Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಸೆಪ್ಟೆಂಬರ್ 29ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಸೆಪ್ಟೆಂಬರ್ 29ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಸೆಪ್ಟೆಂಬರ್ 29ರ ದಿನಭವಿಷ್ಯ
ಸಂಖ್ಯಾಶಾಸ್ತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 29, 2024 | 12:16 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಸೆಪ್ಟೆಂಬರ್ 29ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಇಷ್ಟು ಸಮಯ ನೀವು ಹೇಗಿದ್ದಿರೋ ಅನ್ನುವುದು ಮುಖ್ಯವಾಗುವುದಿಲ್ಲ. ಈ ದಿನ ನೀವು ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನೀವು ನಡೆದುಕೊಳ್ಳುವ ರೀತಿಯಿಂದ ಸಮಸ್ಯೆಗಳನ್ನು ತಂದುಕೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಅಂಥ ಮಾತುಕತೆ ಸಂದರ್ಭದಲ್ಲಿ ಒಂದಿಷ್ಟು ವಿವೇಚನೆಯನ್ನು ಬಳಸಿ, ವರ್ತಿಸಿ. ಒಂದು ವೇಳೆ ಇತರರು ಹಂಗಿಸುವ, ಛೇಡಿಸುವ, ಮೂದಲಿಸುವ ಮಾತುಗಳನ್ನು ಆಡಿದಲ್ಲಿ ತೀರಾ ಮನಸ್ಸಿಗೆ ತೆಗೆದುಕೊಳ್ಳಬೇಡಿ. ಇದನ್ನು ಹೇಳುತ್ತಿರುವವರಿಗೆ ನಿಮ್ಮ ಬಗ್ಗೆ ಪ್ರಾಮಾಣಿಕವಾದ ಕಾಳಜಿ, ಸ್ನೇಹವೋ ಅಥವಾ ಪ್ರೀತಿ ಇದೆಯೇ ಎಂಬ ಪ್ರಶ್ನೆಯನ್ನು ನಿಮಗೆ ನೀವೇ ಕೇಳಿಕೊಳ್ಳಿ. ಆ ನಂತರ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂದು ತೀರ್ಮಾನಿಸಿ. ಸ್ವಂತ ಉದ್ಯಮ, ವ್ಯವಹಾರವನ್ನು ನಡೆಸುತ್ತಿದ್ದಲ್ಲಿ ವಿಸ್ತರಣೆ ಬಗ್ಗೆ ಆಲೋಚನೆ ಬರಲಿದೆ. ಅಥವಾ ಈ ಸಂಬಂಧವಾಗಿ ಕೆಲವರ ಜತೆಗೆ ಚರ್ಚೆ ಕೂಡ ನಡೆಸಬಹುದು. ಕೆಲವರು ತಾವು ಹೂಡಿಕೆ ಮಾಡುವುದಾಗಿ ಭರವಸೆ ನೀಡಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಹಲವಾರು ಕೆಲಸ, ಜವಾಬ್ದಾರಿಗಳನ್ನು ನೀವೇ ನಿಂತು ಪೂರ್ತಿ ಮಾಡಬೇಕಾದ ಸನ್ನಿವೇಶಗಳು ಉದ್ಭವ ಆಗಲಿವೆ. ನಿಮ್ಮಲ್ಲಿ ಯಾರು ವಾಣಿಜ್ಯ ವ್ಯವಹಾರಗಳನ್ನು ಮಾಡುತ್ತಿದ್ದೀರಿ ಅಂಥವರು ಆತುರ ಆತುರವಾದ ತೀರ್ಮಾನಗಳನ್ನು ಮಾಡುವುದಕ್ಕೆ ಹೋಗಬೇಡಿ. ಅದರಲ್ಲೂ ನೀವೇನಾದರೂ ತುರ್ತಾದ ಅಥವಾ ತೀರಾ ಪ್ರಮುಖವಾದ ಕಾರ್ಯಕ್ಕಾಗಿ ಪ್ರಯಾಣದಲ್ಲಿ ಇದ್ದೀರಿ, ದಾಖಲೆ- ಪತ್ರಗಳನ್ನು ನೋಡಿ ತೀರ್ಮಾನವನ್ನು ಹೇಳಬೇಕು ಎಂದಾದಲ್ಲಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ನಿಚ್ಚಳವಾಗಿ ಕಾಣುವಂಥ ವಿಚಾರಗಳ ಬಗ್ಗೆ ಅಭಿಪ್ರಾಯ ಹೇಳುವಾಗ ಕೂಡ ಪೂರ್ಣವಾಗಿ ಮಾಹಿತಿಯನ್ನು ಪಡೆದುಕೊಳ್ಳುವುದು ಮುಖ್ಯವಾಗುತ್ತದೆ. ಈ ದಿನ ಆಸ್ತಿಯನ್ನೋ ಅಥವಾ ಚಿನ್ನವನ್ನೋ ಅಡಮಾನ ಮಾಡಬೇಕಾದ ಸನ್ನಿವೇಶ ಬರಬಹುದು. ಹೊಸದಾಗಿ ಸ್ನೇಹಿತರಾದವರ ಜತೆಗೆ ಏಕಾಏಕಿ ವ್ಯವಹಾರ ನಡೆಸುವುದು ಒಳ್ಳೆಯದಲ್ಲ. ನಿಮ್ಮ ನೇರವಂತಿಕೆಯ ಮಾತುಗಳಿಂದಾಗಿ ಅಹಂಕಾರಿ ಎಂದು ಹಣೆಟ್ಟಿ ಕಟ್ಟುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮಗೆ ಆದ ಅನುಭವಗಳು ಒಂದು ಬಗೆಯ ಮೇಷ್ಟರಂತೆ ಬೆನ್ನಿಗೆ ನಿಲ್ಲಲ್ಲಿವೆ. ಅದರಲ್ಲೂ ಈ ಹಿಂದಿನ ಘಟನೆಗಳು, ಸನ್ನಿವೇಶಗಳು ನಿಮ್ಮಲ್ಲಿ ಒಂದು ಬಗೆಯ ಗಟ್ಟಿತನವನ್ನು ತರುತ್ತವೆ. ಇಷ್ಟು ಸಮಯ ಅವರಿಗೆ ಬೇಸರ ಆಗಬಾರದು, ಇವರಿಗೆ ಬೇಸರ ಆಗಬಾರದು ಎಂಬ ರೀತಿಯಲ್ಲಿ ಆಲೋಚನೆ ಮಾಡುತ್ತಿದ್ದರೂ ಸಹ ಯಾರು ಏನಾದರೂ ಅಂದುಕೊಳ್ಳಲಿ, ನನಗೆ ಬೇಕಾದಂತೆ ಬದುಕುತ್ತೇನೆ ಎಂಬ ಮನೋಭಾವ ಈ ದಿನ ನಿಮ್ಮನ್ನು ಪ್ರಬಲವಾಗಿ ಆವರಿಸಲಿದೆ. ನಿಮಗೆ ಬರಬೇಕಾದ ಹಣ ಏನಾದರೂ ಇದ್ದಲ್ಲಿ ಪ್ರಯತ್ನವನ್ನು ಮಾಡಿದರೆ ಒಳ್ಳೆಯದು. ಇನ್ನು ಸಣ್ಣ- ಸಣ್ಣ ಸಂಗತಿಗಳಿಗೂ ಹೆಚ್ಚಿನ ಗಮನ ಕೊಟ್ಟು ಅರ್ಥ ಮಾಡಿಕೊಳ್ಳುವುದಕ್ಕೆ ಹಾಗೂ ವ್ಯಾಖ್ಯಾನಿಸುವುದಕ್ಕೆ ಪ್ರಯತ್ನ ಮಾಡಲಿದ್ದೀರಿ. ಒಂದು ಸಲಕ್ಕೆ ಬಾಕಿ ಉಳಿದಿರುವ ಕೆಲಸಗಳನ್ನೆಲ್ಲ ಪೂರ್ಣಗೊಳಿಸುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ದೇವತಾ ಕಾರ್ಯಗಳಿಗೆ ದೇಣಿಗೆ ನೀಡುವಂಥ ಯೋಗ ಇದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನೀವು ಬಹಳ ನಂಬಿಕೆ ಹಾಗೂ ವಿಶ್ವಾಸವನ್ನು ಇರಿಸಿಕೊಂಡು, ಕೆಲವು ವ್ಯಕ್ತಿಗಳ ಬಳಿ ಹೇಳಿದ ಸಂಗತಿಗಳೇ ಸಮಸ್ಯೆಯಾಗಿ ಕಾಡಲಿವೆ. ಅದರಲ್ಲೂ ನಿಮ್ಮ ಅನಾರೋಗ್ಯಕ್ಕೆ ಸಂಬಂಧಿಸಿದ ಸಂಗತಿಯೋ ಅಥವಾ ಹಣಕಾಸಿನ ಸ್ಥಿತಿಗೆ ಸಂಬಂಧಿಸಿದ ಸಂಗತಿಯೋ ಹೀಗೆ ಯಾವುದಾದರೂ ಆಗಿರಬಹುದು, ನೀವಾಗಿಯೇ ಹೇಳಿದ ವಿಚಾರವೊಂದು ಕೊರಳಿಗೆ ಉರುಳಾಗಿ ಸುತ್ತಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಏನು ಹೇಳಬೇಕು, ಏನು ಹೇಳಬಾರದು ಎಂಬ ಸ್ಪಷ್ಟತೆ ಇಟ್ಟುಕೊಳ್ಳಿ. ಮೊದಲಿಗೆ ನಿಮ್ಮ ಜತೆಗೆ ಬಹಳ ಚೆನ್ನಾಗಿ, ಗೌರವಯುತವಾಗಿ ಮಾತನಾಡುತ್ತಿದ್ದವರು ಏಕಾಏಕಿ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದೆನಿಸುವುದಕ್ಕೆ ಶುರುವಾಗುತ್ತದೆ. ಆಸ್ತಿ- ಹಣಕಾಸಿನ ವಿಚಾರವು ಪ್ರಾಶಸ್ತ್ಯ ಪಡೆದುಕೊಳ್ಳುತ್ತದೆ. ನಿರ್ಭಯವಾಗಿ ಯಾವುದಾದರೂ ಕೆಲಸ ಒಪ್ಪಿಕೊಳ್ಳುವುದಕ್ಕೆ ಧೈರ್ಯ ಸಾಕಾಗುವುದಿಲ್ಲ. ವಿಟಮಿನ್ -ಡಿ ಕೊರತೆಯನ್ನು ಅನುಭವಿಸಲಿದ್ದೀರಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಇತರರು ಅಥವಾ ನಿಮ್ಮ ಆಪ್ತರು ಹಾಗೂ ಸ್ನೇಹಿತರಾದವರು ಆಡಿದಂಥ ಮಾತುಗಳಿಂದಲೇ ಏಕಾಏಕಿ ಸಿಟ್ಟಿಗೇಳುವಂಥ ಅಥವಾ ಅನುಮಾನ ಮೂಡುವಂಥ ಸನ್ನಿವೇಶಗಳು ತರಬಹುದು. ಆದ್ದರಿಂದ ಯಾರು ಏನೇ ಹೇಳಿದರೂ ಹಾಗೂ ನಿಮ್ಮ ಮನಸ್ಸು ಏಕಾಗ್ರತೆಯಿಂದ ಹಾಗೂ ಸಮಾಧಾನದಿಂದ ಇರಲು ಅವಕಾಶವೇ ನೀಡದಂತೆ ಮಾತುಗಳನ್ನು ಆಡಿದರೂ ಸಮಚಿತ್ತದಿಂದ ನಿರ್ಧಾರ ತೆಗೆದುಕೊಳ್ಳುವುದು ಈ ದಿನ ಮುಖ್ಯವಾಗುತ್ತದೆ. ಹಣಕಾಸಿನ ಹರಿವು ಸರಾಗವಾಯಿತು ಅಂದರೆ ಭಾವನಾತ್ಮಕ ಕಾರಣಗಳಿಗೆ ಅಥವಾ ಸನ್ನಿವೇಶಗಳಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳದಿರುವುದು ಕ್ಷೇಮ. ಉದ್ಯೋಗ ಸ್ಥಳದಲ್ಲಿ ನಿಮ್ಮ ಪ್ರಾಮುಖ್ಯ ಹೆಚ್ಚಾಗುತ್ತಿರುವುದು ಇತರರ ಮೂಲಕವಾಗಿ ನಿಮಗೆ ಅನುಭವಕ್ಕೆ ಬರುತ್ತದೆ. ಹೊಸ ವಸ್ತ್ರಾಭರಣಗಳನ್ನು ಖರೀದಿ ಮಾಡುವುದರ ಸಲುವಾಗಿ ಹಣವನ್ನು ಖರ್ಚು ಮಾಡಲಿದ್ದೀರಿ. ರಾಜಕಾರಣದಲ್ಲಿ ಇರುವವರಿಗೆ ಪ್ರಯಾಣ, ಒತ್ತಡ ಹಾಗೂ ಉದ್ವೇಗದ ಸನ್ನಿವೇಶಗಳು ಎದುರಾಗುತ್ತವೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಒಂದು ವೇಳೆ ಈಗಾಗಲೇ ಕೆಲವು ವ್ಯವಹಾರಕ್ಕೆ ಸಂಬಂಧಿಸಿದಂತೆ ಮುಂಗಡವನ್ನು ಪಡೆದುಕೊಂಡಿದ್ದೀರಿ, ಅದು ಪೂರ್ತಿ ಇತ್ಯರ್ಥವಾಗುವುದಕ್ಕೆ ತಡವಾಗುತ್ತಿದೆ ಎಂದಾದಲ್ಲಿ ಆ ಬಗ್ಗೆ ಅಂತಿಮವಾದ ಒಂದು ತೀರ್ಮಾನ ನಿಮಗೆ ಗೊತ್ತಾಗಲಿದೆ. ಇನ್ನು ನಿಮ್ಮಲ್ಲಿ ಯಾರು ಪಿತ್ರಾರ್ಜಿತವಾಗಿ ಬಂದಂಥ ಹಣ ಅಥವಾ ಜಾಗದಲ್ಲಿ ಕೆಲವು ಕೆಲಸಗಳನ್ನು ಮಾಡುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ಒಟ್ಟಾರೆ ಹೇಳಬೇಕು ಅಂದರೆ ನಿಮ್ಮ ಆದಾಯ ಹೆಚ್ಚಳ ಮಾಡಿಕೊಳ್ಳುವ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಗಳಿಗೆ ಫಲ ದೊರೆಯಲಿದೆ. ನವ ವಿವಾಹಿತರಿಗೆ ಉತ್ತಮವಾದ ಸಮಯವನ್ನು ಕಳೆಯುವಂಥ ಯೋಗ ಇದೆ. ಉದ್ಯೋಗ ಬದಲಾವಣೆಗಾಗಿ ಪ್ರಯತ್ನ ಮಾಡುತ್ತಿದ್ದಲ್ಲಿ ಸ್ನೇಹಿತರ ಮೂಲಕ ಅವಕಾಶಗಳು ಹುಡುಕಿಕೊಂಡು ಬರಲಿವೆ. ದೂರ ಪ್ರಯಾಣ ಮಾಡುವುದರ ಸಂಬಂಧವಾಗಿ ಸಿದ್ಧತೆಯನ್ನು ಮಾಡಿಕೊಳ್ಳಲಿದ್ದೀರಿ. ಸಂಗಾತಿಯ ಮಾತಿಗೆ ಗೌರವ, ಪ್ರಾಶಸ್ತ್ಯ ನೀಡುವುದು ಮುಖ್ಯ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಆರ್ಥಿಕವಾಗಿ ಸಬಲರಾಗುವುದಕ್ಕೆ ವಿವಿಧ ಮಾರ್ಗಗಳು, ಆದಾಯದ ಮೂಲಗಳು ನಿಮಗೆ ತೆರೆದುಕೊಳ್ಳಲಿವೆ. ತುಂಬ ಚಾಕಚಕ್ಯತೆಯಿಂದ ವ್ಯವಹಾರಗಳನ್ನು ಮಾಡಲಿದ್ದೀರಿ. ಇನ್ನು ನಿಮ್ಮಲ್ಲಿ ಯಾರು ಬೇಳೆಕಾಳುಗಳು, ಧಾನ್ಯಗಳಿಗೆ ಸಂಬಂಧಿಸಿದಂತೆ ಸ್ವಂತ ವ್ಯವಹಾರ ಮಾಡುತ್ತಿದ್ದೀರೋ ಅಂಥವರಿಗೆ ನಿರೀಕ್ಷೆಯೇ ಮಾಡದ ರೀತಿಯಲ್ಲಿ ಆದಾಯದ ಹರಿವು, ಆದಾಯದ ಮೂಲ ಎರಡೂ ಜಾಸ್ತಿ ಆಗಲಿದೆ. ಯಾರದೋ ಸ್ವಂತ ಲಾಭಕ್ಕಾಗಿ ನಿಮ್ಮ ಹೆಸರನ್ನು ಬಳಸಿಕೊಳ್ಳುವಂಥ ಅವಕಾಶಗಳಿವೆ. ಆದ್ದರಿಂದ ಬಹಳ ಎಚ್ಚರಿಕೆಯಿಂದ ಇರಬೇಕು. ಲೇವಾದೇವಿ ಅಥವಾ ಚೀಟಿ ವ್ಯವಹಾರಗಳನ್ನು ಮಾಡುತ್ತಿರುವವರಿಗೆ ತಾತ್ಕಾಲಿಕ ಅಡೆತಡೆಗಳು ಎದುರಾಗಬಹುದು. ಸಂತಾನಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಉತ್ತಮವಾದ ಸುದ್ದಿ ಹಾಗೂ ಬೆಳವಣಿಗೆ ಇದೆ. ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರಯತ್ನಿಸುತ್ತಿರುವವರಿಗೆ ಶುಭ ವಾರ್ತೆ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕೌಟುಂಬಿಕ ವಿಚಾರಗಳಲ್ಲಿ ನೀವು ಅಂದುಕೊಂಡಂತೆ ಯಾವುದೇ ಬೆಳವಣಿಗೆಗಳು ಆಗದೆ, ಬೇಸರಕ್ಕೆ ಕಾರಣ ಆಗಬಹುದು. ಇನ್ನು ಈ ದಿನ ನಿಮಗೆ ಇಷ್ಟ ಇದೆಯೋ ಅಥವಾ ಇಲ್ಲವೋ ಸಂಗಾತಿಯ ಜವಾಬ್ದಾರಿಗಳ ಪೈಕಿ ಕೆಲವನ್ನು ನೀವು ಹಂಚಿಕೊಳ್ಳಲಿದ್ದೀರಿ. ನಿಮ್ಮ ಆರೋಗ್ಯದ ಮೇಲೆ ಇದರಿಂದ ಪರಿಣಾಮ ಆಗಲಿದೆ ಎಂಬ ಸಂಗತಿ ಗಮನಕ್ಕೆ ಬಂದರೂ ಅನಿವಾರ್ಯವಾಗಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ನಿಮ್ಮ ಪೈಕಿ ಸ್ವಂತ ವ್ಯಾಪಾರ- ವ್ಯವಹಾರ ನಡೆಸುತ್ತಿರುವವರಿಗೆ ಅಲ್ಪಪ್ರಗತಿ ಇದೆ. ಸ್ನೇಹಿತರು- ಸಂಬಂಧಿಗಳ ಮನೆಗೆ ತೆರಳುವಂಥ ಸಾಧ್ಯತೆ ಇದ್ದು, ರುಚಿಕಟ್ಟಾದ ಊಟ- ತಿಂಡಿ ಸವಿಯುವ ಯೋಗ ಇದೆ. ಅನಿರೀಕ್ಷಿತವಾಗಿ ಧನಾಗಮದ ಯೋಗ ಇದ್ದು, ಅದು ಹಾಗೇ ಖರ್ಚು ಕೂಡ ಆಗಬಹುದು. ಮೈಗ್ರೇನ್ ಸಮಸ್ಯೆ ಇರುವವರಿಗೆ ಅದು ಉಲ್ಬಣ ಆಗುವ ಸಾಧ್ಯತೆಗಳಿವೆ. ಪ್ರವಚನಕಾರರು, ಸಂಶೋಧನೆಗಳಲ್ಲಿ ತೊಡಗಿಕೊಂಡವರಿಗೆ ಉತ್ತಮ ಬೆಳವಣಿಗೆ ಇದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಇತರರಿಗೆ ಸಹಾಯ ಮಾಡುವುದಕ್ಕೆ ನೀವು ಇನ್ನು ಮುಂದೆ ಆಲೋಚಿಸಬೇಕು ಎಂಬಂಥ ಸ್ಥಿತಿ ನಿರ್ಮಾಣ ಆಗುತ್ತದೆ. ಅದಕ್ಕೆ ಕಾರಣ ಏನೆಂದರೆ, ನಿಮ್ಮ ಎಲ್ಲ ಪ್ರಾಮಾಣಿಕ ಪ್ರಯತ್ನಗಳ ನಂತರವೂ ಇತರರಿಂದ ಚುಚ್ಚು ಹಾಗೂ ತಿರಸ್ಕಾರದ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ಈ ಕಾರಣದಿಂದ ಈ ದಿನ ನೀವೇನಾದರೂ ಇನ್ನೊಬ್ಬರ ಪರವಾಗಿ ನಿರ್ಧಾರ ತೆಗೆದುಕೊಳ್ಳುವಂಥ ಸನ್ನಿವೇಶಗಳಲ್ಲಿ ಅತ್ಯುತ್ಸಾಹ ತೋರಿಸುವಂಥ ಅಗತ್ಯ ಇಲ್ಲ. ಇದನ್ನು ಮೀರಿಯೂ ನೀವೇನಾದರೂ ಮುಂದುವರಿದರೆ ನಿಮ್ಮ ಕೈಯಿಂದ ಹಣ ಕಳೆದುಕೊಳ್ಳುವಂಥ ಸಾಧ್ಯತೆಗಳಿರುತ್ತವೆ. ಇತರರ ವೈಯಕ್ತಿಕ ವಿಚಾರಗಳ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆ ಮಾಡುವುದಕ್ಕೆ ಹೋಗಬೇಡಿ. ವಿನಾಕಾರಣ ವಾಗ್ವಾದಗಳಿಗೆ ಕಾರಣ ಆಗಬಹುದು. ಮಂಡಿ ನೋವಿನ ಸಮಸ್ಯೆ ಕಾಡುತ್ತಿರುವವರು ಕಡ್ಡಾಯವಾಗಿ ವೈದ್ಯರಲ್ಲಿ ತೋರಿಸಿಕೊಳ್ಳಿ. ವಾಹನ ಚಾಲನೆ ಮಾಡುವಾಗ ತುಂಬ ಎಚ್ಚರಿಕೆಯಿಂದ ಇರಬೇಕು.

ಲೇಖನ- ಎನ್‌.ಕೆ.ಸ್ವಾತಿ

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!