
ಈ ದಿನ ಮಾನಸಿಕ ಶಾಂತಿ ದೊರೆಯುವುದಕ್ಕಾಗಿ ಶಿವನಿಗೆ ಅಥವಾ ದೇವಿಗೆ ಬಿಳಿ ಹೂವುಗಳನ್ನು ಅರ್ಪಿಸಿ.
ಈ ದಿನ ನಿಮ್ಮ ಪರಿಸ್ಥಿತಿ ಬಗ್ಗೆ ನಿಮಗೆ ಮರುಕ ಹುಟ್ಟಲಿದೆ. ಆದ್ದರಿಂದ ಮೇಲುನೋಟಕ್ಕೆ ಕಾಣುವಂಥ ವಿಚಾರಗಳು ಆಳದಲ್ಲಿ ಅಷ್ಟು ಗಂಭೀರವಾಗಿ ಇರುವುದಿಲ್ಲ ಎಂಬುದನ್ನು ಅರಿತುಕೊಳ್ಳುವುದು ಮುಖ್ಯವಾಗುತ್ತದೆ. ಕಟ್ಟಡ ನಿರ್ಮಾಣ ವೃತ್ತಿಯಲ್ಲಿ ಇರುವವರಿಗೆ ಹೊಸ ಕೆಲಸಗಳು ದೊರೆಯಲಿವೆ. ವಿಷಯಕ್ಕೆ ಹಾಗೂ ವ್ಯಕ್ತಿಗಳಿಗೆ ಎಷ್ಟು ಪ್ರಾಮುಖ್ಯವೋ ಅಷ್ಟು ಮಾತ್ರ ನೀಡಿ. ಮನೆಗೆ ಕೆಲವು ಎಲೆಕ್ಟ್ರಿಕಲ್ ವಸ್ತುಗಳನ್ನು ಖರೀದಿಸುವ ಯೋಗವಿದೆ.
ನಿಮ್ಮ ಲೆಕ್ಕಾಚಾರಲ್ಲಿ ತಪ್ಪಿದೆಯಾ ಎಂದು ಪದೇಪದೇ ಅನಿಸಲಿದೆ. ವಿಪರೀತ ಗಾಬರಿ, ಆತಂಕ ಸೃಷ್ಟಿ ಆಗಲಿದೆ. ಏಕೋ ಅಂದುಕೊಂಡಂತೆ ಏನೂ ಆಗುತ್ತಿಲ್ಲ ಅಂತಲೂ ಅನಿಸಲಿದೆ. ಇನ್ನೂ ಮುಂದುವರಿದು ಸಣ್ಣ ಸಮಸ್ಯೆಗೆ ಇಡೀ ದಿನ ತಲೆ ಕೆಡಿಸಿಕೊಳ್ಳುವಂತೆ ಆಗುತ್ತದೆ. ಆದರೆ ವಾಸ್ತವ ಹೇಗಿರುತ್ತದೆ, ಉಗುರಿನಲ್ಲಿ ಹೋಗುವುದಕ್ಕೆ ಕೊಡಲಿ ತೆಗೆದುಕೊಂಡರು ಎಂಬ ಮಾತಿದೆಯಲ್ಲಾ ಹಾಗೆ.
ಈಗಾಗಲೇ ಮಾಡಿದ್ದ ಹೂಡಿಕೆ ಅಥವಾ ಸೇವಿಂಗ್ಸ್ ಮುರಿಸಬೇಕಾಗಬಹುದು. ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಲಿದ್ದೀರಿ. ಕಾರ್ಯಕ್ರಮ ಅಥವಾ ಸಮಾರಂಭಗಳಲ್ಲಿ ಭಾಗವಹಿಸುವ ಸಲುವಾಗಿ ಪ್ರಯಾಣ ಮಾಡಬೇಕಾಗಬಹುದು. ಇದರಿಂದ ದಣಿವು ಸಹ ಆಗಲಿದೆ. ನೀವು ಲೆಕ್ಕ ಹಾಕಿಕೊಂಡಂತೆಯೇ ಕೆಲವು ವ್ಯವಹಾರಗಳ ನಡೆಯಲಿವೆ. ಮತ್ತೆ ಬಾರದು ಎಂದುಕೊಂಡಿದ್ದ ಹಣವೊಂದು ಕೈ ಸೇರುವುದಕ್ಕೆ ಏನು ಮಾಡಬೇಕು ಎಂಬ ಮಾರ್ಗ ಗೋಚರ ಆಗಲಿದೆ.
ಲೇಖನ- ಸ್ವಾತಿ ಎನ್. ಕೆ.
Published On - 1:15 am, Mon, 16 March 26