Horoscope 28 Jan: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಒತ್ತಡ, ಬಂಧುಗಳಿಂದ ಮಾನಸಿಕ ಹಿಂಸೆ ಸಾಧ್ಯತೆ

ತಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಹಲವರು ದಿನದಿಂದ ರಾಶಿಭವಿಷ್ಯವನ್ನು ಓದುತ್ತಾರೆ. ಒಂದಷ್ಟು ಮಂದಿ ಯಾವುದೇ ಕಾರ್ಯವನ್ನು ಪ್ರಾರಂಭಿಸಬೇಕಾದರೆ ಇಂದಿನ ದಿನ ಹೇಗಿದೆ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಇದರ ಜೊತೆಗೆ ನಿತ್ಯಪಂಚಾಂಗವನ್ನೂ ನೋಡುತ್ತಾರೆ. ಹಾಗಿದ್ದರೆ, ಇಂದಿನ (ಜನವರಿ 28) ಶುಭಾಶುಭಕಾಲ ಹೇಗಿದೆ? 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ಈ ಕೆಳಗಿನಂತಿದೆ.

Horoscope 28 Jan: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಒತ್ತಡ, ಬಂಧುಗಳಿಂದ ಮಾನಸಿಕ ಹಿಂಸೆ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jan 28, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಜನವರಿ​​​​ 28) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಸೌಭಾಗ್ಯ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 28 ನಿಮಿಷಕ್ಕೆ, ರಾಹು ಕಾಲ ಸಂಜೆ 05:03 ರಿಂದ 06:28ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:46 ರಿಂದ 02:11 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:37 ರಿಂದ 05:03ರ ವರೆಗೆ.

ಮೇಷ ರಾಶಿ: ಇಂದು ನಿಮ್ಮ ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ ಆದರೆ ಮಾನಸಿಕ ಒತ್ತಡ ಇರಬಹುದು. ನೀವು ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಆದರೆ ನಿಮ್ಮ ಕೆಲಸದಲ್ಲಿ ನೀವು ಸಂತೋಷವಾಗಿರುವುದಿಲ್ಲ. ವೈವಾಹಿಕ ಜೀವನವು ಒತ್ತಡದಿಂದ ಇರಲಿದೆ. ನಿಮ್ಮ ಪ್ರೀತಿಪಾತ್ರರ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ಪ್ರೀತಿಯ ಹೊಸ ಅಧ್ಯಾಯವನ್ನು ಆರಂಭ ಮಾಡುವಿರಿ. ಒಂಟಿಯಾಗಿ ಕುಳಿತು ಕಳೆದ ದಿನಗಳನ್ನು ನೆನೆಯುವಿರಿ. ಮಕ್ಕಳ ಮದುವೆಯ ಚಿಂತೆಯೂ ಒಮ್ಮಿಂದೊಮ್ಮೆಲೆ ಬರಬಹುದು. ನಿಮ್ಮ ಮಾತಿಗೆ ಕುಟುಂಬವು ಸಮ್ಮತಿಸಬಹುದು. ಮನೆಯ ಪ್ರಶಾಂತ ವಾತಾವರಣವು ಉದ್ವಿಗ್ನಗೊಂಡೀತು. ಔದಾರ್ಯವು ಅಧಿಕವಾಗಿ ಬೇಡ. ಆಲಸ್ಯದಿಂದ ಇರುವ ಕಾರಣ ಯಾವ ಕೆಲಸವೂ ಸರಿಯಾದ ಸಮಯಕ್ಕೆ ಮಾಡುವುದಿಲ್ಲ. ಆರ್ಥಿಕವಾಗಿ ಬಲಗೊಳ್ಳಲು ನೀವು ದೈವಕ್ಕೆ ಶರಣಾಗುವಿರಿ. ಪಾಲುದಾರಿಕೆಯಲ್ಲಿ ಬಹುಪಾಲು ನಿಮ್ಮದಿರುವುದು.

ವೃಷಭ ರಾಶಿ: ನಿಮ್ಮ ಖರ್ಚು ಗಮನಾರ್ಹವಾಗಿ ಹೆಚ್ಚಾಗಬಹುದು. ಇದು ನೀವೇ ಕೆಲವು ಸಮಸ್ಯೆಗಳನ್ನು ಹುಟ್ಟುಹಾಕುವಿರಿ. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. ನಿಮ್ಮ ಜೀವನ ಸಂಗಾತಿಯ ಸೃಜನಶೀಲತೆಯನ್ನು ನೋಡಿ ನೀವು ತುಂಬಾ ಸಂತೋಷಪಡುತ್ತೀರಿ. ಅತಿಯಾದ ನಂಬಿಕೆಯು ನಿಮಗೆ ಸರಿಯಾಗದು. ನಿಮ್ಮ ಸ್ನೇಹಿತರೊಬ್ಬರಿಂದ ನೀವು ಸ್ವಲ್ಪ ಸಹಾಯ ಪಡೆಯಬಹುದು. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ಮಾತಿನಿಂದ ಸಮಾಧಾನವು ಬರುವುದು. ದೂರದಲ್ಲಿರುವ ಮಕ್ಕಳನ್ನು ನೋಡುವ ಆಸೆಯಾಗಬಹುದು. ಉದ್ಯಮದ ಕಾರಣ ಪ್ರಯಾಣ ಮಾಡುವ ಸ್ಥಿತಿಯು ಬರಬಹುದು. ಅಪ್ತರ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಿರಿ. ಹಿರಿಯರ ಬೋಧನೆಯು ಉಪಯುಕ್ತವೆನಿಸುವುದು. ಮನೆಯಿಂದ ದೂರವಿರುವ ನಿಮಗೆ ಮನೆಗೆ ಹೋಗಬೇಕು ಎಂದು ಅನ್ನಿಸುವುದು.

ಮಿಥುನ ರಾಶಿ: ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವುದು ನಿಮಗೆ ಸವಾಲಾಗಿ ಪರಿಣಮಿಸಬಹುದು. ನೀವು ಚಿಂತಿತರಾಗಿರುವ ಕಾರಣ ಮಾನಸಿಕ ಒತ್ತಡವೂ ಇರುತ್ತದೆ. ಖರ್ಚುಗಳು ಕಡಿಮೆಯಾಗುತ್ತವೆ ಮತ್ತು ಆದಾಯವು ಉತ್ತಮವಾಗಿರುತ್ತದೆ. ದಾಂಪತ್ಯ ಜೀವನದಲ್ಲಿ ಪ್ರೀತಿ ಇರುತ್ತದೆ. ಮಕ್ಕಳಿಂದ ಸಂತಸ ಇರುತ್ತದೆ. ಪ್ರೀತಿಯ ಜೀವನವನ್ನು ನಡೆಸುತ್ತಿರುವವರು ತಮ್ಮ ಹೃದಯದ ಭಾವನೆಗಳನ್ನು ತಮ್ಮ ಪ್ರೀತಿಪಾತ್ರರಿಗೆ ವ್ಯಕ್ತಪಡಿಸಿ ಆನಂದಿಸುವಿರಿ. ಮಾನಸಿಕ ಸ್ಥಿತಿಯೂ ಬಹಳ ಆಹ್ಲಾದದಿಂದ ಇರಲಿದೆ. ಯಾವ ಹೂಡಿಕೆಯು ನಿಮಗೆ ಲಾಭದಾಯಕವಾಗುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿಯನ್ನು ಇಟ್ಟುಕೊಂಡವರು ಗುರುವಿನ ಆಶೀರ್ವಾದವನ್ನು ಪಡೆದುಕೊಳ್ಳಿ. ನಿಮಗಾದ ವಂಚನೆಯನ್ನು ಗೌಪ್ಯವಾಗಿ ಇರಿಸಿಕೊಳ್ಳಿ. ಗೌರವವು ಕಡಿಮೆ ಆದಂತೆ ಅನ್ನಿಸೀತು. ಸಂಗಾತಿಯ ವಿಚಾರದಲ್ಲಿ ಸಂಪೂರ್ಣ ಖುಷಿ ಇರುವುದು.

ಕಟಕ ರಾಶಿ: ಇಂದು ನೀವು ಭವಿಷ್ಯಕ್ಕಾಗಿ ಹೊಸದನ್ನು ಯೋಚಿಸುವಿರಿ. ನಿಮ್ಮ ಕುಟುಂಬದ ಹಿರಿಯರ ಆಶೀರ್ವಾದದಿಂದ ನಿಮ್ಮ ಕೆಲಸವು ನೆರವೇರುತ್ತದೆ. ಉದ್ಯೋಗಸ್ಥರು ಇಂದು ಕೆಲವು ನಿರಾಶೆಯನ್ನು ಎದುರಿಸಬೇಕಾಗಬಹುದು. ವ್ಯಾಪಾರ ಮಾಡುವವರಿಗೆ ಇಂದು ಉತ್ತಮ ದಿನವಾಗಿರುತ್ತದೆ. ವೈವಾಹಿಕ ಜೀವನ ಸಾಮಾನ್ಯವಾಗಿರುತ್ತದೆ. ದುರಭ್ಯಾಸದಿಂದ ದೂರವಿರುವ ಮನಸ್ಸು ಬರಬಹುದು. ದೇಹಾರೋಗ್ಯದ ಬಗ್ಗೆ ಚಿಂತೆಯು ಹೆಚ್ಚಾದೀತು. ನಿಮ್ಮ ವಿಳಂಬ ಕಾರ್ಯಕ್ಕೆ ಹೇಳಿಸಿಕೊಳ್ಳಬೇಕಾದೀತು. ಪದೋನ್ನತಿಯ ಬಗ್ಗೆ ಕೇಳಿದರೂ ಏನೂ ಪ್ರಯೋಜನವಾಗದು. ಹಣಕಾಸಿನ ವ್ಯವಹಾರದ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿಕೊಳ್ಳಿ. ಬಂಗಾರದ ಬಗ್ಗೆ ವ್ಯಾಮೋಹ ಹೆಚ್ಚಾಗಲಿದೆ. ಸಂಗಾತಿಯನ್ನು ಹಣಕ್ಕಾಗಿ ಪೀಡಿಸುವಿರಿ. ಪ್ರೀತಿ ಪಾತ್ರರನ್ನು ನೀವು ದೂರಮಾಡುವಿರಿ. ವಿದ್ಯಾರ್ಥಿಗಳು ತಮ್ಮ ಅಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು. ನಿರಂತರ ಕೆಲಸದಿಂದ ಸ್ವಲ್ಪ ವಿಶ್ರಾಂತಿಯು ಮುಖ್ಯವಾದೀತು.

ಸಿಂಹ ರಾಶಿ: ನಿಮ್ಮ ಕೆಲಸದ ಬಗ್ಗೆ ನೀವು ಹೆಚ್ಚು ಗಮನ ಹರಿಸುತ್ತೀರಿ. ನ್ಯೂನತೆಗಳನ್ನು ನಿವಾರಿಸಲು ಪ್ರಯತ್ನಿಸುತ್ತೀರಿ. ಕೌಟುಂಬಿಕ ವಾತಾವರಣ ಉತ್ತಮವಾಗಿರುತ್ತದೆ. ಎಲ್ಲ ಜನರಿಂದ ಬೆಂಬಲ ಸಿಗಲಿದೆ. ಆದರೆ ನೆರೆಹೊರೆಯವರೊಂದಿಗೆ ವಿವಾದ ಉಂಟಾಗಬಹುದು. ಇದಕ್ಕೆ ಸಹಾಯವು ಸಿಗಲಿದೆ‌. ದಾಂಪತ್ಯ ಜೀವನದಲ್ಲಿ ಪ್ರೀತಿ ಮತ್ತು ಸಂತೋಷ ಉಳಿಯುತ್ತದೆ. ನಿಮ್ಮ ಸಂಬಂಧವು ಮಧುರವಾಗಿರುತ್ತದೆ. ಇಂದು ನೀವು ನಿಮ್ಮ ಹಳೆಯ ಸ್ನೇಹಿತನೊಂದಿಗೆ ನಿಮ್ಮ ಮನಸಿಗೆ ತಕ್ಕಂತೆ ಮಾತನಾಡುತ್ತೀರಿ. ಖರೀದಿಸಿದ ಭೂಮಿಯನ್ನು ಮತ್ತೊಬ್ಬರಿಗೆ ಕೊಟ್ಟುಬಿಡುವಿರಿ. ಸಾಲವನ್ನು ತೀರಿಸುವಷ್ಟು ಹಣವು ಆಗತ್ತದೋ ಇಲ್ಲವೋ ಎಂಬ ಭೀತಿ ಕಾಡುವುದು. ಹಿರಿಯರಿಂದ ನಿಮಗೆ ಮೆಚ್ಚುಗೆ ಸಿಗಬಹುದು. ದಾಂಪತ್ಯದಲ್ಲಿ ಪ್ರೀತಿಗೆ ನೀವು ಮಾರುಹೋಗಬಹುದು. ಅತಿಥಿಗಳ ಆಗಮನವು ನಿಮ್ಮ ಮನೆಗೆ ಆಗಲಿದೆ. ವೃತ್ತಿಯಲ್ಲಿ ನಿಮ್ಮ ಸಹಕಾರಕ್ಕೆ ಪ್ರಶಂಸೆಯು ಸಿಗುವುದು. ಪರಿಚಿತರ ಸ್ವತ್ತನ್ನು ಅಪಹರಿಸುವಿರಿ.

ಕನ್ಯಾ ರಾಶಿ: ನಿಮ್ಮ ಆದಾಯವನ್ನು ಹೆಚ್ಚುಮಾಡಿಕೊಳ್ಳಲು ಹೋಗಿ, ಮುಗ್ಗರಿಸಬಹುದು. ನಿಮ್ಮ ಶ್ರಮದ ಫಲಿತಾಂಶಗಳನ್ನು ಗುಣಾತ್ಮಕವಾಗಿ ಹೆಚ್ಚಿಸಬೇಕಾಗುವುದು. ಅದರ ಬಗ್ಗೆಯೇ ನಿಮ್ಮ ಗಮನವು ಇರುತ್ತದೆ. ಇದರಿಂದ ನಿಮ್ಮ ಆದಾಯವು ಹೆಚ್ಚಾಗುವುದನ್ನು ಕಾಣಬಹುದು. ದುಡಿಯುವ ಜನರಿಗೆ ಇಂದು ಉತ್ತಮ ದಿನ. ಅವರು ತಮ್ಮ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ವ್ಯಾಪಾರ ಮಾಡುವವರು ಹಿರಿಯ ವ್ಯಕ್ತಿಯಿಂದ ಬೆಂಬಲವನ್ನು ಪಡೆಯುತ್ತಾರೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಪ್ರೇಮ ಜೀವನವನ್ನು ಸಂತೋಷದಿಂದ ನಡೆಸುವಿರಿ. ಇಂದು ಧೈರ್ಯದ ಕಾರ್ಯದಲ್ಲಿ ಮುನ್ನಡೆಯಲು ಕೊರತೆ ಕಾಣಿಸಿಕೊಳ್ಳಬಹುದು. ಕೆಲವು ಮಾನಸಿಕ ಸ್ಥಿತಿಯನ್ನು ಬಿಡಲು ಪ್ರಯತ್ನಿಸುವಿರಿ. ಆದರೆ ಅದು ನಿಮಗೆ ಗೊತ್ತಿಲ್ಲದೇ ನಿಮ್ಮನ್ನು ಆವರಿಸಬಹುದು. ವಾಹನ ಖರೀದಿಸಲು ನಿಮಗೆ ಹಣಕಾಸಿನ ಕೊರತೆಯಾಗಿ ಮುಂದೂಡುವಿರಿ. ದಾಂಪತ್ಯದ ಇಂದಿನ ಕಲಹವನ್ನು ಅಲ್ಲಿಗೇ ನಿಲ್ಲಿಸಿ. ಹೆಚ್ಚು ಪ್ರಯತ್ನದಿಂದ ಅಲ್ಪ ಲಾಭ. ಇನ್ನೊಬ್ಬರ ನೇರವಾದ ಮಾತಿನಿಂದ ನಿಮಗೆ ನೋವಾಗುವುದು.

ತುಲಾ ರಾಶಿ: ನಿಮ್ಮ ಖರ್ಚುಗಳು ಇಂದು ಹೆಚ್ಚಾಗುತ್ತವೆ. ಮಾನಸಿಕ ಒತ್ತಡದಿಂದ ಆರೋಗ್ಯವೂ ಹದಗೆಡಬಹುದು. ನಿಮ್ಮ ಬಗ್ಗೆ ಸಂಪೂರ್ಣ ಗಮನವಿರಲಿ. ಉದ್ಯೋಗದಲ್ಲಿರುವ ಜನರು ಒತ್ತಡವನ್ನು ಎದುರಿಸಬೇಕಾಗುತ್ತದೆ ಮತ್ತು ಉದ್ಯೋಗವನ್ನು ಬದಲಾಯಿಸುವ ಆಲೋಚನೆ ಅವರ ಮನಸ್ಸಿನಲ್ಲಿ ಬರುತ್ತದೆ. ನೀವು ಎಲ್ಲಿಂದಲಾದರೂ ಲಾಭ ಪಡೆಯಬಹುದು. ನಿಮ್ಮ ಸಂಬಂಧಿಕರಿಂದ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ದಾಂಪತ್ಯ ಜೀವನದಲ್ಲಿ ಪ್ರೀತಿ ಇರುತ್ತದೆ. ಪ್ರೀತಿಯ ಜೀವನವನ್ನು ನಡೆಸುವ ಜನರು ಇಂದು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಸಾರ್ವಜನಿಕವಾಗಿ ಸಿಗುವ ಮನ್ನಣೆಯನ್ನು ವಿರೋಧಿಸುವರು. ಆದಾಯದ ವೃದ್ದಿಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುವಿರಿ. ಹಣಕಾಸಿನ ಮೌಲ್ಯವನ್ನು ಇಂದು ತಿಳಿದುಕೊಳ್ಳುವಿರಿ. ಪಿತ್ರಾರ್ಜಿತ ಆಸ್ತಿಯನ್ನು ಪಡೆಯಲು ನಿಮಗೆ ಅವಸರ ಹೆಚ್ಚಾಗಿರುವುದು. ಧನದ ಸಹಾಯವನ್ನು ನಿಮ್ಮ ಸ್ನೇಹಿತರು ನಿಮ್ಮಿಂದ ಬಯಸುವರು. ಇಂದು ಅಧಿಕ ಒತ್ತಡವಿಲ್ಲದೇ ಕಾರ್ಯವು ಮುಗಿಯುವುದು. ವಿದೇಶಪ್ರಯಾಣದಿಂದ ಖುಷಿಯು ಇರಲಿದೆ. ನೌಕರರು ನಿಮಗೆ ಪೂರಕವಾಗಿ ಇರುವರು.

ವೃಶ್ಚಿಕ ರಾಶಿ: ಇಂದು ನಿಮ್ಮ ಸ್ವಾಭಿಮಾನ ಹೆಚ್ಚಾಗುತ್ತದೆ. ನೀವು ಪ್ರತಿ ಕೆಲಸದಲ್ಲಿ ಯಶಸ್ಸನ್ನು ಪಡೆಯುವ ಹಂಬಲವಿರುವುದು. ಕೆಲಸಕ್ಕೆ ಸಂಬಂಧಿಸಿದಂತೆ ಅಲ್ಪ ಪ್ರಯೋಜನವನ್ನು ಪಡೆಯುವಿರಿ. ನಿಮ್ಮ ಕೆಲಸವನ್ನು ನೀವು ಆನಂದಿಸುವಿರಿ ಮತ್ತು ಮುಂದೆ ಸಾಗುತ್ತೀರಿ ಮತ್ತು ಬಿಡದೇ ಕೆಲಸವನ್ನು ಪೂರ್ಣಗೊಳಿಸುತ್ತೀರಿ. ಅದೃಷ್ಟ ನಿಮ್ಮ ಕಡೆ ಇರುತ್ತದೆ. ನೀವು ಯಾವುದೇ ಸವಾಲಿಗೆ ಹೆದರುವುದಿಲ್ಲ ಮತ್ತು ಶ್ರಮಿಸುತ್ತೀರಿ. ಉದ್ಯೋಗಿಗಳಿಗೆ ದಿನವು ಉತ್ತಮವಾಗಿರುತ್ತದೆ. ಅಪ್ರಬುದ್ಧ ಆಲೋಚನೆಗಳು ನಿಮ್ಮಿಂದ ದೂರವಿರಲಿ. ಸಾಹಸದ ಕೆಲಸಕ್ಕೆ ನೀವು ಹೆಚ್ಚು ಉತ್ಸುಕರಾಗಿದ್ದೀರಿ. ಶತ್ರುಬಾಧೆಯಿಂದ ಮನೆಯಲ್ಲಿಯೇ ಕಲಹದ ವಾತಾವರಣವು ಇರುವುದು. ಮೆಚ್ಚುಗೆಯ ಮಾತಿನಿಂದ ಸಂಕೋಚಗೊಳ್ಳುವಿರಿ. ಆರಿಸಿಕೊಂಡ ಆಯ್ಕೆಯು ನಿಮಗೆ ಇಷ್ಟವಾಗದೇ ಈಗ ಇರುವುದು. ಪರಿಚಿತರ ವಿಚಾರದಲ್ಲಿ ನೀವು ನಕಾರಾತ್ಮಕವಾಗಿ ಮಾತನಾಡುವಿರಿ.

ಧನು ರಾಶಿ: ಇಂದು ಮಾನಸಿಕ ಉದ್ವೇಗವಿರುತ್ತದೆ. ಆದರೂ ಕೆಲವು ಉತ್ತಮ ಫಲವನ್ನು ಸಹ ಪಡೆಯಬಹುದು. ನಿಮ್ಮ ಕುಟುಂಬದ ಜೊತೆ ನೀವು ಮುರಿಯಲಾಗದ ಬಂಧವನ್ನು ಬೆಳೆಸಿಕೊಳ್ಳುವಿರಿ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನೀವು ಮೆಚ್ಚುಗೆ ಪಡೆಯುತ್ತೀರಿ ಮತ್ತು ನಿಮ್ಮ ಕೆಲಸದ ಹೊರೆ ಹೆಚ್ಚಾಗುತ್ತದೆ. ನಿಮ್ಮ ದಕ್ಷತೆಯಿಂದ ಮೇಲಧುಕಾರಿಗಳು ಪ್ರಭಾವಿತರಾಗದೇ ಉಳಿಯಲು ಸಾಧ್ಯವಾಗುವುದಿಲ್ಲ. ವ್ಯಾಪಾರ ವರ್ಗದವರು ಇಂದು ಕೆಲವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ವೈವಾಹಿಕ ಜೀವನದಲ್ಲಿ ಸ್ವಲ್ಪ ಎಚ್ಚರಿಕೆ ವಹಿಸಬೇಕು. ಬಲವೃದ್ಧಿಗೆ ಬೇಕಾದ ತಯಾರಿಯನ್ನು ಮಾಡಿಕೋಳ್ಳುವುದು ಉತ್ತಮ. ಮಹಿಳೆಯರು ಆದಾಯದಲ್ಲಿ ಮುನ್ನಡೆ ಸಾಧಿಸುವರು ಇಂದು. ಇನ್ನೊಬ್ಬರ ಕಡೆಯಿಂದ ಕೆಲಸವನ್ನು ಮಾಡಿಸಿಕೊಳ್ಳುವ ಸಂದರ್ಭವು ಬರಬಹುದು.

ಮಕರ ರಾಶಿ: ಇಂದು ಕುಟುಂಬದ ಕಿರಿಯರ ಜೊತೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸುವಿರಿ. ಸಂಬಂಧಿಕರು ಮತ್ತು ನೆರೆಹೊರೆಯವರ ಜೊತೆ ಏನಾದರೂ ಮಾತನಾಡಿ ಸಿಕ್ಕಿಕೊಳ್ಳಬಹುದು. ಆದಾಯದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಿರುತ್ತದೆ. ನಿಮಗೆ ಖರ್ಚು ಕೂಡ ಇರುತ್ತದೆ, ಆದರೆ ಹೆಚ್ಚು ಅಲ್ಲ. ಉದ್ಯೋಗಿಗಳು ಯಾವುದೇ ಎದುರಾಳಿಯ ಬಗ್ಗೆ ಸಕ್ರಿಯವಾಗಿ ಜಾಗರೂಕರಾಗಿರಬೇಕು. ಆರೋಗ್ಯ ಚೆನ್ನಾಗಿರುತ್ತದೆ. ವಿಳಂಬದ ಕಾರ್ಯಕ್ಕೆ ನೀವೇ ಜವಾಬ್ದಾರರಾಗಿರುವಿರಿ. ಇದೇ ಓದಿಗೆ ಅವರನ್ನು ಹಚ್ಚುವುದು. ವಾದವನ್ನು ಮಾಡುವಾಗ ಮುಂದಿರುವ ಜನರನ್ನು ನೋಡಿಕೊಳ್ಳಿ. ಖನಿಜದ ವ್ಯವಹಾರ ತಕ್ಕಮಟ್ಟಿಗೆ ಆದಾಯವನ್ನು ಹೆಚ್ಚಿಸುವುದು. ಶತ್ರುಗಳ ಕಾಟವನ್ನು ಕಡಿಮೆ ಮಾಡಿಕೊಳ್ಳಲು ಯೋಜನೆಯನ್ನು ರೂಪಿಸಿಕೊಳ್ಳುವಿರಿ. ಮಿತ್ರರ ಆರ್ಥಿಕತೆಗೆ ನೀವು ಸಹಾಯ ಮಾಡುವಿರಿ. ಉದ್ಯಮವನ್ನು ಮಾಡುವವರಿಗೆ ಕೆಲವು ತೊಂದರೆಗಳು ಬರಬಹುದು.

ಕುಂಭ ರಾಶಿ: ಇಂದು ನಿಮಗೆ ಸಾಮಾನ್ಯ ಫಲಪ್ರದದ ದಿನವಾಗಿರುತ್ತದೆ. ನಿಮ್ಮ ಕುಟುಂಬ ಮತ್ತು ಜವಾಬ್ದಾರಿಗಳನ್ನು ಉತ್ತಮವಾಗಿ ನಿರ್ವಹಿಸುವಿರಿ. ಮನೆಯ ಖರ್ಚು ಹೆಚ್ಚಾಗಲಿದೆ. ಇದು ನಿಮ್ಮ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಕುಟುಂಬ ಸದಸ್ಯರಲ್ಲಿ ಪರಸ್ಪರ ಸಹೋದರತ್ವ ಇರುತ್ತದೆ. ಕೆಲಸಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ಶ್ರಮದ ಮೇಲೆ ನೀವು ಗಮನ ಹರಿಸಬೇಕು. ಪ್ರೀತಿಯ ಸಂಬಂಧದಲ್ಲಿ ವಾಸಿಸುವ ಜನರು ಇಂದು ಕೆಲವು ನಿರಾಶೆಯನ್ನು ಎದುರಿಸಬೇಕಾಗಬಹುದು. ನಿಮ್ಮ ಆರೋಗ್ಯವು ಬಲವಾಗಿ ಉಳಿಯುತ್ತದೆ. ಅನವಶ್ಯಕ ಆಲೋಚನೆಗಳಿಂದ ಮನಸ್ಸು ಕ್ಷೋಭೆಗೊಳ್ಳುವುದು. ಆರೋಗ್ಯದ ವೃದ್ಧಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡುವಿರಿ. ಕುಟುಂಬವನ್ನು ಮೆಚ್ಚಿಕೊಳ್ಳುವಿರಿ. ಯಾರೊಂದಿಗೂ ಸ್ಪರ್ಧಿಸುವ ಅವಶ್ಯಕತೆ ಇಲ್ಲ. ನಿಮ್ಮ ಜವಾಬ್ದಾರಿಯ ಕಾರ್ಯಗಳು ಮುನ್ನೆಲೆಗೆ ಬರಬಹುದು.

ಮೀನ ರಾಶಿ: ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ನಿಮ್ಮ ಪ್ರೀತಿಯ ಜೀವನವನ್ನು ಸಂತೋಷಪಡಿಸಲು ನೀವು ನಿಮ್ಮ ಕೈಲಾದಷ್ಟು ಪ್ರಯತ್ನಿಸುವಿರಿ. ಪ್ರೀತಿಯ ಜೀವನದಲ್ಲಿ ಸೃಜನಶೀಲತೆ ಉಪಯುಕ್ತವಾಗುವುದು. ನಿಮ್ಮ ಪ್ರಯತ್ನಗಳು ಯಶಸ್ವಿಯಾಗುತ್ತವೆ. ವಿವಾಹಿತರು ತಮ್ಮ ವೈವಾಹಿಕ ಜೀವನದಲ್ಲಿ ಒತ್ತಡದಿಂದ ಮುಕ್ತರಾಗುತ್ತಾರೆ. ಮಕ್ಕಳ ಬಗ್ಗೆ ತುಂಬಾ ಸಂತೋಷವಾಗುತ್ತದೆ. ನಿಮಗೆ ಇಂದು ಆಸ್ತಿಯ ವಿಚಾರದಲ್ಲಿ ಅನುಕೂಲವಾದ ಬೆಳವಣಿಗೆ ಇರಲಿದೆ. ನೀವು ನಿರೀಕ್ಷಿಸಿದ್ದ ಸಮಸ್ಯೆಯು ಬಾರದೇ ಹೋದೀತು. ಖಾಸಗಿಯ ಕೆಲಸವು ನಿಮಗೆ ಸಾಕೆನಿಸಬಹುದು. ಬಂಧುಗಳಿಂದ ಮಾನಸಿಕ ಹಿಂಸೆಯಾಗುವುದು. ಆರೋಗ್ಯದ ವಿಚಾರದಲ್ಲಿ ಕೆಲಸದಲ್ಲಿ ಬದಲಾವಣೆಯು ನಿಮಗೆ ಬೇಕಾದೀತು.

ಲೋಹಿತ ಹೆಬ್ಬಾರ್-8762924271 (what’s app only)

ತಾಜಾ ಸುದ್ದಿ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು