Sign In

By signing in or creating an account, you agree with Associated Broadcasting Company's Terms & Conditions and Privacy Policy.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 15ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 15ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆಬ್ರವರಿ 15ರ ದಿನಭವಿಷ್ಯ
Follow us
ಸ್ವಾತಿ ಎನ್​ಕೆ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 15, 2025 | 1:02 AM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಫೆಬ್ರವರಿ 15ರ ಶನಿವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಬೇಗ ಆಸಕ್ತಿ ಕಳೆದುಕೊಳ್ಳುವಂತೆ ಆಗಲಿದೆ. ಮನಸ್ಸಿಟ್ಟು, ಶ್ರಮಪಟ್ಟು ಮಾಡಿದ ಕೆಲಸ ಎಲ್ಲದರಲ್ಲೂ ಯಶಸ್ಸು ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ಮುಖ್ಯವಾಗಿ ನಿಮಗಿರುವ ಆಸಕ್ತಿ ಹಾಗೂ ಅಗತ್ಯವೇ ಎಲ್ಲರಿಗೂ ಇರುತ್ತದೆ ಎಂದು ಭಾವಿಸುವುದಕ್ಕೆ ಹೋಗಬೇಡಿ. ಮೇಲುನೋಟಕ್ಕೆ ಕಾಣುವಂತೆಯೇ ನೀವು ಈ ಕೆಲಸ ಮಾಡಿದ್ದು ಸಾಕು ಎಂಬಂತೆ ಕೆಲವರು ನಡೆದುಕೊಳ್ಳುವುದಕ್ಕೆ ಆರಂಭಿಸಲಿದ್ದಾರೆ. ಇದನ್ನು ಗುರುತಿಸುವುದರಲ್ಲಿ ಈ ದಿನ ನೀವೇನಾದರೂ ವಿಫಲವಾದಲ್ಲಿ ಇನ್ನಷ್ಟು ಸಮಯ ವ್ಯರ್ಥವಾಗಬಹುದು. ಈ ಹಿಂದೆ ಯಾವಾಗಲೋ ನಿಮ್ಮಿಂದ ಆಗಿದ್ದ ನಷ್ಟವೊಂದಕ್ಕೆ ಪರಿಹಾರ ಕಟ್ಟಿಕೊಡುವಂತೆ ಕೆಲವರು ಬೆನ್ನು ಬೀಳಲಿದ್ದಾರೆ. ಈ ರೀತಿ ನೀವು ಮಾತು ನೀಡಿದ್ದಿರಿ, ಅದಕ್ಕೆ ನಾವೇ ಸಾಕ್ಷಿ ಎಂದು ಹೇಳಿಕೊಂಡು ಕೆಲವು ಜನ ಅವರ ಬೆಂಬಲಕ್ಕೂ ನಿಲ್ಲಲಿದ್ದಾರೆ. ಇಂತಹ ಸನ್ನಿವೇಶದಲ್ಲಿ ಏನು ಹೇಳಬೇಕು ಎಂದು ತಿಳಿಯದೆ ನೀವು ಗೊಂದಲಕ್ಕೆ ಈಡಾಗುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನೀವು ಈ ಹಿಂದೆ ಯಾವುದು ಊಹಿಸಿದ್ದಿರೋ ಅದರಂತೆ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮಗಳು, ಸಭೆ- ಸಮಾರಂಭಗಳನ್ನು ಆಯೋಜಿಸುವಂಥ ಜವಾಬ್ದಾರಿಗಳು ನಿಮಗೆ ವಹಿಸುವಂಥ ಸಾಧ್ಯತೆಗಳಿವೆ. ಅಷ್ಟೇ ಅಲ್ಲ, ಹಣಕಾಸು ಹೊಂದಿಸಬೇಕಾದ ಹೆಚ್ಚುವರಿ ಹೊಣೆ ಕೂಡ ನಿಮ್ಮ ಮೇಲೆ ಬೀಳಬಹುದು. ಇದೇ ವಿಚಾರಕ್ಕೆ ನಿಮ್ಮ ಸ್ನೇಹಿತರು- ಆಪ್ತರ ಅಭಿಪ್ರಾಯಗಳು ವಿಭಜನೆ ಆಗಲಿವೆ. ಕೆಲವರು ಇದನ್ನು ವಹಿಸಿಕೊಳ್ಳುವಂತೆಯೂ ಹಾಗೂ ಮತ್ತೆ ಕೆಲವರು ಈ ಉಸಾಬರಿ ನಿಮಗೆ ಬೇಡ ಅಂತಲೂ ಹೇಳಬಹುದು. ಪ್ರೀತಿ- ಪ್ರೇಮದ ವಿಚಾರದಲ್ಲಿ ಗಟ್ಟಿ ತೀರ್ಮಾನವನ್ನು ಕೈಗೊಳ್ಳಲೇ ಬೇಕಾದ ಸ್ಥಿತಿ ಉದ್ಭವ ಆಗಲಿದೆ. ಇನ್ನು ಪ್ರಮುಖವಾದ ವ್ಯಕ್ತಿಯೊಬ್ಬರನ್ನು ಈ ದಿನ ಭೇಟಿ ಆಗುವ ಯೋಗ ನಿಮಗೆ ಇದೆ. ಅವರ ಜತೆಗಿನ ಒಡನಾಟದಿಂದ ನಿಮ್ಮ ಆಲೋಚನಾ ಕ್ರಮದಲ್ಲಿ ಬದಲಾವಣೆ ಆಗಲಿದೆ. ಅಷ್ಟೇ ಅಲ್ಲ, ದೀರ್ಘಾವಧಿಯಲ್ಲಿ ಆದಾಯ ತರುವಂಥ ಸಾಧ್ಯತೆಗಳು ಸಹ ಇವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಮುಕ್ತ ಮನಸ್ಸಿನಿಂದ ವರ್ತಿಸಲಿದ್ದೀರಿ. ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆಗಳು ಆಗಲಿವೆ. ತುಂಬ ಆಪ್ತರು ಹಾಗೂ ಬಂಧುಗಳು ನೀಡುವ ಕೆಲವು ಸಲಹೆ- ಸೂಚನೆಗಳಿಂದಾಗಿ ಬಹಳ ಬದಲಾವಣೆಗಳನ್ನು ನೀವು ಮಾಡಿಕೊಳ್ಳಲಿದ್ದೀರಿ. ನೀವು ಈಗಾಗಲೇ ತೆಗೆದುಕೊಂಡಿದ್ದ ತೀರ್ಮಾನಗಳನ್ನು ತಕ್ಷಣಕ್ಕೆ ತಿಳಿಸದೆ ಮುಂದಕ್ಕೆ ಹಾಕುವ ಸಾಧ್ಯತೆಗಳಿವೆ. ಇನ್ನೇನು ಇಂಥ ದಿನ ಹಣವನ್ನು ನೀಡುತ್ತೇನೆ ಎಂಬ ಮಾತು ನೀಡಿದ್ದವರು ಸಹ ಈ ತೀರ್ಮಾನದ ಬಗ್ಗೆ ಇನ್ನಷ್ಟು ಆಲೋಚನೆ ಮಾಡಬೇಕಿದೆ ಎಂದು ಹಣ ನೀಡುವುದನ್ನೇ ಮುಂದಕ್ಕೆ ಹಾಕಲಿದ್ದೀರಿ. ಸಂಗಾತಿಯ ಜತೆಗೆ ಉತ್ತಮವಾದ ಸಮಯವನ್ನು ಕಳೆಯುವಂಥ ಯೋಗ ಇದೆ. ಅವರು ನಿಮಗೆ ಅಚ್ಚರಿ ಮೂಡಿಸುವಂತೆ ಕೆಲವು ಉಡುಗೊರೆಗಳನ್ನು ನೀಡಬಹುದು ಅಥವಾ ಪ್ರವಾಸಕ್ಕೆ ಕರೆದೊಯ್ಯುವುದಕ್ಕೆ ಪ್ಲಾನ್ ಮಾಡಬಹುದು. ಕನಿಷ್ಠ ನೀವು ಬಹಳ ಇಷ್ಟ ಪಡುವಂಥ ರೆಸ್ಟೋರೆಂಟ್ ನಲ್ಲಿ ಊಟ- ತಿಂಡಿ ವ್ಯವಸ್ಥೆಯನ್ನಾದರೂ ಮಾಡುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಬಹಳ ಸಮಯದಿಂದ ಮಾಡಬೇಕು ಎಂದಿದ್ದ ಕೆಲವು ಕೆಲಸ ಈ ದಿನ ಮಾಡಲಿದ್ದೀರಿ. ಬ್ರಾಂಡೆಡ್ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಇದಕ್ಕಾಗಿ ನೀವೇನಾದರೂ ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಎಂದಾದರೆ ಅಳತೆಗೆ ಮೀರಿ ಖರ್ಚು ಬರಲಿದೆ. ನೀವೇನಾದರೂ ಕಮಿಷನ್ ಆಧಾರದಲ್ಲಿ ಕೆಲಸ ಮಾಡುವಂಥವರಾದರೆ ಅತಿ ಮುಖ್ಯವಾದ ಕೆಲಸವೊಂದು ನಿಮಗೆ ಬರಲಿದ್ದು, ಅದಕ್ಕೆ ದೊಡ್ಡ ಮೊತ್ತದ ಕಮಿಷನ್ ಆಫರ್ ಸಹ ಮಾಡಬಹುದು. ಸಿನಿಮಾ ಕ್ಷೇತ್ರದಲ್ಲಿ ಇರುವಂಥವರಿಗೆ ಪ್ರಶಸ್ತಿಗಳು ಬರುವ ಅಥವಾ ದೊಡ್ಡ ವ್ಯಕ್ತಿಗಳಿಂದ ಉಡುಗೊರೆ ಪಡೆಯುವಂತಹ ಸಾಧ್ಯತೆ ಇದೆ. ಮನೆ ಮಾರಾಟ ಮಾಡಿಬಿಡಬೇಕು ಎಂದುಕೊಳ್ಳುತ್ತಿರುವವರಿಗೆ ಒಳ್ಳೆ ಗ್ರಾಹಕರು ದೊರೆಯಬಹುದು. ಅಥವಾ ಈಗಾಗಲೇ ನೋಡಿಕೊಂಡು ಹೋಗಿ, ಬಹಳ ಸಮಯ ಆದಂಥವರೇ ಮತ್ತೆ ನಿಮ್ಮ ಆಸ್ತಿ ಖರೀದಿ ಮಾಡುವುದಕ್ಕೆ ಬರುವ ಸಾಧ್ಯತೆಗಳು ಇವೆ. ಆದರೆ ಹಣಕಾಸು ವಿಚಾರಕ್ಕೆ ನಿಮಗೇ ಸ್ವಲ್ಪ ಮಟ್ಟಿಗೆ ಗೊಂದಲ ಕಾಡಬಹುದು.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಹೊಸ ಉತ್ಸಾಹವೊಂದು ನಿಮ್ಮಲ್ಲಿ ಇರಲಿದೆ. ಕುಟುಂಬದಲ್ಲೋ ಅಥವಾ ಸ್ನೇಹಿತರು ಸೇರಿ ಆಯೋಜಿಸಬೇಕು ಎಂದುಕೊಂಡಿದ್ದ ಕಾರ್ಯಕ್ರಮಗಳ ಕೆಲಸ- ಕಾರ್ಯಗಳು ವೇಗ ಪಡೆದುಕೊಳ್ಳುತ್ತವೆ. ಸ್ನೇಹಿತರು ನಿಮ್ಮ ಬಳಿ ಮುಖ್ಯವಾದ ಸಲಹೆ- ಸೂಚನೆಗಳನ್ನು ಕೇಳಿಕೊಂಡು ಬರುವ ಸಾಧ್ಯತೆ ಇದೆ. ಇನ್ನು ನಿಖರವಾಗಿ ಹೇಳಬೇಕು ಅಂದರೆ, ನೀವು ನೀಡುವ ಸಲಹೆ- ಸೂಚನೆಗಳು ಅವರಿಗೆ ಮುಖ್ಯವಾಗುತ್ತದೆ. ಮನೆಗೆ ಬೆಳ್ಳಿ ವಸ್ತುಗಳನ್ನು ಖರೀದಿಸುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಅದರಲ್ಲೂ ದೇವರ ಪಾತ್ರೆಗಳು, ವಸ್ತುಗಳನ್ನು ತರುವಂಥ ಸಾಧ್ಯತೆ ಇದೆ. ನಿಮ್ಮಲ್ಲಿ ಕೆಲವರಿಗೆ ತಂದೆ- ತಾಯಿಯಿಂದ ದಾನಪತ್ರದ ಮೂಲಕವಾಗಿ ಆಸ್ತಿಗಳು ಬರುವಂಥ ಸುಳಿವು ದೊರೆಯಲಿದೆ. ಇನ್ನು ಬರಲಾರದು ಎಂದು ಭಾವಿಸಿದ್ದ ಕೆಲವು ಸಣ್ಣ ಮೊತ್ತದ ಹಣ ಕೂಡ ಈ ದಿನ ಪ್ರಯತ್ನ ಪಟ್ಟಲ್ಲಿ ಬರುವ ಅವಕಾಶಗಳು ಹೆಚ್ಚಿಗೆ ಇವೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಪ್ರಾಮುಖ್ಯ ಹೆಚ್ಚಾಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಏಕಾಗ್ರತೆಯನ್ನು ಕಾಪಾಡಿಕೊಳ್ಳುವುದು ತುಂಬ ಮುಖ್ಯ. ಈ ದಿನ ಸಣ್ಣ- ಪುಟ್ಟ ಅಪಘಾತಗಳಾಗುವ ಸಾಧ್ಯತೆಗಳಿವೆ. ಮಣ್ಣಿನ ರಸ್ತೆಯಲ್ಲಿ ಅಥವಾ ಹಳ್ಳ- ಗುಂಡಿಗಳು ಇರುವ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುವಂಥವರು ಬಿದ್ದು ಗಾಯಗೊಳ್ಳುವ ಸಾಧ್ಯತೆ ಹೆಚ್ಚಿದೆ. ಕೆಲವರು ನಿಮ್ಮನ್ನು ಮುಂದೆ ಬಿಟ್ಟು, ತಮ್ಮ ಕೆಲಸವನ್ನು ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಲಿದ್ದಾರೆ. ಅದನ್ನು ಕೇಳಿದ್ದಕ್ಕಾಗಿ ನೀವು ಪ್ರಭಾವಿಗಳ ದೃಷ್ಟಿಗೆ ಬಿದ್ದು, ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಇತರರು ಪುಸಲಾಯಿಸಿದರು ಎಂಬ ಕಾರಣಕ್ಕಾಗಿ ಪ್ರಭಾವಿಗಳನ್ನು ಎದುರು ಹಾಕಿಕೊಳ್ಳಬೇಡಿ. ಇನ್ನು ಈ ಹಿಂದೆ ಯಾವಾಗಲೋ ನೀವು ಹಾಕಿದ್ದ ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ಈ ದಿನ ವಿವಾದ ಬುಗಿಲೇಳುವ ಸಾಧ್ಯತೆಗಳಿವೆ. “ಇಲ್ಲ, ಅದನ್ನು ಹಾಕಿದ್ದು ಆ ಉದ್ದೇಶದಿಂದಲ್ಲ, ಈ ಕಾರಣದಿಂದ” ಎಂಬ ಸಮಜಾಯಿಷಿ ನೀಡುತ್ತಾ, ಒತ್ತಡಕ್ಕೆ ಗುರಿ ಆಗುವಂಥ ಸನ್ನಿವೇಶ ಸೃಷ್ಟಿ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಹೊಸ ವ್ಯಕ್ತಿಯಂತೆ ಆಲೋಚನೆಯಲ್ಲಿ ಬದಲಾವಣೆ ಆಗಲಿದೆ. ನಿಮ್ಮಲ್ಲಿ ಕೆಲವರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿ ಮಾಡುವಂಥ ಯೋಗ ಇದೆ. ಈ ಹಿಂದೆ ಯಾವಾಗಲೋ ಹೂಡಿಕೆ ಮಾಡಿದ್ದಂಥವುಗಳಿಗೆ ಉತ್ತಮ ರಿಟರ್ನ್ಸ್ ದೊರೆಯಲಿದೆ. ನೀವು ಅಂದುಕೊಂಡ ಕೆಲವು ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಬೇಕಾದ ಸಂಪನ್ಮೂಲ ಒಟ್ಟುಗೂಡಿಸುವ ಪ್ರಯತ್ನದಲ್ಲಿ ದೊಡ್ಡ ಮಟ್ಟದ ಸಾಫಲ್ಯ ಕಾಣಲಿದ್ದೀರಿ. ನಿಮ್ಮಲ್ಲಿ ಕೆಲವರು ನಿಮ್ಮ ಜಮೀನಿಗೋ ಅಥವಾ ಮನೆಗೋ ಸೋಲಾರ್ ಸಾಧನಗಳನ್ನು ಅಳವಡಿಸುವುದಕ್ಕೆ ತೀರ್ಮಾನವನ್ನು ಕೈಗೊಳ್ಳಲಿದ್ದೀರಿ. ಸಂತಾನ ಅಪೇಕ್ಷಿತರು ಶುಭ ಸುದ್ದಿ ಕೇಳುವ ಯೋಗ ಇದೆ. ಇನ್ನು ಐವಿಎಫ್ ನಂಥ ಪದ್ಧತಿ ಮೂಲಕವಾಗಿ ಸಂತಾನಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸಹ ಈ ದಿನ ಉತ್ತಮ ಬೆಳವಣಿಗೆಗಳು ಆಗಲಿವೆ. ಈ ದಿನ ಯಾವುದೇ ಮುಖ್ಯ ಕೆಲಸಕ್ಕಾಗಿ ಮನೆಯಿಂದ ಹೊರಡುವ ಮೊದಲಿಗೆ ದುರ್ಗಾದೇವಿಯನ್ನು ಮನಸ್ಸಿನಲ್ಲಿ ಸ್ಮರಿಸಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಸ್ವಚ್ಛತೆಗೆ ಆದ್ಯತೆ ನೀಡುತ್ತೀರಿ. ಏಕಾಏಕಿ ಬದಲಾವಣೆಗಳನ್ನು ನೋಡುವುದಕ್ಕೆ ಆರಂಭಿಸುತ್ತೀರಿ. ಸಕಾರಾತ್ಮಕವಾದ ಬದಲಾವಣೆಯನ್ನು ನಿರೀಕ್ಷೆ ಸಹ ಮಾಡಬಹುದಾಗಿದೆ. ರಾಜಕಾರಣದಲ್ಲಿ ಇರುವಂಥವರಿಗೆ ನಿಮ್ಮ ಕೈಯಲ್ಲಿನ ಅವಕಾಶ ನಿಮ್ಮ ಬಳಿಯೇ ಇರುವುದು ಎಷ್ಟರ ಮಟ್ಟಿಗೆ ಸಾಧ್ಯ ಎಂಬುದನ್ನು ಹಲವು ಸಲ ಅಳೆದು ತೂಗಿ ನೋಡುವ ಪರಿಸ್ಥಿತಿ ಉದ್ಭವಿಸಲಿದೆ. ಅಡುಗೆ ಕಾಂಟ್ರಾಕ್ಟ್ ತೆಗೆದುಕೊಳ್ಳುವಂಥವರಿಗೆ ಒಂದಿಷ್ಟು ಆತಂಕ ತರುವಂಥ ಆರ್ಡರ್ ಗಳು ಬರಬಹುದು. ಅಂದರೆ ತುಂಬ ದೊಡ್ಡ ಮಟ್ಟದ ಆರ್ಡರ್ ಬಂದು, ಅದಕ್ಕೆ ಕೇಳಿದ ಮಟ್ಟಿಗಿನ ಅಡ್ವಾನ್ಸ್ ನೀಡುವುದಕ್ಕೆ ಗ್ರಾಹಕರು ಸಿದ್ಧರಿರುವುದಿಲ್ಲ. ಇದರಿಂದ ಚಿಂತೆಗೆ ಕಾರಣ ಆಗುತ್ತದೆ. ನಿಮಗೆ ಹಣ ತಂದುಕೊಡದಿದ್ದರೂ ಹೆಸರು ತರುವಂಥ ಕೆಲವು ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಮಕ್ಕಳ ಉನ್ನತ ಶಿಕ್ಷಣದ ವಿಷಯವು ಆದ್ಯತೆಯಾಗಿ ಪರಿಣಮಿಸಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಯಾವುದರಲ್ಲೂ ಉಡಾಫೆ ಬೇಡ. ಹೇಗಿದ್ದರೂ ಒಂದು ಸಲ ಹೇಳಿಯಾಗಿದೆ, ಒಪ್ಪಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸುತ್ತಾರೆ ಎಂದು ನಂಬಿಕೊಂಡು ಯಾವ ವಿಚಾರದಲ್ಲೂ ಸುಮ್ಮನೆ ಇರಬೇಡಿ. ಅದರಲ್ಲೂ ಈ ದಿನ ಫಾಲೋ ಅಪ್ ಮಾಡುವುದು ಬಹಳ ಮುಖ್ಯ ಆಗುತ್ತದೆ. ಭಾವನಾತ್ಮಕ ಕ್ಷಣಗಳಲ್ಲಿ ಯಾರಿಗೂ ಮಾತು ನೀಡುವುದಕ್ಕೆ ಹೋಗಬೇಡಿ. ಒಂದು ವೇಳೆ ಹಾಗನಿಸಿದರೂ ಮಾತನಾಡದೆ ಸುಮ್ಮನಿರುವುದಕ್ಕೆ ಪ್ರಯತ್ನಿಸಿ. ಆ ನಂತರ ನಿಜಕ್ಕೂ ನಿಮ್ಮಿಂದ ನೆರವು ನೀಡಲು ಸಾಧ್ಯವಾದರೆ ಹೇಳದೆ ಸಹಾಯವನ್ನು ಮಾಡಿ. ಮನೆಯಲ್ಲಿ ನೀರಿನ ಸಮಸ್ಯೆ ಉದ್ಭವಿಸಬಹುದು. ಅದಕ್ಕಾಗಿ ಹೆಚ್ಚಿನ ಖರ್ಚು ಸಹ ಆಗಬಹುದು. ನೀವು ಹಾಕಿಕೊಂಡ ಬಜೆಟ್ ಗಿಂತ ಹೆಚ್ಚಿನ ಮೊತ್ತವನ್ನು ಇದಕ್ಕಾಗಿ ವ್ಯಯಿಸಬೇಕಾಗುತ್ತದೆ. ಸೇಲ್ ಬಿಲ್ಡಿಂಗ್ ನಿರ್ಮಾಣ ಮಾಡುವಂಥವರಿಗೆ ಒಂದೇ ಸಲಕ್ಕೆ ಎರಡು- ಮೂರು ಕಡೆ ಕೆಲಸ ಆರಂಭಿಸುವ ಅವಕಾಶಗಳು ತೆರೆದುಕೊಳ್ಳಲಿವೆ.

ಲೇಖನ- ಎನ್‌.ಕೆ.ಸ್ವಾತಿ

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್