AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಇನ್ನೊಬ್ಬರ ಸುಖವನ್ನು ಕಸಿದುಕೊಳ್ಳುವಿರಿ, ಕುಟುಂಬದಲ್ಲಿ ಜಗಳ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 06 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಇನ್ನೊಬ್ಬರ ಸುಖವನ್ನು ಕಸಿದುಕೊಳ್ಳುವಿರಿ, ಕುಟುಂಬದಲ್ಲಿ ಜಗಳ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Apr 06, 2024 | 12:10 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಇಂದಿನ (ಏಪ್ರಿಲ್ 06) ಭವಿಷ್ಯ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಶುಭ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:30ರಿಂದ 11:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:40 ರಿಂದ 03:40 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06: 26 ರಿಂದ ಬೆಳಗ್ಗೆ 07:58ರ ವರೆಗೆ.

ಸಿಂಹ ರಾಶಿ: ಇನ್ನೊಬ್ಬರ ಸುಖವನ್ನು ಕಸಿದುಕೊಂಡು ಯಾವ ಸುಖವನ್ನು ಅನುಭವಿಸುವಿರಿ? ನಿಮ್ಮ ಬಗೆಗಿನ ಸದ್ಭಾವಗಳು ಬದಲಾದಾವು. ರಸಿಕತೆಯಲ್ಲಿ ಸ್ಥಾನವನ್ನೂ, ಬುದ್ಧಿಯನ್ನೂ ಸ್ಥಳವನ್ನೂ ಸಂದರ್ಭವನ್ನೂ ವ್ಯಕ್ತಿಯನ್ನೂ ನಗಣ್ಯಗೊಳಿಸಬೇಡಿ. ನಿಮ್ಮ ಕುಟುಂಬದ ಬಗ್ಗೆ ಹೆಮ್ಮೆಯ ಭಾವ ಮೂಡುತ್ತದೆ. ನೀವು ಆರಾಮಾಗಿದ್ದೀರಿ ಎಂದು ತೋರಿಸಲು ಹೋಗಬೇಡಿ‌. ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಕುಟುಂಬದಲ್ಲಿ ಜಗಳ ನಿಮಗಾಗುವಂತಹ ಕಾರ್ಯವನ್ನು ಒಪ್ಪಿಕೊಳ್ಳಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಅತಿಯಾದ ಕಾರ್ಯದಿಂದ ನಿಮಗೆ ತೊಂದರೆಯಾದೀತು. ಮನೆಯಲ್ಲಿಯೇ ವಾಸಿಸುವವರು ಸಣ್ಣ ಆದಾಯದ ಬಗ್ಗೆ ಆಲೋಚಿಸುವಿರಿ. ಯಾರಾದರೂ ಮುಖಸ್ತುತಿಯನ್ನು ಮಾಡಬಹುದು. ಮುಜುಗರವೂ ನಿಮಗೆ ಆದೀತು. ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು.

ಕನ್ಯಾ ರಾಶಿ: ಇಂದು ಮನೆಯ ಸಣ್ಣ ಖರ್ಚುಗಳೂ ದೊಡ್ಡದಾದ ಮೊತ್ತವನ್ನು ಕಳೆಯುವುದು. ನಿಮ್ಮ ಜೀವನವನ್ನು ನೀವೇ ಲಘುವಾಗಿ ಕಾಣುವುದು ಬೇಡ. ನಿಮ್ಮ ಮಾನಸಿಕ ಸ್ಥಿತಿ ಬಲಾಢ್ಯವಾಗಿರಲಿ. ಅಲ್ಲಿಯ ತನಕ ತಾಳ್ಮೆಯಿಂದ ಇರಬೇಕಾದ ಕರ್ತವ್ಯವಿದೆ. ಒಳ್ಳೆಯವರ ಸಂಗ ಸಿಗಬಹುದು.‌ ಸಿಗದಿದ್ದರೆ ನೀವೇ ಹೋಗಿ.‌ ಒಳ್ಳೆಯ ಪುಸ್ತಕವನ್ನು ತಂದು ಓದಿ. ಸ್ನೇಹಿತನ‌ ಕೆಲಸವನ್ನು ಅದು ಮಾಡುವುದು. ಇಂದು ನಿಮ್ಮ ಭಾವನೆಗಳನ್ನು ನಿಯಂತ್ರಿಸಲಾಗದೇ ಎಲ್ಲವನ್ನೂ ಹೊರಹಾಕುವಿರಿ. ನೀವು ಮನೆಯ ಸೌಂದರ್ಯದ ಬಗ್ಗೆ ಹೆಚ್ಚು ಗಮನ ಇರಲಿದೆ. ನಿಮ್ಮ ಆದಾಯವು ಮೊದಲಿಗಿಂತ ಉತ್ತಮವಾಗಿದ್ದು ಅದನ್ನು ಒಂದು ಕಡೆ ಸ್ಥಿರವಾಗಿಸಿಕೊಳ್ಳಿ. ಹಿರಿಯರು ನಿಮ್ಮ‌ ಬಗ್ಗೆ ವ್ಯಂಗ್ಯವಾಗಿ ಮಾತನಾಡಬಹುದು. ಉದ್ಯೋಗದ ಕಾರಣ ದೂರ ಪ್ರಯಾಣ ಮಾಡಲು ಇಷ್ಟವಾಗದು. ರಾಜಕೀಯವಾಗಿ ಹಿನ್ನಡೆಯಾಗಬಹುದು. ನಿಮ್ಮದಾದ ದ್ವೀಪವನ್ನು ಮಾಡಿಕೊಂಡು ನೀವಿರುವಿರಿ.

ತುಲಾ ರಾಶಿ: ನೀವು ಇಂದು ಅನುಮಾನ ಬರುವಂತಹ ಹಾವಭಾವದಲ್ಲಿ ಇರುವಿರಿ. ಸ್ವಲ್ಪ ಕಾಲದ ಏನನ್ನೂ ಯೋಚಿಸದೇ ಇರಲು ಪ್ರಯತ್ನಿಸಿ. ಮನಸ್ಸಿನ ಶಕ್ತಿ ದ್ವಿಗಣವಾಗುವುದು. ನಕಾರಾತ್ಮಕತೆ ಆಲೋಚನೆಗಳೂ ದೂರವಾಗುವುದು. ಹಣದ ಸಮಸ್ಯೆಗಳು ಎದುರಾಗಬಹುದು. ವಿಶ್ವಾಸಘಾತಕ ಕಾರ್ಯಗಳಿಗೆ ಮುನ್ನುಗ್ಗಲು ಯಾರಿಂದಲಾದರೂ ಪ್ರೇರಣೆ ಸಿಕ್ಕೀತು. ಪೆಟ್ಟು ತಿಂದರೆ ಮತ್ತೇಳುವುದು ಕಷ್ಟ. ಯಾವುದೇ ಕಾರಣಕ್ಕೂ ಬಿಟ್ಟುಕೊಡಲು ಇಷ್ಟಪಡಲಾರಿರಿ. ಎಲ್ಲರ ಜೊತೆ ಬೆರೆಯುವುದು ನಿಮಗೆ ಖುಷಿಯ ವಿಚಾರವಾಗಲಿದೆ. ನಿಮ್ಮ ಹಿರಿಯರ ಜೊತೆ ಗೌರವವನ್ನು ಕಾಪಾಡಿಕೊಳ್ಳಿ. ಪ್ರಯಾಣದಲ್ಲಿ ಯಾವುದೇ ತೊಂದರೆಗಳು ಬಾರದು. ಕೆಲವು ಜನರ ಭೇಟಿಯು ನಿಮಗೆ ಖುಷಿ ಕೊಡುವುದು. ಹೂಡಿಕೆಯ ವಿಚಾರದಲ್ಲಿ ಸಮಸ್ಯೆಯಾಗಬಹುದು. ಕಾನೂನಿನ ತೀರ್ಮಾನಕ್ಕೆ ತಲೆಬಾಗುವುದು ಸೂಕ್ತ.

ವೃಶ್ಚಿಕ ರಾಶಿ: ನಿಮಗೆ ಕಲ್ಪನೆಯಂತೆ ಬದುಕು ನಡೆಯದು ಎಂಬ ಸತ್ಯ ಇಂದು ಮನವರಿಕೆಯಾಗಲಿದೆ. ದೂರಪ್ರಯಾಣ ಸುಖಕರವಾಗಿ ಇರುವಿದಾದರೂ ಅನಂತರ ಕಷ್ಟಪಡಬೇಕಾದೀತು. ಯಾರನ್ನೋ ಅವಮಾನಿಸಲು ಹೋಗಿ ಹಳ್ಳಕ್ಕೆ ಬೀಳಬೇಡಿ. ಸರ್ಕಾರಿ ಕೆಲಸಗಳು ನಿಧಾನಗತಿಯಲ್ಲಿರುವುದು. ಸಿಟ್ಟಿನ ಮೂಟೆಯನ್ನು ಕೆಳಗಿಳಿಸಿ. ಆಗ ಸಿಗುವ ಆನಂದಕ್ಕೆ ಬೆಲೆಯೆಷ್ಟು? ನಿಮ್ಮ ಆಲೋಚನೆಗಳನ್ನು ಇತರ ಜೊತೆ ಹಂಚಿಕೊಂಡರೆ ನಿಮ್ಮ ಸ್ಥಾನಕ್ಕೆ ಚ್ಯುತಿ ಬಂದೀತು. ನಿಮ್ಮ ಕಾರ್ಯಗಳಿಂದ ಪ್ರೀತಿಪಾತ್ರರ ಹೃದಯವನ್ನು ಗೆಲ್ಲಲು ಸಫಲರಾಗುವಿರಿ. ಬಹಳ‌ ದಿನಗಳ ಅನಂತರ ನಿಮ್ಮ ಸಂಗಾತಿಯ ಜೊತೆ ಸ್ವಲ್ಪ ಸಮಯ ಕುಳಿತು ಆಪ್ತವಾಗಿ ಮಾತನಾಡುವಿರಿ. ಯಾರನ್ನೂ ಅವಲಂಬಿಸುವುದು ನಿಮಗೆ ಕಷ್ಟವಾಗುವುದು. ಮಕ್ಕಳಿಂದ ನಿಮಗೆ ಕೀರ್ತಿಯು ಪ್ರಾಪ್ತವಾಗುವುದು. ಮಾತಿನಿಂದ ಆಪ್ತರನ್ನು ದೂರ ಮಾಡಿಕೊಳ್ಳುವಿರಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಿ ಹಣವನ್ನು ವ್ಯಯ ಮಾಡುವಿರಿ. ನಿಮಗೆ ಆಗಬೇಕಾದ ಕೆಲಸವನ್ನು ವಿವಾದ ಇಲ್ಲದೇ ಮಾಡಿಕೊಳ್ಳಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ವಾಯುಭಾರ ಕುಸಿತ: ಕರ್ನಾಟಕದಲ್ಲಿ 3 ದಿನ ಭಾರೀ ಮಳೆ, ಎಲ್ಲೆಲ್ಲಿ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಆರೋಪಿಗಳು ಜಿಲೆಟಿನ್ ಇಟ್ಟಿದ್ಯಾಕೆ?
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಕೋರ್ಟ್ ಆದೇಶದಿಂದ ದರ್ಶನ್​ಗೆ ಅನುಕೂಲ: ಹೇಗೆ ಗೊತ್ತಾ?
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ದರ್ಶನ್ ಜಾಮೀನು ಅರ್ಜಿ ನಿರಾಕರಣೆಯಾಗಿದ್ದು ಒಳ್ಳೆಯದು: ವಕೀಲರ ವಿಶ್ಲೇಷಣೆ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ