AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಆದಾಯ ಹೆಚ್ಚು ಮಾಡಿಕೊಳ್ಳಲು ಬಾಗಿಲು ತೆರೆದುಕೊಳ್ಳಲಿದೆ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 16ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ನಿಮ್ಮ ಕೆಲಸಗಳು, ಹಣಕಾಸಿನ ಹರಿವು, ಸಂಬಂಧಗಳು ಮತ್ತು ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ವಿವರವಾದ ಒಳನೋಟಗಳನ್ನು ಕಂಡುಕೊಳ್ಳಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಆದಾಯ ಹೆಚ್ಚು ಮಾಡಿಕೊಳ್ಳಲು ಬಾಗಿಲು ತೆರೆದುಕೊಳ್ಳಲಿದೆ
ದಿನ ಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Jan 16, 2026 | 12:30 AM

Share

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮ ವೃತ್ತಿ ಅಥವಾ ಉದ್ಯೋಗಕ್ಕೆ ಬಹಳ ದೊಡ್ಡ ಮಟ್ಟದಲ್ಲಿ ಸಹಾಯ ಆಗುವಂಥ ಮಾಹಿತಿಗಳು ದೊರೆಯಲಿವೆ. ನಿಮ್ಮಲ್ಲಿ ಯಾರು ಕಮಿಷನ್ ಆಧಾರದಲ್ಲಿ ಕೆಲಸ ಮಾಡುತ್ತಾ ಇದ್ದೀರಿ, ಅಂಥವರಿಗೆ ಪ್ರಭಾವಶಾಲಿ ಆದ ವ್ಯಕ್ತಿಯೊಬ್ಬರ ಮೂಲಕ ಹಲವು ಸಂಸ್ಥೆಗಳ ಸಂಪರ್ಕ ದೊರೆಯಲಿದ್ದು, ಆದಾಯದ ಪ್ರಮಾಣ ಹೆಚ್ಚು ಮಾಡಿಕೊಳ್ಳಲು ಬಾಗಿಲು ತೆರೆದುಕೊಳ್ಳಲಿದೆ. ಇನ್ನು ನಿಮ್ಮಲ್ಲಿ ಕೆಲವರು ಸಂಗಾತಿಯ ಸಲುವಾಗಿ ಕೆಲವು ದುಬಾರಿ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ಅಚಾನಕ್ಕಾಗಿ ದೂರ ಪ್ರಯಾಣ ಮಾಡಬೇಕಾಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಪೊಂಜಿ ಯೋಜನೆಗಳಿಂದ ದೂರ ಇರುವುದು ಬಹಳ ಮುಖ್ಯ. ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ರಿಟರ್ನ್ಸ್ ಸಿಗುತ್ತದೆ ಎಂಬ ಆಸೆ ತೋರಿಸಿ, ನಿಮ್ಮ ಸ್ನೇಹಿತರೋ ಸಂಬಂಧಿಗಳೋ ನಿಮಗಿಂತ ಮೇಲಿನ ಹುದ್ದೆಯಲ್ಲಿ ಕೆಲಸ ಮಾಡುವಂಥವರೋ ಒತ್ತಾಯ ಮಾಡಿದಲ್ಲಿ ಅಂಥವುಗಳಿಂದ ದೂರ ಉಳಿಯುವುದು ಸವಾಲಾಗಲಿದೆ. “ಇಲ್ಲ” ಎಂಬುದನ್ನು ಗಟ್ಟಿಯಾಗಿ ಹೇಳಿ. ಬಾಯಿ ರುಚಿಗೆ ಬಿದ್ದು, ನಿಮ್ಮ ದೇಹ ಪ್ರಕೃತಿಗೆ ಒಗ್ಗದ ಖಾದ್ಯ- ತಿನಿಸುಗಳನ್ನು ಸೇವಿಸಿ, ಕೆಲವು ದೈಹಿಕ ತೊಂದರೆ ಅನುಭವಿಸುವಂತೆ ಆಗಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಹಳೇ ಸ್ನೇಹ- ಪರಿಚಯಗಳನ್ನು ಮತ್ತೊಮ್ಮೆ ಮುಂದುವರಿಸಲು ಬೇಕಾದ ವೇದಿಕೆಯೊಂದು ಈ ದಿನ ನಿಮಗೆ ಸಿಗಲಿದೆ. ಹಣದ ವಿಚಾರಕ್ಕೆ ಸೋದರ- ಸೋದರಿಯರ ಜೊತೆಗೆ ಇರುವ ಅಭಿಪ್ರಾಯ ಭೇದಗಳನ್ನು ಬಗೆಹರಿಸಿಕೊಳ್ಳಲು ತಂದೆ- ತಾಯಿ ಸಹಾಯ ಮಾಡಲಿದ್ದಾರೆ. ದೂರ ಪ್ರಯಾಣ ಮಾಡುವುದರಿಂದ ನಿಮ್ಮಲ್ಲಿ ಕೆಲವರಿಗೆ ದೈಹಿಕವಾಗಿ ಒತ್ತಡ ಏರ್ಪಡಲಿದೆ. ಇತರರ ವೈಯಕ್ತಿಕ ವಿಷಯಗಳಿಗೆ ತಲೆ ಹಾಕಬೇಡಿ. ಸಿವಿಲ್ ಎಂಜಿನಿಯರ್ ಗಳಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಉದ್ಯೋಗದ ಆಫರ್ ಬರಲಿದೆ.

ಲೇಖನ- ಸ್ವಾತಿ ಎನ್.ಕೆ.

ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು