AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ಮೀನ ರಾಶಿಯಲ್ಲಿ ಶನಿ, ಕುಜ, ರವಿ, ಬುಧ ಗ್ರಹಗಳ ಚತುರ್ಗ್ರಹಿ ಯುತಿ ಏಪ್ರಿಲ್ 11 ರಿಂದ 15 ರವರೆಗೆ ನಡೆಯಲಿದೆ. ಈ ಪ್ರಬಲ ಗ್ರಹಗಳ ಸಂಯೋಗವು ದ್ವಾದಶ ರಾಶಿಗಳ ಮೇಲೆ ಶುಭ, ಮಿಶ್ರ ಮತ್ತು ಅಶುಭ ಪರಿಣಾಮಗಳನ್ನು ಬೀರಲಿದೆ. ನಿಮ್ಮ ರಾಶಿಗಳಿಗೆ ಈ ಅಲ್ಪಾವಧಿಯ ಗ್ರಹ ಸಂಚಾರದಿಂದ ಉಂಟಾಗುವ ಆರ್ಥಿಕ, ವೃತ್ತಿ, ಕೌಟುಂಬಿಕ ಮತ್ತು ಆರೋಗ್ಯದ ಮೇಲಿನ ಪರಿಣಾಮಗಳನ್ನು ತಿಳಿಯಲು ಸಂಪೂರ್ಣ ರಾಶಿ ಭವಿಷ್ಯವನ್ನು ಓದಿ.

ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Apr 13, 2026 | 5:07 PM

Share

ಮೀನ ರಾಶಿಯಲ್ಲಿ ಶನಿ, ಕುಜ, ರವಿ ಮತ್ತು ಬುಧ – ಈ ನಾಲ್ಕು ಪ್ರಬಲ ಗ್ರಹಗಳ ಯುತಿ ನಡೆಯುತ್ತಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನವಾಗಿದೆ. ಈ ಚತುರ್ಗ್ರಹಿ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪರಿಣಾಮಗಳನ್ನು ಬೀರುತ್ತದೆ. ಈ ಸಂಯೋಗವು ಏಪ್ರಿಲ್ 11ರಿಂದ ಆರಂಭವಾಗಿ ಏಪ್ರಿಲ್15ರವರೆಗೆ ಇರಲಿದೆ. ಅಲ್ಪಾವಧಿಯಾದರೂ ಗ್ರಹಗಳು ತಮ್ಮ ಕಾರ್ಯವನ್ನು ಮಾಡಿ ಮುಂದಡಿಯಿಡುತ್ತವೆ.

​ಶುಭ ಫಲದ ರಾಶಿಗಳು

​ವೃಷಭ ರಾಶಿ:

ನಿಮಗೆ ಈ ಸಂಯೋಗವು ಲಾಭ ಸ್ಥಾನದಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಉತ್ತಮ ಪ್ರಗತಿ ಕಂಡುಬರಲಿದೆ. ಹಳೆಯ ಬಾಕಿ ಹಣ ವಾಪಸ್ ಬರಬಹುದು ಮತ್ತು ಉದ್ಯೋಗದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ.

​ಮಿಥುನ ರಾಶಿ:

ಕರ್ಮ ಸ್ಥಾನದಲ್ಲಿ ಈ ಗ್ರಹಗಳಿರುವುದರಿಂದ ವೃತ್ತಿ ಜೀವನದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಅಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದ್ದು, ಸಮಾಜದಲ್ಲಿ ಗೌರವ ಹೆಚ್ಚುತ್ತದೆ.

​ಕರ್ಕಾಟಕ ರಾಶಿ:

ಭಾಗ್ಯ ಸ್ಥಾನದಲ್ಲಿ ಈ ಯುತಿ ಇರುವುದರಿಂದ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚುತ್ತದೆ. ದೂರದ ಪ್ರಯಾಣದಿಂದ ಲಾಭವಾಗಲಿದ್ದು, ತಂದೆಯ ಕಡೆಯಿಂದ ಬೆಂಬಲ ಸಿಗಲಿದೆ.

​ವೃಶ್ಚಿಕ ರಾಶಿ:

ಬುದ್ಧಿವಂತಿಕೆಯಿಂದ ಕಠಿಣ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುತ್ತೀರಿ. ವಿದ್ಯಾರ್ಥಿಗಳಿಗೆ ಉತ್ತಮ ಸಮಯವಾಗಿದ್ದು, ಹೂಡಿಕೆಗಳಿಂದ ಲಾಭ ಪಡೆಯುವ ಸಾಧ್ಯತೆ ಇದೆ.

​ಮಿಶ್ರ ಫಲದ ರಾಶಿಗಳು

​ಮೇಷ ರಾಶಿ:

ವ್ಯಯ ಸ್ಥಾನದಲ್ಲಿ ಈ ಸಂಯೋಗವಿರುವುದರಿಂದ ಖರ್ಚುಗಳು ಹೆಚ್ಚಾಗಬಹುದು. ಆದರೆ ವಿದೇಶಿ ವ್ಯವಹಾರಗಳಲ್ಲಿ ತೊಡಗಿರುವವರಿಗೆ ಉತ್ತಮ ಲಾಭ ಸಿಗಲಿದೆ. ಆರೋಗ್ಯದ ಕಡೆ ಗಮನವಿರಲಿ.

​ಸಿಂಹ ರಾಶಿ:

ಅಷ್ಟಮ ಸ್ಥಾನದ ಈ ಯುತಿಯು ಹಠಾತ್ ಧನಲಾಭ ತರಬಹುದು, ಆದರೆ ವಾಹನ ಚಲಾಯಿಸುವಾಗ ಮತ್ತು ಸಂವಹನದಲ್ಲಿ ಜಾಗ್ರತೆ ಅಗತ್ಯ.

​ತುಲಾ ರಾಶಿ:

ಶತ್ರುಗಳ ಮೇಲೆ ಜಯ ಸಾಧಿಸುತ್ತೀರಿ. ಸಾಲದ ಹೊರೆ ಕಡಿಮೆಯಾಗಲಿದೆ, ಆದರೆ ಗುಪ್ತ ರೋಗಗಳು ಅಥವಾ ಸಣ್ಣಪುಟ್ಟ ಶಸ್ತ್ರಚಿಕಿತ್ಸೆಗಳ ಬಗ್ಗೆ ಎಚ್ಚರವಿರಲಿ.

​ಧನು ರಾಶಿ:

ಸುಖ ಸ್ಥಾನದಲ್ಲಿ ಈ ಗ್ರಹಗಳಿರುವುದರಿಂದ ಮನೆ ಅಥವಾ ಆಸ್ತಿ ಖರೀದಿಗೆ ಯೋಗವಿದೆ. ಆದರೆ ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗಬಹುದು.

​ಅಶುಭದ ರಾಶಿಗಳು

​ಕನ್ಯಾ ರಾಶಿ:

ಸಪ್ತಮ ಸ್ಥಾನದಲ್ಲಿ ಈ ಸಂಯೋಗವಿರುವುದರಿಂದ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಬಹುದು. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.

​ಮಕರ ರಾಶಿ:

ತೃತೀಯ ಸ್ಥಾನದಲ್ಲಿ ಈ ಯುತಿ ಇರುವುದರಿಂದ ಧೈರ್ಯ ಹೆಚ್ಚಾಗುತ್ತದೆ, ಆದರೆ ಒಡಹುಟ್ಟಿದವರೊಂದಿಗೆ ವಾಗ್ವಾದ ಉಂಟಾಗುವ ಸಾಧ್ಯತೆ ಇದೆ. ಸಣ್ಣ ಪ್ರಯಾಣಗಳು ಅಡೆತಡೆಗಳಿಂದ ಕೂಡಿರಬಹುದು.

​ಕುಂಭ ರಾಶಿ:

ಎರಡನೇ ಮನೆಯಲ್ಲಿ ಈ ಗ್ರಹಗಳಿರುವುದರಿಂದ ಮಾತಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಕಲಹವಾಗದಂತೆ ನೋಡಿಕೊಳ್ಳಿ. ಕಣ್ಣಿನ ಸಮಸ್ಯೆಗಳ ಬಗ್ಗೆ ಜಾಗ್ರತೆ ಅಗತ್ಯ.

​ಮೀನ ರಾಶಿ:

ನಿಮ್ಮದೇ ರಾಶಿಯಲ್ಲಿ ಈ ನಾಲ್ಕು ಗ್ರಹಗಳಿರುವುದರಿಂದ ಮಾನಸಿಕ ಒತ್ತಡ ಹೆಚ್ಚಿರಬಹುದು. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಬೇಡ. ಶನಿ ಮತ್ತು ಕುಜನ ಪ್ರಭಾವದಿಂದಾಗಿ ಕೋಪದ ಮೇಲೆ ಹತೋಟಿ ಇರಲಿ.

– ಲೋಹಿತ ಹೆಬ್ಬಾರ್

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ