AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ; ನಿಮಗೆ ಇಷ್ಟದವರ ಜೊತೆ ಖುಷಿಯಿಂದ ವ್ಯವಹರಿಸಿ

ಒಂದಷ್ಟು ಮಂದಿ ಪ್ರತಿನಿತ್ಯ ತಮ್ಮ ಭವಿಷ್ಯ ನೋಡುತ್ತಾರೆ. ಹಾಗಿದ್ದರೆ, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 08 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Horoscope: ರಾಶಿಭವಿಷ್ಯ; ನಿಮಗೆ ಇಷ್ಟದವರ ಜೊತೆ ಖುಷಿಯಿಂದ ವ್ಯವಹರಿಸಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Apr 08, 2024 | 12:10 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 08) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮೀನ ಮಾಸ, ಮಹಾನಕ್ಷತ್ರ: ರೇವತೀ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ದಶಿ, ನಿತ್ಯನಕ್ಷತ್ರ: ಉತ್ತರಭಾದ್ರ, ಯೋಗ: ಬ್ರಹ್ಮ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:57ರಿಂದ 09:29ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 11:02 ರಿಂದ ಮಧ್ಯಾಹ್ನ 12:34 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:07 ರಿಂದ ಮಧ್ಯಾಹ್ನ 03:40ರ ವರೆಗೆ.

ಮೇಷ ರಾಶಿ: ನಿಮ್ಮ ಆತ್ಮವಿಶ್ವಾಸವೇ ಎಲ್ಲ ಕಾರ್ಯಗಳನ್ನು ಅನಾಯಾಸವಾಗಿ ಮಾಡುವಂತೆ ಮಾಡುತ್ತದೆ. ಹೊಸ ಸ್ನೇಹಿತರನ್ನು ಪಡೆಯುವಿರಿ. ಪ್ರೀತಿಪಾತ್ರರ ಜೊತೆ ಇಂದು ವಿಹಾರ ಮಾಡುವಿರಿ. ವಿದ್ಯಾರ್ಥಿಗಳು ಯಂತ್ರೋಪಕರಣಗಳನ್ನು ಪಡೆದು ಆನಂದಿಸುವರು. ಕೆಲಸವನ್ನು ನಿರ್ಧರಿಸುವಾಗ ಯಾವುದೇ ಒತ್ತಡಗಳಿಗೆ ಅವಕಾಶ ಕೊಡಬೇಡಿ. ಬೇಕಾದಷ್ಟು ಕಾರ್ಯಗಳಿರುತ್ತವೆ. ಸಮಯವನ್ನು ಹಾಗೇ ವ್ಯರ್ಥವಾಗಿ ಕಳಡಯಬೇಡಿ. ಸ್ನೇಹಿತರ ಬೆಂಬಲವು ನಿಮ್ಮ ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವುದು. ಸಾಮಾಜಿಕ ಚಟುವಟಿಕೆಗಳಲ್ಲಿ ನಿಮ್ಮ ಮಹತ್ವದ ಕೊಡುಗೆಯಿಂದಾಗಿ ನಿಮ್ಮ ಗೌರವವೂ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಹೊಸ ಕೊಡುಗೆಗಳನ್ನು ಕಾಣಬಹುದು. ರಾಜಕೀಯದಿಂದ ನಿಮ್ಮ ವ್ಯವಹಾರಕ್ಕೆ ಹೊಸ ದಿಕ್ಕನ್ನು ಸಿಗಬಹುದು. ಹಳೆಯ ಯಂತ್ರಗಳ ದುರಸ್ತಿಗೆ ಹಣವು ಖರ್ಚಾಗುವುದು. ನಿಮ್ಮಿಂದಾಗದ ಕೆಲಸವನ್ನು ಬೇರೆಯವರು ಮಾಡಿಯಾರು.

ವೃಷಭ ರಾಶಿ: ಇಂದು ನಿಮಗೆ ನಿನ್ನೊಬ್ಬರ ಕೆಲಸದ ಕಡೆ ಗಮನ ಹರಿಸಲಾಗದಷ್ಟು ಒತ್ತಡ ಇರಲಿದೆ. ಅನ್ಯರ ಕಾರ್ಯದ ಸಹವಾಸ ಬೇಡ. ನೀವು ನಿಮ್ಮ ಅಂತರಂಗವನ್ನು ಮುಚ್ಚಿಡಲು ಪ್ರಯತ್ನಿಸಿದರೂ ಅದು ನಿಲ್ಲದು. ಸ್ನೇಹಿತರು ನಿಮ್ಮ ಜೊತೆಗೇ ಇದ್ದು ನಿಮ್ಮ ಎಲ್ಲ ಆಗುಹೋಗುಗಳಿಗೂ ಜೊತೆಯಾಗುವರು. ಪ್ರೀತಿಯಿಂದ ಎಲ್ಲರೊಂದಿಗೆ ಮಾತನಾಡಿ. ಕುಟುಂಬದ ಮೋಜಿನ ಚಟುವಟಿಕೆಗಳನ್ನು ಮಾಡುತ್ತ ಕಾಲ ಕಳೆಯುವಿರಿ. ಮನೆಯ ನಿರ್ವಹಣೆಯ ಕೆಲಸದಲ್ಲಿಯೂ ನೀವು ಆಸಕ್ತಿ ಇರುವುದು. ಸ್ವಂತ ಕೆಲಸವನ್ನು ಬಹಳ ಅಚ್ಚು ಕಟ್ಟಾಗಿ ಮಾಡಿ ಮುಗಿಸುವಿರಿ. ವ್ಯಾಪಾರ ವಲಯದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ನೌಕರರ ನಿರ್ಲಕ್ಷ್ಯದಿಂದ ಆಗುವ ಹೊಣೆಯನ್ನೂ ಹೊರಬೇಕಾಗುವುದು. ಕೆಲವು ರೀತಿಯ ಹಾನಿಯ ಬಗ್ಗೆಯೂ ಚಿಂತಿಸುವುದು ಅಗತ್ಯ. ಸರ್ಕಾರಿ ಕೆಲಸದಲ್ಲಿ ಯಾವುದೇ ತೊಂದರೆ ಇಲ್ಲ.

ಮಿಥುನ ರಾಶಿ: ಇಂದು ನಿಮ್ಮ ಸಂಗಾತಿಯ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಸೋಲಬಹುದು. ಮನೆಯ ಕಾರ್ಯಗಳಲ್ಲಿ ಮಗ್ನರಾಗಿ ಆಯಾಸವನ್ನು ತರಿಸಿಕೊಳ್ಳುವಿರಿ. ನಿಮ್ಮ ತಿಳಿವಳಿಕೆಯ ಮಟ್ಟ ಎಷ್ಟೆಂದು ನಿಮ್ಮ ವರ್ತನೆಯಿಂದ ತಿಳಿಯುತ್ತದೆ. ಮಾನಸಿಕ ಒತ್ತಡಕ್ಕೆ ಸಿಲುಕದೇ ನಿಶ್ಚಿಂತೆಯಿಂದ ಇರಲು ಪ್ರಯತ್ನಿಸಿ. ಇಂದು ನಿಮ್ಮ ದಕ್ಷತೆಯಿಂದ ಉತ್ತಮ ರೀತಿಯಲ್ಲಿ ಅನೇಕ ವಿಷಯಗಳನ್ನು ಸಾಧಿಸಲು ಇದು ನಿಮಗೆ ಸಹಾಯ ಮಾಡುತ್ತದೆ. ಹೂಡಿಕೆ ಮಾಡಲು ಯಾವುದೇ ಯೋಜನೆ ಇದ್ದರೆ, ಅದು ಲಾಭದಾಯಕವಾಗಿರುತ್ತದೆ. ಆಪ್ತ ಸ್ನೇಹಿತರ ಬೆಂಬಲವೂ ನಿಮ್ಮ ಮನಸ್ಥಿತಿಯನ್ನು ಹೆಚ್ಚಿಸುತ್ತದೆ. ನಿಮ್ಮ ಕೋಪವನ್ನು ನಿಯಂತ್ರಿಸಿ. ಕೆಲವೊಮ್ಮೆ ಸ್ವಭಾವದಲ್ಲಿ ಭ್ರಮೆಯಿಂದ ಕೋಪದ ಸ್ಥಿತಿ ಇರಬಹುದು. ನಿಮ್ಮಲ್ಲಿರುವ ನ್ಯೂನತೆಗಳನ್ನು ನೀವೇ ತಿಳಿದು ಸರಿಪಡಿಸಿ.

ಕರ್ಕ ರಾಶಿ: ಇಂದು ನಿಮ್ಮ ಇಷ್ಟದವರ ಜೊತೆ ಖುಷಿಯಿಂದ ವ್ಯವಹರಿಸಿ. ಕೆಲವು ಮಾತುಗಳಿಂದ ಅವರಿಗೆ ನೋವಾಗಬಹುದು.‌ ನ್ಯಾಯಾಲಯಕ್ಕೆ ಸಂಬಂಧಿಸಿದ್ದನ್ನು ತುರ್ತಾಗಿ ಮಾಡುವಿರಿ. ಎಷ್ಟೋ ದಿನದ ನಿಮ್ಮ ಜಟಿಲತೆಗಳು ಮಂದಗತಿಯಲ್ಲಿ ಸಾಗುತ್ತಿದ್ದು ಇಂದು ವೇಗವನ್ನು ಪಡೆಯುತ್ತದೆ. ನಿಮ್ಮ ಸುತ್ತಲಿನ ಜಗತ್ತಿಗೆ ನೀವು ಅಚ್ಚರಿಯ ಆಸಾಮಿಯಾಗುತ್ತೀರಿ. ಮನೆ ಮತ್ತು ವ್ಯವಹಾರದಲ್ಲಿ ಸರಿಯಾದ ಸಾಮರಸ್ಯ ಇರುತ್ತದೆ. ಇಂದು ಮನೆಯ ಎಲ್ಲ ಸದಸ್ಯರು ಪರಸ್ಪರ ಆನಂದಿಸುವರು. ಮಗುವಿನ ಚಟುವಟಿಕೆಗಳು ಮತ್ತು ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುವುದು ಬಹಳ ಮುಖ್ಯ. ಭೂಮಿ ಅಥವಾ ವಾಹನಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳಿವೆ. ಯಾವುದೇ ರೀತಿಯ ವ್ಯವಹಾರಕ್ಕೆ ನಿಮ್ಮ ಕೆಲಸದ ಗುಣಮಟ್ಟಕ್ಕೆ ಹೆಚ್ಚಿನ ಗಮನ ಬೇಕಾಗುತ್ತದೆ. ಈ ಸಮಯದಲ್ಲಿ ಸಾಲದ ವ್ಯವಹಾರವನ್ನು ಮಾಡಬೇಡಿ. ಉದ್ಯೋಗಾಕಾಂಕ್ಷಿಗಳು ಕೆಲಸವನ್ನು ಪಡೆದುಕೊಳ್ಳಬಹುದು.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ