AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಹಣಕಾಸು, ಕುಟುಂಬ, ಪ್ರೀತಿ, ಆರೋಗ್ಯ, ಶಿಕ್ಷಣ, ದೃಢತೆ ಸಂವಹನ ಮತ್ತು ವಿಶ್ರಾಂತಿ ಕುರಿತು ಪ್ರಮುಖ ಸಲಹೆಗಳನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 17ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ
NumerologyImage Credit source: honeysucklemag
ಸ್ವಾತಿ ಎನ್​ಕೆ
| Edited By: |

Updated on: Feb 17, 2026 | 1:15 AM

Share

ಓದುವ ಮಕ್ಕಳಿಗೆ ಬರೆಯುವ ಪುಸ್ತಕ, ಪೆನ್ ಅಥವಾ ಪೆನ್ಸಿಲ್ ಇಂಥವುಗಳನ್ನು ಕೊಡಿಸಿ. ಇದರಿಂದ ನಿರ್ಧಾರದ ವಿಚಾರದಲ್ಲಿ ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ದೂರವಾಗಲಿವೆ. ಇನ್ನು ಮನಸ್ತಾಪ ಆಗಿ ದೂರವಾಗಿರುವ ಸ್ನೇಹಿತರು ಮತ್ತೆ ಒಂದಾಗುವ ವೇದಿಕೆ ದೊರೆಯುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಆರೋಗ್ಯ ವಿಚಾರದಲ್ಲಿ ನಿಮ್ಮ ನಂಬಿಕೆಗಳು ಬದಲಾಗುವಂಥ ದಿನ ಇದಾಗಿರುತ್ತದೆ. ವಿದ್ಯಾರ್ಥಿಗಳು ನಿಮ್ಮ ರಿವಿಷನ್ ಪೂರ್ಣಗೊಳಿಸುವುದಕ್ಕೆ ಆದ್ಯತೆಯನ್ನು ನೀಡಿದಲ್ಲಿ. ಇನ್ನು ನಿಮ್ಮಲ್ಲಿ ಕೆಲವರಿಗೆ ಸ್ನೇಹಿತರ ಸಲಹೆ ನೀಡಲಿದ್ದಾರೆ, ಆದರೆ ತೀರ್ಮಾನ ನಿಮ್ಮದೇ ಇರಲಿ. ನಿಮ್ಮ ಚಾತುರ್ಯ ಮತ್ತು ಮಾತನಾಡುವ ಕಲೆ ಅನೇಕ ಅವಕಾಶಗಳನ್ನು ನಿಮಗೆ ತರಲಿದೆ. ಕೆಲಸದ ಸ್ಥಳದಲ್ಲಿ ನೀವು ನೀಡುವ ನಂಬಿಕೆ ಹಾಗೂ ತುಂಬುವ ವಿಶ್ವಾಸವು ಜೊತೆಯಲ್ಲಿ ಇರುವವರಿಗೆ ಸ್ಪಷ್ಟತೆ ನೀಡುತ್ತವೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಿಮ್ಮ ಕೆಲಸದಲ್ಲಿ ಕೆಲವು ವಿಳಂಬಗಳು ಕಂಡರೂ ಅನುಸರಿಸುವಂಥ ಕಾರ್ಯಪದ್ಧತಿ- ವಿಧಾನದಲ್ಲಿ ನಂಬಿಕೆ ಇಟ್ಟು ಮುಂದುವರಿಯಿರಿ. ಒಂದು ವೇಳೆ ನೀವೇನಾದರೂ ಸಂಬಂಧಿಗಳು- ಸ್ನೇಹಿತರಿಂದ ಸಾಲ ಪಡೆದಿದ್ದಲ್ಲಿ ಆ ಬಾಕಿ ಪಾವತಿಯನ್ನು ಕೊಟ್ಟಿದ್ದ ಮಾತಿಗಿಂತ ಮೊದಲೇ ಮಾಡುವುದು ಉತ್ತಮ. ಕುಟುಂಬದವರ ಒತ್ತಡವು ಮನಸ್ಸಿಗೆ ತೊಂದರೆ ನೀಡಿದರೂ ಮಾತುಕತೆ ಮೂಲಕ ಎಲ್ಲವನ್ನು ಸರಿಪಡಿಸಬಹುದು. ಪ್ರೀತಿಯಲ್ಲಿ ಸಹನೆಯಿಂದ ನಡೆದುಕೊಂಡರೆ ಆತ್ಮೀಯತೆ ಹೆಚ್ಚಿಸುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಪ್ರೀತಿಯಲ್ಲಿ ಇರುವವರು ಅಹಂಕಾರದಿಂದ ದೂರವಿರಿ, ಪರಸ್ಪರ ಗೌರವವೇ ಗಟ್ಟಿ ಸಂಬಂಧದ ಶಕ್ತಿ ಆಗಿರುತ್ತದೆ. ಪ್ರಾಣಾಯಾಮ- ವ್ಯಾಯಾಮ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ. ವಿದ್ಯಾರ್ಥಿಗಳು ವಿಷಯವನ್ನು ಭಾಗವಾಗಿ ಮಾಡಿಕೊಂಡು ಕಲಿಯುವುದು ಉತ್ತಮ. ಸ್ನೇಹಿತರ ಮಾತುಗಳಿಗೆ ಭಾವನಾತ್ಮಕವಾಗಿ ಪ್ರತಿಕ್ರಿಯಿಸಬೇಡಿ. ದೈವಸ್ಮರಣೆಗೆ ಆತ್ಮವಿಶ್ವಾಸ ಹೆಚ್ಚಿಸುವ ಶಕ್ತಿಯಿದೆ. ಕೆಲವೊಮ್ಮೆ ನೀವು ಪಟ್ಟ ಪರಿಶ್ರಮಕ್ಕೆ ತಕ್ಷಣ ಫಲ ಸಿಗದಿದ್ದರೂ ಅದು ವ್ಯರ್ಥವಾಗುವುದಿಲ್ಲ.

ಲೇಖನ- ಸ್ವಾತಿ ಎನ್.ಕೆ.

ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ?
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ