AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 12ರ ದಿನಭವಿಷ್ಯ

ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 12ರ ಭಾನುವಾರದ ದಿನ ಭವಿಷ್ಯ(daily horoscope) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 12ರ ದಿನಭವಿಷ್ಯ
ಸಂಖ್ಯಾಶಾಸ್ತ್ರ
TV9 Web
| Edited By: |

Updated on: Dec 12, 2022 | 6:00 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಈಗಾಗಲೇ ಮಾಹಿತಿಯನ್ನು ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 12ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1

ನಿಮ್ಮ ಸಾಲದ ಬಗ್ಗೆ ಒಂದಿಷ್ಟು ಕ್ಯಾಲ್ಕುಲೇಟರ್ ಹಿಡಿದು, ಲೆಕ್ಕ ಹಾಕಿಕೊಳ್ಳುವ ಸಮಯ. ಸಂಗಾತಿ ಏನಾದರೂ ಹೇಳುತ್ತಿದ್ದಾರೆ ಅಂದರೆ ಸ್ವಲ್ಪ ಕೇಳಿಸಿಕೊಳ್ಳಿ. ಇದರಿಂದ ತುಂಬ ದೊಡ್ಡ ಸಹಾಯ ಆಗುತ್ತದೆ ಅಂತಲ್ಲ, ಸಂಬಂಧ ಸುಧಾರಿಸುತ್ತದೆ. ನೆಮ್ಮದಿ ವಾತಾವರಣ ಸೃಷ್ಟಿ ಆಗುತ್ತದೆ. ನಿಮ್ಮಿಂದ ಸಾಧ್ಯವಾದಲ್ಲಿ, ಅನುಕೂಲ ಇದ್ದಲ್ಲಿ ಪಾರಿವಾಳಗಳಿಗೆ ಕೈಲಾದಷ್ಟು ಆಹಾರ ಹಾಕಿ.

ಜನ್ಮಸಂಖ್ಯೆ 2

ಎಲ್ಲೆಲ್ಲಿಂದ ಹಣದ ಮೂಲಗಳಿಗೆ ಎಂದು ಆಲೋಚನೆ ಮಾಡುವುದಕ್ಕೆ ಶುರು ಮಾಡುತ್ತೀರಿ. ಈ ಹಿಂದೆ ಯಾವಾಗಲೂ ನೀವು ಕೆಲಸ ಮಾಡಿಕೊಟ್ಟ ರೀತಿಯನ್ನು ಬಹಳ ಇಷ್ಟಪಟ್ಟು ಮತ್ತೆ ಹುಡುಕಿಕೊಂಡು ಬರಲಿದ್ದಾರೆ. ಆದರೆ ಇವತ್ತು ನಿಮ್ಮ ಗ್ಯಾಜೆಟ್, ಲ್ಯಾಪ್‌ಟಾಪ್, ಮೊಬೈಲ್ ಹ್ಯಾಕ್ ಆಗುವ ಅಥವಾ ಅದನ್ನು ಬೇರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 3

ನಿಮ್ಮ ಬುದ್ಧಿ ಬಹಳ ಚುರುಕಾಗಿ ಹಾಗೂ ಸಮಯೋಚಿತವಾಗಿ ಬಳಸಿ, ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಬ್ಯಾಂಕ್‌ ಕೆಲಸಗಳನ್ನು ಬೇಗ ಬೇಗ ಮುಗಿಸುವುದಕ್ಕೆ ಮಾಡುವ ಪ್ರಯತ್ನಗಳು ಸಫಲವಾಗಲಿವೆ. ರೈಲು ಪ್ರಯಾಣ ಮಾಡುವಂಥವರು ಈ ದಿನ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ಮುಖ್ಯವಾಗಿ ನಿಮ್ಮ ವಸ್ತುಗಳನ್ನು ಜೋಪಾನ ಮಾಡಿಟ್ಟುಕೊಳ್ಳಿ. ಸಾಧ್ಯವಾದಲ್ಲಿ ಪ್ರಯಾಣವನ್ನು ಮುಂದೂಡಿ.

ಜನ್ಮಸಂಖ್ಯೆ 4

ನೀವು ಈ ಹಿಂದೆ ಹೇಳಿದ್ದ ವಿಚಾರವನ್ನು ಈಗ ಸ್ವತಃ ನೀವೇ ಮರೆತು, ಬೇರೆಯವರ ಮೇಲೆ ತಪ್ಪನ್ನು ಹೊರೆಸುವ ಸಾಧ್ಯತೆ ಇದೆ. ಆದ್ದರಿಂದ ಎದುರಿನವರು ಹೇಳಿದ ಮಾತನ್ನೂ ಸ್ವಲ್ಪ ಲಕ್ಷ್ಯ ಇಟ್ಟು ಕೇಳಿಸಿಕೊಳ್ಳಿ, ಈ ಹಿಂದೆ ಹೇಳಿದ್ದನ್ನು ನೆನಪಿಸಿಕೊಳ್ಳಿ. ಈ ದಿನ ನಿಮಗೆ ಪಾರ್ಟಿಗಳಿಗೆ, ಗೆಟ್ ಟು ಗೆದರ್‌ಗೆ ಆಹ್ವಾನ ಬರಲಿದೆ. ಅದಕ್ಕೆ ಹೋದರೂ ಸ್ವಂತ ವಾಹನದಲ್ಲಿ ಬೇಡ.

ಜನ್ಮಸಂಖ್ಯೆ 5

ನಿಮ್ಮ ಡಿಜಿಟಲ್ ಪೇಮೆಂಟ್ ವ್ಯಾಲೆಟ್ ಬಳಸುವಾಗ ಒಂದಕ್ಕೆ ಎರಡು ಬಾರಿ ಸಂಖ್ಯೆಯನ್ನು ಪರಿಶೀಲಿಸಿಕೊಳ್ಳಿ. ಭವಿಷ್ಯದ ಸಾಧಕ ಅಂಶವೊಂದು ನಿಮ್ಮ ಪಾಲಿಗೆ ಒದಗಿ ಬರಲಿದೆ. ಗಾರ್ಡನಿಂಗ್, ಸಂಗೀತದಂಥ ಹವ್ಯಾಸ ಇದ್ದಲ್ಲಿ ಸ್ವಲ್ಪ ಸಮಯ ತೊಡಗಿಸಿಕೊಳ್ಳಿ. ರಾತ್ರಿ ಬಹಳ ಹೊತ್ತು ಎಚ್ಚರ ಇರುವಂಥ ಕೆಲಸ ಮಾಡುವವರಿಗೆ ಆರೋಗ್ಯ ಸಮಸ್ಯೆ ಎದುರಾಗಲಿದೆ.

ಜನ್ಮಸಂಖ್ಯೆ 6

ನಿಮ್ಮ ಸವಾಲುಗಳನ್ನು ಮೀರಿ ನಿಲ್ಲುತ್ತೀರಿ. ಆದ್ಯತೆಗಳು, ಜೀವನಶೈಲಿ ಬದಲಾಗುತ್ತವೆ. ಸಾಲ ಇದ್ದಲ್ಲಿ ತೀರಿಸಿಕೊಳ್ಳುತ್ತೀರಿ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜಾರಿಗೆ ತರಬೇಕು ಅಂದುಕೊಂಡಿದ್ದ ಹೊಸ ಹೊಸ ಯೋಜನೆಗಳನ್ನು ತರುತ್ತೀರಿ. ಈ ಹಿಂದೆ ನೀವು ನೀಡಿದ್ದ ಮಾತು- ಭರವಸೆಗಳ ಕಡೆಗೆ ಗಮನ ನೀಡಿ. ಸಂಸಾರದಲ್ಲಿ ಕಲಹ ಆಗದಂತೆ ಎಚ್ಚರಿಕೆ ವಹಿಸಿ.

ಜನ್ಮಸಂಖ್ಯೆ 7

ನಿಮ್ಮ ಮನೆಗಾಗಲೀ, ನಿಮಗಾಗಲೀ ಏನು ಬೇಕು ಮತ್ತು ಎಷ್ಟು ಬೇಕು ಎಂಬ ಸ್ಪಷ್ಟತೆ ಇಟ್ಟುಕೊಳ್ಳಿ. ಕೊಂಡು ತಂದ ಮೇಲೆ ಸುಮ್ಮನಿದ್ದಿದ್ದರೆ ಆಗುತ್ತಿತ್ತು ಎಂದುಕೊಂಡು ಹಳಹಳಿಸಬೇಡಿ. ಯಾರದೋ ಮೇಲಿನ ಸವಾಲಿಗೋ ಪ್ರತಿಷ್ಠೆಗೋ ಖರ್ಚು ಮಾಡುವುದಕ್ಕೆ ಹೋಗದಿರಿ. ನಿಮಗೆ ಸಮಯ ದೊರೆತಲ್ಲಿ, ನಂಬಿಕೆ ಇದ್ದಲ್ಲಿ ಹತ್ತು ನಿಮಿಷ ಪ್ರಶಾಂತವಾದ ಸ್ಥಳದಲ್ಲಿ ಓಂಕಾರ ಧ್ಯಾನ ಮಾಡಿ.

ಜನ್ಮಸಂಖ್ಯೆ 8

ನೀವು ಕೂಡಿಟ್ಟುಕೊಂಡಿದ್ದ ಹಣವನ್ನು ಖರ್ಚು ಮಾಡುವ ಅಥವಾ ಹೂಡಿಕೆ ಮಾಡುವ ದಾರಿ ಕಾಣಿಸಿಕೊಳ್ಳುತ್ತದೆ. ಈ ದಿನ ಮನಸ್ಸಿಗೆ ತೋಚುವ ಅಥವಾ ಇನ್ನೊಬ್ಬರ ಬಗ್ಗೆ ಹೊಳೆಯುವ ಸಂಗತಿಗಳನ್ನು ಉಪೇಕ್ಷೆ ಮಾಡಬೇಡಿ. ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯಿಂದ ದೂರ ಇರಬೇಕು. ಅಥವಾ ವಾಟ್ಸಾಪ್ ಗ್ರೂಪ್, ಫೇಸ್‌ಬುಕ್ ಕಮ್ಯುನಿಟಿ ಹೀಗೆ ಯಾವುದರಿಂದಾದರೂ ಆಚೆ ಬರಬೇಕು ಎಂದಾದಲ್ಲಿ ಮುಲಾಜಿಲ್ಲದೆ ಹೊರಬನ್ನಿ.

ಜನ್ಮಸಂಖ್ಯೆ 9

ನಿಮ್ಮ ಮನಸ್ಸಿನಲ್ಲಿ ಇಂಥವರನ್ನೇ ಮದುವೆ ಆಗಬೇಕು ಎಂದು ನಿಶ್ಚಯಿಸಿ, ಈ ದಿನ ಮನೆಯಲ್ಲಿ ವಿಷಯ ಪ್ರಸ್ತಾವ ಮಾಡಬೇಕು ಎಂದಿದ್ದಲ್ಲಿ ಸಾಧ್ಯವಾದರೆ ಬೇರೆ ದಿನಕ್ಕೆ ಮುಂದೂಡಿ. ಏಕೆಂದರೆ ನಿಮ್ಮ ಮನೆಯಲ್ಲಿ ಒಪ್ಪಿಸುವುದು ಕಷ್ಟವಾಗುತ್ತದೆ. ಇನ್ನು ವಯೋಸಹಜ ಅನಾರೋಗ್ಯ ಸಮಸ್ಯೆ ಇರುವಂಥವರು ವೈದ್ಯರನ್ನು ಬದಲಾಯಿಸಬೇಕು ಎಂದಿದಲ್ಲಿ ಸದ್ಯಕ್ಕೆ ಬೇಡ.

ಲೇಖನ- ಎನ್‌.ಕೆ.ಸ್ವಾತಿ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ