AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 12ರ ದಿನಭವಿಷ್ಯ

ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 12ರ ಭಾನುವಾರದ ದಿನ ಭವಿಷ್ಯ(daily horoscope) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 12ರ ದಿನಭವಿಷ್ಯ
ಸಂಖ್ಯಾಶಾಸ್ತ್ರ
TV9 Web
| Edited By: ವಿವೇಕ ಬಿರಾದಾರ|

Updated on: Dec 12, 2022 | 6:00 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಈಗಾಗಲೇ ಮಾಹಿತಿಯನ್ನು ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 12ರ ಸೋಮವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1

ನಿಮ್ಮ ಸಾಲದ ಬಗ್ಗೆ ಒಂದಿಷ್ಟು ಕ್ಯಾಲ್ಕುಲೇಟರ್ ಹಿಡಿದು, ಲೆಕ್ಕ ಹಾಕಿಕೊಳ್ಳುವ ಸಮಯ. ಸಂಗಾತಿ ಏನಾದರೂ ಹೇಳುತ್ತಿದ್ದಾರೆ ಅಂದರೆ ಸ್ವಲ್ಪ ಕೇಳಿಸಿಕೊಳ್ಳಿ. ಇದರಿಂದ ತುಂಬ ದೊಡ್ಡ ಸಹಾಯ ಆಗುತ್ತದೆ ಅಂತಲ್ಲ, ಸಂಬಂಧ ಸುಧಾರಿಸುತ್ತದೆ. ನೆಮ್ಮದಿ ವಾತಾವರಣ ಸೃಷ್ಟಿ ಆಗುತ್ತದೆ. ನಿಮ್ಮಿಂದ ಸಾಧ್ಯವಾದಲ್ಲಿ, ಅನುಕೂಲ ಇದ್ದಲ್ಲಿ ಪಾರಿವಾಳಗಳಿಗೆ ಕೈಲಾದಷ್ಟು ಆಹಾರ ಹಾಕಿ.

ಜನ್ಮಸಂಖ್ಯೆ 2

ಎಲ್ಲೆಲ್ಲಿಂದ ಹಣದ ಮೂಲಗಳಿಗೆ ಎಂದು ಆಲೋಚನೆ ಮಾಡುವುದಕ್ಕೆ ಶುರು ಮಾಡುತ್ತೀರಿ. ಈ ಹಿಂದೆ ಯಾವಾಗಲೂ ನೀವು ಕೆಲಸ ಮಾಡಿಕೊಟ್ಟ ರೀತಿಯನ್ನು ಬಹಳ ಇಷ್ಟಪಟ್ಟು ಮತ್ತೆ ಹುಡುಕಿಕೊಂಡು ಬರಲಿದ್ದಾರೆ. ಆದರೆ ಇವತ್ತು ನಿಮ್ಮ ಗ್ಯಾಜೆಟ್, ಲ್ಯಾಪ್‌ಟಾಪ್, ಮೊಬೈಲ್ ಹ್ಯಾಕ್ ಆಗುವ ಅಥವಾ ಅದನ್ನು ಬೇರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 3

ನಿಮ್ಮ ಬುದ್ಧಿ ಬಹಳ ಚುರುಕಾಗಿ ಹಾಗೂ ಸಮಯೋಚಿತವಾಗಿ ಬಳಸಿ, ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಬ್ಯಾಂಕ್‌ ಕೆಲಸಗಳನ್ನು ಬೇಗ ಬೇಗ ಮುಗಿಸುವುದಕ್ಕೆ ಮಾಡುವ ಪ್ರಯತ್ನಗಳು ಸಫಲವಾಗಲಿವೆ. ರೈಲು ಪ್ರಯಾಣ ಮಾಡುವಂಥವರು ಈ ದಿನ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ಮುಖ್ಯವಾಗಿ ನಿಮ್ಮ ವಸ್ತುಗಳನ್ನು ಜೋಪಾನ ಮಾಡಿಟ್ಟುಕೊಳ್ಳಿ. ಸಾಧ್ಯವಾದಲ್ಲಿ ಪ್ರಯಾಣವನ್ನು ಮುಂದೂಡಿ.

ಜನ್ಮಸಂಖ್ಯೆ 4

ನೀವು ಈ ಹಿಂದೆ ಹೇಳಿದ್ದ ವಿಚಾರವನ್ನು ಈಗ ಸ್ವತಃ ನೀವೇ ಮರೆತು, ಬೇರೆಯವರ ಮೇಲೆ ತಪ್ಪನ್ನು ಹೊರೆಸುವ ಸಾಧ್ಯತೆ ಇದೆ. ಆದ್ದರಿಂದ ಎದುರಿನವರು ಹೇಳಿದ ಮಾತನ್ನೂ ಸ್ವಲ್ಪ ಲಕ್ಷ್ಯ ಇಟ್ಟು ಕೇಳಿಸಿಕೊಳ್ಳಿ, ಈ ಹಿಂದೆ ಹೇಳಿದ್ದನ್ನು ನೆನಪಿಸಿಕೊಳ್ಳಿ. ಈ ದಿನ ನಿಮಗೆ ಪಾರ್ಟಿಗಳಿಗೆ, ಗೆಟ್ ಟು ಗೆದರ್‌ಗೆ ಆಹ್ವಾನ ಬರಲಿದೆ. ಅದಕ್ಕೆ ಹೋದರೂ ಸ್ವಂತ ವಾಹನದಲ್ಲಿ ಬೇಡ.

ಜನ್ಮಸಂಖ್ಯೆ 5

ನಿಮ್ಮ ಡಿಜಿಟಲ್ ಪೇಮೆಂಟ್ ವ್ಯಾಲೆಟ್ ಬಳಸುವಾಗ ಒಂದಕ್ಕೆ ಎರಡು ಬಾರಿ ಸಂಖ್ಯೆಯನ್ನು ಪರಿಶೀಲಿಸಿಕೊಳ್ಳಿ. ಭವಿಷ್ಯದ ಸಾಧಕ ಅಂಶವೊಂದು ನಿಮ್ಮ ಪಾಲಿಗೆ ಒದಗಿ ಬರಲಿದೆ. ಗಾರ್ಡನಿಂಗ್, ಸಂಗೀತದಂಥ ಹವ್ಯಾಸ ಇದ್ದಲ್ಲಿ ಸ್ವಲ್ಪ ಸಮಯ ತೊಡಗಿಸಿಕೊಳ್ಳಿ. ರಾತ್ರಿ ಬಹಳ ಹೊತ್ತು ಎಚ್ಚರ ಇರುವಂಥ ಕೆಲಸ ಮಾಡುವವರಿಗೆ ಆರೋಗ್ಯ ಸಮಸ್ಯೆ ಎದುರಾಗಲಿದೆ.

ಜನ್ಮಸಂಖ್ಯೆ 6

ನಿಮ್ಮ ಸವಾಲುಗಳನ್ನು ಮೀರಿ ನಿಲ್ಲುತ್ತೀರಿ. ಆದ್ಯತೆಗಳು, ಜೀವನಶೈಲಿ ಬದಲಾಗುತ್ತವೆ. ಸಾಲ ಇದ್ದಲ್ಲಿ ತೀರಿಸಿಕೊಳ್ಳುತ್ತೀರಿ. ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜಾರಿಗೆ ತರಬೇಕು ಅಂದುಕೊಂಡಿದ್ದ ಹೊಸ ಹೊಸ ಯೋಜನೆಗಳನ್ನು ತರುತ್ತೀರಿ. ಈ ಹಿಂದೆ ನೀವು ನೀಡಿದ್ದ ಮಾತು- ಭರವಸೆಗಳ ಕಡೆಗೆ ಗಮನ ನೀಡಿ. ಸಂಸಾರದಲ್ಲಿ ಕಲಹ ಆಗದಂತೆ ಎಚ್ಚರಿಕೆ ವಹಿಸಿ.

ಜನ್ಮಸಂಖ್ಯೆ 7

ನಿಮ್ಮ ಮನೆಗಾಗಲೀ, ನಿಮಗಾಗಲೀ ಏನು ಬೇಕು ಮತ್ತು ಎಷ್ಟು ಬೇಕು ಎಂಬ ಸ್ಪಷ್ಟತೆ ಇಟ್ಟುಕೊಳ್ಳಿ. ಕೊಂಡು ತಂದ ಮೇಲೆ ಸುಮ್ಮನಿದ್ದಿದ್ದರೆ ಆಗುತ್ತಿತ್ತು ಎಂದುಕೊಂಡು ಹಳಹಳಿಸಬೇಡಿ. ಯಾರದೋ ಮೇಲಿನ ಸವಾಲಿಗೋ ಪ್ರತಿಷ್ಠೆಗೋ ಖರ್ಚು ಮಾಡುವುದಕ್ಕೆ ಹೋಗದಿರಿ. ನಿಮಗೆ ಸಮಯ ದೊರೆತಲ್ಲಿ, ನಂಬಿಕೆ ಇದ್ದಲ್ಲಿ ಹತ್ತು ನಿಮಿಷ ಪ್ರಶಾಂತವಾದ ಸ್ಥಳದಲ್ಲಿ ಓಂಕಾರ ಧ್ಯಾನ ಮಾಡಿ.

ಜನ್ಮಸಂಖ್ಯೆ 8

ನೀವು ಕೂಡಿಟ್ಟುಕೊಂಡಿದ್ದ ಹಣವನ್ನು ಖರ್ಚು ಮಾಡುವ ಅಥವಾ ಹೂಡಿಕೆ ಮಾಡುವ ದಾರಿ ಕಾಣಿಸಿಕೊಳ್ಳುತ್ತದೆ. ಈ ದಿನ ಮನಸ್ಸಿಗೆ ತೋಚುವ ಅಥವಾ ಇನ್ನೊಬ್ಬರ ಬಗ್ಗೆ ಹೊಳೆಯುವ ಸಂಗತಿಗಳನ್ನು ಉಪೇಕ್ಷೆ ಮಾಡಬೇಡಿ. ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯಿಂದ ದೂರ ಇರಬೇಕು. ಅಥವಾ ವಾಟ್ಸಾಪ್ ಗ್ರೂಪ್, ಫೇಸ್‌ಬುಕ್ ಕಮ್ಯುನಿಟಿ ಹೀಗೆ ಯಾವುದರಿಂದಾದರೂ ಆಚೆ ಬರಬೇಕು ಎಂದಾದಲ್ಲಿ ಮುಲಾಜಿಲ್ಲದೆ ಹೊರಬನ್ನಿ.

ಜನ್ಮಸಂಖ್ಯೆ 9

ನಿಮ್ಮ ಮನಸ್ಸಿನಲ್ಲಿ ಇಂಥವರನ್ನೇ ಮದುವೆ ಆಗಬೇಕು ಎಂದು ನಿಶ್ಚಯಿಸಿ, ಈ ದಿನ ಮನೆಯಲ್ಲಿ ವಿಷಯ ಪ್ರಸ್ತಾವ ಮಾಡಬೇಕು ಎಂದಿದ್ದಲ್ಲಿ ಸಾಧ್ಯವಾದರೆ ಬೇರೆ ದಿನಕ್ಕೆ ಮುಂದೂಡಿ. ಏಕೆಂದರೆ ನಿಮ್ಮ ಮನೆಯಲ್ಲಿ ಒಪ್ಪಿಸುವುದು ಕಷ್ಟವಾಗುತ್ತದೆ. ಇನ್ನು ವಯೋಸಹಜ ಅನಾರೋಗ್ಯ ಸಮಸ್ಯೆ ಇರುವಂಥವರು ವೈದ್ಯರನ್ನು ಬದಲಾಯಿಸಬೇಕು ಎಂದಿದಲ್ಲಿ ಸದ್ಯಕ್ಕೆ ಬೇಡ.

ಲೇಖನ- ಎನ್‌.ಕೆ.ಸ್ವಾತಿ

Follow Us
TV9 Web
TV9 Web

TV9 Kannada

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ