AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನ್ನೆರಡು ವರ್ಷಗಳಿಗೆ ಒಮ್ಮೆ ಬರುವ ಯೋಗವಿದು: ಈ ನಾಲ್ಕು ರಾಶಿಯವರು ಲಕ್ಕಿ

ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ಜೂನ್ 8-17 ರವರೆಗೆ ಅಪರೂಪದ ಗುರು-ಶುಕ್ರ ಸಂಯೋಗ ನಡೆಯಲಿದೆ. ಇದು ಜ್ಞಾನಕಾರಕ ಗುರು ಹಾಗೂ ಭೋಗಕಾರಕ ಶುಕ್ರರ ವಿಶೇಷ ಮಿಲನವಾಗಿದ್ದು, 12 ರಾಶಿಗಳ ಮೇಲೆ ಗಂಭೀರ ಪ್ರಭಾವ ಬೀರಲಿದೆ. ವೃಷಭ, ಕರ್ಕಾಟಕ, ಕನ್ಯಾ ಮತ್ತು ವೃಶ್ಚಿಕ ರಾಶಿಗಳಿಗೆ ಉತ್ತಮ ಫಲಗಳಿದ್ದು, ಕೆಲ ರಾಶಿಗಳು ಎಚ್ಚರಿಕೆ ವಹಿಸಬೇಕು.

ಹನ್ನೆರಡು ವರ್ಷಗಳಿಗೆ ಒಮ್ಮೆ ಬರುವ ಯೋಗವಿದು: ಈ ನಾಲ್ಕು ರಾಶಿಯವರು ಲಕ್ಕಿ
ಪ್ರಾತಿನಿಧಿಕ ಚಿತ್ರImage Credit source: Getty images
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jun 15, 2026 | 7:33 PM

Share

ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ದೇವಗುರು ಬೃಹಸ್ಪತಿ ಮತ್ತು ದೈತ್ಯಗುರು ಶುಕ್ರರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ಅತ್ಯಂತ ಅಪರೂಪದ ಹಾಗೂ ಶುಭದಾಯಕ ವಿದ್ಯಮಾನವಾಗಿದೆ. ಪುಷ್ಯ ನಕ್ಷತ್ರದ ಅಧಿಪತಿ ಶನಿಯಾಗಿದ್ದು, ಕರ್ಕಾಟಕವು ಚಂದ್ರನ ಮನೆಯಾಗಿದೆ. ಇಲ್ಲಿ ಜ್ಞಾನಕಾರಕ ಗುರು ಮತ್ತು ಭೋಗಕಾರಕ ಶುಕ್ರರ ಮಿಲನವು ದ್ವಾದಶ ರಾಶಿಗಳ ಮೇಲೆ ಗಂಭೀರ ಪ್ರಭಾವ ಬೀರುತ್ತದೆ. ಈ ಯೋಗವು ಜೂನ್ ೦೮ರಿಂದ ೧೭ರವರೆಗೆ ಇರುವ ಅತ್ಯಪರೂಪದ ಯೋಗವಾಗಿದೆ‌.

​ಉತ್ತಮ ಲಾಭ ರಾಶಿಗಳು

ಕರ್ಕಾಟಕ ರಾಶಿ: ಈ ಸಂಯೋಗವು ನಿಮ್ಮದೇ ರಾಶಿಯ ಮೊದಲ ಮನೆಯಲ್ಲಿ ನಡೆಯುವುದರಿಂದ ಅತ್ಯಂತ ಶ್ರೇಷ್ಠ ಫಲಗಳು ಲಭಿಸಲಿವೆ. ಸಮಾಜದಲ್ಲಿ ಗೌರವ, ಕೀರ್ತಿ ಹೆಚ್ಚಾಗಲಿದೆ. ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳಲಿದ್ದು, ನವವಿವಾಹಿತರಿಗೆ ಸಂತಾನ ಯೋಗವಿದೆ. ಬುದ್ಧಿಮತ್ತೆ ಮತ್ತು ಆಕರ್ಷಣೆ ಹೆಚ್ಚುತ್ತದೆ.

ಇದನ್ನೂ ಓದಿ: ಕೇತುವಿನ ಮೇಲಿದೆ ಕುಜನ ದೃಷ್ಟಿ: ಯಾರಿಗೆ ಒಲಿಯಲಿದೆ ಪೂರ್ಣ ರಾಜಯೋಗ? ಯಾರಿಗೆ ಧನಲಾಭ?

ವೃಷಭ ರಾಶಿ: ತೃತೀಯ ಭಾವದಲ್ಲಿ ನಡೆಯುವ ಈ ಸಂಯೋಗದಿಂದ ನಿಮ್ಮ ಧೈರ್ಯ ಮತ್ತು ಆತ್ಮವಿಶ್ವಾಸ ವೃದ್ಧಿಯಾಗುತ್ತದೆ. ಸಹೋದರ-ಸಹೋದರಿಯರಿಂದ ಬೆಂಬಲ ಸಿಗಲಿದೆ. ಕಲೆ, ಸಾಹಿತ್ಯ ಮತ್ತು ಮಾಧ್ಯಮ ರಂಗದಲ್ಲಿ ಇರುವವರಿಗೆ ಅಭೂತಪೂರ್ವ ಯಶಸ್ಸು ಸಿಗಲಿದೆ.

​ಕನ್ಯಾ ರಾಶಿ: ನಿಮ್ಮ ಲಾಭ ಸ್ಥಾನದಲ್ಲಿ ಗುರು‌ ಮತ್ತು ಶುಕ್ರರ ಮಿಲನವಾಗುವುದರಿಂದ ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ. ಹಳೆಯ ಹೂಡಿಕೆಗಳಿಂದ ಉತ್ತಮ ಲಾಭ ಸಿಗಲಿದೆ. ದೀರ್ಘಕಾಲದ ಆಸೆಗಳು ಈಡೇರಲಿದ್ದು, ಮಿತ್ರರಿಂದ ಸಹಕಾರ ದೊರೆಯಲಿದೆ.

ವೃಶ್ಚಿಕ ರಾಶಿ: ಭಾಗ್ಯ ಸ್ಥಾನದಲ್ಲಿ ಈ ಯುತಿ ಏರ್ಪಡುವುದರಿಂದ ಅದೃಷ್ಟದ ಸಂಪೂರ್ಣ ಬೆಂಬಲ ನಿಮಗಿರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದ್ದು, ತೀರ್ಥಯಾತ್ರೆ ಮಾಡುವ ಯೋಗವಿದೆ. ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಸಮಯ.

​ಮಧ್ಯಮ ಫಲ ಪಡೆಯುವ ರಾಶಿಗಳು

ಮೇಷ, ಸಿಂಹ, ತುಲಾ ಮತ್ತು ಧನು ರಾಶಿ: ಈ ರಾಶಿಗಳವರಿಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಪ್ರಗತಿ ಕಂಡುಬಂದರೂ, ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗಲಿವೆ. ಸುಖ-ಸಂತೋಷದ ಸಾಧನಗಳಿಗಾಗಿ ವೆಚ್ಚಗಳು ಅಧಿಕವಾಗಬಹುದು. ಆರೋಗ್ಯದ ಕಡೆಗೆ ಸ್ವಲ್ಪ ಗಮನ ಹರಿಸುವುದು ಉತ್ತಮ.

​ಜಾಗರೂಕರಾಗಿರಬೇಕಾದ ರಾಶಿಗಳು

ಮಿಥುನ, ಕನ್ಯಾ, ಮಕರ ಮತ್ತು ಕುಂಭ ರಾಶಿ: ಈ ರಾಶಿಗಳವರಿಗೆ ಧನ ನಷ್ಟ ಅಥವಾ ಅನಗತ್ಯ ಖರ್ಚುಗಳು ಎದುರಾಗಬಹುದು. ಶತ್ರುಗಳ ಕಾಟ ಮತ್ತು ಆರೋಗ್ಯದ ಏರುಪೇರುಗಳ ಬಗ್ಗೆ ಎಚ್ಚರವಿರಲಿ. ಸಾಲ ಕೊಡುವಾಗ ಅಥವಾ ತೆಗೆದುಕೊಳ್ಳುವಾಗ ಯೋಚಿಸಿ ನಿರ್ಧಾರ ಕೈಗೊಳ್ಳಿ.

ಇದನ್ನೂ ಓದಿ: ಉದ್ಯೋಗ ಭವಿಷ್ಯ: ಜೂನ್ 14ರಿಂದ 20ರವರೆಗೆ ಈ ರಾಶಿಯವರಿಗೆ ಸಿಗಲಿದೆ ಪ್ರಮೋಷನ್; ನಿಮ್ಮ ರಾಶಿಯ ಉದ್ಯೋಗ ಯೋಗ ಹೇಗಿದೆ?

​ಗುರು ಮತ್ತು ಶುಕ್ರರು ಪರಸ್ಪರ ಶತ್ರು ಗ್ರಹಗಳಾಗಿದ್ದರೂ, ಪುಷ್ಯ ನಕ್ಷತ್ರದ ಶುಭತ್ವ ಮತ್ತು ಕರ್ಕಾಟಕದ ಉಚ್ಛ ಸ್ಥಾನದಿಂದಾಗಿ ಈ ಸಂಯೋಗವು ಒಟ್ಟಾರೆಯಾಗಿ ಸಮಾಜದಲ್ಲಿ ಧಾರ್ಮಿಕತೆ, ಕಲಾತ್ಮಕತೆ ಮತ್ತು ಆರ್ಥಿಕ ಸುಧಾರಣೆಗೆ ಕಾರಣವಾಗುತ್ತದೆ.

ಲೋಹಿತ್ ಹೆಬ್ಬಾರ್ 

Follow Us
ಲೋಹಿತ ಹೆಬ್ಬಾರ್​, ಇಡುವಾಣಿ
ಲೋಹಿತ ಹೆಬ್ಬಾರ್​, ಇಡುವಾಣಿ

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ