Daily Horoscope: ಈ ರಾಶಿಯವರು ಇಂದು ಹುಷಾರಾಗಿರಿ! ಹಣದ ಆಮಿಷ ತೋರಿಸಿ ವಂಚಿಸಬಹುದು

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಆಗಸ್ಟ್​. 22: ಒಮ್ಮೆಲೇ ದೊಡ್ಡ ಯೋಚನೆಯನ್ನು ಕಾರ್ಯಗತಗೊಳಿಸುವುದು ಬೇಡ. ನೀವು ಮೊದಲು ವಿಶ್ವಾಸಾರ್ಹತೆಯನ್ನು ಪಡೆದುಕೊಳ್ಳಲು ಪ್ರಯತ್ನಿಸಿ. ಯಾವ ಕಾರ್ಯವನ್ನೇ ಮಾಡಿದರೂ ದಾಖಲೆಗಳು ಅತ್ಯವಶ್ಯಕ. ಹಾಗಾದರೆ ಆಗಸ್ಟ್​ 22ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರು ಇಂದು ಹುಷಾರಾಗಿರಿ! ಹಣದ ಆಮಿಷ ತೋರಿಸಿ ವಂಚಿಸಬಹುದು
ಈ ರಾಶಿಯವರು ಇಂದು ಹುಷಾರಾಗಿರಿ! ಹಣದ ಆಮಿಷ ತೋರಿಸಿ ವಂಚಿಸಬಹುದು
Follow us
|

Updated on: Aug 22, 2024 | 12:20 AM

ಸಾಮಾನ್ಯವಾಗಿ ಜ್ಯೋತಿಷ್ಯ ಶಾಸ್ತ್ರದೊಂದಿಗೆ ಸಂಬಂಧಿಸಿದೆ. ಜ್ಯೋತಿಷ್ಯವು ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ಚಿಹ್ನೆಗಳಾಗಿ ವಿಂಗಡಿಸಲಾಗಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತವೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಸುಕರ್ಮ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:49 ಗಂಟೆ, ರಾಹು ಕಾಲ ಮಧ್ಯಾಹ್ನ 02:09 ರಿಂದ 03:43, ಯಮಘಂಡ ಕಾಲ ಬೆಳಿಗ್ಗೆ 06:21 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:28 ರಿಂದ 11:02ರ ವರೆಗೆ.

ಸಿಂಹ ರಾಶಿ: ಜಟಿಲ ಸಮಸ್ಯೆಗಳನ್ನು ನಿಮ್ಮ ಬಳಿ ಹೇಳಿಕೊಳ್ಳುವರು. ಯಾರನ್ನೋ ಮೆಚ್ಚಿಸಲು ನಿಮ್ಮ ಸಮಯವನ್ನು ವ್ಯಯಿಸಬೇಕಾಗುವುದು. ದುರಾಸೆಯಿಂದ ಸಂಕಷ್ಟವನ್ನು ಹೆಚ್ಚು ಮಾಡಿಕೊಳ್ಳುವಿರಿ. ಯಾರಿಗಾದರೂ ಯೋಗ್ಯರಿಗೆ ದಾನವನ್ನು ಮಾಡಿ. ನಿಮ್ಮವರಿಗೆ ನೀಡಿದ ಹಣವನ್ನು ಪಡೆಯಲು ಬಹಳ ಸಾಹಸ ಪಡುವಿರಿ. ಸಂಗಾತಿಯನ್ನು ನೀವು ಅಲಕ್ಷಿಸುವ ಸಾಧ್ಯತೆ ಇದೆ. ಮಂದಗತಿಯಲ್ಲಿ ಸಾಗುವ ಕೆಲಸಕ್ಕೆ ವೇಗವನ್ನು ಕೊಡಬೇಕಾದೀತು. ಬಲವಂತವಾಗಿ ಸಂಗಾತಿಯಿಂದ ಸಹಾಯವನ್ನು ಪಡೆದುಕೊಳ್ಳಬೇಕಾಗಬಹುದು. ಶ್ರೀಮಂತಿಕೆಯ ಅಮಲು ನಿಮ್ಮನ್ನು ನೆಮ್ಮದಿಯಿಂದ‌ ಇರಲು ಬಿಡದು. ಸಂಗಾತಿಯ ನಡುವೆ ಹಳೆಯ ವಿಚಾರಕ್ಕೆ ಹೆಚ್ಚು ಮತ್ತೆ‌ ಜಗಳವಾಗಬಹುದು. ಮೌನದಿಂದ ಇರುವುದು ಒಳ್ಳೆಯದು. ಅನವಶ್ಯಕವಾಗಿ ಹಣವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಎಲ್ಲವನ್ನೂ ಪ್ರಾರಬ್ಧ ಎಂದು ಸುಮ್ಮನಾಗುವುದಕ್ಕಿಂತ ಭಿನ್ನವಾಗಿ ಯೋಚಿಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಜೀವನಕ್ಕೆ ಕೆಲವು ಮಾರ್ಪಾಡುಗಳು ಅನಿವಾರ್ಯವಾದೀತು.

ಕನ್ಯಾ ರಾಶಿ: ಇಂದು ಬಿಡಲಾಗದ ದುಶ್ಚಟಗಳು ನಿಮ್ಮ ವ್ಯಕ್ತಿತ್ವವನ್ನು ಘಾಸಿಗೊಳಿಸಬಹುದು. ಹಣದ ಆಮಿಷವನ್ನು ತೋರಿಸಿ ನಿಮ್ಮನ್ನು ವಂಚಿಸುವ ಸರಳ ಉಪಾಯವಾಗಿದೆ. ನಿಮಗೆ ಪರಿಹರಿಸಿಕೊಳ್ಳಲು ಕಷ್ಟವಾದ ಸಮಸ್ಯೆಯನ್ನು ನೀವು ಅನುಭವಿಗಳ ಅಥವಾ ಆಪ್ತರ ಜೊತೆ ಹಂಚಿಕೊಳ್ಳಿ. ಸಜ್ಜನಿಕೆಯನ್ನು ತೋರಿಸಲು ಹೋಗಿ ಕಷ್ಟಕ್ಕೆ ಸಿಕ್ಕಿಕೊಳ್ಳಬಹುದು. ಬಂಧುಗಳ ಸಲಹೆಯನ್ನು ಸ್ವೀಕರಿಸದೇ ಇದ್ದುದಕ್ಕೆ ನಿಮಗೆ ಬೇಸರವಾಗಬಹುದು. ನೀವು ಆರಂಭಿಸಿದ ಹೊಸ ಉದ್ಯೋಗದಲ್ಲಿ ಬರಬಹುದಾದ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಳ್ಳುವುದು ಒಳ್ಳೆಯದು. ನಿಮ್ಮ ಮಿತಿಯಲ್ಲಿ ಅವುಗಳನ್ನು ಸರಿಮಾಡಿಕೊಳ್ಳಿ. ಸಮಯಕ್ಕೆ ಬಂದುದನ್ನು ನೀವು ಸ್ವೀಕರಿಸಬೇಕಾದೀತು. ವ್ಯವಸ್ಥೆ ಇರುವುದೇ ಹೀಗೆ ಎಂಬ ನಿರ್ಧಾರದಿಂದ ಸಮಾಧಾನ ಸಿಗಲಿದೆ. ಸುಮ್ಮನೇ ಖರ್ಚಿಗೊಂದು ದಾರಿಯಾಗುದು. ಸಾಮರ್ಥ್ಯವನ್ನು ಬಳಕೆಯಾಗುವಲ್ಲಿ ಉಪಯೋಗಿಸಿ. ಮಕ್ಕಳನ್ನು ದೂರ ಮಾಡಿಕೊಂಡು ಬೇಸರಗೊಳ್ಳುವಿರಿ.

ತುಲಾ ರಾಶಿ; ದಾನವನ್ನು ಪಡೆಯಲಿಕ್ಕಾಗಿ ಇಂದು ನಿಮ್ಮ ಬಳಿ ಯಾರಾದರೂ ಬರಬಹುದು. ಬುದ್ಧಿವಂತರಾದರೆ ಸಾಲದು. ಅದನ್ನು ಪ್ರಯೋಗಿಸುವ ಚಾಣಾಕ್ಷತೆಯೂ ಬೇಕು. ಯಾವುದನ್ನೂ ಕೊಂಡುಕೊಳ್ಳಬಹುದು. ಆದರೆ ನೆಮ್ಮದಿ ಸುಖವನ್ನು ಖರೀದಿಸಲಾಗದು. ಇರುವುದರಲ್ಲಿ ನೆಮ್ಮದಿಯಿದೆ.‌ ಕೆಲಸದಲ್ಲಿ ಉತ್ಸಾಹ ಕಡಿಮೆ ಎನಿಸಿದಾಗ ಸ್ವಲ್ಪ ಸಮಯ ಬೇರೆ ಕಾರ್ಯದಲ್ಲಿ ಮಗ್ನರಾಗಿ. ಹೊಂದಾಣಿಕೆಯ ಕೊರತೆಯಿಂದ‌ ಸಹೋದರರಲ್ಲಿ ಭೂಮಿಗೆ ಸಂಬಂಧಿಸಿದಂತೆ ವಾಗ್ವಾದ ನಡೆಯುವುದು. ಆಕಸ್ಮಿಕವಾಗಿ ನಿಮ್ಮ ಆರೋಗ್ಯದಲ್ಲಿ ಬದಲಾವಣೆ ಉಂಟಾಗಬಹುದು. ಆಹಾರ ಉದ್ಯಮದಿಂದ ಹಣಕಾಸಿನ ವಿಚಾರ ಸುಧಾರಿಸುವುದು. ಕಛೇರಿಯ ಒತ್ತಡವನ್ನು ನೀವು ಕಳೆದುಕೊಳ್ಳಲು ಇಚ್ಛಿಸುವಿರಿ. ತಾನು ಮಾಡಿದ್ದನ್ನು ತಾನೇ ಉಣ್ಣಬೇಕು ಎಂಬ ಸತ್ಯ ಅರಿವಿಗೆ ಬರುವುದು. ಹಿರಿಯರ ಮಾತನ್ನು ನಿರ್ಲಕ್ಷಿಸದೇ ಪಾಲಿಸಿ. ಹಳೆಯ ಘಟನೆಯನ್ನು ನೆನಪಿಸಿಕೊಂಡು ಸಂಕಟಪಡುವುದು ಬೇಡ. ಕಳ್ಳರಿಂದ ಭೀತಿಯು ನಿಮಗೆ ಆಗುವುದು.

ವೃಶ್ಚಿಕ ರಾಶಿ: ನೀವು ನೋಡಲಷ್ಟೇ ಸುಂದರವಗಿದ್ದರೆ ಸಾಲದು. ಮನಸ್ಸೂ ಸುಂದರವಾಗಿರಬೇಕು ಕೊಳಕುಗಳು ಇಲ್ಲದಂತೆ. ಹೊಸ ಆಲೋಚನೆಯನ್ನು ಮಾಡುವ ಮಾನಸಿಕತೆ ಇದ್ದರೆ ಇಂದು ವ್ಯಾಪಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುವಿರಿ. ಅನಧಿಕೃತ ವಿಚಾರಕ್ಕೆ ನೀವು ಮನಸ್ಸು ಮಾಡುವುದು ಬೇಡ. ಒಮ್ಮೆಲೇ ದೊಡ್ಡ ಯೋಚನೆಯನ್ನು ಕಾರ್ಯಗತಗೊಳಿಸುವುದು ಬೇಡ. ನೀವು ಮೊದಲು ವಿಶ್ವಾಸಾರ್ಹತೆಯನ್ನು ಪಡೆದುಕೊಳ್ಳಲು ಪ್ರಯತ್ನಿಸಿ. ಯಾವ ಕಾರ್ಯವನ್ನೇ ಮಾಡಿದರೂ ದಾಖಲೆಗಳು ಅತ್ಯವಶ್ಯಕ. ಪೂರ್ಣವಾಗಿ ಅರ್ಥವಾದಮೇಲೆ ಮುಂದುವರಿಯಿರಿ. ದಾಖಲೆಗಳನ್ನು ಇಟ್ಟುಕೊಂಡೇ ಕಾನೂನಿಗೆ ಸಂಬಂಧಿಸಿದ ಹೋರಾಟದಲ್ಲಿ ತೊಡಗಿ. ಅನಧಿಕೃತ ಪತ್ರಗಳಿಗೆ ನೀವು ಉತ್ತರಿಸುವ ಅವಶ್ಯಕತೆ ಇರುವುದಿಲ್ಲ. ವಿದೇಶದಲ್ಲಿ ಇರುವವರಿಗೆ ನೆಮ್ಮದಿ. ದೂರಪ್ರಯಾಣವನ್ನು ಮುಂದೂಡುವುದು ಒಳ್ಳೆಯದು. ಯಾರನ್ನೋ ದೂಷಿಸುವುದರಿಂದ ಯಾವ ಲಾಭವೂ ಆಗದು. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿ ಕಳೆದುಕೊಳ್ಳಬಹುದು, ಪ್ರೀತಿ ಪಾತ್ರರನ್ನು ನೀವು ಚೆನ್ನಾಗಿ ನೋಡಿಕೊಳ್ಳುವಿರಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್