AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 6ರ ದಿನಭವಿಷ್ಯ

Numerology Prediction: ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 6ರ ಮಂಗಳವಾರದ ನಿಮ್ಮ ದಿನ ಭವಿಷ್ಯ ಹೇಗಿದೆ ಎನ್ನುವುದನ್ನು ತಿಳಿದುಕೊಳ್ಳಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 6ರ ದಿನಭವಿಷ್ಯ
ದಿನ ಭವಿಷ್ಯ
TV9 Web
| Edited By: |

Updated on:Dec 06, 2022 | 8:57 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು (Numerology Daily Horoscope) ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಈಗಾಗಲೇ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 6ರ ಮಂಗಳವಾರದ ದಿನ ಭವಿಷ್ಯ (Horoscope) ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1

ಈ ದಿನ ಹಣಕಾಸಿನ ಹರಿವಿಗೆ ಅಂಥ ದೊಡ್ಡ ಸಮಸ್ಯೆ ಏನೂ ಕಾಡುವುದಿಲ್ಲ. ಸಾಂಸಾರಿಕವಾಗಿಯೂ ನೆಮ್ಮದಿ ಇರಲಿದೆ. ಮನೆಯಲ್ಲಿ ಶಾಂತಿ ನೆಲೆಸಿರುತ್ತದೆ. ಸಂಬಂಧ ವೃದ್ದಿ ಆಗುತ್ತದೆ. ನಿಮ್ಮಲ್ಲಿ ಆತ್ಮವಿಶ್ವಾಸ ಇರುತ್ತದೆ. ಯಾವುದೇ ಕೆಲಸವನ್ನು ಮಾಡಿ ಮುಗಿಸಬಲ್ಲ ಚಾಕಚಕ್ಯತೆ ಬರುತ್ತದೆ.

ಜನ್ಮಸಂಖ್ಯೆ 2

ಸಂಸಾರದಲ್ಲಿ ಸಂತೋಷ, ನೆಮ್ಮದಿಯ ವಾತಾವರಣ, ಹಣಕಾಸಿನ ಸಮಸ್ಯೆಗಳು ಇಳಿಮುಖ ಆಗುವುದು. ನೀವು ಅಂದುಕೊಂಡಂತೆ ಆಸ್ತಿ- ವಾಹನಗಳ ಖರೀದಿಗೆ ಅನುಕೂಲ, ಸಮಾಜದಲ್ಲಿ ಉನ್ನತ ಸ್ಥಾನದಲ್ಲಿ ಇರುವವರ ಜತೆಗೆ ನಿಮ್ಮ ಸ್ನೇಹ- ಸಂಬಂಧ ವೃದ್ದಿ ಆಗುವುದು ಇತ್ಯಾದಿ ಶುಭ ಫಲಗಳನ್ನು ಈ ದಿನ ಕಾಣಲಿದ್ದೀರಿ.

ಜನ್ಮಸಂಖ್ಯೆ 3

ಆಕಸ್ಮಿಕವಾಗಿ ಭೂಮಿ ಲಾಭ ಆಗುವುದೋ ಅಥವಾ ಯಾವುದಾದರೂ ಬಗೆಯಲ್ಲಿ ನಿಮ್ಮ ಹೆಸರಿಗೆ ಮನೆಯೊಂದು ಬರುವುದೋ ಅಥವಾ ದೊಡ್ಡ ಮೊತ್ತವೊಂದು ಕೈ ಸೇರುವುದೋ ಆಗುತ್ತದೆ. ಈ ಅವಧಿಯಲ್ಲಿ ದುಡ್ಡಿನ ವಿಚಾರಕ್ಕೆ ಎಚ್ಚರಿಕೆಯಿಂದ ಮುಂದಕ್ಕೆ ಹೆಜ್ಜೆ ಇಡಿ. ಸಣ್ಣ- ಪುಟ್ಟ ಅನಾರೋಗ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡದೆ ನಿಯಮಿತವಾಗಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ.

ಜನ್ಮಸಂಖ್ಯೆ 4

ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಮಹತ್ತರವಾದ ಬದಲಾವಣೆಯನ್ನು ನಿರೀಕ್ಷೆ ಮಾಡಬಹುದು. ಆದಾಯದ ಮೂಲ ಹೆಚ್ಚಾಗಲಿದೆ. ಸಂಬಳ ಹೆಚ್ಚಳ, ಬಡ್ತಿ, ಹೊಸ ವ್ಯಾಪಾರದ ಆಲೋಚನೆಗಳು ಬರಲಿದೆ. ವ್ಯಾಪಾರವನ್ನು ಹೊಸದಾಗಿ ಆರಂಭಿಸಬೇಕು ಎಂದುಕೊಂಡವರಿಗೆ ಅನುಕೂಲಕರವಾದ ವೇದಿಕೆ ದೊರೆಯಲಿದೆ.

ಜನ್ಮಸಂಖ್ಯೆ 5

ವಯಸ್ಸಾದ, ಅನಾರೋಗ್ಯ ಪೀಡಿತ ತಾಯಿ ಇದ್ದಲ್ಲಿ ಸೂಕ್ತ ವೈದ್ಯೋಪಚಾರ ಮಾಡಿಸಿ. ನಿಮ್ಮಿಂದ ಸಾಧ್ಯ ಆಗುವಂಥದ್ದರ ಬಗ್ಗೆ ಮಾತ್ರ ಮಾತು ನೀಡಿ, ಇಲ್ಲದಿದ್ದರೆ ಮಾತು ತಪ್ಪುವಂತಾಗುತ್ತದೆ. ಮೇಲಧಿಕಾರಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ಜತೆಗೆ ವ್ಯವಹಾರದಲ್ಲಿ ನಿರ್ಲಕ್ಷ್ಯ ಬೇಡ.

ಜನ್ಮಸಂಖ್ಯೆ 6

ಈ ದಿನ ನಿಮ್ಮಲ್ಲಿ ಪಾಪ ಕರ್ಮಗಳ ಬಗ್ಗೆ ಆಸಕ್ತಿ ಹೆಚ್ಚು ಆಗುತ್ತವೆ. ಸಂಗಾತಿ ಬಗ್ಗೆ ಇಲ್ಲ ಸಲ್ಲದ ಅನುಮಾನ, ವಿವಾಹದ ಆಚೆಗಿನ ಸಂಬಂಧಗಳ ಕಡೆಗೆ ಸೆಳೆತ ಇತ್ಯಾದಿ ಅನಪೇಕ್ಷಿತ ಆಲೋಚನೆಗಳು ಬರುತ್ತವೆ. ನಿಮ್ಮಿಂದ ಎಷ್ಟು ಸಾಧ್ಯವೋ ಅಷ್ಟು ಗಣಪತಿ- ಸುಬ್ರಹ್ಮಣ್ಯ ಆರಾಧನೆ ಮಾಡಿ.

ಜನ್ಮಸಂಖ್ಯೆ 7

ದೇಹದ ತೂಕದ ಕಡೆಗೆ ಗಮನ ನೀಡಿ. ಕಾನೂನು ವ್ಯಾಜ್ಯಗಳು, ಜಾಮೀನು ನಿಂತು, ಆ ನಂತರ ಹಣಕಾಸು ಸಂಸ್ಥೆಗಳಿಂದ ನೋಟಿಸ್ ಪಡೆಯುವುದು ಇತ್ಯಾದಿ ಸಾಧ್ಯತೆಗಳಿವೆ. ಆ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಚರ್ಮಕ್ಕೆ ಸಂಬಂಧಿಸಿದ ವ್ಯಾಧಿಗಳು ಕಾಣಿಸಬಹುದು. ಗುಪ್ತಾಂಗ ಕಾಯಿಲೆ ಸಹ ಕಾಣಿಸಿಕೊಳ್ಳಬಹುದು. ಸಂಸಾರದಲ್ಲಿ ಕಲಹ ಆಗದಂತೆ ಎಚ್ಚರಿಕೆ ವಹಿಸಿ.

ಜನ್ಮಸಂಖ್ಯೆ 8

ಆಲಸ್ಯವನ್ನು ತೊರೆಯುವುದು ಮುಖ್ಯ ಹಾಗೂ ಕ್ರೆಡಿಟ್ ಕಾರ್ಡ್ ಮತ್ತು ಇಎಂಐ ಪಾವತಿ ಸರಿಯಾದ ಸಮಯಕ್ಕೆ ಮಾಡಿದ್ದೀರಾ ಎಂಬುದನ್ನು ಖಾತ್ರಿ ಮಾಡಿಕೊಳ್ಳಿ. ಪಾರ್ಟನರ್‌ಷಿಪ್ ವ್ಯವಹಾರಗಳು ಮಾಡುತ್ತಿರುವವರು ಕಮ್ಯುನಿಕೇಷನ್ ಗ್ಯಾಪ್ ಆಗದಂತೆ ಎಚ್ಚರವಾಗಿರಬೇಕು. ಸಂಗಾತಿಯಿಂದ ಯಾವ ವಿಚಾರವನ್ನು ಮುಚ್ಚಿಡಬೇಡಿ.

ಜನ್ಮಸಂಖ್ಯೆ 9

ಗುರುಗಳ ಅನುಗ್ರಹದಿಂದ ತೀರ್ಥಕ್ಷೇತ್ರ ದರ್ಶನ, ಗುರುಗಳ ಆರಾಧನೆಗೆ ಅವಕಾಶ, ಮನೆಯಲ್ಲಿ ನೆಮ್ಮದಿ ವಾತಾವರಣ, ಸಜ್ಜನರ ಸಹವಾಸ, ವ್ಯಾಪಾರ- ವ್ಯವಹಾರದಲ್ಲಿ ಲಾಭ ಇತ್ಯಾದಿ ಶುಭ ಫಲಗಳನ್ನು ಈ ದಿನ ಕಾಣಲಿದ್ದೀರಿ. ಹಿತಶತ್ರುಗಳು ಹಾಗೂ ನಿಮ್ಮದೇ ವ್ಯಸನಗಳ ಬಗ್ಗೆ ಎಚ್ಚರಿಕೆ ಇರಲಿ.

ಲೇಖನ- ಎನ್‌.ಕೆ.ಸ್ವಾತಿ

Published On - 8:57 am, Tue, 6 December 22

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ