಆದ್ದರಿಂದ ನೀವಾಗಿಯೇ ಯಾವುದನ್ನು ಮೈ ಮೇಲೆ ಹಾಕಿಕೊಳ್ಳಬೇಡಿ. ನಿಮ್ಮ ಅಗ್ರೆಸಿವ್ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳಿ. ಕಿವಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದಲ್ಲಿ ಸೂಕ್ತ ವೈದ್ಯರಲ್ಲಿ ಕೂಡಲೇ ತೋರಿಸಿಕೊಳ್ಳಿ.

ಲೇಖನ- ಎನ್‌.ಕೆ.ಸ್ವಾತಿ

Follow Us
TV9 Web
TV9 Web

TV9 Kannada

Read More
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು