Astrology: ಈ ರಾಶಿಯವರು ತಮ್ಮಷ್ಟಕ್ಕೆ ತಾವು ಹೇಗೋ ಇರುವರು, ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 27 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ಈ ರಾಶಿಯವರು ತಮ್ಮಷ್ಟಕ್ಕೆ ತಾವು ಹೇಗೋ ಇರುವರು, ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ
ಈ ರಾಶಿಯವರು ತಮ್ಮಷ್ಟಕ್ಕೆ ತಾವು ಹೇಗೋ ಇರುವರು, ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ
Follow us
|

Updated on: Jun 27, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಗುರುವಾರ (ಜೂನ್. 27) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಪ್ರೀತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 14:13 ರಿಂದ 15:50ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 6:08 ರಿಂದ ಬೆಳಿಗ್ಗೆ 7:45ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 9:22 ರಿಂದ 10:59ರ ವರೆಗೆ.

ಮೇಷ ರಾಶಿ: ಇಂದು ನೀವು ಎಲ್ಲ ಕಾರ್ಯವನ್ನೂ ಶಿಸ್ತಿನಿಂದ ಮಾಡಲು ಬಯಸುವಿರಿ. ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ. ಉತ್ತಮವಾದ ಮಾರ್ಗಾನ್ವೇಷಣೆಯಲ್ಲಿ ಇರಿ. ಸಲ್ಪ ಅಂತರದಲ್ಲಿ ನಿಮಗೆ ಸಿಗಬೇಕಾದ ಆಸ್ತಿಯು ಬೇರೆಯವರ ಕೈ ಸೇರುವುದು. ವಾಹನ ರಿಪೇರಿಗೆ ಹಣವು ಖರ್ಚಾಗಬಹುದು. ಎಂತಹ ಒತ್ತಡದಲ್ಲಿಯೂ ಅದನ್ನು ಸಡಿಲಿಸಿಕೊಳ್ಳುವ ಅರಿವು ನಿಮಗೆ ಗೊತ್ತಿದೆ. ಅವರಿಗೆ ಕೊಟ್ಟುಬಿಡಿ. ಮತ್ತೂ ಅತಿಯಾದ ಅನಗತ್ಯ ಬಯಕೆಯೂ ನಿಮ್ಮ ನಿತ್ಯ ಜೀವನಕ್ಕೆ ಒಳ್ಳೆಯದಲ್ಲ. ಅವಶ್ಯಕತೆಗಳನ್ನು ಪೂರೈಸಿಕೊಳ್ಳ ನಿಮ್ಮ ಹಣದ ವಿನಿಯೋಗವಾಗಲಿ. ಬಂದ ಹಣವು ಮತ್ತಾವುದೋ ರೀತಿಯಲ್ಲಿ ಹೋಗಲಿದೆ. ನಿಮಗೆ ಯಾರಾದರೂ ಏನಾದರೂ ಮಾಡಿಸಿದ್ದಾರೇನೋ ಎನ್ನುವ ಅನುಮಾನವೂ ಕಾಡಬಹುದು. ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾಗುವುದು. ಇನ್ನೊಬ್ಬರ ಸಲಹೆಯನ್ನು ಅನಿವಾರ್ಯವಾಗಿ ಒಪ್ಪಿಕೊಳ್ಳುವಿರಿ.

ವೃಷಭ ರಾಶಿ: ಇಂದು ನೀವು ಯಾರ ಮಾತನ್ನು ಒಪ್ಪಿದರೂ ನಿಮ್ಮ ಆಲೋಚನೆಯನ್ನು ಬದಲಾಯಿಸುವುದಿಲ್ಲ. ತಂದೆಯಿಂದ ಬರುವ ಧನವು ವಿಳಂಬವಾಗಿ ಬರಬಹುದು. ಸ್ನೇಹಿತರ ಜೊತೆ ಸೇರಿ ಖರ್ಚನ್ನು ಮಾಡುವಿರಿ. ಯಾರಾದರೂ ನಿಮ್ಮನ್ನು ಅಳೆಯಬಹುದು. ಅದಕ್ಕೆ ಸರಿಯಾಗಿ ಉತ್ತರಿಸಿ. ಕಾಣುವಷ್ಟು ಸುಲಭವಾಗಿ ಯಾವುದೂ ಇಲ್ಲವೆಂಬುದು ಗೊತ್ತಾಗಲಿದೆ. ಅಗೌರವ ಸಿಗುವ ಕಡೆ ಸುಮ್ಮನೆ ಹೋಗಬೇಡಿ. ಆಸ್ತಿಯ ವಿಚಾರದಲ್ಲಿ ಯಾರೋ ಮಧ್ಯಸ್ತಿಕೆ ವಹಿಸಿಕೊಳ್ಳಲು ಬರಬಹುದು. ಕಛೇರಿಯಲ್ಲಿ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಲು ಕಷ್ಟವಾದೀತು. ಪರರ ಭಾವನೆಗೆ ಅನಾದರ ತೋರುವುದು ಬೇಡ. ನಿಮ್ಮಷ್ಟಕ್ಕೆ ನೀವು ಹೇಗೋ ಇರುವಿರಿ. ಸಹೋದರರ‌ ನಡುವೆ ಸೌಹಾರ್ದತೆ ಇರಲಿದೆ. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಕಷ್ಟಪಟ್ಟು ಉಳಿಸಿಕೊಳ್ಳಬೇಕಾದೀತು.

ಮಿಥುನ ರಾಶಿ: ಇಂದು ತಂದೆಯು ಯಾವುದೋ ಕಾರ್ಯಕ್ಕೆ ಧನವನ್ನು ನಿರೀಕ್ಷಿಸಬಹುದು. ಕುಟುಂಬದ ಸಮಸ್ಯೆಯನ್ನು ಬಗೆಹರಿಸಲಾಗದೇ ಇಂದು ಕೈಚೆಲ್ಲಿ ಕುಳಿತುಕೊಳ್ಳುವಿರಿ. ಹಣದ ವಿಚಾರದಲ್ಲಿ ನಿಮ್ಮನ್ನು ವಂಚಿಸುವರು. ನಿಮ್ಮ ತಪ್ಪೇ ನಿಮಗೆ ಮುಳ್ಳದೀತು. ಸ್ತ್ರೀಯರಿಗೆ ವಿನಾಕಾರಣ ಅಪವಾದ ಬಂದೀತು. ಹೊಸ ಕೆಲಸದ ಉತ್ಸಾಹದಲ್ಲಿ ಇರುವಿರಿ. ಸಂಪಾದನೆಯು ಅಲ್ಪವೆನಿಸಿ ಆದಾಯದ ಮೂಲವನ್ನು ಬದಲಿಸಬೇಕಾಗಬಹುದು. ನೂತನ ವಾಹನವನ್ನು ಖರೀದಿಸಿದ ಖುಷಿ ಇರಲಿದೆ. ಸಂಗಾತಿಯ ಜೊತೆ ಇಂದು ಕಛೇರಿಯ ವಿಚಾರವನ್ನು ಹಂಚಿಕೊಳ್ಳುವಿರಿ. ಸಹೋದರರ ನಡುವೆ ಮನೆಯ ಬಗ್ಗೆ ಚರ್ಚಿಸುವಿರಿ. ದಿನದ ಕೊನೆಯಲ್ಲಿ ಸಂತೃಪ್ತಿ ಇರಲಿದೆ. ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳಿ. ನಿಮ್ಮ ನೋವಿಗೆ ಯಾರಾದರೂ ಸ್ಪಂದಸುವರು. ಕಷ್ಟಕ್ಕೆ ಸ್ಪಂದಿಸುವ ಮನೋಭಾವವಿರಲಿ. ಸಂಗಾತಿಯ ಖರ್ಚನ್ನು ನಿಭಾಯಿಸುವ ಜವಾಬ್ದಾರಿಯನ್ನು ನೀವೇ ಹೊರಬೇಕಾದೀತು.

ಕಟಕ ರಾಶಿ: ಇಂದು ನೀವು ಉದ್ಯೋಗದ ಕಾರಣಕ್ಕೆ ಬೇರೆ ಕಡೆಗೆ ಹೋಗುವಿರಿ. ನಿಮ್ಮ ನಡವಳಿಕೆಯಿಂದ ಮೇಲಧಿಕಾರಿಗಳಿಗೆ ಅಸಮಾಧಾನವಾಗಲಿದೆ. ನಿಮ್ಮ ಸ್ಪಷ್ಟ ನಿರ್ಧಾರವನ್ನು ಮನೆಯಲ್ಲಿ ಹೇಳಿ. ಗೊಂದಲವನ್ನು ಮಾಡಿಕೊಂಡು ಇರಬೇಡಿ. ಬುದ್ಧಿವಂತರೆಂಬ ಅಹಂಕಾರ ಬೇಡ. ಎಡವಿ ಬೀಳುವ ಮೊದಲು ಎಚ್ಚರವಹಿಸಿ. ನಿಮ್ಮ ಪ್ರೇಮ ವಿಚಾರವನ್ನು ಕೇಳಿ ಮನೆಯಲ್ಲಿ ಆಶ್ಚರ್ಯವಾಗಬಹುದು. ಅವರು ಇದನ್ನು ಒಪ್ಪದೇ ಇರಬಹುದು. ಅದಕ್ಕಾಗಿ ನಿಮ್ಮದೇ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ವಾತಾವರಣ ತಿಳಿಯಾದಮೇಲೆ ಆ ಬಗ್ಗೆ ಚರ್ಚಿಸಿ. ನೀವಿಂದು ಅಪರಿಚಿತರಿಗೆ ಸಹಾಯಮಾಡಲಿದ್ದೀರಿ. ರಾಜಕೀಯ ವ್ಯಕ್ತಿಗಳಿಗೆ ಜನಮನ್ನಣೆಯು ಹೆಚ್ಚಾಗುವುದು. ಅತಿಯಾಗಿ ಯಾವುದು ಸಿಕ್ಕರೂ ಅದು ತೊಂದರೆಯೇ. ಅಲ್ಪ ಪ್ರಯಾಣದಿಂದಲೂ ನಿಮಗೆ ಆಯಾಸವಾಗಬಹುದು. ಕೆಲವು ವಿಚಾರಗಳಲ್ಲಿ ಕುತೂಹಲವು ಇರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆಯನ್ನು ಕಡಿಮೆ ಮಾಡಿಕೊಳ್ಳಿ.

ತಾಜಾ ಸುದ್ದಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ