Daily Horoscope: ಸರ್ಕಾರಿ ಉದ್ಯೋಗ ಸಿಗುವ ಸಾಧ್ಯತೆ, ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಆಗಸ್ಟ್​ 26: ಒಳ್ಳೆಯ ವ್ಯಕ್ತಿಯನ್ನು ನೀವು ದೂರಮಾಡಿಕೊಳ್ಳುವಿರಿ. ನಿಮ್ಮ‌ಕೆಲಸಗಳು ಕೆಲವು ನಿಷ್ಪ್ರಯೋಜಕವೂ ಆಗಬಹುದು. ಯಾರದೋ ಮಾತಿಗೆ ಬೇಸರಿಸಿಕೊಳ್ಳುವುದು ಸರಿಯಲ್ಲ. ನೀವಿಂದು ಯಾರನ್ನಾದರೂ ಅನುಸರಣ ವ್ಯಕ್ತಿತ್ವವನ್ನು ಆಯ್ಕೆ ಮಾಡಿಕೊಳ್ಳುವಿರಿ. ಹಾಗಾದರೆ ಆಗಸ್ಟ್​ 26ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಸರ್ಕಾರಿ ಉದ್ಯೋಗ ಸಿಗುವ ಸಾಧ್ಯತೆ, ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ
ಸರ್ಕಾರಿ ಉದ್ಯೋಗ ಸಿಗುವ ಸಾಧ್ಯತೆ, ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 26, 2024 | 12:15 AM

ಸಾಮಾನ್ಯವಾಗಿ ಜ್ಯೋತಿಷ್ಯ ಶಾಸ್ತ್ರದೊಂದಿಗೆ ಸಂಬಂಧಿಸಿದೆ. ಜ್ಯೋತಿಷ್ಯವು ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ಚಿಹ್ನೆಗಳಾಗಿ ವಿಂಗಡಿಸಲಾಗಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತವೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಸಪ್ತಮೀ / ಅಷ್ಟಮೀ, ನಿತ್ಯನಕ್ಷತ್ರ: ಕೃತ್ತಿಕಾ / ರೋಹಿಣೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:47 ಗಂಟೆ, ರಾಹು ಕಾಲ 07:55 ರಿಂದ 09:28, ಯಮಘಂಡ ಕಾಲ 11:01 ರಿಂದ 12:34ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:08 ರಿಂದ ಸಂಜೆ 03:41ರ ವರೆಗೆ.

ಸಿಂಹ ರಾಶಿ: ಇಂದು ನಿಮ್ಮ ಗೃಹ ನಿರ್ಮಾಣದ ಕಡೆಗೆ ಗಮನವಾಗಬೇಕಾಗುವುದು. ಉದ್ಯೋಗಕ್ಕೆ ವಿರಾಮ‌ ಹೇಳಿದ ನಿಮಗೆ ದಗ್ಭ್ರಾಂತಿಯಾಗಬಹುದು. ನೀವು ಇಂದು ಮನೆಗಾಗಿ ಏನನ್ನಾದರೂ ಕೊಡಲಿದ್ದೀರಿ. ಒಳ್ಳೆಯ ವ್ಯಕ್ತಿಯನ್ನು ನೀವು ದೂರಮಾಡಿಕೊಳ್ಳುವಿರಿ. ನಿಮ್ಮ‌ಕೆಲಸಗಳು ಕೆಲವು ನಿಷ್ಪ್ರಯೋಜಕವೂ ಆಗಬಹುದು. ಯಾರದೋ ಮಾತಿಗೆ ಬೇಸರಿಸಿಕೊಳ್ಳುವುದು ಸರಿಯಲ್ಲ. ಯಾರದೋ ಮೇಲಿನ‌ ಸಿಟ್ಟನ್ನು ನೀವು ತೀರಿಸಿಕೊಳ್ಳುವ ಭರದಲ್ಲಿ ನಿಮಗೆ ಸರಿ ತಪ್ಪುಗಳ ನಿರ್ಣಯ ಕಷ್ಟವಾದೀತು. ನೀವಿಂದು ಯಾರನ್ನಾದರೂ ಅನುಸರಣ ವ್ಯಕ್ತಿತ್ವವನ್ನು ಆಯ್ಕೆ ಮಾಡಿಕೊಳ್ಳುವಿರಿ. ನಿಮ್ಮದಾದ ಕೆಲಸಗಳು ಹಾಗೆಯೇ ಉಳಿದುಕೊಳ್ಳಬಹುದು. ನಿಮ್ಮ ನೋವಿಗೆ ನೀವೇ ಔಷಧ ಮಾಡಿಕೊಳ್ಳಬೇಕು. ಯಾರೋ ಬರುತ್ತಾರೆ ಎಂದು ಕಾಯುವುದು ಬೇಡ. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ವಿದೇಶದವರ ಜೊತೆ ನಿಮ್ಮ ವ್ಯವಹಾರವು ನಡೆಯುವುದು.

ಕನ್ಯಾ ರಾಶಿ: ಇಂದು ಮಕ್ಕಳ ವಿಚಾರಕ್ಕೆ ಹಣವು ವ್ಯಯವಾಗಬಹುದು. ಬದ್ಧತೆಯಿಂದ ಮಾಡಿದ ಕಾರ್ಯಕ್ಕೆ ಶ್ರೇಯಸ್ಸು ನಿಮ್ಮದೇ. ಅಕಾರಣವಾದ ವಿವಾದಗಳಿಂದ ಸಮಯವು ಹಾಳಾಗಬಹುದು.‌ ಆಕಸ್ಮಿಕವಾಗಿ ಬರುವ ಸುದ್ದಿಯಿಂದ ನಿಮಗೆ ಸಂತೋಷವಾಗಲಿದೆ. ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಹಾಕಿದ್ದರೆ ನಿಮಗೆ ಸಿಗಬಹುದು. ವ್ಯಾವಹಾರಿಕ ಗೌಪ್ಯತೆಯನ್ನು ನೀವು ಇಟ್ಟುಕೊಳ್ಳುವುದು ಅನಿವಾರ್ಯ. ವಿದ್ಯಾಭ್ಯಾಸವನ್ನು ಬಹಳ ಆಸಕ್ತಿಯಿಂದ ವಿದ್ಯಾರ್ಥಿಗಳು ಮಾಡುವರು. ಬಂಧುಗಳ ಸಲಹೆಯನ್ನು ನೀವು ಸ್ವೀಕರಿಸಿ ಬಿಡುವಿರಿ. ಸಂಗಾತಿಯ ನಡತೆಯು ನಿಮಗೆ ಅನುಮಾನವನ್ನು ತರಿಸಬಹುದು. ದಂಪತಿಗಳು ಜೊತೆಯಾಗಿ ಪುಣ್ಯಸ್ಥಳಗಳಿಗೆ ಹೋಗುವಿರಿ. ನಿಮಗೆ ಸಾಧಿಸುವ ಛಲವು ಬರಬಹುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ನಿಮ್ಮ ಮಾತು ಇನ್ನೊಬ್ಬರ ಕೋಪವನ್ನು ಕರಗಿಸೀತು. ನಿಮ್ಮ ಬಗ್ಗೆ ಬರುವ ಆರೋಪವನ್ನು ಸುಳ್ಳು ಮಾಡಿ ತೋರಿಸುವ ಕಾರ್ಯಕ್ಕೆ ಮುಂದಾಗುವಿರಿ.

ತುಲಾ ರಾಶಿ: ಇಂದು ಉದ್ವೇಗವು ನಿಮ್ಮ ಕೆಲಸವನ್ನು ಅಸ್ತವ್ಯಸ್ತ ಮಾಡಲಿದೆ. ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಇಂದು ನಿಮ್ಮ ಸೇವೆಗೆ ಗೌರವವು ಸಿಗಬೇಕಾದರೂ ಸಿಗದೇ ಹೋದೀತು. ಪ್ರಭಾವಿ ವ್ಯಕ್ತಿಗಳ ಜೊತೆ ಸೆಣಸುವ ಸನ್ನಿವೇಶಗಳು ಬರಬಹುದು. ಅನಧಿಕೃತಿ ವ್ಯವಹಾರದಿಂದ ನಿಮಗೆ ಕಷ್ಟವಾದೀತು. ನಿಮ್ಮ ಅಂತರಂಗವು ನಕಾರಾತ್ಮಕವಾಗಿ ಏನನ್ನಾದರೂ ಹೇಳುತ್ತಿದ್ದರೆ ಅದನ್ನು ವ್ಯಕ್ತಪಡಿಸಲು ಹೋಗಬೇಡಿ. ಸ್ವಲ್ಪ ಸಮಾಧಾನದಿಂದ ಇರಿ. ಉದ್ಯೋಗದಲ್ಲಿ ಬದಲಾವಣೆ ಆಗಬಹುದು. ಸರ್ಕಾರದಿಂದ ಬರುವ ಹಣವು ಕೈ ತಪ್ಪಬಹುದು. ಅದು ಬಂದಂತೆ ಸದ್ಯ ಮುಂದುವರಿಯಿರಿ. ಪುರುಷಪ್ರಯತ್ನವು ಈಗ ಬೇಡ. ಅಪ್ರಯೋಜಕವಾಗಲಿದೆ. ಆದಷ್ಟು ಸಮಯ ತಾಳ್ಮೆಯಿಂದ ಇರಬೇಕಾಗಿದೆ. ವಿದೇಶ ಪ್ರವಾಸದ ಕನಸು ಕಾಣುತ್ತಿರುವವರು ನನಸು ಮಾಡಿಕೊಳ್ಳಬಹುದಾಗಿದೆ. ಉಪಕಾರದ ಸ್ಮರಣೆ ನಿಮಗೆ ಯಶಸ್ಸನ್ನು ಕೊಟ್ಟೀತು. ಯಾರದೋ ಕಾರಣದಿಂದ ನಿಮ್ಮ ಇಂದಿನ ಗುರಿಯೇ ಬದಲಾಗಬಹುದು.

ವೃಶ್ಚಿಕ ರಾಶಿ: ಇಂದು ನಿಮ್ಮ ನ್ಯಾಯಾಲಯದ ಕಾರ್ಯಗಳು ಮಂದಗತಿಯಲ್ಲಿ ಸಾಗಲಿವೆ. ಎಂದೋ ಮಾಡಿದ ಉಪಕಾರವು ಇಂದು ನಿಮ್ಮ ಕೈ ಸೇರುವುದು. ನಿಶ್ಚಿತ ಕಾರ್ಯಗಳು ಸರಿಯಾಗಿ ಆಗದೇ ಇರುವುದು ಅಸಮಾಧನಕ್ಕೆ ಮುಖ್ಯಕಾರಣವಾಗಿದೆ. ನಿಮ್ಮ ವಿದ್ಯೆಗೆ ಅನುಗುಣವಾದ ವೃತ್ತಿಯು ಸಿಗಲಿದೆ. ನಿಮ್ಮ ಅನಾರೋಗ್ಯಕ್ಕೆ ಅನೇಕ ವೈದ್ಯರನ್ನು ಸಂಪರ್ಕಿಸಿ ಸೋಲುವಿರಿ. ಸುಳ್ಳಾಡುವ ಸಂದರ್ಭವು ಬರಬಹುದು. ಅಹಂಕಾರದಿಂದ ಕಛೇರಿಯಲ್ಲಿ ಕಲಹವಾಗಬಹುದು. ಸಹೋದ್ಯೋಗಿಗಳನ್ನು ಎದುರುಹಾಕಿಕೊಳ್ಳುವಿರಿ. ಇನ್ನೊಬ್ಬರನ್ನು ನೋಡಿ ಅಸೂಯೆಪಡುವುದು ಬೇಡ. ಬಂಧುಗಳ ವರ್ತನೆಯು ನಿಮಗೆ ಬೇಸರ ತರಿಸೀತು. ಮೇಲ್ನೋಟಕ್ಕೆ ಯಾವುದನ್ನೂ ತೀರ್ಮಾನ ಮಾಡುವುದು ಬೇಡ. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನಹರಿಸುವರು. ದೇವರ ಬಗ್ಗೆ ಶ್ರದ್ಧೆಯು ಕಡಿಮೆಯಾಗಲಿದೆ. ವಿರೋಧಿಸದೇ ಒಳ್ಳೆಯ ರೀತಿಯಲ್ಲಿ ಮಾತನಾಡಿ.

ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್