AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ರಾಶಿಭವಿಷ್ಯ; ಅತಿಯಾದ ಮೋಹವು ನಿಮ್ಮ ವಿವೇಚನಾ ಶಕ್ತಿಯನ್ನು ಕುಗ್ಗಿಸಬಹುದು

ಇಂದಿನ ದಿನಭವಿಷ್ಯ: ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಜನವರಿ 24, 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಶುಭ-ಅಶುಭ ಇದೆಯಾ ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

Nitya Bhavishya: ರಾಶಿಭವಿಷ್ಯ; ಅತಿಯಾದ ಮೋಹವು ನಿಮ್ಮ ವಿವೇಚನಾ ಶಕ್ತಿಯನ್ನು ಕುಗ್ಗಿಸಬಹುದು
ಪ್ರಾತಿನಿಧಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jan 24, 2024 | 12:02 AM

Share

ಒಂದಷ್ಟು ಮಂದಿ ಬೆಳಗ್ಗೆ ಎದ್ದ ನಂತರ ನಿತ್ಯ ಪಂಚಾಂಗ ಮತ್ತು ರಾಶಿಭವಿಷ್ಯ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ತಿಳಿದುಕೊಳ್ಳುತ್ತಾರೆ. ಹಾಗಾದರೆ, ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ (ಜನವರಿ 24) ಭವಿಷ್ಯ (Horoscope) ಹೇಗಿದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಕರ ಮಾಸ, ಮಹಾನಕ್ಷತ್ರ: ಉತ್ತರಾಷಾಢಾ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಪುನರ್ವಸು, ಯೋಗ: ವೈಧೃತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 26 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:45 ರಿಂದ 02:10ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:28 ರಿಂದ 09:54ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 11:19 ರಿಂದ 12:45ರ ವರೆಗೆ.

ಮೇಷ ರಾಶಿ: ನಿಮ್ಮ ವೇಗಕ್ಕೆ ವಹಿಸಿಕೊಂಡ ಕೆಲಸವು ಆಗದೇ ಇರುವುದು ನಿಮಗೆ‌ ಬೇಸರ ತರಿಸಬಹುದು.‌ ನೌಕರರ ಮೇಲೆ ಸಿಟ್ಟಾಗಬೇಕಾಗುವುದು. ಕುಟುಂಬದ ಮರ್ಯಾದೆಗೆ ತಕ್ಕಂತೆ ವರ್ತನೆ ಇರಲಿ. ಕಛೇರಿಯ ಕಾರ್ಯವು ಇಂದು ಅಧಿಕವಾಗಿ ಇರಲಿದೆ. ಸ್ಥಿರವಾದ ಬುದ್ಧಿಯನ್ನು ಬೆಳೆಸಿಕೊಳ್ಳುವ ಅನಿವಾರ್ಯತೆ ಬರಬಹುದು. ಉಪಾಯದಿಂದ ನಿಮ್ಮ ಸ್ಥಾನವನ್ನು ಸ್ಥಿರವಾಗಿಸಿಕೊಳ್ಳಿ. ಕೃಷಿಯ ಬಗ್ಗೆ ಒಲವು ಬರಬಹುದು. ನಿಮ್ಮ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಿರುವುದು.‌ ಇಂದು ನಿಮ್ಮ ಪರಿಚಯವು ಇತರರಿಗೆ ಆಗುವುದು. ವ್ಯಕ್ತಿತ್ವವನ್ನು ನೀವು ಸರಿಯಾಗಿ ಮಾಡಿಕೊಳ್ಳಲು ಗಮನವಿರುವುದು. ಅನಿರೀಕ್ಷಿತವಾಗಿ ಅಲ್ಪ ಧನಾಗಮನವಾಗಬಹುದು.

ವೃಷಭ ರಾಶಿ: ಯಾವುದಕ್ಕಾದರೂ ಮುನ್ನುಗ್ಗುವ ಅಭ್ಯಾಸವನ್ನು ಬೆಳೆಸಿಕೊಳ್ಳುವಿರಿ. ಅತಿಯಾದ ಮೋಹವು ನಿಮ್ಮ ವಿವೇಚನಾ ಶಕ್ತಿಯನ್ನು ಕುಗ್ಗಿಸಬಹುದು. ಒಂದೇ ವಿಚಾರಕ್ಕೆ ಹತ್ತು ಬಾರಿ ಹೇಳಿಸಿಕೊಳ್ಳುವಿರಿ. ವಿದ್ಯುತ್ ಉಪಕರಣವು ಹಾಳಾಗಲಿದ್ದು, ವೆಚ್ಚವು ಅಧಿಕವಾಗಲಿದೆ. ಕರ್ತವ್ಯದಲ್ಲಿ ನಿರಾಸಕ್ತಿ ಇರುವುದು. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರುವಿರಿ. ಭವಿಷ್ಯವು ಅನಿಶ್ಚಿತ ಎನಿಸಬಹುದು. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ವಿಚಾರದಲ್ಲಿ ಆಸಕ್ತಿಯು ಇರುವುದು. ನಿಮ್ಮ ವರ್ತನೆಯು ಅಹಂಕಾರವಾಗಿ ಬದಲಾಗುವುದು. ಸೇವಾ ಮನೋಭಾವವು ದೂರಾಗಬಹುದು.

ಮಿಥುನ ರಾಶಿ: ಇಂದು ನೀವು ವಿವಾಹದ ಸಂಭ್ರಮದಲ್ಲಿ ಇರುವಿರಿ. ಅನಾರೋಗ್ಯಕ್ಕೆ ಸೇವಿಸುವ ಔಷಧಿಯು ವಿರುದ್ಧವಾಗಬಹುದು. ಇಂದು ನೀವು ವಿಸ್ಮರಣೆಯಿಂದ ಮಾಡಬೇಕಾದ ಕಾರ್ಯವನ್ನು ಮಾಡಲಾಗದು. ಧಾರ್ಮಿಕ ಆಚರಣೆಗಳಲ್ಲಿ ನಿಷ್ಠೆ ಇರಲಿದೆ. ಕಲೆಯಲ್ಲಿ ಉಂಟಾದ ಆಸಕ್ತಿಯು ನಿಮ್ಮ ಮನಸ್ಸನ್ನು ಚೆನ್ನಾಗಿಡಬಹುದು. ಗಳಿಸಿದ ಹಣವನ್ನು ಸದ್ವಿನಿಯೋಗಕ್ಕೆ ಕೊಡುವಿರಿ. ಆರ್ಥಿಕತೆಯು ದಾಂಪತ್ಯದಲ್ಲಿ ಕಲಹವಾಗುವಂತೆ ಮಾಡುವುದು. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ನಿಮ್ಮ ತಪ್ಪಿಗೆ ಯಾರನ್ನೋ ಬಯ್ಯುವಿರಿ. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ. ಇರುವುದರಲ್ಲಿ ಸುಖಪಡುವುದನ್ನು ಕಲಿತುಕೊಳ್ಳಬೇಕಾದೀತು. ನಿಮ್ಮವರ ಪ್ರೀತಿಯನ್ನು ಇಂದು ಗಳಿಸುವಿರಿ. ವಿನಮ್ರಭಾವವು ನಿಮ್ಮ ಸ್ಥಾನಕ್ಕೆ‌ ಗೌರವವನ್ನು ಕೊಡುವುದು.

ಕಟಕ ರಾಶಿ: ಬೆಂಬಲವಿದೆ ಎಂದು ಏನನ್ನಾದರೂ ಮಾಡಲು ಹೋಗಿ ಮುಗ್ಗರಿಸುವಿರಿ. ನೀರಿಗೆ ಸಂಬಂಧಿಸಿದ ಉದ್ಯಮಿಗಳು ಅಧಿಕ ಲಾಭದ ನಿರೀಕ್ಷೆಯಲ್ಲಿ ಇರಬಹುದು. ನಿಮ್ಮ ಯೋಜನೆಗಳು ವಾಸ್ತವಕ್ಕೆ ಹತ್ತಿರವಿರಬಹುದು. ಸಮಾರಂಭಗಳಿಗೆ‌ ಸ್ನೇಹಿತರ ಜೊತೆ ಹೋಗುವಿರಿ. ಅಪರಿಚಿತರು ನಿಮ್ಮ ಬಳಿ ಹಣಕ್ಕಾಗಿ ಪೀಡಿಸಬಹುದು. ವಂಚನೆಗೆ ಗೊತ್ತಾಗದಂತೆ ಸಿಕ್ಕಿಕೊಳ್ಳಬೇಕಾದೀತು. ನಿಮ್ಮ ಸ್ಥಾನಕ್ಕೆ ಯೋಗ್ಯವಾದ ಮಾತು ಇರಲಿ.‌ ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗವುದು. ಸುಮ್ಮನೇ ಮಾತಿಗಾಗಿ ಮಾತು ಬೆಳೆಸುವುದು ಬೇಡ. ನಿಮ್ಮ ತಪ್ಪನ್ನು ಯಾರದೋ ಮೇಲೆ ಹಾಕಿ ಖುಷಿ ಪಡುವಿರಿ. ಸಂಗಾತಿಯಿಂದ ಮಾನಸಿಕ ಕಿರಿಕಿರಿ ಇರುವುದು. ನಿಮ್ಮ ಜಿಪುಣತನವನ್ನು ಇತರರು ಆಡಿಕೊಂಡಾರು. ದುರ್ಗಾಮಾತೆಯು ನಿಮ್ಮ ದುರ್ಗತಿಯನ್ನು ನಾಶ ಮಾಡುವಳು.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!