AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜನವರಿ 10ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 10 ಸೋಮವಾರದ ದಿನ ಭವಿಷ್ಯ ಹೇಗಿದೆ? ಯಾವ ರಾಶಿಗೆ ಏನು ಫಲ? ಎನ್ನುವುದನ್ನು ತಿಳಿದುಕೊಳ್ಳಿ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜನವರಿ 10ರ ದಿನಭವಿಷ್ಯ
ಸಂಖ್ಯಾಶಾಸ್ತ್ರ
TV9 Web
| Edited By: |

Updated on: Jan 10, 2023 | 5:47 AM

Share

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜನವರಿ 10ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಮನೆಗೆ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವುದಕ್ಕೆ ವಿಚಾರಣೆ ನಡೆಸಲಿದ್ದೀರಿ. ಕ್ರೆಡಿಟ್ ಕಾರ್ಡ್ ಬಳಸುವಂಥವರು ಖರ್ಚಿನ ಮೇಲೆ ಹಿಡಿತ ಇರಿಸಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಬಹಳ ನಿರೀಕ್ಷೆ ಇರಿಸಿಕೊಂಡಿದ್ದ ಫಲಿತಾಂಶವೊಂದು ಅಂದುಕೊಂಡಂತೆ ಬರುವುದಿಲ್ಲ. ಎಲ್ಲರೂ ಒಪ್ಪುವಂಥ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದುಕೊಳ್ಳಬೇಡಿ, ಯಾಕೆಂದರೆ ಎಲ್ಲರನ್ನೂ ಮೆಚ್ಚಿಸುವಂಥ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಸಣ್ಣ ಸಹಾಯ ತೆಗೆದುಕೊಂಡು ಬೇಕು ಎಂಬ ನಿರ್ಧಾರ ಮಾಡಿದರೂ ವ್ಯಕ್ತಿಯ ಹಿನ್ನೆಲೆಯನ್ನು ಸಾದ್ಯಂತವಾಗಿ ಗಮನಿಸಬೇಕು. ಇಲ್ಲದಿದ್ದರೆ ಸಮಾಜದಲ್ಲಿ ನಿಮ್ಮ ಹೆಸರಿಗೆ ಮಸಿ ಅಂಟಿಕೊಳ್ಳುವಂತಾಗುತ್ತದೆ. ವಕೀಲ ವೃತ್ತಿಯಲ್ಲಿ ಇರುವವರಿಗೆ ಸಂಪರ್ಕಗಳು ವೃದ್ಧಿ ಆಗಲಿದೆ. ಪಿತ್ರಾರ್ಜಿತ ಆಸ್ತಿ ವ್ಯಾಜ್ಯಗಳು ನಡೆಯುತ್ತಿದ್ದಲ್ಲಿ ನ್ಯಾಯಾಲಯದಿಂದ ಹೊರಗೆ ಇತ್ಯರ್ಥ ಮಾಡಿಕೊಳ್ಳುವುದಕ್ಕೆ ಅವಕಾಶ ದೊರೆಯುತ್ತದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮ್ಮ ಶಿಫಾರಸು ಕೇಳಿಕೊಂಡು ಸ್ನೇಹಿತರು, ಸಂಬಂಧಿಕರ ಕಡೆಯಿಂದ ಜನರು ಬರಬಹುದು. ನಿಮ್ಮಿಂದ ಸಹಾಯ ಮಾಡುವುದಕ್ಕೆ ಸಾಧ್ಯವಾದಲ್ಲಿ ಖಂಡಿತಾ ನೆರವಾಗಿ. ಮದುವೆಗಾಗಿ ಪ್ರಯತ್ನ ಮಾಡುತ್ತಿದ್ದಲ್ಲಿ ಸೂಕ್ತ ಸಂಬಂಧ ದೊರೆಯಲಿದೆ. ಕಾರಿನಲ್ಲಿ ಪ್ರಯಾಣ ಮಾಡುವವರು ಚಾಲನೆ ವೇಳೆ ಎಚ್ಚರಿಕೆಯಿಂದ ಇರಬೇಕು. ದೀರ್ಘ ಕಾಲದಿಂದ ಮಾಡುತ್ತಿದ್ದ ಪ್ರಯತ್ನಗಳು ಈಗ ಫಲ ನೀಡುವ ಸಮಯ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಇತರರ ವಿಚಾರಗಳಿಗೆ ನಿಮ್ಮ ಅಭಿಪ್ರಾಯದ ಅಗತ್ಯ ಇಲ್ಲದೆ ನೀವಾಗಿಯೇ ಹೇಳಬೇಡಿ. ಸ್ತ್ರೀಯರ ವಿಚಾರದಲ್ಲಿ ಪುರುಷರು ಹಾಗೂ ಪುರುಷರ ವಿಚಾರದಲ್ಲಿ ಸ್ತ್ರೀಯರು ಬಹಳ ಎಚ್ಚರಿಕೆಯಿಂದ ಇರಬೇಕು. ಹೂಡಿಕೆ, ಉಳಿತಾಯಕ್ಕೆ ಸಂಬಂಧಿಸಿದಂತೆ ಯೋಜನೆ ರೂಪಿಸಲಿದ್ದೀರಿ. ಸಂಬಂಧಿಕರ ಮನೆಗಳಲ್ಲಿನ ಕಾರ್ಯಕ್ರಮಗಳಿಗೆ ನಿಮಗೆ ಆಹ್ವಾನ ಬರಲಿದೆ. ನಿಮ್ಮ ಖಾಸಗಿ ವಿಚಾರಗಳನ್ನು ಹೊಸಬರ ಮುಂದೆ ಚರ್ಚಿಸಬೇಡಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಈ ದಿನ ಎಲ್ಲರ ಮೇಲೂ ನಂಬಿಕೆ ಕಳೆದುಕೊಳ್ಳುವಂಥ ಸನ್ನಿವೇಶ ಎದುರಾಗುತ್ತದೆ. ಏಕಾಂಗಿ ಆಗಿಬಿಟ್ಟಿರೇನೋ ಎಂದು ಬಲವಾಗಿ ಅನಿಸಿಕೆ ಮೂಡುತ್ತದೆ. ಕ್ರಿಯೇಟಿವ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಪದೋನ್ನತಿಯ ಸೂಚನೆ ದೊರೆಯಲಿದೆ. ಹೊಸದಾಗಿ ಕೆಲಸಗಳನ್ನು ನೀಡುತ್ತಿದ್ದಾರೆ ಎಂಬ ಕಾರಣಕ್ಕೆ ಸಿಟ್ಟನ್ನು ಮಾಡಿಕೊಳ್ಳದಿರಿ, ಏಕೆಂದರೆ ಭವಿಷ್ಯದಲ್ಲಿ ಇದರಿಂದ ನಿಮಗೆ ಅನುಕೂಲ ಇದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ವೃಥಾ ಕಾರಣಕ್ಕೆ ಖರ್ಚು ಮಾಡಲಿದ್ದೀರಿ. ಒಂದು ರೂಪಾಯಿಯಲ್ಲಿ ಆಗುವ ಕೆಲಸಕ್ಕೆ ಮೂರು ರೂಪಾಯಿ ಕೈ ಬಿಡಲಿದೆ. ಆದ್ದರಿಂದ ನೀವು ಕೆಲವು ಕೆಲಸಗಳನ್ನು ಬೇರೆಯವರಿಗೆ ವಹಿಸುವುದೇ ಲಾಭದಾಯಕ ಎಂದೆನಿಸುತ್ತದೆ. ಕ್ಷಣ ಕಾಲದ ಮೋಹಕ್ಕೆ ಸಿಲುಕಿ, ತಪ್ಪಾದ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಯಾವ ತೀರ್ಮಾನವನ್ನೇ ಆದರೂ ಕೂತು, ಸಮಾಧಾನವಾಗಿ ಆಲೋಚಿಸಿ ಆ ನಂತರ ತೆಗೆದುಕೊಳ್ಳಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಡೆಡ್ ಲೈನ್ ಇಟ್ಟುಕೊಂಡು ಕೆಲಸ ಮಾಡುವವರಿಗೆ ಈ ದಿನ ಬಿಡುವು ಸಿಗದಷ್ಟು ಕೆಲಸಗಳು ಮೈಮೇಲೆ ಬರುತ್ತದೆ. ನಿಮ್ಮ ಪ್ರಭಾ ವಲಯ ವಿಸ್ತರಿಸಿಕೊಳ್ಳುವಂಥ ಸಮಯ ಇದಾಗಿರುತ್ತದೆ. ಮನೆಯವರೊಂದಿಗೆ ಉತ್ತಮ ಸಮಯವನ್ನು ಕಳೆಯಲಿದ್ದೀರಿ. ಮಕ್ಕಳ ಭವಿಷ್ಯಕ್ಕೆ ಸಂಬಂಧಿಸಿದಂತೆ ಬಹಳ ಪ್ರಮುಖವಾದ ತೀರ್ಮಾನಗಳನ್ನು ಕೈಗೊಳ್ಳಲಿದ್ದೀರಿ. ಮನೆಯಲ್ಲಿನ ಹಿರಿಯರು ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಯಾವ ಉದ್ದೇಶಕ್ಕಾಗಿ ಸಾಲ ಪಡೆಯುತ್ತೀರೋ ಅದೇ ಉದ್ದೇಶಕ್ಕಾಗಿ ಬಳಸುವ ಕಡೆಗೆ ಗಮನ ನೀಡಿ. ಇತರರು ಹೊಗಳಿದರು ಎಂಬ ಕಾರಣಕ್ಕೆ ನಿಮ್ಮ ಸಾಮರ್ಥ್ಯದ ನಿಜವಾದ ತಾಕತ್ತನ್ನು ಮೀರಿ ಆಲೋಚಿಸಬೇಡಿ. ತಮ್ಮ ಉಪಯೋಗಕ್ಕೆ ನಿಮ್ಮನ್ನು ಮೆಚ್ಚುವವರು ಯಾರು, ಹೊಗಳುವವರು ಯಾರು ಎಂಬ ಬಗ್ಗೆ ತಿಳಿವಳಿಕೆ ಇಟ್ಟುಕೊಳ್ಳಿ. ಹೊಸದಾಗಿ ವ್ಯಾಪಾರ- ವ್ಯವಹಾರ ಆರಂಭಿಸಿರುವವರಿಗೆ ಹಣಕಾಸಿನ ಸಮಸ್ಯೆಗಳು ಎದುರಾಗಬಹುದು.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಹಳೇ ತಪ್ಪುಗಳನ್ನು ಮುಂದೆ ಮಾಡಿಕೊಂಡು, ಯಾರ ಮೇಲೂ ದ್ವೇಷ ಸಾಧಿಸಬೇಡಿ. ನಿಮ್ಮ ಮಾತಿಗೆ ಗೌರವ, ಮನ್ನಣೆ ದೊರೆಯುವುದು ಹೆಚ್ಚಾಗಲಿದೆ. ವಾಹನ ಖರೀದಿ ಮಾಡಬೇಕು ಎಂದಿರುವವರಿಗೆ ಹಣಕಾಸು ಹರಿವು ಸರಾಗ ಆಗಲಿದೆ. ನೀವಾಗಿಯೇ ಒಪ್ಪಿಕೊಂಡ ಕೆಲಸವೊಂದು ಸಮಯಕ್ಕೆ ಸರಿಯಾಗಿ ಮಾಡಿಕೊಡುವುದು ಕಷ್ಟ ಆಗಲಿದೆ. ಎಂಥ ಸನ್ನಿವೇಶದಲ್ಲೂ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ.

ಲೇಖನ- ಎನ್‌.ಕೆ.ಸ್ವಾತಿ

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ