AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ

ಮೀನ ರಾಶಿಯಲ್ಲಿ ಶನಿ, ಕುಜ, ರವಿ, ಬುಧ ಗ್ರಹಗಳ ಚತುರ್ಗ್ರಹಿ ಯುತಿ ಏಪ್ರಿಲ್ 11 ರಿಂದ 15 ರವರೆಗೆ ನಡೆಯಲಿದೆ. ಈ ಪ್ರಬಲ ಗ್ರಹಗಳ ಸಂಯೋಗವು ದ್ವಾದಶ ರಾಶಿಗಳ ಮೇಲೆ ಶುಭ, ಮಿಶ್ರ ಮತ್ತು ಅಶುಭ ಪರಿಣಾಮಗಳನ್ನು ಬೀರಲಿದೆ. ನಿಮ್ಮ ರಾಶಿಗಳಿಗೆ ಈ ಅಲ್ಪಾವಧಿಯ ಗ್ರಹ ಸಂಚಾರದಿಂದ ಉಂಟಾಗುವ ಆರ್ಥಿಕ, ವೃತ್ತಿ, ಕೌಟುಂಬಿಕ ಮತ್ತು ಆರೋಗ್ಯದ ಮೇಲಿನ ಪರಿಣಾಮಗಳನ್ನು ತಿಳಿಯಲು ಸಂಪೂರ್ಣ ರಾಶಿ ಭವಿಷ್ಯವನ್ನು ಓದಿ.

ಒಂದೇ ರಾಶಿಗೆ 4 ಕ್ರೂರ ಗ್ರಹಗಳ ಎಂಟ್ರಿ!: ಉದ್ಯೋಗ, ಹಣ ಕಳೆದುಕೊಳ್ಳವ ಸಾಧ್ಯತೆ, ಆದರೆ ಒಂದು ಸಮಾಧಾನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Apr 13, 2026 | 5:07 PM

Share

ಮೀನ ರಾಶಿಯಲ್ಲಿ ಶನಿ, ಕುಜ, ರವಿ ಮತ್ತು ಬುಧ – ಈ ನಾಲ್ಕು ಪ್ರಬಲ ಗ್ರಹಗಳ ಯುತಿ ನಡೆಯುತ್ತಿರುವುದು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ಅತ್ಯಂತ ಕುತೂಹಲಕಾರಿ ವಿದ್ಯಮಾನವಾಗಿದೆ. ಈ ಚತುರ್ಗ್ರಹಿ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪರಿಣಾಮಗಳನ್ನು ಬೀರುತ್ತದೆ. ಈ ಸಂಯೋಗವು ಏಪ್ರಿಲ್ 11ರಿಂದ ಆರಂಭವಾಗಿ ಏಪ್ರಿಲ್15ರವರೆಗೆ ಇರಲಿದೆ. ಅಲ್ಪಾವಧಿಯಾದರೂ ಗ್ರಹಗಳು ತಮ್ಮ ಕಾರ್ಯವನ್ನು ಮಾಡಿ ಮುಂದಡಿಯಿಡುತ್ತವೆ.

​ಶುಭ ಫಲದ ರಾಶಿಗಳು

​ವೃಷಭ ರಾಶಿ:

ನಿಮಗೆ ಈ ಸಂಯೋಗವು ಲಾಭ ಸ್ಥಾನದಲ್ಲಿ ನಡೆಯುವುದರಿಂದ ಆರ್ಥಿಕವಾಗಿ ಉತ್ತಮ ಪ್ರಗತಿ ಕಂಡುಬರಲಿದೆ. ಹಳೆಯ ಬಾಕಿ ಹಣ ವಾಪಸ್ ಬರಬಹುದು ಮತ್ತು ಉದ್ಯೋಗದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ.

​ಮಿಥುನ ರಾಶಿ:

ಕರ್ಮ ಸ್ಥಾನದಲ್ಲಿ ಈ ಗ್ರಹಗಳಿರುವುದರಿಂದ ವೃತ್ತಿ ಜೀವನದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಅಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದ್ದು, ಸಮಾಜದಲ್ಲಿ ಗೌರವ ಹೆಚ್ಚುತ್ತದೆ.

​ಕರ್ಕಾಟಕ ರಾಶಿ:

ಭಾಗ್ಯ ಸ್ಥಾನದಲ್ಲಿ ಈ ಯುತಿ ಇರುವುದರಿಂದ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚುತ್ತದೆ. ದೂರದ ಪ್ರಯಾಣದಿಂದ ಲಾಭವಾಗಲಿದ್ದು, ತಂದೆಯ ಕಡೆಯಿಂದ ಬೆಂಬಲ ಸಿಗಲಿದೆ.

​ವೃಶ್ಚಿಕ ರಾಶಿ:

ಬುದ್ಧಿವಂತಿಕೆಯಿಂದ ಕಠಿಣ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುತ್ತೀರಿ. ವಿದ್ಯಾರ್ಥಿಗಳಿಗೆ ಉತ್ತಮ ಸಮಯವಾಗಿದ್ದು, ಹೂಡಿಕೆಗಳಿಂದ ಲಾಭ ಪಡೆಯುವ ಸಾಧ್ಯತೆ ಇದೆ.

​ಮಿಶ್ರ ಫಲದ ರಾಶಿಗಳು

​ಮೇಷ ರಾಶಿ:

ವ್ಯಯ ಸ್ಥಾನದಲ್ಲಿ ಈ ಸಂಯೋಗವಿರುವುದರಿಂದ ಖರ್ಚುಗಳು ಹೆಚ್ಚಾಗಬಹುದು. ಆದರೆ ವಿದೇಶಿ ವ್ಯವಹಾರಗಳಲ್ಲಿ ತೊಡಗಿರುವವರಿಗೆ ಉತ್ತಮ ಲಾಭ ಸಿಗಲಿದೆ. ಆರೋಗ್ಯದ ಕಡೆ ಗಮನವಿರಲಿ.

​ಸಿಂಹ ರಾಶಿ:

ಅಷ್ಟಮ ಸ್ಥಾನದ ಈ ಯುತಿಯು ಹಠಾತ್ ಧನಲಾಭ ತರಬಹುದು, ಆದರೆ ವಾಹನ ಚಲಾಯಿಸುವಾಗ ಮತ್ತು ಸಂವಹನದಲ್ಲಿ ಜಾಗ್ರತೆ ಅಗತ್ಯ.

​ತುಲಾ ರಾಶಿ:

ಶತ್ರುಗಳ ಮೇಲೆ ಜಯ ಸಾಧಿಸುತ್ತೀರಿ. ಸಾಲದ ಹೊರೆ ಕಡಿಮೆಯಾಗಲಿದೆ, ಆದರೆ ಗುಪ್ತ ರೋಗಗಳು ಅಥವಾ ಸಣ್ಣಪುಟ್ಟ ಶಸ್ತ್ರಚಿಕಿತ್ಸೆಗಳ ಬಗ್ಗೆ ಎಚ್ಚರವಿರಲಿ.

​ಧನು ರಾಶಿ:

ಸುಖ ಸ್ಥಾನದಲ್ಲಿ ಈ ಗ್ರಹಗಳಿರುವುದರಿಂದ ಮನೆ ಅಥವಾ ಆಸ್ತಿ ಖರೀದಿಗೆ ಯೋಗವಿದೆ. ಆದರೆ ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗಬಹುದು.

​ಅಶುಭದ ರಾಶಿಗಳು

​ಕನ್ಯಾ ರಾಶಿ:

ಸಪ್ತಮ ಸ್ಥಾನದಲ್ಲಿ ಈ ಸಂಯೋಗವಿರುವುದರಿಂದ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಬಹುದು. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ.

​ಮಕರ ರಾಶಿ:

ತೃತೀಯ ಸ್ಥಾನದಲ್ಲಿ ಈ ಯುತಿ ಇರುವುದರಿಂದ ಧೈರ್ಯ ಹೆಚ್ಚಾಗುತ್ತದೆ, ಆದರೆ ಒಡಹುಟ್ಟಿದವರೊಂದಿಗೆ ವಾಗ್ವಾದ ಉಂಟಾಗುವ ಸಾಧ್ಯತೆ ಇದೆ. ಸಣ್ಣ ಪ್ರಯಾಣಗಳು ಅಡೆತಡೆಗಳಿಂದ ಕೂಡಿರಬಹುದು.

​ಕುಂಭ ರಾಶಿ:

ಎರಡನೇ ಮನೆಯಲ್ಲಿ ಈ ಗ್ರಹಗಳಿರುವುದರಿಂದ ಮಾತಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಕಲಹವಾಗದಂತೆ ನೋಡಿಕೊಳ್ಳಿ. ಕಣ್ಣಿನ ಸಮಸ್ಯೆಗಳ ಬಗ್ಗೆ ಜಾಗ್ರತೆ ಅಗತ್ಯ.

​ಮೀನ ರಾಶಿ:

ನಿಮ್ಮದೇ ರಾಶಿಯಲ್ಲಿ ಈ ನಾಲ್ಕು ಗ್ರಹಗಳಿರುವುದರಿಂದ ಮಾನಸಿಕ ಒತ್ತಡ ಹೆಚ್ಚಿರಬಹುದು. ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಬೇಡ. ಶನಿ ಮತ್ತು ಕುಜನ ಪ್ರಭಾವದಿಂದಾಗಿ ಕೋಪದ ಮೇಲೆ ಹತೋಟಿ ಇರಲಿ.

– ಲೋಹಿತ ಹೆಬ್ಬಾರ್

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?