AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿ. 2ರ ನಿಮ್ಮ ದಿನಭವಿಷ್ಯ

ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 2ರ ಶುಕ್ರವಾರದ ನಿಮ್ಮ ದಿನ ಭವಿಷ್ಯ ಹೇಗಿದೆ ಎನ್ನುವುದನ್ನು ತಿಳಿದುಕೊಳ್ಳಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿ. 2ರ ನಿಮ್ಮ ದಿನಭವಿಷ್ಯ
ದಿನಭವಿಷ್ಯ
TV9 Web
| Edited By: |

Updated on: Dec 02, 2022 | 6:05 AM

Share

ನಿಮ್ಮ ಜನ್ಮಸಂಖ್ಯೆಗೆ (numerology prediction) ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 2ರ ಶುಕ್ರವಾರದ ದಿನ ಭವಿಷ್ಯ (daily horoscope) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1

ನಿಮ್ಮಿಂದ ಸಹಾಯವನ್ನು ಬಯಸಿ ಸ್ನೇಹಿತರು/ಸ್ನೇಹಿತೆಯರು ಬರುತ್ತಾರೆ. ಸಾಧ್ಯವಿರುವಂಥ ನೆರವಾದಲ್ಲಿ ಖಂಡಿತಾ ಮಾಡಿ. ಕಂಪ್ಯೂಟರ್ ಬಿಡಿಭಾಗಗಳ ವ್ಯವಹಾರ ಮಾಡುವವರಿಗೆ ಸವಾಲಿನ ದಿನ ಇದಾಗಿರುತ್ತದೆ. ಅಡುಗೆ ತೈಲ ವಿತರಣೆ ಮಾಡುವಂಥವರಿಗೆ ಹಣಕಾಸಿನ ಅಗತ್ಯ ಕಂಡುಬರುತ್ತದೆ. ಈ ದಿನ ಮಧ್ಯಾಹ್ನದ ಹೊತ್ತಿಗೆ ಕನಿಷ್ಠ ಹತ್ತು ನಿಮಿಷ ಧ್ಯಾನ ಮಾಡಿ.

ಜನ್ಮಸಂಖ್ಯೆ 2

ಸೀದಾ ಸಾದಾ ಸಂಗತಿಗಳು ನಿಮ್ಮ ಪಾಲಿಗೆ ಅನುಕೂಲವಾಗಿ ಮಾರ್ಪಡಲಿವೆ. ಈ ಹಿಂದಿನ ಪ್ರಾಜೆಕ್ಟ್‌ಗಳು ಈಗ ನಿಮಗೆ ಹಣ ತಂದುಕೊಂಡುವ ಸಾಧ್ಯತೆಗಳಿವೆ. ಆದರೆ ಸಣ್ಣ- ಪುಟ್ಟ ವಿಚಾರಗಳನ್ನೂ ಮರೆಯದಿರಿ. ಮಡ್‌ಬಾತ್, ಸ್ಟೀಮ್‌ಬಾತ್ ಹೀಗೆ ದೇಹಕ್ಕೆ ಆರಾಮದಾಯಕ ಆಗುವಂಥದ್ದನ್ನು ಮಾಡಿಸಲು ಸಾಧ್ಯವಾದಲ್ಲಿ ಮಾಡಿಸಿಕೊಳ್ಳಿ, ಏಕೆಂದರೆ ಮುಂಬರುವ ದಿನಗಳಲ್ಲಿ ಬಹಳ ಬಿಜಿ ಆಗಿಬಿಡುತ್ತೀರಿ.

ಜನ್ಮಸಂಖ್ಯೆ 3

ಹಳೇ ಪ್ರೇಮ ಪ್ರಕರಣಗಳಲ್ಲಿ ನಿಮ್ಮನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಸಾಧ್ಯತೆ ಇದೆ. ಆದ್ದರಿಂದ ಭಾವನಾತ್ಮಕವಾಗಿ ಹಾಗೂ ನೈತಿಕವಾಗಿ ನೀವು ಗಟ್ಟಿಯಾಗಿ ನಿಲ್ಲುವುದು ಮುಖ್ಯವಾಗುತ್ತದೆ. ಖರ್ಚಿನ ವಿಚಾರದಲ್ಲಿ ಕೆಲವರಿಗೆ ಅಸಮಾಧಾನ ಆಗಲಿದೆ. ಕ್ರೀಡಾಪಟುಗಳಿಗೆ ಬಹಳ ಮುಖ್ಯವಾದ ದಿನ ಇದು.

ಜನ್ಮಸಂಖ್ಯೆ 4

ನಿಮ್ಮ ಪ್ರಾಶಸ್ತ್ಯ ಕಡಿಮೆ ಆಗುತ್ತಿದೆಯೇನೋ ಎಂಬಂತೆ ಅನಿಸುತ್ತದೆ. ಅದು ಮನೆ ಇರಲಿ ಅಥವಾ ಹೊರಗಿರಲಿ. ಹೀಗೆ ಅನಿಸಿದ ತಕ್ಷಣ ಎಲ್ಲರ ಗಮನ ಸೆಳೆಯುವ ಸಲುವಾಗಿ ವಿಪರೀತದ ಕೆಲಸಗಳೇನೋ ಮಾಡುವುದಕ್ಕೆ ತೊಡಗಬೇಡಿ. ಈ ಸಮಯ ಕಳೆಯಲು ಬಿಡಿ. ನೀವು ಅನುಸರಿಸುವ ಧರ್ಮದ ಅಥವಾ ಮನಸಿಗೆ ನೆಮ್ಮದಿ- ಚೈತನ್ಯ ನೀಡುವಂಥ ಆಡಿಯೋಗಳನ್ನು ಕೇಳಿಸಿಕೊಳ್ಳಿ.

ಜನ್ಮಸಂಖ್ಯೆ 5

ಸಿನಿಮಾ ತಾರೆಯರು, ಧಾರಾವಾಹಿಗಳಲ್ಲಿ ನಟಿಸುವಂಥವರಿಗೆ ಯಾವುದೋ ದೊಡ್ಡ ಪ್ರಾಜೆಕ್ಟ್‌ ಬರುವಂಥ ಸಾಧ್ಯತೆ ಇದೆ. ಆದರೆ ಇದನ್ನು ಅಂದಾಜು ಮಾಡುವುದು ಬಹಳ ಮುಖ್ಯ. ನಿಮ್ಮಿಂದ ಇದು ಸಾಧ್ಯ ಆಗದಿದ್ದಲ್ಲಿ ಹಿರಿಯರು, ಅನುಭವಿಗಳ ಸಹಾಯ ಪಡೆಯಿರಿ. ರಫ್ತು ಉದ್ಯಮಿಗಳಿಗೆ ಸಾಲದ ಅಗತ್ಯ ಹೆಚ್ಚಾಗಲಿದೆ.

ಜನ್ಮಸಂಖ್ಯೆ 6

ಬಂದಿದ್ದೆಲ್ಲ ಬರಲಿ, ಆ ಭಗವಂತನ ದಯೆ ಇರಲಿ ಎಂದು ಮುನ್ನುಗ್ಗಿ. ಈಗ ಅಲ್ಲದಿದ್ದರೆ ಎಂದಿಗೂ ಇಲ್ಲ ಎಂಬುದು ಮನಸ್ಸಿನಲ್ಲಿರಲಿ. ಸ್ವಭಾವತಃ ತುಂಬ ಕ್ಯಾಲ್ಕುಲೇಟೆಡ್ ಜನ ನೀವು. ಆದರೆ ಈ ದಿನ ನಿಮ್ಮ ಸಾಮರ್ಥ್ಯದ ಸಂಪೂರ್ಣ ಬಳಕೆ ಮಾಡಬೇಕು. ಯಾವುದೇ ಕಾರಣಕ್ಕೂ ನಿಮ್ಮನ್ನು ನೀವು ಕಡಿಮೆ ಮಾಡಿಕೊಳ್ಳಬೇಡಿ. ಎಂಥ ಜವಾಬ್ದಾರಿಯನ್ನು ಧೈರ್ಯವಾಗಿ ವಹಿಸಿಕೊಳ್ಳಿ.

ಜನ್ಮಸಂಖ್ಯೆ 7

ಬಜೆಟ್ ಮಾಡಿಕೊಳ್ಳುವುದು ಬಹಳ ಮುಖ್ಯ. ಯಾವುದೇ ಉದ್ಯೋಗ, ವೃತ್ತಿಯಿರಲಿ ಬಂದಿದ್ದೇನು- ಖರ್ಚಾಗಿದ್ದೆಷ್ಟು ಎಂಬ ಬಗ್ಗೆ ಸ್ಪಷ್ಟತೆ ಇರಲಿ. ಎಲ್ಲಿಂದಲೋ ಬಂದು ನಿಮ್ಮ ಕೈ ಹಿಡಿದು ಮೇಲೆ ಎತ್ತುತ್ತಾರೆ ಎಂಬ ಭ್ರಮೆ ಬೇಡ. ನಿಮ್ಮ ಅಧ್ಯಾತ್ಮ ಮನೋಭಾವ ಸ್ಫೂರ್ತಿ ಆಗಬೇಕೇ ವಿನಾ ಯಾವುದೇ ಕೆಲಸಕ್ಕೆ ವಿರಕ್ತಿ ಆಗದಿರಲಿ.

ಜನ್ಮಸಂಖ್ಯೆ 8

ನಿಮ್ಮದಲ್ಲದ್ದು ಅಂತ ಗೊತ್ತಾದ ಮೇಲೆ ಅದಕ್ಕೆ ಆಸೆ ಪಡಬೇಡಿ. ಯಾರಿಗೂ ಗೊತ್ತಾಗಲ್ಲ, ನಾನು ಬುದ್ಧಿವಂತಿಕೆಯಿಂದ ಎಲ್ಲವನ್ನೂ ನಿಭಾಯಿಸಬಲ್ಲೆ ಎಂಬ ಧೋರಣೆ ನಿಮ್ಮನ್ನು ಸಂಕಷ್ಟಕ್ಕೆ ದೂಡಲಿದೆ. ಯಾವುದೇ ಮುಖ್ಯ ಕೆಲಸಕ್ಕೆ ಹೊರಡುವ ಮುನ್ನ ಈ ದಿನ ದುರ್ಗಾ ದೇವಿಯ ಧ್ಯಾನ ಮಾಡಿ. ನಿಮ್ಮ ಧರ್ಮಾಚರಣೆ ಬೇರೆ ಆಗಿದ್ದಲ್ಲಿ ಬಿಳಿ ವಸ್ತ್ರವೊಂದನ್ನು ನಿಮ್ಮ ಪರ್ಸ್‌ ಅಥವಾ ವ್ಯಾನಿಟಿ ಬ್ಯಾಗ್‌ನಲ್ಲಿ ಇಟ್ಟುಕೊಳ್ಳಿ.

ಜನ್ಮಸಂಖ್ಯೆ 9

ಜ್ಯೋತಿಷಿಗಳು, ಪುರೋಹಿತರು, ಮ್ಯಾಜಿಷಿಯನ್‌ಗಳಿಗೆ ಉತ್ತಮವಾದ ದಿನ ಇದು. ದೂರದ ಸ್ಥಳಗಳಿಂದ ನಿಮಗೆ ಆಹ್ವಾನ ಬರಲಿದೆ. ಸನ್ಮಾನ ಆಗುವ ಸಾಧ್ಯತೆ ಇದೆ. ನೀವಾಗಿಯೇ ಕೆಲವು ಜವಾಬ್ದಾರಿಗಳನ್ನು ಅತ್ಯುತ್ಸಾಹದಲ್ಲಿ ಮೈಮೇಲೆ ಎಳೆದುಕೊಳ್ಳಲಿದ್ದೀರಿ. ನಿಮ್ಮ ಸಾಮರ್ಥ್ಯವನ್ನು ನೋಡಿ, ನಿರ್ಧರಿಸಿ.

ಲೇಖನ- ಎನ್‌.ಕೆ.ಸ್ವಾತಿ

Follow Us
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ